AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಈ ಸಲ ಪಕ್ಕಾ RCB ಫೈನಲ್​ ಆಡಲಿದೆಯಂತೆ..!

IPL 2023 Kannada: RCB ತಂಡಕ್ಕೆ ಗ್ರೀನ್ ಜೆರ್ಸಿ ಅನ್​ಲಕ್ಕಿ ಎಂದೇ ಪರಿಗಣಿಸಲಾಗುತ್ತದೆ. ಏಕೆಂದರೆ 12 ಬಾರಿ ಆರ್​ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿದು ಗೆದ್ದಿರುವುದು ಕೇವಲ ನಾಲ್ಕು ಬಾರಿ ಮಾತ್ರ.

TV9 Web
| Edited By: |

Updated on: Apr 24, 2023 | 11:52 PM

Share
IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ರೋಚಕ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಆರ್​ಸಿಬಿ ಅಭಿಮಾನಿಗಳ ಹೊಸ ಲೆಕ್ಕಾಚಾರ ಶುರುವಾಗಿದೆ. ಅದು ಅಂತಿಂಥ ಲೆಕ್ಕಾಚಾರವಲ್ಲ. ಬದಲಾಗಿ ಫೈನಲ್​ ಆಡುವುದು ಖಚಿತ ಎಂಬ ಆತ್ಮವಿಶ್ವಾಸದ ಲೆಕ್ಕಾಚಾರ.

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ರೋಚಕ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಆರ್​ಸಿಬಿ ಅಭಿಮಾನಿಗಳ ಹೊಸ ಲೆಕ್ಕಾಚಾರ ಶುರುವಾಗಿದೆ. ಅದು ಅಂತಿಂಥ ಲೆಕ್ಕಾಚಾರವಲ್ಲ. ಬದಲಾಗಿ ಫೈನಲ್​ ಆಡುವುದು ಖಚಿತ ಎಂಬ ಆತ್ಮವಿಶ್ವಾಸದ ಲೆಕ್ಕಾಚಾರ.

1 / 8
ಹೌದು, ಆರ್​ಸಿಬಿ ತಂಡಕ್ಕೆ ಗ್ರೀನ್ ಜೆರ್ಸಿ ಅನ್​ಲಕ್ಕಿ ಎಂದೇ ಪರಿಗಣಿಸಲಾಗುತ್ತದೆ. ಏಕೆಂದರೆ 12 ಬಾರಿ ಆರ್​ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿದು ಗೆದ್ದಿರುವುದು ಕೇವಲ ನಾಲ್ಕು ಬಾರಿ ಮಾತ್ರ. ಅದರಲ್ಲೂ ಮೂರು ಬಾರಿ ಗೆದ್ದಾಗಲೂ ಆರ್​ಸಿಬಿ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದೆ.

ಹೌದು, ಆರ್​ಸಿಬಿ ತಂಡಕ್ಕೆ ಗ್ರೀನ್ ಜೆರ್ಸಿ ಅನ್​ಲಕ್ಕಿ ಎಂದೇ ಪರಿಗಣಿಸಲಾಗುತ್ತದೆ. ಏಕೆಂದರೆ 12 ಬಾರಿ ಆರ್​ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿದು ಗೆದ್ದಿರುವುದು ಕೇವಲ ನಾಲ್ಕು ಬಾರಿ ಮಾತ್ರ. ಅದರಲ್ಲೂ ಮೂರು ಬಾರಿ ಗೆದ್ದಾಗಲೂ ಆರ್​ಸಿಬಿ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದೆ.

2 / 8
ಅಂದರೆ ಆರ್​ಸಿಬಿ ಮೊದಲ ಬಾರಿಗೆ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿದು ಗೆದ್ದಿರುವುದು 2011 ರಲ್ಲಿ. ಆ ವರ್ಷ ಆರ್​ಸಿಬಿ ತಂಡವು ಫೈನಲ್​ಗೆ ಪ್ರವೇಶಿಸಿತ್ತು.

ಅಂದರೆ ಆರ್​ಸಿಬಿ ಮೊದಲ ಬಾರಿಗೆ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿದು ಗೆದ್ದಿರುವುದು 2011 ರಲ್ಲಿ. ಆ ವರ್ಷ ಆರ್​ಸಿಬಿ ತಂಡವು ಫೈನಲ್​ಗೆ ಪ್ರವೇಶಿಸಿತ್ತು.

3 / 8
ಇನ್ನು 2ನೇ ಬಾರಿ ಗ್ರೀನ್ ಜೆರ್ಸಿಯಲ್ಲಿ ಆರ್​ಸಿಬಿ ಜಯ ಸಾಧಿಸಿದ್ದು 2016 ರಲ್ಲಿ. ಆ ವರ್ಷ ಕೂಡ ಆರ್​ಸಿಬಿ ತಂಡವು ಫೈನಲ್ ಪ್ರವೇಶಿಸಿ ಗೆಲುವಿನ ಸಮೀಪದಲ್ಲಿ ಎಡವಿತು.

ಇನ್ನು 2ನೇ ಬಾರಿ ಗ್ರೀನ್ ಜೆರ್ಸಿಯಲ್ಲಿ ಆರ್​ಸಿಬಿ ಜಯ ಸಾಧಿಸಿದ್ದು 2016 ರಲ್ಲಿ. ಆ ವರ್ಷ ಕೂಡ ಆರ್​ಸಿಬಿ ತಂಡವು ಫೈನಲ್ ಪ್ರವೇಶಿಸಿ ಗೆಲುವಿನ ಸಮೀಪದಲ್ಲಿ ಎಡವಿತು.

4 / 8
ಇದಾದ ಬಳಿಕ 2022 ರಲ್ಲಿ ಗ್ರೀನ್ ಜೆರ್ಸಿಯಲ್ಲಿ ಗೆದ್ದಿದ್ದ ಆರ್​ಸಿಬಿ ಪ್ಲೇಆಫ್ ಪ್ರವೇಶಿಸಿದರೂ ಎಲಿಮಿನೇಟರ್ ಪಂದ್ಯದಲ್ಲಿ ಮುಗ್ಗರಿಸಿತ್ತು.

ಇದಾದ ಬಳಿಕ 2022 ರಲ್ಲಿ ಗ್ರೀನ್ ಜೆರ್ಸಿಯಲ್ಲಿ ಗೆದ್ದಿದ್ದ ಆರ್​ಸಿಬಿ ಪ್ಲೇಆಫ್ ಪ್ರವೇಶಿಸಿದರೂ ಎಲಿಮಿನೇಟರ್ ಪಂದ್ಯದಲ್ಲಿ ಮುಗ್ಗರಿಸಿತ್ತು.

5 / 8
ಇದೀಗ 4ನೇ ಬಾರಿಗೆ ಆರ್​ಸಿಬಿ ತಂಡವು ಗ್ರೀನ್ ಜೆರ್ಸಿಯಲ್ಲಿ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಈ ಬಾರಿ ಕೂಡ ಆರ್​ಸಿಬಿ ಫೈನಲ್ ಪ್ರವೇಶಿಸುವುದು ಖಚಿತ ಎನ್ನುತ್ತಿದ್ದಾರೆ ಅಭಿಮಾನಿಗಳು.

ಇದೀಗ 4ನೇ ಬಾರಿಗೆ ಆರ್​ಸಿಬಿ ತಂಡವು ಗ್ರೀನ್ ಜೆರ್ಸಿಯಲ್ಲಿ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಈ ಬಾರಿ ಕೂಡ ಆರ್​ಸಿಬಿ ಫೈನಲ್ ಪ್ರವೇಶಿಸುವುದು ಖಚಿತ ಎನ್ನುತ್ತಿದ್ದಾರೆ ಅಭಿಮಾನಿಗಳು.

6 / 8
ಇದಕ್ಕೆ ಮುಖ್ಯ ಕಾರಣ ಕಳೆದ ಎರಡು ಬಾರಿ ಗ್ರೀನ್ ಜೆರ್ಸಿಯಲ್ಲಿ ಆರ್​ಸಿಬಿ ಗೆದ್ದಾಗ ಫೈನಲ್ ಪ್ರವೇಶಿಸಿರುವುದು. ಇನ್ನು ಕಿಂಗ್ ಕೊಹ್ಲಿಯ ನಾಯಕತ್ವದಲ್ಲಿ 2016 ರಲ್ಲಿ ಆರ್​ಸಿಬಿ ಹಸಿರು ಜೆರ್ಸಿಯಲ್ಲಿ ಜಯ ಸಾಧಿಸಿದಾಗ ಎಸ್​ಆರ್​ಹೆಚ್​ ವಿರುದ್ಧ ಫೈನಲ್ ಆಡಿತ್ತು.

ಇದಕ್ಕೆ ಮುಖ್ಯ ಕಾರಣ ಕಳೆದ ಎರಡು ಬಾರಿ ಗ್ರೀನ್ ಜೆರ್ಸಿಯಲ್ಲಿ ಆರ್​ಸಿಬಿ ಗೆದ್ದಾಗ ಫೈನಲ್ ಪ್ರವೇಶಿಸಿರುವುದು. ಇನ್ನು ಕಿಂಗ್ ಕೊಹ್ಲಿಯ ನಾಯಕತ್ವದಲ್ಲಿ 2016 ರಲ್ಲಿ ಆರ್​ಸಿಬಿ ಹಸಿರು ಜೆರ್ಸಿಯಲ್ಲಿ ಜಯ ಸಾಧಿಸಿದಾಗ ಎಸ್​ಆರ್​ಹೆಚ್​ ವಿರುದ್ಧ ಫೈನಲ್ ಆಡಿತ್ತು.

7 / 8
ಈ ಬಾರಿ ಕೂಡ ವಿರಾಟ್ ಕೊಹ್ಲಿಯ ನಾಯಕತ್ವದಲ್ಲಿ ಆರ್​ಸಿಬಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿದು ಜಯ ಸಾಧಿಸಿದೆ. ಇದೇ ಕಾರಣದಿಂದಾಗಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್ ಪ್ರವೇಶಿಸಲಿದೆ ಎಂಬ ವಿಶ್ವಾಸದಲ್ಲಿದ್ದಾರೆ ಆರ್​ಸಿಬಿ ಅಭಿಮಾನಿಗಳು.

ಈ ಬಾರಿ ಕೂಡ ವಿರಾಟ್ ಕೊಹ್ಲಿಯ ನಾಯಕತ್ವದಲ್ಲಿ ಆರ್​ಸಿಬಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿದು ಜಯ ಸಾಧಿಸಿದೆ. ಇದೇ ಕಾರಣದಿಂದಾಗಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್ ಪ್ರವೇಶಿಸಲಿದೆ ಎಂಬ ವಿಶ್ವಾಸದಲ್ಲಿದ್ದಾರೆ ಆರ್​ಸಿಬಿ ಅಭಿಮಾನಿಗಳು.

8 / 8
Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು