Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs RCB, IPL 2024: ಕೊಹ್ಲಿ ಓಪನರ್ ಅಲ್ಲ: ಸಿಎಸ್​ಕೆ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ಪ್ಲೇಯಿಂಗ್ XI ಹೇಗಿರಲಿದೆ ಗೊತ್ತೇ?

RCB Playing XI vs CSK, IPL 2024: ಐಪಿಎಲ್ 2024ಕ್ಕೆ ಇಂದು ಚಾಲನೆ ಸಿಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿ ಆಗಲಿದೆ. ಹಾಗಾದರೆ, ಸಿಎಸ್​ಕೆ ವಿರುದ್ಧದ ಇಂದಿನ ಪಂದ್ಯಕ್ಕೆ ಆರ್​ಸಿಬಿಯ ಪ್ಲೇಯಿಂಗ್ XI ಹೇಗಿರಬಹುದು ಎಂಬುದನ್ನು ನೋಡೋಣ.

Vinay Bhat
|

Updated on: Mar 22, 2024 | 8:59 AM

ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ ಟೂರ್ನಿಗೆ ಇಂದು ಚಾಲನೆ ಸಿಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಫಾಫ್ ಡುಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (CSK vs RCB) ತಂಡ ಮುಖಾಮುಖಿ ಆಗಲಿದೆ.

ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ ಟೂರ್ನಿಗೆ ಇಂದು ಚಾಲನೆ ಸಿಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಫಾಫ್ ಡುಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (CSK vs RCB) ತಂಡ ಮುಖಾಮುಖಿ ಆಗಲಿದೆ.

1 / 6
ಆರ್​ಸಿಬಿ ಮತ್ತೊಮ್ಮೆ ತಮ್ಮ ಸ್ಟಾರ್-ಸ್ಟಡ್ ಬ್ಯಾಟಿಂಗ್ ಲೈನ್ಅಪ್ ಮೇಲೆ ಭರವಸೆ ಇಟ್ಟಿದೆ. ಬೌಲಿಂಗ್‌ನಲ್ಲಿನ ಲೋಪದೋಷಗಳನ್ನು ಸರಿಪಡಿಸಿಕೊಳ್ಳಲು ಆರ್​ಸಿಬಿ ತಮ್ಮ ತಂಡದ ಸಂಯೋಜನೆ ಯೋಚನೆ ಮಾಡಿ ರೂಪಿಸಬೇಕು. ಹಾಗಾದರೆ, ಸಿಎಸ್​ಕೆ ವಿರುದ್ಧದ ಇಂದಿನ ಪಂದ್ಯಕ್ಕೆ ಆರ್​ಸಿಬಿಯ ಪ್ಲೇಯಿಂಗ್ XI ಹೇಗಿರಬಹುದು ಎಂಬುದನ್ನು ನೋಡೋಣ.

ಆರ್​ಸಿಬಿ ಮತ್ತೊಮ್ಮೆ ತಮ್ಮ ಸ್ಟಾರ್-ಸ್ಟಡ್ ಬ್ಯಾಟಿಂಗ್ ಲೈನ್ಅಪ್ ಮೇಲೆ ಭರವಸೆ ಇಟ್ಟಿದೆ. ಬೌಲಿಂಗ್‌ನಲ್ಲಿನ ಲೋಪದೋಷಗಳನ್ನು ಸರಿಪಡಿಸಿಕೊಳ್ಳಲು ಆರ್​ಸಿಬಿ ತಮ್ಮ ತಂಡದ ಸಂಯೋಜನೆ ಯೋಚನೆ ಮಾಡಿ ರೂಪಿಸಬೇಕು. ಹಾಗಾದರೆ, ಸಿಎಸ್​ಕೆ ವಿರುದ್ಧದ ಇಂದಿನ ಪಂದ್ಯಕ್ಕೆ ಆರ್​ಸಿಬಿಯ ಪ್ಲೇಯಿಂಗ್ XI ಹೇಗಿರಬಹುದು ಎಂಬುದನ್ನು ನೋಡೋಣ.

2 / 6
ಕಳೆದ ಋತುವಿನಲ್ಲಿ ವಿರಾಟ್ ಕೊಹ್ಲಿ ಮತ್ತು ನಾಯಕ ಫಾಫ್ ಡುಪ್ಲೆಸಿಸ್ ಇನ್ನಿಂಗ್ಸ್ ಆರಂಭಿಸಿದ್ದರು. ಈ ಜೋಡಿ ತಕ್ಕಮಟ್ಟಿಗೆ ಉತ್ತಮ ಪ್ರದರ್ಶನ ನೀಡಿದರು. ಆದಾಗ್ಯೂ, ಈ ಬಾರಿ ಕೆಲ ಬದಲಾವಣೆ ಮಾಡಬಹುದು. ಫಾಫ್ ಜೊತೆ ಮುಂಬೈ ಇಂಡಿಯನ್ಸ್​ನಿಂದ 17.50 ಕೋಟಿ ರೂ. ಗೆ ಖರೀದಿಸಿದ ಕ್ಯಾಮರೂನ್ ಗ್ರೀನ್‌ ಇನ್ನಿಂಗ್ಸ್ ತೆರೆಯಬಹುದು.

ಕಳೆದ ಋತುವಿನಲ್ಲಿ ವಿರಾಟ್ ಕೊಹ್ಲಿ ಮತ್ತು ನಾಯಕ ಫಾಫ್ ಡುಪ್ಲೆಸಿಸ್ ಇನ್ನಿಂಗ್ಸ್ ಆರಂಭಿಸಿದ್ದರು. ಈ ಜೋಡಿ ತಕ್ಕಮಟ್ಟಿಗೆ ಉತ್ತಮ ಪ್ರದರ್ಶನ ನೀಡಿದರು. ಆದಾಗ್ಯೂ, ಈ ಬಾರಿ ಕೆಲ ಬದಲಾವಣೆ ಮಾಡಬಹುದು. ಫಾಫ್ ಜೊತೆ ಮುಂಬೈ ಇಂಡಿಯನ್ಸ್​ನಿಂದ 17.50 ಕೋಟಿ ರೂ. ಗೆ ಖರೀದಿಸಿದ ಕ್ಯಾಮರೂನ್ ಗ್ರೀನ್‌ ಇನ್ನಿಂಗ್ಸ್ ತೆರೆಯಬಹುದು.

3 / 6
ಎರಡು ತಿಂಗಳ ಅಂತರದ ಬಳಿಕ ಮತ್ತೆ ಕ್ರಿಕೆಟ್ ಮೈದಾನದಲ್ಲಿ ಅಬ್ಬರಿಸಲು ವಿರಾಟ್ ಕೊಹ್ಲಿ ಸಜ್ಜಾಗಿದ್ದಾರೆ. ಇವರು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ. ಇನ್ನು ಇಂಜುರಿಯ ಕಾರಣ ಐಪಿಎಲ್ 2023 ರ ನಂತರ, ರಜತ್ ಪಾಟಿದಾರ್ ಈ ಬಾರಿ ಆಡಲು ಫಿಟ್ ಆಗಿದ್ದಾರೆ. ಆರ್​ಸಿಬಿಗಾಗಿ ಇವರು ನಂ. 4 ರಲ್ಲಿ ಬ್ಯಾಟ್ ಮಾಡುತ್ತಾರೆ.

ಎರಡು ತಿಂಗಳ ಅಂತರದ ಬಳಿಕ ಮತ್ತೆ ಕ್ರಿಕೆಟ್ ಮೈದಾನದಲ್ಲಿ ಅಬ್ಬರಿಸಲು ವಿರಾಟ್ ಕೊಹ್ಲಿ ಸಜ್ಜಾಗಿದ್ದಾರೆ. ಇವರು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ. ಇನ್ನು ಇಂಜುರಿಯ ಕಾರಣ ಐಪಿಎಲ್ 2023 ರ ನಂತರ, ರಜತ್ ಪಾಟಿದಾರ್ ಈ ಬಾರಿ ಆಡಲು ಫಿಟ್ ಆಗಿದ್ದಾರೆ. ಆರ್​ಸಿಬಿಗಾಗಿ ಇವರು ನಂ. 4 ರಲ್ಲಿ ಬ್ಯಾಟ್ ಮಾಡುತ್ತಾರೆ.

4 / 6
ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಐಪಿಎಲ್ 2024 ರಲ್ಲಿ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಆರ್‌ಸಿಬಿಗೆ ಪ್ರಮುಖ ಆಟಗಾರನಾಗಲಿದ್ದಾರೆ. ಮ್ಯಾಕ್ಸ್​ವೆಲ್ ಅವರ ಆಲ್-ರೌಂಡ್ ಸಾಮರ್ಥ್ಯಗಳನ್ನು ತಂಡ ಬಳಸಿಕೊಳ್ಳಬೇಕು. ದಿನೇಶ್ ಕಾರ್ತಿಕ್ ಐಪಿಎಲ್ 2024 ರಲ್ಲಿ ಆರ್​ಸಿಬಿಗಾಗಿ ವಿಕೆಟ್ ಕೀಪರ್-ಬ್ಯಾಟರ್ ಆಗಿ ಆಡುತ್ತಾರೆ. ಇದು ಇವರ ಕೊನೆಯ ಐಪಿಎಲ್ ಎಂದುಕೂಡ ಹೇಳಲಾಗಿದೆ.

ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಐಪಿಎಲ್ 2024 ರಲ್ಲಿ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಆರ್‌ಸಿಬಿಗೆ ಪ್ರಮುಖ ಆಟಗಾರನಾಗಲಿದ್ದಾರೆ. ಮ್ಯಾಕ್ಸ್​ವೆಲ್ ಅವರ ಆಲ್-ರೌಂಡ್ ಸಾಮರ್ಥ್ಯಗಳನ್ನು ತಂಡ ಬಳಸಿಕೊಳ್ಳಬೇಕು. ದಿನೇಶ್ ಕಾರ್ತಿಕ್ ಐಪಿಎಲ್ 2024 ರಲ್ಲಿ ಆರ್​ಸಿಬಿಗಾಗಿ ವಿಕೆಟ್ ಕೀಪರ್-ಬ್ಯಾಟರ್ ಆಗಿ ಆಡುತ್ತಾರೆ. ಇದು ಇವರ ಕೊನೆಯ ಐಪಿಎಲ್ ಎಂದುಕೂಡ ಹೇಳಲಾಗಿದೆ.

5 / 6
ಆರ್​ಸಿಬಿಗೆ ಕೆಳ ಮಧ್ಯಮ ಕ್ರಮಾಂಕದ ಬ್ಯಾಟರ್‌ನಲ್ಲಿ ಮಹಿಪಾಲ್ ಲೊಮ್ರೋರ್ ಇದ್ದಾರೆ. ಅಂತೆಯೆ ಕರ್ಣ್ ಶರ್ಮಾ ಐಪಿಎಲ್ 2024 ರಲ್ಲಿ RCB ಗೆ ಮೊದಲ ಆಯ್ಕೆಯ ಸ್ಪಿನ್ನರ್. ಮೊಹಮ್ಮದ್ ಸಿರಾಜ್ ತಂಡದ ವೇಗದ ದಾಳಿಯನ್ನು ಮುನ್ನಡೆಸಲಿದ್ದಾರೆ. ಇವರಿಗೆ ರೀಸ್ ಟೋಪ್ಲೆ ಸಾಥ್ ನೀಡಬಹುದು. ಭಾರತದ ಎರಡನೇ ವೇಗಿಯಾಗಿ ಯಶ್ ದಯಾಳ್ ಮತ್ತು ವಿಜಯ್ ಕುಮಾರ್ ವೈಶಾಕ್ ಅವರಿಗಿಂತ ಆಕಾಶ್ ದೀಪ್ ಮೊದಲ ಆದ್ಯತೆ ಪಡೆಯಲಿದ್ದಾರೆ.

ಆರ್​ಸಿಬಿಗೆ ಕೆಳ ಮಧ್ಯಮ ಕ್ರಮಾಂಕದ ಬ್ಯಾಟರ್‌ನಲ್ಲಿ ಮಹಿಪಾಲ್ ಲೊಮ್ರೋರ್ ಇದ್ದಾರೆ. ಅಂತೆಯೆ ಕರ್ಣ್ ಶರ್ಮಾ ಐಪಿಎಲ್ 2024 ರಲ್ಲಿ RCB ಗೆ ಮೊದಲ ಆಯ್ಕೆಯ ಸ್ಪಿನ್ನರ್. ಮೊಹಮ್ಮದ್ ಸಿರಾಜ್ ತಂಡದ ವೇಗದ ದಾಳಿಯನ್ನು ಮುನ್ನಡೆಸಲಿದ್ದಾರೆ. ಇವರಿಗೆ ರೀಸ್ ಟೋಪ್ಲೆ ಸಾಥ್ ನೀಡಬಹುದು. ಭಾರತದ ಎರಡನೇ ವೇಗಿಯಾಗಿ ಯಶ್ ದಯಾಳ್ ಮತ್ತು ವಿಜಯ್ ಕುಮಾರ್ ವೈಶಾಕ್ ಅವರಿಗಿಂತ ಆಕಾಶ್ ದೀಪ್ ಮೊದಲ ಆದ್ಯತೆ ಪಡೆಯಲಿದ್ದಾರೆ.

6 / 6
Follow us
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ