AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಾಕ್ ವಿರುದ್ಧ ಪಂದ್ಯವಿದೆ ಎಂದು ಹೇಳಿ’; ಕೊಹ್ಲಿ ಫಾರ್ಮ್​ಗೆ ಮರಳಲು ಅಖ್ತರ್ ಸಲಹೆ

Virat Kohli's Comeback: ವಿರಾಟ್ ಕೊಹ್ಲಿ ಇತ್ತೀಚೆಗೆ ಲಯ ತಪ್ಪಿದ್ದು, ಅವರ ಪ್ರದರ್ಶನದ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಆದರೆ, ಮಾಜಿ ಪಾಕಿಸ್ತಾನ ವೇಗಿ ಶೋಯೆಬ್ ಅಖ್ತರ್, ಕೊಹ್ಲಿ ಪಾಕಿಸ್ತಾನದ ವಿರುದ್ಧ ಆಡುವುದರಿಂದ ಮತ್ತೆ ಫಾರ್ಮ್‌ಗೆ ಮರಳುತ್ತಾರೆ ಎಂದು ಹೇಳಿದ್ದಾರೆ. ಅಖ್ತರ್ ಹೇಳಿಕೆಗೆ ಪೂರಕವಾಗಿ ಕೊಹ್ಲಿ ಪಾಕಿಸ್ತಾನ ವಿರುದ್ಧ ಅತ್ಯುತ್ತಮ ದಾಖಲೆಯನ್ನು ಹೊಂದಿದ್ದು, ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕ್ ವಿರುದ್ಧ ಮತ್ತೆ ಅಬ್ಬರಿಸುವ ವಿಶ್ವಾಸವಿದೆ.

ಪೃಥ್ವಿಶಂಕರ
|

Updated on: Jan 13, 2025 | 7:22 PM

Share
ವಿಶ್ವ ಕ್ರಿಕೆಟ್​ನ ರನ್ ಮಷಿನ್ ವಿರಾಟ್ ಕೊಹ್ಲಿ ಕೆಲವು ಸಮಯದಿಂದ ಲಯ ತಪ್ಪಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿಯೆ. ಅದರಲ್ಲೂ ಟೆಸ್ಟ್ ಮಾದರಿಯಲ್ಲಿ ರನ್ ಬರ ಎದುರಿಸುತ್ತಿರುವ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ಹಾಗೂ ಆಸ್ಟ್ರೇಲಿಯಾ ವಿರುದ್ಧ ರನ್ ಬಾರಿಸಲು ಸಾಕಷ್ಟು ಕಷ್ಟಪಟ್ಟರು. ಇದರ ಪರಿಣಾಮವಾಗಿ ತಂಡ ಸರಣಿ ಸೋಲನ್ನು ಎದುರಿಸಬೇಕಾಯಿತು.

ವಿಶ್ವ ಕ್ರಿಕೆಟ್​ನ ರನ್ ಮಷಿನ್ ವಿರಾಟ್ ಕೊಹ್ಲಿ ಕೆಲವು ಸಮಯದಿಂದ ಲಯ ತಪ್ಪಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿಯೆ. ಅದರಲ್ಲೂ ಟೆಸ್ಟ್ ಮಾದರಿಯಲ್ಲಿ ರನ್ ಬರ ಎದುರಿಸುತ್ತಿರುವ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ಹಾಗೂ ಆಸ್ಟ್ರೇಲಿಯಾ ವಿರುದ್ಧ ರನ್ ಬಾರಿಸಲು ಸಾಕಷ್ಟು ಕಷ್ಟಪಟ್ಟರು. ಇದರ ಪರಿಣಾಮವಾಗಿ ತಂಡ ಸರಣಿ ಸೋಲನ್ನು ಎದುರಿಸಬೇಕಾಯಿತು.

1 / 6
ಈ ಎರಡು ಸರಣಿಗಳಲ್ಲಿ ಕೊಹ್ಲಿಯ ಕಳಪೆ ಆಟವನ್ನು ನೋಡಿದ ಕ್ರಿಕೆಟ್ ಪಂಡಿತರು ಹಾಗೂ ಅಭಿಮಾನಿಗಳು ಕೊಹ್ಲಿ ನಿವೃತ್ತಿ ಘೋಷಿಸಿ, ಯುವ ಆಟಗಾರರಿಗೆ ದಾರಿ ಮಾಡಿಕೊಡಬೇಕು ಎನ್ನುತ್ತಿದ್ದಾರೆ. ಈ ನಿಟ್ಟಿನಲ್ಲಿ ಬಿಸಿಸಿಐ ಕೂಡ ಯೋಚಿಸುತ್ತಿದೆ ಎಂದೂ ಹೇಳಲಾಗುತ್ತಿದೆ. ಆದರೀಗ ಕೊಹ್ಲಿಯನ್ನು ಮತ್ತೆ ಫಾರ್ಮ್​ಗೆ ಮರಳಿ ಕರೆತರುವುದು ಹೇಗೆ ಎಂಬುದನ್ನು ಪಾಕ್ ತಂಡದ ಮಾಜಿ ವೇಗಿ ಶೋಯೆಬ್ ಅಖ್ತರ್ ತಿಳಿಸಿದ್ದಾರೆ.

ಈ ಎರಡು ಸರಣಿಗಳಲ್ಲಿ ಕೊಹ್ಲಿಯ ಕಳಪೆ ಆಟವನ್ನು ನೋಡಿದ ಕ್ರಿಕೆಟ್ ಪಂಡಿತರು ಹಾಗೂ ಅಭಿಮಾನಿಗಳು ಕೊಹ್ಲಿ ನಿವೃತ್ತಿ ಘೋಷಿಸಿ, ಯುವ ಆಟಗಾರರಿಗೆ ದಾರಿ ಮಾಡಿಕೊಡಬೇಕು ಎನ್ನುತ್ತಿದ್ದಾರೆ. ಈ ನಿಟ್ಟಿನಲ್ಲಿ ಬಿಸಿಸಿಐ ಕೂಡ ಯೋಚಿಸುತ್ತಿದೆ ಎಂದೂ ಹೇಳಲಾಗುತ್ತಿದೆ. ಆದರೀಗ ಕೊಹ್ಲಿಯನ್ನು ಮತ್ತೆ ಫಾರ್ಮ್​ಗೆ ಮರಳಿ ಕರೆತರುವುದು ಹೇಗೆ ಎಂಬುದನ್ನು ಪಾಕ್ ತಂಡದ ಮಾಜಿ ವೇಗಿ ಶೋಯೆಬ್ ಅಖ್ತರ್ ತಿಳಿಸಿದ್ದಾರೆ.

2 / 6
ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರು ಸೇರಿದಂತೆ ಹಲವು ಕ್ರಿಕೆಟ್ ಪರಿಣಿತರು ಕೊಹ್ಲಿಯನ್ನು ತೆಗಳುತ್ತಿದ್ದರೆ, ಅಖ್ತರ್ ಮಾತ್ರ ಕೊಹ್ಲಿಗೆ ಬೆಂಬಲವಾಗಿ ನಿಂತಿದ್ದಾರೆ. ಸ್ಪೋರ್ಟ್‌ಸ್ಟಾಕ್‌ನೊಂದಿಗೆ ಮಾತನಾಡಿದ ಅಖ್ತರ್ ಕೊಹ್ಲಿ ಫಾರ್ಮ್​ ಕಂಡುಕೊಳ್ಳಲು ಸಲಹೆ ನೀಡಿದ್ದು, ‘ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳಬೇಕಾದರೆ ಪಾಕಿಸ್ತಾನ ವಿರುದ್ಧ ಪಂದ್ಯವಿದೆ ಎಂದು ಹೇಳಿ, ಅವರು ಎಚ್ಚೆತ್ತುಕೊಳ್ಳುತ್ತಾರೆ, ನಾವು ಅದನ್ನು ಆಗಾಗ್ಗೆ ನೋಡಿದ್ದೇವೆ ಎಂದಿದ್ದಾರೆ.

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರು ಸೇರಿದಂತೆ ಹಲವು ಕ್ರಿಕೆಟ್ ಪರಿಣಿತರು ಕೊಹ್ಲಿಯನ್ನು ತೆಗಳುತ್ತಿದ್ದರೆ, ಅಖ್ತರ್ ಮಾತ್ರ ಕೊಹ್ಲಿಗೆ ಬೆಂಬಲವಾಗಿ ನಿಂತಿದ್ದಾರೆ. ಸ್ಪೋರ್ಟ್‌ಸ್ಟಾಕ್‌ನೊಂದಿಗೆ ಮಾತನಾಡಿದ ಅಖ್ತರ್ ಕೊಹ್ಲಿ ಫಾರ್ಮ್​ ಕಂಡುಕೊಳ್ಳಲು ಸಲಹೆ ನೀಡಿದ್ದು, ‘ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳಬೇಕಾದರೆ ಪಾಕಿಸ್ತಾನ ವಿರುದ್ಧ ಪಂದ್ಯವಿದೆ ಎಂದು ಹೇಳಿ, ಅವರು ಎಚ್ಚೆತ್ತುಕೊಳ್ಳುತ್ತಾರೆ, ನಾವು ಅದನ್ನು ಆಗಾಗ್ಗೆ ನೋಡಿದ್ದೇವೆ ಎಂದಿದ್ದಾರೆ.

3 / 6
ಮುಂದುವರೆದು ಮಾತನಾಡಿರುವ ಅಖ್ತರ್, ಕೊಹ್ಲಿ ಮೆಲ್ಬೋರ್ನ್‌ನಲ್ಲಿ ಟಾಪ್ ಇನ್ನಿಂಗ್ಸ್ ಆಡಿದರು. ಹೀಗಾಗಿ ಅವರು ಮತ್ತೆ ಪುಟಿದೇಳುತ್ತಾರೆ ಎಂಬುದರಲ್ಲಿನ ಯಾವುದೇ ಅನುಮಾನವಿಲ್ಲ. ಹೀಗಾಗಿ 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ವಿರಾಟ್ ಕೊಹ್ಲಿ ಜೊತೆಗೆ ರೋಹಿತ್ ಶರ್ಮಾ ಆಡುವುದು ಖಚಿತವಾಗಿದ್ದು, ಈ ಇಬ್ಬರು ಮತ್ತೆ ತಮ್ಮ ಹಳೆಯ ಲಯಕ್ಕೆ ಮರಳುತ್ತಾರೆ ಎಂದು ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ.

ಮುಂದುವರೆದು ಮಾತನಾಡಿರುವ ಅಖ್ತರ್, ಕೊಹ್ಲಿ ಮೆಲ್ಬೋರ್ನ್‌ನಲ್ಲಿ ಟಾಪ್ ಇನ್ನಿಂಗ್ಸ್ ಆಡಿದರು. ಹೀಗಾಗಿ ಅವರು ಮತ್ತೆ ಪುಟಿದೇಳುತ್ತಾರೆ ಎಂಬುದರಲ್ಲಿನ ಯಾವುದೇ ಅನುಮಾನವಿಲ್ಲ. ಹೀಗಾಗಿ 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ವಿರಾಟ್ ಕೊಹ್ಲಿ ಜೊತೆಗೆ ರೋಹಿತ್ ಶರ್ಮಾ ಆಡುವುದು ಖಚಿತವಾಗಿದ್ದು, ಈ ಇಬ್ಬರು ಮತ್ತೆ ತಮ್ಮ ಹಳೆಯ ಲಯಕ್ಕೆ ಮರಳುತ್ತಾರೆ ಎಂದು ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ.

4 / 6
ಅಖ್ತರ್ ಅವರ ಈ ಹೇಳಿಕೆಯಲ್ಲೂ ಸತ್ಯವಿದ್ದು, ಪ್ರತಿಯೊಂದು ಐಸಿಸಿ ಟೂರ್ನಿಯಲ್ಲೂ ಪಾಕಿಸ್ತಾನದ ವಿರುದ್ಧ ಕೊಹ್ಲಿ ಬ್ಯಾಟ್ ಅಬ್ಬರಿಸಿದೆ. ಇದಕ್ಕೆ ಪೂರಕವಾಗಿ ವಿರಾಟ್ ಕೊಹ್ಲಿ ಇದುವರೆಗೆ ಪಾಕಿಸ್ತಾನ ವಿರುದ್ಧ 16 ಏಕದಿನ ಪಂದ್ಯಗಳನ್ನು ಆಡಿದ್ದ್ದು, 52.15ರ ಸರಾಸರಿಯಲ್ಲಿ 678 ರನ್ ಗಳಿಸಿದ್ದಾರೆ. ಇದರಲ್ಲಿ 3 ಶತಕಗಳು ಸೇರಿವೆ.
ಇದಲ್ಲದೇ ಪಾಕಿಸ್ತಾನ ವಿರುದ್ಧ 11 ಟಿ20 ಪಂದ್ಯಗಳನ್ನಾಡಿರುವ ವಿರಾಟ್ 70.28 ರ ಸರಾಸರಿಯಲ್ಲಿ 492 ರನ್ ಗಳಿಸಿದ್ದಾರೆ.

ಅಖ್ತರ್ ಅವರ ಈ ಹೇಳಿಕೆಯಲ್ಲೂ ಸತ್ಯವಿದ್ದು, ಪ್ರತಿಯೊಂದು ಐಸಿಸಿ ಟೂರ್ನಿಯಲ್ಲೂ ಪಾಕಿಸ್ತಾನದ ವಿರುದ್ಧ ಕೊಹ್ಲಿ ಬ್ಯಾಟ್ ಅಬ್ಬರಿಸಿದೆ. ಇದಕ್ಕೆ ಪೂರಕವಾಗಿ ವಿರಾಟ್ ಕೊಹ್ಲಿ ಇದುವರೆಗೆ ಪಾಕಿಸ್ತಾನ ವಿರುದ್ಧ 16 ಏಕದಿನ ಪಂದ್ಯಗಳನ್ನು ಆಡಿದ್ದ್ದು, 52.15ರ ಸರಾಸರಿಯಲ್ಲಿ 678 ರನ್ ಗಳಿಸಿದ್ದಾರೆ. ಇದರಲ್ಲಿ 3 ಶತಕಗಳು ಸೇರಿವೆ. ಇದಲ್ಲದೇ ಪಾಕಿಸ್ತಾನ ವಿರುದ್ಧ 11 ಟಿ20 ಪಂದ್ಯಗಳನ್ನಾಡಿರುವ ವಿರಾಟ್ 70.28 ರ ಸರಾಸರಿಯಲ್ಲಿ 492 ರನ್ ಗಳಿಸಿದ್ದಾರೆ.

5 / 6
ಇನ್ನು ಚಾಂಪಿಯನ್ಸ್ ಟ್ರೋಫಿಯಲ್ಲಿ ಕೊಹ್ಲಿಯ ಪ್ರದರ್ಶನವನ್ನು ನೋಡುವುದಾದರೆ... ಚಾಂಪಿಯನ್ಸ್ ಟ್ರೋಫಿಯಲ್ಲಿ ವಿರಾಟ್ ಕೊಹ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಟೂರ್ನಿಯಲ್ಲಿ ಇದುವರೆಗೆ 13 ಪಂದ್ಯಗಳನ್ನು ಆಡಿದ್ದು 88.16 ಸರಾಸರಿ ಮತ್ತು 92.32 ಸ್ಟ್ರೈಕ್ ರೇಟ್‌ನಲ್ಲಿ 529 ರನ್ ಗಳಿಸಿದ್ದಾರೆ. ಇದರಲ್ಲಿ 5 ಅರ್ಧಶತಕಗಳು ಸೇರಿದ್ದು, ಟೂರ್ನಿಯಲ್ಲಿ ಅವರ ಗರಿಷ್ಠ ಸ್ಕೋರ್ ಔಟಾಗದೆ 96 ರನ್ ಆಗಿದೆ.

ಇನ್ನು ಚಾಂಪಿಯನ್ಸ್ ಟ್ರೋಫಿಯಲ್ಲಿ ಕೊಹ್ಲಿಯ ಪ್ರದರ್ಶನವನ್ನು ನೋಡುವುದಾದರೆ... ಚಾಂಪಿಯನ್ಸ್ ಟ್ರೋಫಿಯಲ್ಲಿ ವಿರಾಟ್ ಕೊಹ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಟೂರ್ನಿಯಲ್ಲಿ ಇದುವರೆಗೆ 13 ಪಂದ್ಯಗಳನ್ನು ಆಡಿದ್ದು 88.16 ಸರಾಸರಿ ಮತ್ತು 92.32 ಸ್ಟ್ರೈಕ್ ರೇಟ್‌ನಲ್ಲಿ 529 ರನ್ ಗಳಿಸಿದ್ದಾರೆ. ಇದರಲ್ಲಿ 5 ಅರ್ಧಶತಕಗಳು ಸೇರಿದ್ದು, ಟೂರ್ನಿಯಲ್ಲಿ ಅವರ ಗರಿಷ್ಠ ಸ್ಕೋರ್ ಔಟಾಗದೆ 96 ರನ್ ಆಗಿದೆ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ