AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ಬ್ಯಾಟರ್​​ಗಳನ್ನ ನೋಡಿ ಕಲಿಯಬೇಕು: ಚೇತೇಶ್ವರ ಪೂಜಾರ

Australia vs India: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯವು ಡಿಸೆಂಬರ್ 14 ರಿಂದ ಶುರುವಾಗಲಿದೆ. ಬ್ರಿಸ್ಬೇನ್​ನ ಗಬ್ಬಾ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈ ಪಂದ್ಯದಲ್ಲಿ ಗೆದ್ದ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ.

ಝಾಹಿರ್ ಯೂಸುಫ್
|

Updated on: Dec 09, 2024 | 7:53 AM

Share
ಅಡಿಲೇಡ್​​ನ ಓವಲ್ ಮೈದಾನದಲ್ಲಿ ನಡೆದ ಡೇ-ನೈಟ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಮುಗ್ಗರಿಸಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಬೌಲರ್​​ಗಳನ್ನು ಎದುರಿಸುವಲ್ಲಿ ಭಾರತೀಯ ಬ್ಯಾಟರ್​​ಗಳು ತಡಕಾಡಿದ್ದರು. ಅದರಲ್ಲೂ ವಿರಾಟ್ ಕೊಹ್ಲಿ ಎರಡೂ ಇನಿಂಗ್ಸ್​ಗಳಲ್ಲೂ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾದರು.

ಅಡಿಲೇಡ್​​ನ ಓವಲ್ ಮೈದಾನದಲ್ಲಿ ನಡೆದ ಡೇ-ನೈಟ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಮುಗ್ಗರಿಸಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಬೌಲರ್​​ಗಳನ್ನು ಎದುರಿಸುವಲ್ಲಿ ಭಾರತೀಯ ಬ್ಯಾಟರ್​​ಗಳು ತಡಕಾಡಿದ್ದರು. ಅದರಲ್ಲೂ ವಿರಾಟ್ ಕೊಹ್ಲಿ ಎರಡೂ ಇನಿಂಗ್ಸ್​ಗಳಲ್ಲೂ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾದರು.

1 / 5
ಮೊದಲ ಇನಿಂಗ್ಸ್​ನಲ್ಲಿ 7 ರನ್ ಬಾರಿಸಿದ್ದ ಕೊಹ್ಲಿ, ದ್ವಿತೀಯ ಇನಿಂಗ್ಸ್​​ನಲ್ಲಿ 11 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು. ಹೀಗೆ ಸುಲಭವಾಗಿ ವಿಕೆಟ್ ಕೈಚೆಲ್ಲಿದ ಕೊಹ್ಲಿಯ ಬ್ಯಾಟಿಂಗ್ ಸ್ಟ್ರಾಟಜಿಯನ್ನು ಟೀಮ್ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರ ಪ್ರಶ್ನಿಸಿದ್ದಾರೆ.

ಮೊದಲ ಇನಿಂಗ್ಸ್​ನಲ್ಲಿ 7 ರನ್ ಬಾರಿಸಿದ್ದ ಕೊಹ್ಲಿ, ದ್ವಿತೀಯ ಇನಿಂಗ್ಸ್​​ನಲ್ಲಿ 11 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು. ಹೀಗೆ ಸುಲಭವಾಗಿ ವಿಕೆಟ್ ಕೈಚೆಲ್ಲಿದ ಕೊಹ್ಲಿಯ ಬ್ಯಾಟಿಂಗ್ ಸ್ಟ್ರಾಟಜಿಯನ್ನು ಟೀಮ್ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರ ಪ್ರಶ್ನಿಸಿದ್ದಾರೆ.

2 / 5
ವಿರಾಟ್ ಕೊಹ್ಲಿ ಪರ್ತ್​​ ಟೆಸ್ಟ್​​ನಲ್ಲಿ ಮಾಡಿದ ತಪ್ಪನ್ನೇ ಅಡಿಲೇಡ್​ನಲ್ಲೂ ಪುನರಾವರ್ತಿಸಿದ್ದಾರೆ. ಏಕೆಂದರೆ ಕ್ರೀಸ್​ಗೆ ಆಗಮಿಸುತ್ತಿದ್ದಂತೆ ಕೊಹ್ಲಿ ಆಕ್ರಮಣಕಾರಿ ಆಟಕ್ಕೆ ಮುಂದಾಗುತ್ತಿದ್ದಾರೆ. ಇದೇ ಕಾರಣದಿಂದಾಗಿ ಅವರು ಬೇಗನೆ ವಿಕೆಟ್ ಕೈ ಚೆಲ್ಲಿದ್ದಾರೆ ಎಂದು ಚೇತೇಶ್ವರ ಪೂಜಾರ ಅಭಿಪ್ರಾಯಪಟ್ಟಿದ್ದಾರೆ.

ವಿರಾಟ್ ಕೊಹ್ಲಿ ಪರ್ತ್​​ ಟೆಸ್ಟ್​​ನಲ್ಲಿ ಮಾಡಿದ ತಪ್ಪನ್ನೇ ಅಡಿಲೇಡ್​ನಲ್ಲೂ ಪುನರಾವರ್ತಿಸಿದ್ದಾರೆ. ಏಕೆಂದರೆ ಕ್ರೀಸ್​ಗೆ ಆಗಮಿಸುತ್ತಿದ್ದಂತೆ ಕೊಹ್ಲಿ ಆಕ್ರಮಣಕಾರಿ ಆಟಕ್ಕೆ ಮುಂದಾಗುತ್ತಿದ್ದಾರೆ. ಇದೇ ಕಾರಣದಿಂದಾಗಿ ಅವರು ಬೇಗನೆ ವಿಕೆಟ್ ಕೈ ಚೆಲ್ಲಿದ್ದಾರೆ ಎಂದು ಚೇತೇಶ್ವರ ಪೂಜಾರ ಅಭಿಪ್ರಾಯಪಟ್ಟಿದ್ದಾರೆ.

3 / 5
ಅದೇ ಆಸ್ಟ್ರೇಲಿಯಾ ಆಟಗಾರರಾದ ನಾಥನ್ ಮೆಕ್​ಸ್ವೀನಿ ಹಾಗೂ ಮಾರ್ನಸ್ ಲಾಬುಶೇನ್ ತುರ್ತಾಗಿ ರನ್​​ಗಳಿಸಲು ಮುಂದಾಗಲಿಲ್ಲ. ಬದಲಾಗಿ ಸಾಕಷ್ಟು ಎಸೆತಗಳನ್ನು ಅವರು ಬಿಟ್ಟಿದ್ದಾರೆ. ನೀವು ಪ್ರತಿ ಎಸೆತದಲ್ಲೂ ಶಾಟ್ ಆಡಲು ಸಾಧ್ಯವಿಲ್ಲ. ಇದನ್ನು ವಿರಾಟ್ ಕೊಹ್ಲಿ, ನಾಥನ್ ಮೆಕ್​ಸ್ವೀನಿ ಹಾಗೂ ಮಾರ್ನಸ್ ಲಾಬುಶೇನ್ ಅವರ ಬ್ಯಾಟಿಂಗ್ ನೋಡಿ ಕಲಿಯಬೇಕು ಎಂದು ಪೂಜಾರ ಹೇಳಿದ್ದಾರೆ.

ಅದೇ ಆಸ್ಟ್ರೇಲಿಯಾ ಆಟಗಾರರಾದ ನಾಥನ್ ಮೆಕ್​ಸ್ವೀನಿ ಹಾಗೂ ಮಾರ್ನಸ್ ಲಾಬುಶೇನ್ ತುರ್ತಾಗಿ ರನ್​​ಗಳಿಸಲು ಮುಂದಾಗಲಿಲ್ಲ. ಬದಲಾಗಿ ಸಾಕಷ್ಟು ಎಸೆತಗಳನ್ನು ಅವರು ಬಿಟ್ಟಿದ್ದಾರೆ. ನೀವು ಪ್ರತಿ ಎಸೆತದಲ್ಲೂ ಶಾಟ್ ಆಡಲು ಸಾಧ್ಯವಿಲ್ಲ. ಇದನ್ನು ವಿರಾಟ್ ಕೊಹ್ಲಿ, ನಾಥನ್ ಮೆಕ್​ಸ್ವೀನಿ ಹಾಗೂ ಮಾರ್ನಸ್ ಲಾಬುಶೇನ್ ಅವರ ಬ್ಯಾಟಿಂಗ್ ನೋಡಿ ಕಲಿಯಬೇಕು ಎಂದು ಪೂಜಾರ ಹೇಳಿದ್ದಾರೆ.

4 / 5
ನನ್ನ ಪ್ರಕಾರ ಪಿಂಕ್ ಬಾಲ್ ಟೆಸ್ಟ್​ನಲ್ಲಿ ವಿರಾಟ್ ಕೊಹ್ಲಿ ಔಟಾದ ಎಸೆತವನ್ನು ಸುಲಭವಾಗಿ ಬಿಡಬಹುದಿತ್ತು. ಅಲ್ಲದೆ ಚೆಂಡು ಬೌನ್ಸ್​ ಆಗುತ್ತಿದೆ ಎಂಬುದು ಅವರಿಗೂ ಗೊತ್ತಿದೆ. ಆದರೆ ಕೊಹ್ಲಿ ಎಲ್ಲಾ ಎಸೆತಗಳನ್ನು ಆಡಬೇಕೆಂಬ ಮನಸ್ಥಿತಿಯಲ್ಲಿದ್ದಾರೆ. ಅದೇ ಆಸ್ಟ್ರೇಲಿಯಾ ಬ್ಯಾಟರ್​​ಗಳು ಎಸೆತಗಳನ್ನು ಆಯ್ಕೆ ಮಾಡಲು ಚುರುಕಾಗಿದ್ದರು. ಹೀಗಾಗಿ ಅಂತಹ ಎಸೆತಗಳನ್ನು ಮಾತ್ರ ಎದುರಿಸಿ ಸ್ಕೋರ್​​ಗಳಿಸಿದ್ದಾರೆ. ಇದೇ ತಂತ್ರವನ್ನು ವಿರಾಟ್ ಕೊಹ್ಲಿ ಕೂಡ ಅನುಸರಿಸಬೇಕೆಂದು ಚೇತೇಶ್ವರ ಪೂಜಾರ ಸಲಹೆ ನೀಡಿದ್ದಾರೆ.

ನನ್ನ ಪ್ರಕಾರ ಪಿಂಕ್ ಬಾಲ್ ಟೆಸ್ಟ್​ನಲ್ಲಿ ವಿರಾಟ್ ಕೊಹ್ಲಿ ಔಟಾದ ಎಸೆತವನ್ನು ಸುಲಭವಾಗಿ ಬಿಡಬಹುದಿತ್ತು. ಅಲ್ಲದೆ ಚೆಂಡು ಬೌನ್ಸ್​ ಆಗುತ್ತಿದೆ ಎಂಬುದು ಅವರಿಗೂ ಗೊತ್ತಿದೆ. ಆದರೆ ಕೊಹ್ಲಿ ಎಲ್ಲಾ ಎಸೆತಗಳನ್ನು ಆಡಬೇಕೆಂಬ ಮನಸ್ಥಿತಿಯಲ್ಲಿದ್ದಾರೆ. ಅದೇ ಆಸ್ಟ್ರೇಲಿಯಾ ಬ್ಯಾಟರ್​​ಗಳು ಎಸೆತಗಳನ್ನು ಆಯ್ಕೆ ಮಾಡಲು ಚುರುಕಾಗಿದ್ದರು. ಹೀಗಾಗಿ ಅಂತಹ ಎಸೆತಗಳನ್ನು ಮಾತ್ರ ಎದುರಿಸಿ ಸ್ಕೋರ್​​ಗಳಿಸಿದ್ದಾರೆ. ಇದೇ ತಂತ್ರವನ್ನು ವಿರಾಟ್ ಕೊಹ್ಲಿ ಕೂಡ ಅನುಸರಿಸಬೇಕೆಂದು ಚೇತೇಶ್ವರ ಪೂಜಾರ ಸಲಹೆ ನೀಡಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!