AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ ಟೀಮ್​ಮೇಟ್ಸ್​ಗೆ ವಿರಾಟ್ ಬಿಗ್ ವಾರ್ನಿಂಗ್: ಈ ಬಾರಿ ಸುಲಭವಿಲ್ಲ ಎಂದ ಕಿಂಗ್ ಕೊಹ್ಲಿ!

ಬೆಂಗಳೂರು, ಮಾರ್ಚ್ 21: ಐಪಿಎಲ್ 2026 ಸೀಸನ್ ಆರಂಭಕ್ಕೂ ಮುನ್ನವೇ ಆರ್‌ಸಿಬಿ (Royal Challengers Bengaluru) ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ತಂಡದ ಆಟಗಾರರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ತಂಡದ ತರಬೇತಿ ಶಿಬಿರದಲ್ಲಿ ಮಾತನಾಡಿದ ಕೊಹ್ಲಿ, ಈ ಸೀಸನ್ ಇನ್ನಷ್ಟು ಕಠಿಣವಾಗಲಿದೆ ಎಂದು ತಿಳಿಸಿದ್ದಾರೆ.

ಗಣಪತಿ ಶರ್ಮಾ
|

Updated on: Mar 21, 2026 | 11:24 AM

Share
ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ 2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಈ ಹಿನ್ನೆಲೆ ಈಗಾಗಲೇ ತಂಡ ತಯಾರಿ ಆರಂಭಿಸಿದ್ದು, ಕೊಹ್ಲಿಯ ಭರ್ಜರಿ ಬ್ಯಾಟಿಂಗ್ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ 2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಈ ಹಿನ್ನೆಲೆ ಈಗಾಗಲೇ ತಂಡ ತಯಾರಿ ಆರಂಭಿಸಿದ್ದು, ಕೊಹ್ಲಿಯ ಭರ್ಜರಿ ಬ್ಯಾಟಿಂಗ್ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

1 / 6
ಈ ಸೀಸನ್ ಇನ್ನಷ್ಟು ಕಠಿಣ: ತಂಡದ ಸಹ ಆಟಗಾರರೊಂದಿಗೆ ಮಾತನಾಡಿದ ಕೊಹ್ಲಿ, ಕಳೆದ 2-3 ಸೀಸನ್‌ಗಳಲ್ಲಿ ನಾವು ತುಂಬಾ ಕಷ್ಟಪಟ್ಟಿದ್ದೇವೆ. ಕಳೆದ ವರ್ಷ ಸಾಧನೆ ಮಾಡಿದ್ದೇವೆ. ಆದರೆ ಈಗ ಇನ್ನಷ್ಟು ಕಷ್ಟವಾಗಲಿದೆ. ಇತರ ತಂಡಗಳು ನಮ್ಮ ವಿರುದ್ಧ ಇನ್ನಷ್ಟು ಆಕ್ರಮಣಕಾರಿ ಆಟ ಆಡಲಿವೆ ಎಂದು ಹೇಳಿದ್ದಾರೆ.

ಈ ಸೀಸನ್ ಇನ್ನಷ್ಟು ಕಠಿಣ: ತಂಡದ ಸಹ ಆಟಗಾರರೊಂದಿಗೆ ಮಾತನಾಡಿದ ಕೊಹ್ಲಿ, ಕಳೆದ 2-3 ಸೀಸನ್‌ಗಳಲ್ಲಿ ನಾವು ತುಂಬಾ ಕಷ್ಟಪಟ್ಟಿದ್ದೇವೆ. ಕಳೆದ ವರ್ಷ ಸಾಧನೆ ಮಾಡಿದ್ದೇವೆ. ಆದರೆ ಈಗ ಇನ್ನಷ್ಟು ಕಷ್ಟವಾಗಲಿದೆ. ಇತರ ತಂಡಗಳು ನಮ್ಮ ವಿರುದ್ಧ ಇನ್ನಷ್ಟು ಆಕ್ರಮಣಕಾರಿ ಆಟ ಆಡಲಿವೆ ಎಂದು ಹೇಳಿದ್ದಾರೆ.

2 / 6
ಒಂದು ನಿಮಿಷವೂ ವ್ಯರ್ಥ ಮಾಡಬಾರದು. ಪ್ರತಿಯೊಂದು ಸೆಷನ್‌ಗೂ 120 ಪರ್ಸೆಂಟ್ ಕೊಡುಗೆ ನೀಡಬೇಕು. ಈ ಎರಡೂವರೆ ತಿಂಗಳು ನಮ್ಮ ಪಾಲಿಗೆ ಬಹಳ ಮುಖ್ಯ ಎಂದು ತಂಡವನ್ನು ಕೊಹ್ಲಿ ಹುರಿದುಂಬಿಸಿದ್ದಾರೆ.

ಒಂದು ನಿಮಿಷವೂ ವ್ಯರ್ಥ ಮಾಡಬಾರದು. ಪ್ರತಿಯೊಂದು ಸೆಷನ್‌ಗೂ 120 ಪರ್ಸೆಂಟ್ ಕೊಡುಗೆ ನೀಡಬೇಕು. ಈ ಎರಡೂವರೆ ತಿಂಗಳು ನಮ್ಮ ಪಾಲಿಗೆ ಬಹಳ ಮುಖ್ಯ ಎಂದು ತಂಡವನ್ನು ಕೊಹ್ಲಿ ಹುರಿದುಂಬಿಸಿದ್ದಾರೆ.

3 / 6
ಚಾಂಪಿಯನ್ ಆಗಿ ಹೊಸ ಸವಾಲು: ಆರ್‌ಸಿಬಿ ಕಳೆದ ಸೀಸನ್‌ನಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿತ್ತು. ಈಗ ಚಾಂಪಿಯನ್ ತಂಡವಾಗಿ ಕಣಕ್ಕಿಳಿಯುತ್ತಿರುವುದರಿಂದ ಒತ್ತಡ ಹೆಚ್ಚಾಗಲಿದೆ. ಈ ಕಾರಣಕ್ಕೇ ಸಹ ಆಟಗಾರರಿಗೆ ಕೊಹ್ಲಿ ಕಿವಿಮಾತು ಹೇಳಿದ್ದಾರೆ.

ಚಾಂಪಿಯನ್ ಆಗಿ ಹೊಸ ಸವಾಲು: ಆರ್‌ಸಿಬಿ ಕಳೆದ ಸೀಸನ್‌ನಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿತ್ತು. ಈಗ ಚಾಂಪಿಯನ್ ತಂಡವಾಗಿ ಕಣಕ್ಕಿಳಿಯುತ್ತಿರುವುದರಿಂದ ಒತ್ತಡ ಹೆಚ್ಚಾಗಲಿದೆ. ಈ ಕಾರಣಕ್ಕೇ ಸಹ ಆಟಗಾರರಿಗೆ ಕೊಹ್ಲಿ ಕಿವಿಮಾತು ಹೇಳಿದ್ದಾರೆ.

4 / 6
ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಕೂಡ ಹೊಸ ಆಟಗಾರರ ಸೇರ್ಪಡೆಯಿಂದ ತಂಡ ಮತ್ತಷ್ಟು ಬಲವಾಗಿದೆಯೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ, 2026 ಋತುವಿನಲ್ಲಿ ಉತ್ತಮ ಪ್ರದರ್ಶನ ನೀಡಲು ಆರ್​​ಸಿಬಿ ಅಣಿಯಾಗುತ್ತಿದೆ ಎಂದು ತಿಳಿಸಿದ್ದಾರೆ.

ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಕೂಡ ಹೊಸ ಆಟಗಾರರ ಸೇರ್ಪಡೆಯಿಂದ ತಂಡ ಮತ್ತಷ್ಟು ಬಲವಾಗಿದೆಯೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ, 2026 ಋತುವಿನಲ್ಲಿ ಉತ್ತಮ ಪ್ರದರ್ಶನ ನೀಡಲು ಆರ್​​ಸಿಬಿ ಅಣಿಯಾಗುತ್ತಿದೆ ಎಂದು ತಿಳಿಸಿದ್ದಾರೆ.

5 / 6
ಕೊಹ್ಲಿಗೆ ಮತ್ತೊಂದು ಮೈಲುಗಲ್ಲು: ಐಪಿಎಲ್ ಇತಿಹಾಸದಲ್ಲಿ ಈಗಾಗಲೇ 8,661 ರನ್ ಗಳಿಸಿರುವ ಕೊಹ್ಲಿ, ಈ ಸೀಸನ್‌ನಲ್ಲಿ 9,000 ರನ್ ಗಡಿ ದಾಟುವ ಮೊದಲ ಆಟಗಾರನಾಗುವ ಸಾಧ್ಯತೆಯೂ ಇದೆ. ಒಟ್ಟಿನಲ್ಲಿ, ಚಾಂಪಿಯನ್ ಆರ್‌ಸಿಬಿ ಈ ಬಾರಿ ಮತ್ತಷ್ಟು ಬಲಿಷ್ಠವಾಗಿ ಕಣಕ್ಕಿಳಿಯಲಿದ್ದು, ಕೊಹ್ಲಿಯ ಪ್ರೋತ್ಸಾಹದ ಹಾಗೂ ಎಚ್ಚರಿಕೆಯ ಮಾತುಗಳು ತಂಡಕ್ಕೆ ಹೊಸ ಉತ್ಸಾಹ ತುಂಬಿದೆ.

ಕೊಹ್ಲಿಗೆ ಮತ್ತೊಂದು ಮೈಲುಗಲ್ಲು: ಐಪಿಎಲ್ ಇತಿಹಾಸದಲ್ಲಿ ಈಗಾಗಲೇ 8,661 ರನ್ ಗಳಿಸಿರುವ ಕೊಹ್ಲಿ, ಈ ಸೀಸನ್‌ನಲ್ಲಿ 9,000 ರನ್ ಗಡಿ ದಾಟುವ ಮೊದಲ ಆಟಗಾರನಾಗುವ ಸಾಧ್ಯತೆಯೂ ಇದೆ. ಒಟ್ಟಿನಲ್ಲಿ, ಚಾಂಪಿಯನ್ ಆರ್‌ಸಿಬಿ ಈ ಬಾರಿ ಮತ್ತಷ್ಟು ಬಲಿಷ್ಠವಾಗಿ ಕಣಕ್ಕಿಳಿಯಲಿದ್ದು, ಕೊಹ್ಲಿಯ ಪ್ರೋತ್ಸಾಹದ ಹಾಗೂ ಎಚ್ಚರಿಕೆಯ ಮಾತುಗಳು ತಂಡಕ್ಕೆ ಹೊಸ ಉತ್ಸಾಹ ತುಂಬಿದೆ.

6 / 6
Follow Us
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ