AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli vs Rohit Sharma: 4 ವರ್ಷದಲ್ಲಿ 4 ಸೋಲು: ಒಂದೇ ವರ್ಷದಲ್ಲಿ 3 ಸೋಲು..!

Virat Kohli vs Rohit Sharma: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಬಗ್ಗು ಬಡಿದು ಆಸ್ಟ್ರೇಲಿಯಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರೊಂದಿಗೆ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ಟೀಮ್ ಇಂಡಿಯಾ ಕನಸು ನುಚ್ಚು ನೂರಾಗಿದೆ.

TV9 Web
| Edited By: |

Updated on: Jun 11, 2023 | 11:08 PM

Share
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕತ್ವದ ಚರ್ಚೆಗಳು ಶುರುವಾಗಿದೆ. ಈ ಹಿಂದೆ ನಾಯಕರಾಗಿದ್ದ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿದ್ದ ಬಿಸಿಸಿಐ ಇದೀಗ ಮುಜುಗರಕ್ಕೊಳಗಾಗಿದೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕತ್ವದ ಚರ್ಚೆಗಳು ಶುರುವಾಗಿದೆ. ಈ ಹಿಂದೆ ನಾಯಕರಾಗಿದ್ದ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿದ್ದ ಬಿಸಿಸಿಐ ಇದೀಗ ಮುಜುಗರಕ್ಕೊಳಗಾಗಿದೆ.

1 / 9
ಏಕೆಂದರೆ 2021 ರ ಅಂತ್ಯದಲ್ಲಿ ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಿ ರೋಹಿತ್ ಶರ್ಮಾಗೆ ಪಟ್ಟ ಕಟ್ಟಲಾಗಿತ್ತು. ಆದರೀಗ ಒಂದೇ ವರ್ಷದೊಳಗೆ ಮೂರು ಪ್ರಮುಖ ಟೂರ್ನಿಗಳಲ್ಲಿ ತಂಡವನ್ನು ಮುನ್ನಡೆಸುವಲ್ಲಿ ಹಿಟ್​ಮ್ಯಾನ್ ವಿಫಲರಾಗಿದ್ದಾರೆ.

ಏಕೆಂದರೆ 2021 ರ ಅಂತ್ಯದಲ್ಲಿ ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಿ ರೋಹಿತ್ ಶರ್ಮಾಗೆ ಪಟ್ಟ ಕಟ್ಟಲಾಗಿತ್ತು. ಆದರೀಗ ಒಂದೇ ವರ್ಷದೊಳಗೆ ಮೂರು ಪ್ರಮುಖ ಟೂರ್ನಿಗಳಲ್ಲಿ ತಂಡವನ್ನು ಮುನ್ನಡೆಸುವಲ್ಲಿ ಹಿಟ್​ಮ್ಯಾನ್ ವಿಫಲರಾಗಿದ್ದಾರೆ.

2 / 9
ಅತ್ತ 2017 ರಿಂದ ಪೂರ್ಣ ಪ್ರಮಾಣದ ನಾಯಕರಾಗಿ ಆಯ್ಕೆಯಾಗಿದ್ದ ವಿರಾಟ್ ಕೊಹ್ಲಿ 4 ವರ್ಷಗಳಲ್ಲಿ 4 ಬಾರಿ ತಂಡಕ್ಕೆ ಕಪ್ ಗೆದ್ದುಕೊಡುವಲ್ಲಿ ವಿಫಲರಾಗಿದ್ದರೆ, ಇತ್ತ ರೋಹಿತ್ ಶರ್ಮಾ ಒಂದೇ ವರ್ಷದಲ್ಲಿ 3 ಪ್ರಮುಖ ಟೂರ್ನಿಗಳಲ್ಲಿ 3 ಬಾರಿ ವಿಫಲರಾಗಿದ್ದಾರೆ.

ಅತ್ತ 2017 ರಿಂದ ಪೂರ್ಣ ಪ್ರಮಾಣದ ನಾಯಕರಾಗಿ ಆಯ್ಕೆಯಾಗಿದ್ದ ವಿರಾಟ್ ಕೊಹ್ಲಿ 4 ವರ್ಷಗಳಲ್ಲಿ 4 ಬಾರಿ ತಂಡಕ್ಕೆ ಕಪ್ ಗೆದ್ದುಕೊಡುವಲ್ಲಿ ವಿಫಲರಾಗಿದ್ದರೆ, ಇತ್ತ ರೋಹಿತ್ ಶರ್ಮಾ ಒಂದೇ ವರ್ಷದಲ್ಲಿ 3 ಪ್ರಮುಖ ಟೂರ್ನಿಗಳಲ್ಲಿ 3 ಬಾರಿ ವಿಫಲರಾಗಿದ್ದಾರೆ.

3 / 9
2017 ರಲ್ಲಿ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಫೈನಲ್​ ಪ್ರವೇಶಿಸಿತ್ತು. ಆದರೆ ಪಾಕಿಸ್ತಾನ್ ವಿರುದ್ಧ ಸೋಲುವ ಮೂಲಕ ಐಸಿಸಿ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈಚೆಲ್ಲಿಕೊಂಡಿತು.

2017 ರಲ್ಲಿ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಫೈನಲ್​ ಪ್ರವೇಶಿಸಿತ್ತು. ಆದರೆ ಪಾಕಿಸ್ತಾನ್ ವಿರುದ್ಧ ಸೋಲುವ ಮೂಲಕ ಐಸಿಸಿ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈಚೆಲ್ಲಿಕೊಂಡಿತು.

4 / 9
ಇನ್ನು 2019 ರ ಏಕದಿನ ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದರು. ಆದರೆ ನ್ಯೂಜಿಲೆಂಡ್ ವಿರುದ್ದ ಸೆಮಿಫೈನಲ್​ನಲ್ಲಿ ಮುಗ್ಗರಿಸಿತ್ತು.

ಇನ್ನು 2019 ರ ಏಕದಿನ ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದರು. ಆದರೆ ನ್ಯೂಜಿಲೆಂಡ್ ವಿರುದ್ದ ಸೆಮಿಫೈನಲ್​ನಲ್ಲಿ ಮುಗ್ಗರಿಸಿತ್ತು.

5 / 9
ಹಾಗೆಯೇ 2021 ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾಗೂ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ಕೊಹ್ಲಿ ಮತ್ತೆರಡು ಬಾರಿ ತಂಡಕ್ಕೆ ಪ್ರಶಸ್ತಿ ಗೆದ್ದುಕೊಡುವಲ್ಲಿ ವಿಫಲರಾಗಿದ್ದರು. ಅಂದರೆ ಭಾರತ ತಂಡವು 4 ವರ್ಷಗಳಲ್ಲಿ ಕೊಹ್ಲಿ ನಾಯಕತ್ವದಲ್ಲಿ ಐಸಿಸಿ ಟ್ರೋಫಿ ಗೆಲ್ಲುವಲ್ಲಿ ಒಟ್ಟು 4 ಬಾರಿ ವಿಫಲವಾಗಿದೆ.

ಹಾಗೆಯೇ 2021 ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾಗೂ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ಕೊಹ್ಲಿ ಮತ್ತೆರಡು ಬಾರಿ ತಂಡಕ್ಕೆ ಪ್ರಶಸ್ತಿ ಗೆದ್ದುಕೊಡುವಲ್ಲಿ ವಿಫಲರಾಗಿದ್ದರು. ಅಂದರೆ ಭಾರತ ತಂಡವು 4 ವರ್ಷಗಳಲ್ಲಿ ಕೊಹ್ಲಿ ನಾಯಕತ್ವದಲ್ಲಿ ಐಸಿಸಿ ಟ್ರೋಫಿ ಗೆಲ್ಲುವಲ್ಲಿ ಒಟ್ಟು 4 ಬಾರಿ ವಿಫಲವಾಗಿದೆ.

6 / 9
ಆದರೆ 2022 ರಿಂದ ಪೂರ್ಣ ಪ್ರಮಾಣದ ನಾಯಕರಾದ ಬಳಿಕ ರೋಹಿತ್ ಶರ್ಮಾ ಏಷ್ಯಾಕಪ್, ಟಿ20 ವಿಶ್ವಕಪ್ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ತಂಡವನ್ನು ಮುನ್ನಡೆಸಿದ್ದಾರೆ.

ಆದರೆ 2022 ರಿಂದ ಪೂರ್ಣ ಪ್ರಮಾಣದ ನಾಯಕರಾದ ಬಳಿಕ ರೋಹಿತ್ ಶರ್ಮಾ ಏಷ್ಯಾಕಪ್, ಟಿ20 ವಿಶ್ವಕಪ್ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ತಂಡವನ್ನು ಮುನ್ನಡೆಸಿದ್ದಾರೆ.

7 / 9
ಏಷ್ಯಾಕಪ್​ನಲ್ಲಿ ಸೂಪರ್-4 ಹಂತದಿಂದಲೇ ಹೊರಬಿದ್ದರೆ, ಟಿ20 ವಿಶ್ವಕಪ್​ನಲ್ಲಿ ಸೆಮಿ ಫೈನಲ್​ನಲ್ಲಿ ಮುಗ್ಗರಿಸಿತ್ತು. ಇದೀಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಸೋಲನುಭವಿಸಿದೆ. ಅಂದರೆ ಒಂದೇ ವರ್ಷದಲ್ಲಿ ಟೀಮ್ ಇಂಡಿಯಾ ಮೂರು ಪ್ರಮುಖ ಟೂರ್ನಿಗಳನ್ನು ಗೆಲ್ಲುವಲ್ಲಿ ವಿಫಲವಾಗಿದೆ.

ಏಷ್ಯಾಕಪ್​ನಲ್ಲಿ ಸೂಪರ್-4 ಹಂತದಿಂದಲೇ ಹೊರಬಿದ್ದರೆ, ಟಿ20 ವಿಶ್ವಕಪ್​ನಲ್ಲಿ ಸೆಮಿ ಫೈನಲ್​ನಲ್ಲಿ ಮುಗ್ಗರಿಸಿತ್ತು. ಇದೀಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಸೋಲನುಭವಿಸಿದೆ. ಅಂದರೆ ಒಂದೇ ವರ್ಷದಲ್ಲಿ ಟೀಮ್ ಇಂಡಿಯಾ ಮೂರು ಪ್ರಮುಖ ಟೂರ್ನಿಗಳನ್ನು ಗೆಲ್ಲುವಲ್ಲಿ ವಿಫಲವಾಗಿದೆ.

8 / 9
ಇತ್ತ ನಾಲ್ಕು ವರ್ಷಗಳಲ್ಲಿ 4 ಪ್ರಮುಖ ಟೂರ್ನಿಗಳನ್ನು ಗೆಲ್ಲುವಲ್ಲಿ ವಿಫಲವಾಗಿರುವ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿ ರೋಹಿತ್ ಶರ್ಮಾಗೆ ಕಪ್ತಾನನ ಪಟ್ಟ ನೀಡಲಾಗಿತ್ತು. ಇದೀಗ ಒಂದೇ ವರ್ಷದಲ್ಲಿ ಮೂರು ಪ್ರಮುಖ ಟೂರ್ನಿ ಸೋತಿರುವ ರೋಹಿತ್ ಶರ್ಮಾ ಅವರ ನಾಯಕತ್ವದ ಬಗ್ಗೆ ಹೊಸ ಚರ್ಚೆ ಶುರುವಾಗಿದೆ.

ಇತ್ತ ನಾಲ್ಕು ವರ್ಷಗಳಲ್ಲಿ 4 ಪ್ರಮುಖ ಟೂರ್ನಿಗಳನ್ನು ಗೆಲ್ಲುವಲ್ಲಿ ವಿಫಲವಾಗಿರುವ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿ ರೋಹಿತ್ ಶರ್ಮಾಗೆ ಕಪ್ತಾನನ ಪಟ್ಟ ನೀಡಲಾಗಿತ್ತು. ಇದೀಗ ಒಂದೇ ವರ್ಷದಲ್ಲಿ ಮೂರು ಪ್ರಮುಖ ಟೂರ್ನಿ ಸೋತಿರುವ ರೋಹಿತ್ ಶರ್ಮಾ ಅವರ ನಾಯಕತ್ವದ ಬಗ್ಗೆ ಹೊಸ ಚರ್ಚೆ ಶುರುವಾಗಿದೆ.

9 / 9
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ