AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG Test: ವಿರಾಟ್ ಕೊಹ್ಲಿ ಏಕಾಏಕಿ ಕ್ರಿಕೆಟ್ ನಿಂದ ದೂರ ಉಳಿದಿದ್ದು ಯಾಕೆ?, ಇದೇ ಕಾರಣ?

Virat Kohli Absence: ವಿರಾಟ್ ಕೊಹ್ಲಿ ಸದ್ಯ ಕ್ರಿಕೆಟ್ ನಿಂದ ಸಂಪೂರ್ಣ ದೂರ ಉಳಿದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಇಡೀ 5 ಪಂದ್ಯಗಳ ಸರಣಿಯಿಂದ ಕೊಹ್ಲಿ ಹಿಂದೆ ಸರಿದಿದ್ದರಿಂದ ಇದ್ದಕ್ಕಿದ್ದಂತೆ ಏನಾಯಿತು ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಕೊಹ್ಲಿ ಅಲಭ್ಯತೆ ಬಗ್ಗೆ ನಾನಾ ರೀತಿಯ ಊಹಾಪೋಹಗಳು ಬರುತ್ತಿದ್ದರೂ ಸತ್ಯ ಹೊರಬಿದ್ದಿಲ್ಲ.

Vinay Bhat
|

Updated on: Feb 11, 2024 | 8:36 AM

Share
ಇಂಗ್ಲೆಂಡ್ ವಿರುದ್ಧದ ಉಳಿದ ಮೂರು ಟೆಸ್ಟ್ ಪಂದ್ಯಗಳಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಶನಿವಾರ ಭಾರತ ತಂಡವನ್ನು ಪ್ರಕಟ ಮಾಡಿದೆ. ಅಚ್ಚರಿ ಎಂದರೆ ಇದರಲ್ಲಿ ಕೂಡ ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರ ಹೆಸರಿಲ್ಲ. ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ತಮ್ಮ ಹೆಸರನ್ನು ಹಿಂತೆಗೆದುಕೊಂಡಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಉಳಿದ ಮೂರು ಟೆಸ್ಟ್ ಪಂದ್ಯಗಳಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಶನಿವಾರ ಭಾರತ ತಂಡವನ್ನು ಪ್ರಕಟ ಮಾಡಿದೆ. ಅಚ್ಚರಿ ಎಂದರೆ ಇದರಲ್ಲಿ ಕೂಡ ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರ ಹೆಸರಿಲ್ಲ. ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ತಮ್ಮ ಹೆಸರನ್ನು ಹಿಂತೆಗೆದುಕೊಂಡಿದ್ದಾರೆ.

1 / 6
ವಿರಾಟ್ ಕೊಹ್ಲಿ ಸದ್ಯ ಕ್ರಿಕೆಟ್ ನಿಂದ ಸಂಪೂರ್ಣ ದೂರ ಉಳಿದಿದ್ದಾರೆ. ಇಡೀ 5 ಪಂದ್ಯಗಳ ಸರಣಿಯಿಂದ ಕೊಹ್ಲಿ ಹಿಂದೆ ಸರಿದಿದ್ದರಿಂದ ಇದ್ದಕ್ಕಿದ್ದಂತೆ ಏನಾಯಿತು ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಮಾರ್ಚ್ 11 ರ ವರೆಗೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ನಡೆಯಲಿದೆ. ಅಲ್ಲಿಯವರೆಗೆ ಇವರು ಯಾವುದೇ ಪಂದ್ಯ ಆಡುತ್ತಿಲ್ಲ.

ವಿರಾಟ್ ಕೊಹ್ಲಿ ಸದ್ಯ ಕ್ರಿಕೆಟ್ ನಿಂದ ಸಂಪೂರ್ಣ ದೂರ ಉಳಿದಿದ್ದಾರೆ. ಇಡೀ 5 ಪಂದ್ಯಗಳ ಸರಣಿಯಿಂದ ಕೊಹ್ಲಿ ಹಿಂದೆ ಸರಿದಿದ್ದರಿಂದ ಇದ್ದಕ್ಕಿದ್ದಂತೆ ಏನಾಯಿತು ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಮಾರ್ಚ್ 11 ರ ವರೆಗೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ನಡೆಯಲಿದೆ. ಅಲ್ಲಿಯವರೆಗೆ ಇವರು ಯಾವುದೇ ಪಂದ್ಯ ಆಡುತ್ತಿಲ್ಲ.

2 / 6
ಮೊದಲ ಎರಡು ಟೆಸ್ಟ್​ಗಳಿಂದ ಜನವರಿ 22 ರಂದು ವಿರಾಟ್ ಕೊಹ್ಲಿ ತಮ್ಮ ಹೆಸರನ್ನು ಹಿಂತೆಗೆದುಕೊಳ್ಳುವ ಬಗ್ಗೆ ಮಂಡಳಿ, ನಾಯಕ ಮತ್ತು ಕೋಚ್‌ನೊಂದಿಗೆ ಮಾತನಾಡಿದ್ದರು. ಕೆಲವು ಕಾರಣದಿಂದ ಕೊಹ್ಲಿ ಅವರು ತಮ್ಮ ಕುಟುಂಬದೊಂದಿಗೆ ಇರುವುದು ಅಗತ್ಯ ಎಂದು ಹೇಳಿದ್ದಾರೆ. ಹೀಗಾಗಿ ಅವರು ಎರಡು ಟೆಸ್ಟ್​ನಲ್ಲಿ ಆಡುವುದಿಲ್ಲ ಎಂದು ಬಿಸಿಸಿಐ ಮೊದಲಿಗೆ ತಿಳಿಸಿತ್ತು.

ಮೊದಲ ಎರಡು ಟೆಸ್ಟ್​ಗಳಿಂದ ಜನವರಿ 22 ರಂದು ವಿರಾಟ್ ಕೊಹ್ಲಿ ತಮ್ಮ ಹೆಸರನ್ನು ಹಿಂತೆಗೆದುಕೊಳ್ಳುವ ಬಗ್ಗೆ ಮಂಡಳಿ, ನಾಯಕ ಮತ್ತು ಕೋಚ್‌ನೊಂದಿಗೆ ಮಾತನಾಡಿದ್ದರು. ಕೆಲವು ಕಾರಣದಿಂದ ಕೊಹ್ಲಿ ಅವರು ತಮ್ಮ ಕುಟುಂಬದೊಂದಿಗೆ ಇರುವುದು ಅಗತ್ಯ ಎಂದು ಹೇಳಿದ್ದಾರೆ. ಹೀಗಾಗಿ ಅವರು ಎರಡು ಟೆಸ್ಟ್​ನಲ್ಲಿ ಆಡುವುದಿಲ್ಲ ಎಂದು ಬಿಸಿಸಿಐ ಮೊದಲಿಗೆ ತಿಳಿಸಿತ್ತು.

3 / 6
ಕೊಹ್ಲಿ ಅಲಭ್ಯತೆ ಬಗ್ಗೆ ನಾನಾ ರೀತಿಯ ಊಹಾಪೋಹಗಳು ಬರುತ್ತಿದ್ದರೂ ಸತ್ಯ ಹೊರಬಿದ್ದಿಲ್ಲ. ಈ ಬಗ್ಗೆ ಕೊಹ್ಲಿ ಅಥವಾ ಅವರ ಪತ್ನಿ ಅನುಷ್ಕಾ ಯಾವುದೇ ಮಾಹಿತಿ ನೀಡಿಲ್ಲ. ಕೊಹ್ಲಿ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂಬ ವದಂತಿ ಇತ್ತು, ಆದರೆ ವಿರಾಟ್ ಅವರ ಹಿರಿಯ ಸಹೋದರ ವಿಕಾಸ್ ಕೊಹ್ಲಿ ಇದು ಸುಳ್ಳು ಎಂದಿದ್ದರು.

ಕೊಹ್ಲಿ ಅಲಭ್ಯತೆ ಬಗ್ಗೆ ನಾನಾ ರೀತಿಯ ಊಹಾಪೋಹಗಳು ಬರುತ್ತಿದ್ದರೂ ಸತ್ಯ ಹೊರಬಿದ್ದಿಲ್ಲ. ಈ ಬಗ್ಗೆ ಕೊಹ್ಲಿ ಅಥವಾ ಅವರ ಪತ್ನಿ ಅನುಷ್ಕಾ ಯಾವುದೇ ಮಾಹಿತಿ ನೀಡಿಲ್ಲ. ಕೊಹ್ಲಿ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂಬ ವದಂತಿ ಇತ್ತು, ಆದರೆ ವಿರಾಟ್ ಅವರ ಹಿರಿಯ ಸಹೋದರ ವಿಕಾಸ್ ಕೊಹ್ಲಿ ಇದು ಸುಳ್ಳು ಎಂದಿದ್ದರು.

4 / 6
ಇದರ ನಡುವೆ ವಿರಾಟ್ ಎರಡನೇ ಬಾರಿಗೆ ತಂದೆಯಾಗುತ್ತಾರೆ ಎಂಬ ಸುದ್ದಿ ಕೂಡ ಇದೆ. ಡಿವಿಲಿಯರ್ಸ್ ಕೂಡ ಈ ಹೇಳಿಕೆ ನೀಡಿದ್ದರು. ಆದರೆ ನಂತರ ಸ್ವತಃ ಎಬಿಡಿ ಇದು ಸುಳ್ಳು ಎಂದು ಕ್ಷಮೆಯಾಚಿಸಿದರು. ವಿರಾಟ್ ಸ್ವತಃ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಮತ್ತು ಅವರ ಚಿಕಿತ್ಸೆ ಪಡೆಯುತ್ತಿದ್ದಾರೆಯೇ ಎಂಬ ಪ್ರಶ್ನೆಯೂ ಉದ್ಭವಿಸಿದೆ. ಇದಕ್ಕೆಲ್ಲ ಸ್ವತಃ ಕೊಹ್ಲಿಯೇ ಉತ್ತರಿಸಬೇಕಿದೆ.

ಇದರ ನಡುವೆ ವಿರಾಟ್ ಎರಡನೇ ಬಾರಿಗೆ ತಂದೆಯಾಗುತ್ತಾರೆ ಎಂಬ ಸುದ್ದಿ ಕೂಡ ಇದೆ. ಡಿವಿಲಿಯರ್ಸ್ ಕೂಡ ಈ ಹೇಳಿಕೆ ನೀಡಿದ್ದರು. ಆದರೆ ನಂತರ ಸ್ವತಃ ಎಬಿಡಿ ಇದು ಸುಳ್ಳು ಎಂದು ಕ್ಷಮೆಯಾಚಿಸಿದರು. ವಿರಾಟ್ ಸ್ವತಃ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಮತ್ತು ಅವರ ಚಿಕಿತ್ಸೆ ಪಡೆಯುತ್ತಿದ್ದಾರೆಯೇ ಎಂಬ ಪ್ರಶ್ನೆಯೂ ಉದ್ಭವಿಸಿದೆ. ಇದಕ್ಕೆಲ್ಲ ಸ್ವತಃ ಕೊಹ್ಲಿಯೇ ಉತ್ತರಿಸಬೇಕಿದೆ.

5 / 6
ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ರಾಜ್​ಕೋಟ್​ನಲ್ಲಿ ಫೆಬ್ರವರಿ 15 ರಿಂದ 19 ವರೆಗೆ ನಡೆಯಲಿದೆ. ಬಳಿಕ ನಾಲ್ಕನೇ ಟೆಸ್ಟ್ ರಾಂಚಿಯಲ್ಲಿ ಫೆಬ್ರವರಿ 23 ರಿಂದ 27 ವರೆಗೆ ಆಯೋಜಿಸಲಾಗಿದೆ. ಕೊನೆಯ ಹಾಗೂ ಅಂತಿಮ ಟೆಸ್ಟ್ ಮ್ಯಾಚ್ ಮಾರ್ಚ್ 7 ರಿಂದ 11 ವರೆಗೆ ಧರ್ಮಶಾಲಾದಲ್ಲಿ ಏರ್ಪಡಿಸಲಾಗಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ರಾಜ್​ಕೋಟ್​ನಲ್ಲಿ ಫೆಬ್ರವರಿ 15 ರಿಂದ 19 ವರೆಗೆ ನಡೆಯಲಿದೆ. ಬಳಿಕ ನಾಲ್ಕನೇ ಟೆಸ್ಟ್ ರಾಂಚಿಯಲ್ಲಿ ಫೆಬ್ರವರಿ 23 ರಿಂದ 27 ವರೆಗೆ ಆಯೋಜಿಸಲಾಗಿದೆ. ಕೊನೆಯ ಹಾಗೂ ಅಂತಿಮ ಟೆಸ್ಟ್ ಮ್ಯಾಚ್ ಮಾರ್ಚ್ 7 ರಿಂದ 11 ವರೆಗೆ ಧರ್ಮಶಾಲಾದಲ್ಲಿ ಏರ್ಪಡಿಸಲಾಗಿದೆ.

6 / 6
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?