AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಈ ಸಲ ಪಕ್ಕಾ RCB ಫೈನಲ್​ ಆಡಲಿದೆಯಂತೆ..!

IPL 2023 Kannada: RCB ತಂಡಕ್ಕೆ ಗ್ರೀನ್ ಜೆರ್ಸಿ ಅನ್​ಲಕ್ಕಿ ಎಂದೇ ಪರಿಗಣಿಸಲಾಗುತ್ತದೆ. ಏಕೆಂದರೆ 12 ಬಾರಿ ಆರ್​ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿದು ಗೆದ್ದಿರುವುದು ಕೇವಲ ನಾಲ್ಕು ಬಾರಿ ಮಾತ್ರ.

TV9 Web
| Edited By: |

Updated on: Apr 24, 2023 | 11:52 PM

Share
IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ರೋಚಕ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಆರ್​ಸಿಬಿ ಅಭಿಮಾನಿಗಳ ಹೊಸ ಲೆಕ್ಕಾಚಾರ ಶುರುವಾಗಿದೆ. ಅದು ಅಂತಿಂಥ ಲೆಕ್ಕಾಚಾರವಲ್ಲ. ಬದಲಾಗಿ ಫೈನಲ್​ ಆಡುವುದು ಖಚಿತ ಎಂಬ ಆತ್ಮವಿಶ್ವಾಸದ ಲೆಕ್ಕಾಚಾರ.

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ರೋಚಕ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಆರ್​ಸಿಬಿ ಅಭಿಮಾನಿಗಳ ಹೊಸ ಲೆಕ್ಕಾಚಾರ ಶುರುವಾಗಿದೆ. ಅದು ಅಂತಿಂಥ ಲೆಕ್ಕಾಚಾರವಲ್ಲ. ಬದಲಾಗಿ ಫೈನಲ್​ ಆಡುವುದು ಖಚಿತ ಎಂಬ ಆತ್ಮವಿಶ್ವಾಸದ ಲೆಕ್ಕಾಚಾರ.

1 / 8
ಹೌದು, ಆರ್​ಸಿಬಿ ತಂಡಕ್ಕೆ ಗ್ರೀನ್ ಜೆರ್ಸಿ ಅನ್​ಲಕ್ಕಿ ಎಂದೇ ಪರಿಗಣಿಸಲಾಗುತ್ತದೆ. ಏಕೆಂದರೆ 12 ಬಾರಿ ಆರ್​ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿದು ಗೆದ್ದಿರುವುದು ಕೇವಲ ನಾಲ್ಕು ಬಾರಿ ಮಾತ್ರ. ಅದರಲ್ಲೂ ಮೂರು ಬಾರಿ ಗೆದ್ದಾಗಲೂ ಆರ್​ಸಿಬಿ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದೆ.

ಹೌದು, ಆರ್​ಸಿಬಿ ತಂಡಕ್ಕೆ ಗ್ರೀನ್ ಜೆರ್ಸಿ ಅನ್​ಲಕ್ಕಿ ಎಂದೇ ಪರಿಗಣಿಸಲಾಗುತ್ತದೆ. ಏಕೆಂದರೆ 12 ಬಾರಿ ಆರ್​ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿದು ಗೆದ್ದಿರುವುದು ಕೇವಲ ನಾಲ್ಕು ಬಾರಿ ಮಾತ್ರ. ಅದರಲ್ಲೂ ಮೂರು ಬಾರಿ ಗೆದ್ದಾಗಲೂ ಆರ್​ಸಿಬಿ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದೆ.

2 / 8
ಅಂದರೆ ಆರ್​ಸಿಬಿ ಮೊದಲ ಬಾರಿಗೆ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿದು ಗೆದ್ದಿರುವುದು 2011 ರಲ್ಲಿ. ಆ ವರ್ಷ ಆರ್​ಸಿಬಿ ತಂಡವು ಫೈನಲ್​ಗೆ ಪ್ರವೇಶಿಸಿತ್ತು.

ಅಂದರೆ ಆರ್​ಸಿಬಿ ಮೊದಲ ಬಾರಿಗೆ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿದು ಗೆದ್ದಿರುವುದು 2011 ರಲ್ಲಿ. ಆ ವರ್ಷ ಆರ್​ಸಿಬಿ ತಂಡವು ಫೈನಲ್​ಗೆ ಪ್ರವೇಶಿಸಿತ್ತು.

3 / 8
ಇನ್ನು 2ನೇ ಬಾರಿ ಗ್ರೀನ್ ಜೆರ್ಸಿಯಲ್ಲಿ ಆರ್​ಸಿಬಿ ಜಯ ಸಾಧಿಸಿದ್ದು 2016 ರಲ್ಲಿ. ಆ ವರ್ಷ ಕೂಡ ಆರ್​ಸಿಬಿ ತಂಡವು ಫೈನಲ್ ಪ್ರವೇಶಿಸಿ ಗೆಲುವಿನ ಸಮೀಪದಲ್ಲಿ ಎಡವಿತು.

ಇನ್ನು 2ನೇ ಬಾರಿ ಗ್ರೀನ್ ಜೆರ್ಸಿಯಲ್ಲಿ ಆರ್​ಸಿಬಿ ಜಯ ಸಾಧಿಸಿದ್ದು 2016 ರಲ್ಲಿ. ಆ ವರ್ಷ ಕೂಡ ಆರ್​ಸಿಬಿ ತಂಡವು ಫೈನಲ್ ಪ್ರವೇಶಿಸಿ ಗೆಲುವಿನ ಸಮೀಪದಲ್ಲಿ ಎಡವಿತು.

4 / 8
ಇದಾದ ಬಳಿಕ 2022 ರಲ್ಲಿ ಗ್ರೀನ್ ಜೆರ್ಸಿಯಲ್ಲಿ ಗೆದ್ದಿದ್ದ ಆರ್​ಸಿಬಿ ಪ್ಲೇಆಫ್ ಪ್ರವೇಶಿಸಿದರೂ ಎಲಿಮಿನೇಟರ್ ಪಂದ್ಯದಲ್ಲಿ ಮುಗ್ಗರಿಸಿತ್ತು.

ಇದಾದ ಬಳಿಕ 2022 ರಲ್ಲಿ ಗ್ರೀನ್ ಜೆರ್ಸಿಯಲ್ಲಿ ಗೆದ್ದಿದ್ದ ಆರ್​ಸಿಬಿ ಪ್ಲೇಆಫ್ ಪ್ರವೇಶಿಸಿದರೂ ಎಲಿಮಿನೇಟರ್ ಪಂದ್ಯದಲ್ಲಿ ಮುಗ್ಗರಿಸಿತ್ತು.

5 / 8
ಇದೀಗ 4ನೇ ಬಾರಿಗೆ ಆರ್​ಸಿಬಿ ತಂಡವು ಗ್ರೀನ್ ಜೆರ್ಸಿಯಲ್ಲಿ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಈ ಬಾರಿ ಕೂಡ ಆರ್​ಸಿಬಿ ಫೈನಲ್ ಪ್ರವೇಶಿಸುವುದು ಖಚಿತ ಎನ್ನುತ್ತಿದ್ದಾರೆ ಅಭಿಮಾನಿಗಳು.

ಇದೀಗ 4ನೇ ಬಾರಿಗೆ ಆರ್​ಸಿಬಿ ತಂಡವು ಗ್ರೀನ್ ಜೆರ್ಸಿಯಲ್ಲಿ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಈ ಬಾರಿ ಕೂಡ ಆರ್​ಸಿಬಿ ಫೈನಲ್ ಪ್ರವೇಶಿಸುವುದು ಖಚಿತ ಎನ್ನುತ್ತಿದ್ದಾರೆ ಅಭಿಮಾನಿಗಳು.

6 / 8
ಇದಕ್ಕೆ ಮುಖ್ಯ ಕಾರಣ ಕಳೆದ ಎರಡು ಬಾರಿ ಗ್ರೀನ್ ಜೆರ್ಸಿಯಲ್ಲಿ ಆರ್​ಸಿಬಿ ಗೆದ್ದಾಗ ಫೈನಲ್ ಪ್ರವೇಶಿಸಿರುವುದು. ಇನ್ನು ಕಿಂಗ್ ಕೊಹ್ಲಿಯ ನಾಯಕತ್ವದಲ್ಲಿ 2016 ರಲ್ಲಿ ಆರ್​ಸಿಬಿ ಹಸಿರು ಜೆರ್ಸಿಯಲ್ಲಿ ಜಯ ಸಾಧಿಸಿದಾಗ ಎಸ್​ಆರ್​ಹೆಚ್​ ವಿರುದ್ಧ ಫೈನಲ್ ಆಡಿತ್ತು.

ಇದಕ್ಕೆ ಮುಖ್ಯ ಕಾರಣ ಕಳೆದ ಎರಡು ಬಾರಿ ಗ್ರೀನ್ ಜೆರ್ಸಿಯಲ್ಲಿ ಆರ್​ಸಿಬಿ ಗೆದ್ದಾಗ ಫೈನಲ್ ಪ್ರವೇಶಿಸಿರುವುದು. ಇನ್ನು ಕಿಂಗ್ ಕೊಹ್ಲಿಯ ನಾಯಕತ್ವದಲ್ಲಿ 2016 ರಲ್ಲಿ ಆರ್​ಸಿಬಿ ಹಸಿರು ಜೆರ್ಸಿಯಲ್ಲಿ ಜಯ ಸಾಧಿಸಿದಾಗ ಎಸ್​ಆರ್​ಹೆಚ್​ ವಿರುದ್ಧ ಫೈನಲ್ ಆಡಿತ್ತು.

7 / 8
ಈ ಬಾರಿ ಕೂಡ ವಿರಾಟ್ ಕೊಹ್ಲಿಯ ನಾಯಕತ್ವದಲ್ಲಿ ಆರ್​ಸಿಬಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿದು ಜಯ ಸಾಧಿಸಿದೆ. ಇದೇ ಕಾರಣದಿಂದಾಗಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್ ಪ್ರವೇಶಿಸಲಿದೆ ಎಂಬ ವಿಶ್ವಾಸದಲ್ಲಿದ್ದಾರೆ ಆರ್​ಸಿಬಿ ಅಭಿಮಾನಿಗಳು.

ಈ ಬಾರಿ ಕೂಡ ವಿರಾಟ್ ಕೊಹ್ಲಿಯ ನಾಯಕತ್ವದಲ್ಲಿ ಆರ್​ಸಿಬಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿದು ಜಯ ಸಾಧಿಸಿದೆ. ಇದೇ ಕಾರಣದಿಂದಾಗಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್ ಪ್ರವೇಶಿಸಲಿದೆ ಎಂಬ ವಿಶ್ವಾಸದಲ್ಲಿದ್ದಾರೆ ಆರ್​ಸಿಬಿ ಅಭಿಮಾನಿಗಳು.

8 / 8
Follow Us
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು