AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ಈಗ ಶೂನ್ಯ ಶೂರ..!

India vs New Zealand, 1st Test: ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 9 ಎಸೆತಗಳನ್ನು ಎದುರಿಸಿದರೂ ಒಂದೇ ಒಂದು ರನ್​ಗಳಿಸಲು ಸಾಧ್ಯವಾಗಲಿಲ್ಲ. ಅಲ್ಲದೆ ಶೂನ್ಯಕ್ಕೆ ಔಟಾಗುವ ಮೂಲಕ ಕಳಪೆ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 17, 2024 | 2:10 PM

Share
536 ಪಂದ್ಯಗಳು... 596 ಇನಿಂಗ್ಸ್... 33970 ಎಸೆತಗಳು... ಈ ಎಸೆತಗಳಲ್ಲಿ ವಿರಾಟ್ ಕೊಹ್ಲಿ 38 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಅದರಲ್ಲೂ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೊನ್ನೆ ಸುತ್ತುವ ಮೂಲಕ ವಿರಾಟ್ ಕೊಹ್ಲಿ ಅನಗತ್ಯ ದಾಖಲೆಯೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

536 ಪಂದ್ಯಗಳು... 596 ಇನಿಂಗ್ಸ್... 33970 ಎಸೆತಗಳು... ಈ ಎಸೆತಗಳಲ್ಲಿ ವಿರಾಟ್ ಕೊಹ್ಲಿ 38 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಅದರಲ್ಲೂ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೊನ್ನೆ ಸುತ್ತುವ ಮೂಲಕ ವಿರಾಟ್ ಕೊಹ್ಲಿ ಅನಗತ್ಯ ದಾಖಲೆಯೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

1 / 6
ಅಂದರೆ ಸಕ್ರಿಯ ಆಟಗಾರರಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಬ್ಯಾಟರ್ ಎಂಬ ಕಳಪೆ ದಾಖಲೆಯೊಂದು ವಿರಾಟ್ ಕೊಹ್ಲಿ ಹೆಸರಿಗೆ ಸೇರ್ಪಡೆಯಾಗಿದೆ. 596 ಅಂತಾರಾಷ್ಟ್ರೀಯ ಇನಿಂಗ್ಸ್​ ಆಡಿರುವ ಕೊಹ್ಲಿ 38 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಈ ಕಳಪೆ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಅಂದರೆ ಸಕ್ರಿಯ ಆಟಗಾರರಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಬ್ಯಾಟರ್ ಎಂಬ ಕಳಪೆ ದಾಖಲೆಯೊಂದು ವಿರಾಟ್ ಕೊಹ್ಲಿ ಹೆಸರಿಗೆ ಸೇರ್ಪಡೆಯಾಗಿದೆ. 596 ಅಂತಾರಾಷ್ಟ್ರೀಯ ಇನಿಂಗ್ಸ್​ ಆಡಿರುವ ಕೊಹ್ಲಿ 38 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಈ ಕಳಪೆ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

2 / 6
ಇದಕ್ಕೂ ಮುನ್ನ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಸಕ್ರಿಯ ಬ್ಯಾಟರ್​ಗಳ ಪಟ್ಟಿಯಲ್ಲಿ ನ್ಯೂಝಿಲೆಂಡ್​ನ ಟಿಮ್ ಸೌಥಿ ಅಗ್ರಸ್ಥಾನದಲ್ಲಿದ್ದರು. ಸೌಥಿ 293 ಅಂತಾರಾಷ್ಟ್ರೀಯ ಇನಿಂಗ್ಸ್​ಗಳಲ್ಲಿ ಒಟ್ಟು 38 ಬಾರಿ ಸೊನ್ನೆಗೆ ಔಟಾಗಿದ್ದಾರೆ. ಇದೀಗ ಈ ಕಳಪೆ ದಾಖಲೆಯನ್ನು ವಿರಾಟ್ ಕೊಹ್ಲಿ ಸರಿಗಟ್ಟಿದ್ದಾರೆ.

ಇದಕ್ಕೂ ಮುನ್ನ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಸಕ್ರಿಯ ಬ್ಯಾಟರ್​ಗಳ ಪಟ್ಟಿಯಲ್ಲಿ ನ್ಯೂಝಿಲೆಂಡ್​ನ ಟಿಮ್ ಸೌಥಿ ಅಗ್ರಸ್ಥಾನದಲ್ಲಿದ್ದರು. ಸೌಥಿ 293 ಅಂತಾರಾಷ್ಟ್ರೀಯ ಇನಿಂಗ್ಸ್​ಗಳಲ್ಲಿ ಒಟ್ಟು 38 ಬಾರಿ ಸೊನ್ನೆಗೆ ಔಟಾಗಿದ್ದಾರೆ. ಇದೀಗ ಈ ಕಳಪೆ ದಾಖಲೆಯನ್ನು ವಿರಾಟ್ ಕೊಹ್ಲಿ ಸರಿಗಟ್ಟಿದ್ದಾರೆ.

3 / 6
ಇನ್ನು ಸಕ್ರಿಯ ಶೂನ್ಯ ಶೂರರ ಪಟ್ಟಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೂರನೇ ಸ್ಥಾನದಲ್ಲಿದ್ದಾರೆ. 514 ಅಂತಾರಾಷ್ಟ್ರೀಯ ಇನಿಂಗ್ಸ್​ಗಳಲ್ಲಿ 33 ಬಾರಿ ಸೊನ್ನೆಗೆ ವಿಕೆಟ್ ಒಪ್ಪಿಸಿದ್ದಾರೆ.

ಇನ್ನು ಸಕ್ರಿಯ ಶೂನ್ಯ ಶೂರರ ಪಟ್ಟಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೂರನೇ ಸ್ಥಾನದಲ್ಲಿದ್ದಾರೆ. 514 ಅಂತಾರಾಷ್ಟ್ರೀಯ ಇನಿಂಗ್ಸ್​ಗಳಲ್ಲಿ 33 ಬಾರಿ ಸೊನ್ನೆಗೆ ವಿಕೆಟ್ ಒಪ್ಪಿಸಿದ್ದಾರೆ.

4 / 6
ಹಾಗೆಯೇ ಸಕ್ರಿಯ ಶೂನ್ಯ ಸರದಾರರ ಪಟ್ಟಿಯಲ್ಲಿ ಇಂಗ್ಲೆಂಡ್​ನ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಜಾನಿ ಬೈರ್​ಸ್ಟೋವ್ 4ನೇ ಸ್ಥಾನದಲ್ಲಿದ್ದಾರೆ. 348 ಅಂತಾರಾಷ್ಟ್ರೀಯ ಇನಿಂಗ್ಸ್ ಆಡಿರುವ ಬೈರ್​ಸ್ಟೋವ್ ಒಟ್ಟು 32 ಬಾರಿ ಸೊನ್ನೆಗೆ ಔಟಾಗಿದ್ದಾರೆ.

ಹಾಗೆಯೇ ಸಕ್ರಿಯ ಶೂನ್ಯ ಸರದಾರರ ಪಟ್ಟಿಯಲ್ಲಿ ಇಂಗ್ಲೆಂಡ್​ನ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಜಾನಿ ಬೈರ್​ಸ್ಟೋವ್ 4ನೇ ಸ್ಥಾನದಲ್ಲಿದ್ದಾರೆ. 348 ಅಂತಾರಾಷ್ಟ್ರೀಯ ಇನಿಂಗ್ಸ್ ಆಡಿರುವ ಬೈರ್​ಸ್ಟೋವ್ ಒಟ್ಟು 32 ಬಾರಿ ಸೊನ್ನೆಗೆ ಔಟಾಗಿದ್ದಾರೆ.

5 / 6
ಅಂದಹಾಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಕಳಪೆ ದಾಖಲೆ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದೆ. ಇಂಟರ್​ನ್ಯಾಷನಲ್ ಕ್ರಿಕೆಟ್​ನ 328 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಮುರಳೀಧರನ್ ಒಟ್ಟು 59 ಬಾರಿ ಸೊನ್ನೆಗೆ ಔಟಾಗಿದ್ದಾರೆ.

ಅಂದಹಾಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಕಳಪೆ ದಾಖಲೆ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದೆ. ಇಂಟರ್​ನ್ಯಾಷನಲ್ ಕ್ರಿಕೆಟ್​ನ 328 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಮುರಳೀಧರನ್ ಒಟ್ಟು 59 ಬಾರಿ ಸೊನ್ನೆಗೆ ಔಟಾಗಿದ್ದಾರೆ.

6 / 6
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ