AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ಬ್ಯಾಟರ್​​ಗಳನ್ನ ನೋಡಿ ಕಲಿಯಬೇಕು: ಚೇತೇಶ್ವರ ಪೂಜಾರ

Australia vs India: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯವು ಡಿಸೆಂಬರ್ 14 ರಿಂದ ಶುರುವಾಗಲಿದೆ. ಬ್ರಿಸ್ಬೇನ್​ನ ಗಬ್ಬಾ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈ ಪಂದ್ಯದಲ್ಲಿ ಗೆದ್ದ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ.

ಝಾಹಿರ್ ಯೂಸುಫ್
|

Updated on: Dec 09, 2024 | 7:53 AM

Share
ಅಡಿಲೇಡ್​​ನ ಓವಲ್ ಮೈದಾನದಲ್ಲಿ ನಡೆದ ಡೇ-ನೈಟ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಮುಗ್ಗರಿಸಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಬೌಲರ್​​ಗಳನ್ನು ಎದುರಿಸುವಲ್ಲಿ ಭಾರತೀಯ ಬ್ಯಾಟರ್​​ಗಳು ತಡಕಾಡಿದ್ದರು. ಅದರಲ್ಲೂ ವಿರಾಟ್ ಕೊಹ್ಲಿ ಎರಡೂ ಇನಿಂಗ್ಸ್​ಗಳಲ್ಲೂ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾದರು.

ಅಡಿಲೇಡ್​​ನ ಓವಲ್ ಮೈದಾನದಲ್ಲಿ ನಡೆದ ಡೇ-ನೈಟ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಮುಗ್ಗರಿಸಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಬೌಲರ್​​ಗಳನ್ನು ಎದುರಿಸುವಲ್ಲಿ ಭಾರತೀಯ ಬ್ಯಾಟರ್​​ಗಳು ತಡಕಾಡಿದ್ದರು. ಅದರಲ್ಲೂ ವಿರಾಟ್ ಕೊಹ್ಲಿ ಎರಡೂ ಇನಿಂಗ್ಸ್​ಗಳಲ್ಲೂ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾದರು.

1 / 5
ಮೊದಲ ಇನಿಂಗ್ಸ್​ನಲ್ಲಿ 7 ರನ್ ಬಾರಿಸಿದ್ದ ಕೊಹ್ಲಿ, ದ್ವಿತೀಯ ಇನಿಂಗ್ಸ್​​ನಲ್ಲಿ 11 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು. ಹೀಗೆ ಸುಲಭವಾಗಿ ವಿಕೆಟ್ ಕೈಚೆಲ್ಲಿದ ಕೊಹ್ಲಿಯ ಬ್ಯಾಟಿಂಗ್ ಸ್ಟ್ರಾಟಜಿಯನ್ನು ಟೀಮ್ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರ ಪ್ರಶ್ನಿಸಿದ್ದಾರೆ.

ಮೊದಲ ಇನಿಂಗ್ಸ್​ನಲ್ಲಿ 7 ರನ್ ಬಾರಿಸಿದ್ದ ಕೊಹ್ಲಿ, ದ್ವಿತೀಯ ಇನಿಂಗ್ಸ್​​ನಲ್ಲಿ 11 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು. ಹೀಗೆ ಸುಲಭವಾಗಿ ವಿಕೆಟ್ ಕೈಚೆಲ್ಲಿದ ಕೊಹ್ಲಿಯ ಬ್ಯಾಟಿಂಗ್ ಸ್ಟ್ರಾಟಜಿಯನ್ನು ಟೀಮ್ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರ ಪ್ರಶ್ನಿಸಿದ್ದಾರೆ.

2 / 5
ವಿರಾಟ್ ಕೊಹ್ಲಿ ಪರ್ತ್​​ ಟೆಸ್ಟ್​​ನಲ್ಲಿ ಮಾಡಿದ ತಪ್ಪನ್ನೇ ಅಡಿಲೇಡ್​ನಲ್ಲೂ ಪುನರಾವರ್ತಿಸಿದ್ದಾರೆ. ಏಕೆಂದರೆ ಕ್ರೀಸ್​ಗೆ ಆಗಮಿಸುತ್ತಿದ್ದಂತೆ ಕೊಹ್ಲಿ ಆಕ್ರಮಣಕಾರಿ ಆಟಕ್ಕೆ ಮುಂದಾಗುತ್ತಿದ್ದಾರೆ. ಇದೇ ಕಾರಣದಿಂದಾಗಿ ಅವರು ಬೇಗನೆ ವಿಕೆಟ್ ಕೈ ಚೆಲ್ಲಿದ್ದಾರೆ ಎಂದು ಚೇತೇಶ್ವರ ಪೂಜಾರ ಅಭಿಪ್ರಾಯಪಟ್ಟಿದ್ದಾರೆ.

ವಿರಾಟ್ ಕೊಹ್ಲಿ ಪರ್ತ್​​ ಟೆಸ್ಟ್​​ನಲ್ಲಿ ಮಾಡಿದ ತಪ್ಪನ್ನೇ ಅಡಿಲೇಡ್​ನಲ್ಲೂ ಪುನರಾವರ್ತಿಸಿದ್ದಾರೆ. ಏಕೆಂದರೆ ಕ್ರೀಸ್​ಗೆ ಆಗಮಿಸುತ್ತಿದ್ದಂತೆ ಕೊಹ್ಲಿ ಆಕ್ರಮಣಕಾರಿ ಆಟಕ್ಕೆ ಮುಂದಾಗುತ್ತಿದ್ದಾರೆ. ಇದೇ ಕಾರಣದಿಂದಾಗಿ ಅವರು ಬೇಗನೆ ವಿಕೆಟ್ ಕೈ ಚೆಲ್ಲಿದ್ದಾರೆ ಎಂದು ಚೇತೇಶ್ವರ ಪೂಜಾರ ಅಭಿಪ್ರಾಯಪಟ್ಟಿದ್ದಾರೆ.

3 / 5
ಅದೇ ಆಸ್ಟ್ರೇಲಿಯಾ ಆಟಗಾರರಾದ ನಾಥನ್ ಮೆಕ್​ಸ್ವೀನಿ ಹಾಗೂ ಮಾರ್ನಸ್ ಲಾಬುಶೇನ್ ತುರ್ತಾಗಿ ರನ್​​ಗಳಿಸಲು ಮುಂದಾಗಲಿಲ್ಲ. ಬದಲಾಗಿ ಸಾಕಷ್ಟು ಎಸೆತಗಳನ್ನು ಅವರು ಬಿಟ್ಟಿದ್ದಾರೆ. ನೀವು ಪ್ರತಿ ಎಸೆತದಲ್ಲೂ ಶಾಟ್ ಆಡಲು ಸಾಧ್ಯವಿಲ್ಲ. ಇದನ್ನು ವಿರಾಟ್ ಕೊಹ್ಲಿ, ನಾಥನ್ ಮೆಕ್​ಸ್ವೀನಿ ಹಾಗೂ ಮಾರ್ನಸ್ ಲಾಬುಶೇನ್ ಅವರ ಬ್ಯಾಟಿಂಗ್ ನೋಡಿ ಕಲಿಯಬೇಕು ಎಂದು ಪೂಜಾರ ಹೇಳಿದ್ದಾರೆ.

ಅದೇ ಆಸ್ಟ್ರೇಲಿಯಾ ಆಟಗಾರರಾದ ನಾಥನ್ ಮೆಕ್​ಸ್ವೀನಿ ಹಾಗೂ ಮಾರ್ನಸ್ ಲಾಬುಶೇನ್ ತುರ್ತಾಗಿ ರನ್​​ಗಳಿಸಲು ಮುಂದಾಗಲಿಲ್ಲ. ಬದಲಾಗಿ ಸಾಕಷ್ಟು ಎಸೆತಗಳನ್ನು ಅವರು ಬಿಟ್ಟಿದ್ದಾರೆ. ನೀವು ಪ್ರತಿ ಎಸೆತದಲ್ಲೂ ಶಾಟ್ ಆಡಲು ಸಾಧ್ಯವಿಲ್ಲ. ಇದನ್ನು ವಿರಾಟ್ ಕೊಹ್ಲಿ, ನಾಥನ್ ಮೆಕ್​ಸ್ವೀನಿ ಹಾಗೂ ಮಾರ್ನಸ್ ಲಾಬುಶೇನ್ ಅವರ ಬ್ಯಾಟಿಂಗ್ ನೋಡಿ ಕಲಿಯಬೇಕು ಎಂದು ಪೂಜಾರ ಹೇಳಿದ್ದಾರೆ.

4 / 5
ನನ್ನ ಪ್ರಕಾರ ಪಿಂಕ್ ಬಾಲ್ ಟೆಸ್ಟ್​ನಲ್ಲಿ ವಿರಾಟ್ ಕೊಹ್ಲಿ ಔಟಾದ ಎಸೆತವನ್ನು ಸುಲಭವಾಗಿ ಬಿಡಬಹುದಿತ್ತು. ಅಲ್ಲದೆ ಚೆಂಡು ಬೌನ್ಸ್​ ಆಗುತ್ತಿದೆ ಎಂಬುದು ಅವರಿಗೂ ಗೊತ್ತಿದೆ. ಆದರೆ ಕೊಹ್ಲಿ ಎಲ್ಲಾ ಎಸೆತಗಳನ್ನು ಆಡಬೇಕೆಂಬ ಮನಸ್ಥಿತಿಯಲ್ಲಿದ್ದಾರೆ. ಅದೇ ಆಸ್ಟ್ರೇಲಿಯಾ ಬ್ಯಾಟರ್​​ಗಳು ಎಸೆತಗಳನ್ನು ಆಯ್ಕೆ ಮಾಡಲು ಚುರುಕಾಗಿದ್ದರು. ಹೀಗಾಗಿ ಅಂತಹ ಎಸೆತಗಳನ್ನು ಮಾತ್ರ ಎದುರಿಸಿ ಸ್ಕೋರ್​​ಗಳಿಸಿದ್ದಾರೆ. ಇದೇ ತಂತ್ರವನ್ನು ವಿರಾಟ್ ಕೊಹ್ಲಿ ಕೂಡ ಅನುಸರಿಸಬೇಕೆಂದು ಚೇತೇಶ್ವರ ಪೂಜಾರ ಸಲಹೆ ನೀಡಿದ್ದಾರೆ.

ನನ್ನ ಪ್ರಕಾರ ಪಿಂಕ್ ಬಾಲ್ ಟೆಸ್ಟ್​ನಲ್ಲಿ ವಿರಾಟ್ ಕೊಹ್ಲಿ ಔಟಾದ ಎಸೆತವನ್ನು ಸುಲಭವಾಗಿ ಬಿಡಬಹುದಿತ್ತು. ಅಲ್ಲದೆ ಚೆಂಡು ಬೌನ್ಸ್​ ಆಗುತ್ತಿದೆ ಎಂಬುದು ಅವರಿಗೂ ಗೊತ್ತಿದೆ. ಆದರೆ ಕೊಹ್ಲಿ ಎಲ್ಲಾ ಎಸೆತಗಳನ್ನು ಆಡಬೇಕೆಂಬ ಮನಸ್ಥಿತಿಯಲ್ಲಿದ್ದಾರೆ. ಅದೇ ಆಸ್ಟ್ರೇಲಿಯಾ ಬ್ಯಾಟರ್​​ಗಳು ಎಸೆತಗಳನ್ನು ಆಯ್ಕೆ ಮಾಡಲು ಚುರುಕಾಗಿದ್ದರು. ಹೀಗಾಗಿ ಅಂತಹ ಎಸೆತಗಳನ್ನು ಮಾತ್ರ ಎದುರಿಸಿ ಸ್ಕೋರ್​​ಗಳಿಸಿದ್ದಾರೆ. ಇದೇ ತಂತ್ರವನ್ನು ವಿರಾಟ್ ಕೊಹ್ಲಿ ಕೂಡ ಅನುಸರಿಸಬೇಕೆಂದು ಚೇತೇಶ್ವರ ಪೂಜಾರ ಸಲಹೆ ನೀಡಿದ್ದಾರೆ.

5 / 5
Follow Us
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ