Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳಿಗೆ ನಿರಾಸೆ ಮಾಡಿದ ವಿರಾಟ್; ಒಂದಂಕಿಗೆ ಕ್ಲೀನ್​ ಬೋಲ್ಡ್

ವಿರಾಟ್ ಕೊಹ್ಲಿ ಅವರ ರಣಜಿ ಟ್ರೋಫಿ ಪದಾರ್ಪಣೆ ನಿರಾಶಾದಾಯಕವಾಗಿದೆ. ಡೆಲ್ಲಿ ತಂಡದ ಪರ ಆಡಿದ ಅವರು ಕೇವಲ 6 ರನ್ ಗಳಿಸಿ ಬೌಲ್ಡ್ ಆದರು. 13 ವರ್ಷಗಳ ಬಳಿಕ ರಣಜಿ ಕ್ರಿಕೆಟ್​ಗೆ ಮರಳಿದ್ದ ಕೊಹ್ಲಿ ಅವರ ಕಳಪೆ ಫಾರ್ಮ್ ಮುಂದುವರಿದಿದೆ. ಇದರಿಂದ ಅಭಿಮಾನಿಗಳು ನಿರಾಶರಾಗಿದ್ದಾರೆ.

ಅಭಿಮಾನಿಗಳಿಗೆ ನಿರಾಸೆ ಮಾಡಿದ ವಿರಾಟ್; ಒಂದಂಕಿಗೆ ಕ್ಲೀನ್​ ಬೋಲ್ಡ್
ವಿರಾಟ್
Follow us
ರಾಜೇಶ್ ದುಗ್ಗುಮನೆ
|

Updated on:Jan 31, 2025 | 11:24 AM

ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಅವರು ರಣಜಿ ಕ್ರಿಕೆಟ್​ನಲ್ಲಿ ಆಡೋಕೆ ಬಂದಿದ್ದಾರೆ. ಡೆಲ್ಲಿ ತಂಡದ ಪರ ಅವರು ಆಡುತ್ತಿದ್ದಾರೆ. ಕೊಹ್ಲಿ ಆಟವನ್ನು ನೋಡಲು ಬಂದ ಅಭಿಮಾನಿಗಳಿಗೆ ಅವರು ನಿರಾಸೆ ಮಾಡಿದ್ದಾರೆ. ಬೌಂಡರಿ ಸಿಡಿಸಿದ ಮರು ಬಾಲ್​ನಲ್ಲಿ ಕೊಹ್ಲಿ ಬೋಲ್ಡ್ ಆಗಿದ್ದಾರೆ. ಆರು ರನ್​ಗೆ ವಿಕೆಟ್ ಒಪ್ಪಿಸಿ ಅವರು ಪೆವಿಲಿಯನ್ ಸೇರಿದ್ದಾರೆ. ಈ ಮೂಲಕ ಇಲ್ಲಿಯೂ ಅವರು ಕಳಪೆ ಫಾರ್ಮ್​ ಮುಂದುವರಿದಿದೆ.

ವಿರಾಟ್ ಕೊಹ್ಲಿ ಅವರು ಸುಮಾರು 13 ವರ್ಷಗಳ ಬಳಿಕ ರಣಜಿ ಕ್ರಿಕೆಟ್ ಆಡಿದ್ದಾರೆ. ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ರೈಲ್ವೆ ತಂಡ ಕೇವಲ 241 ರನ್​ಗಳಿಗೆ ಆಲ್​ಔಟ್ ಆಯಿತು.  ಮೊದಲ ದಿನ ಕೊಹ್ಲಿ ಮೈದಾನಕ್ಕೆ ಇಳಿಯಲಿಲ್ಲ. ಹೀಗಾಗಿ, ಅಲ್ಲಿ ನೆರೆದಿದ್ದ ಅಭಿಮಾನಿಗಳಿಗೆ ನಿರಾಸೆ ಆಯಿತು. ಎರಡನೇ ದಿನ ಕೊಹ್ಲಿ ಅವರು ಡೆಲ್ಲಿ ಪರ ಬ್ಯಾಟ್ ಬೀಸಿದರು. ಇಲ್ಲಿಯೂ ಆಗಿದ್ದು ನಿರಾಸೆಯೇ.

ಇದನ್ನೂ ಓದಿ: ಮೈದಾನಕ್ಕೆ ನುಗ್ಗಿದ ವಿರಾಟ್ ಕೊಹ್ಲಿ ಫ್ಯಾನ್: ಅರೆ ಸೇನಾ ಪಡೆಯನ್ನು ಕರೆಸಿದ DDCA

ಕೊಹ್ಲಿ ಬ್ಯಾಟಿಂಗ್​​ಗೆ ಇಳಿಯುತ್ತಿದ್ದಂತೆ ಅಲ್ಲಿ ನೆರೆದಿದ್ದ ಅಭಿಮಾನಿಗಳು ಹರ್ಷೋದ್ಘಾರ ಮಾಡಿದರು. ಮೊದಲು ನಿಧಾನ ಗತಿಯಲ್ಲಿ ಬ್ಯಾಟ್ ಬೀಸಿದ ಕೊಹ್ಲಿ ಒಂದು ಬೌಂಡರಿ ಸಿಡಿಸಿದರು. ಮತ್ತೆ ಅದೇ ರೀತಿಯಲ್ಲಿ ಬ್ಯಾಟ್ ಬೀಸಲು ಹೋಗಿ ಕ್ಲೀನ್ ಬೌಲ್ಡ್ ಆಗಿ ವಿಕೆಟ್ ಒಪ್ಪಿಸಿದರು. ಹಿಮಾಂಶು ಸಂಗ್ವಾನ್ ಅವರ ಮಾರಕ ದಾಳಿಗೆ ಕೊಹ್ಲಿ ತತ್ತರಿಸಿ ಹೋದರು. ಈ ಮೂಲಕ ಇಲ್ಲಿಯೂ ಕೊಹ್ಲಿ ಕಳಪೆ ಪ್ರದರ್ಶನ ಮುಂದುವರಿದಿದೆ.

ವಿರಾಟ್ ಕೊಹ್ಲಿ ಅವರು ಔಟ್ ಆಗುತ್ತಿದ್ದಂತೆ ಅಲ್ಲಿ ನೆರೆದಿದ್ದ ಅಭಿಮಾನಿಗಳು ಬೇಸರದಿಂದ ಹೊರ ನಡೆಯಲು ಆರಂಭಿಸಿದರು. ಅವರ ಆಟ ನೋಡಬೇಕು ಎಂದು ಸ್ಟೇಡಿಯಂನಲ್ಲಿ ನೆರೆದಿದ್ದ ಅಭಿಮಾನಿಗಳಿಗೆ ಸಾಕಷ್ಟು ನಿರಾಸೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:19 am, Fri, 31 January 25

ಮುಂಬೈನ ಮಂತ್ರಾಲಯದ 7ನೇ ಮಹಡಿಯಿಂದ ಹಾರಿದ ವ್ಯಕ್ತಿ; ವಿಡಿಯೋ ವೈರಲ್
ಮುಂಬೈನ ಮಂತ್ರಾಲಯದ 7ನೇ ಮಹಡಿಯಿಂದ ಹಾರಿದ ವ್ಯಕ್ತಿ; ವಿಡಿಯೋ ವೈರಲ್
ಇಂಥ ಡ್ಯಾನ್ಸ್ ಮಾಡೋಕೆ ನಾಚಿಕೆ ಆಗಲ್ವಾ ಎಂದವರಿಗೆ ನಿವೇದಿತಾ ಗೌಡ ಉತ್ತರ
ಇಂಥ ಡ್ಯಾನ್ಸ್ ಮಾಡೋಕೆ ನಾಚಿಕೆ ಆಗಲ್ವಾ ಎಂದವರಿಗೆ ನಿವೇದಿತಾ ಗೌಡ ಉತ್ತರ
ಎಲ್ಲರೂ ಇಂಥ ಮನಸ್ಥಿತಿ ಹೊಂದಿದ್ದರೆ ತಂಟೆ-ತಗಾದೆ ಸೃಷ್ಟಿಯಾಗಲಾರವು
ಎಲ್ಲರೂ ಇಂಥ ಮನಸ್ಥಿತಿ ಹೊಂದಿದ್ದರೆ ತಂಟೆ-ತಗಾದೆ ಸೃಷ್ಟಿಯಾಗಲಾರವು
ಎರಡೂ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿ, ಅಶೋಕ ಅಧ್ಯಕ್ಷತೆ
ಎರಡೂ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿ, ಅಶೋಕ ಅಧ್ಯಕ್ಷತೆ
ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು