Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: RCB ಅಭಿಮಾನಿಗಳಿಗೆ ಕಿಂಗ್ ಕೊಹ್ಲಿ ಭಾವನಾತ್ಮಕ ಸಂದೇಶ

IPL 2023 Kannada: ಈ ಬಾರಿಯ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿಯ ಬ್ಯಾಟ್​ನಿಂದ 2 ಭರ್ಜರಿ ಶತಕಗಳು ಮೂಡಿಬಂದಿರುವುದು ವಿಶೇಷ. ಅಂದರೆ 2019 ರ ಬಳಿಕ ಕಿಂಗ್ ಕೊಹ್ಲಿ ಐಪಿಎಲ್​ನಲ್ಲಿ ಶತಕ ಬಾರಿಸಿರಲಿಲ್ಲ.

TV9 Web
| Updated By: ಝಾಹಿರ್ ಯೂಸುಫ್

Updated on:May 24, 2023 | 8:30 PM

IPL 2023: ಐಪಿಎಲ್ ಸೀಸನ್​ 16 ಅನ್ನು ಕಪ್ ಗೆಲ್ಲುವ ನಿರೀಕ್ಷೆಯೊಂದಿಗೆ ಆರಂಭಿಸಿದ್ದ ಆರ್​ಸಿಬಿ ತಂಡವು ಲೀಗ್ ಹಂತದಲ್ಲೇ ಹೊರಬಿದ್ದಿದೆ. ಆಡಿದ 14 ಪಂದ್ಯಗಳಲ್ಲಿ 7 ಜಯ ಹಾಗೂ 7 ಸೋಲಿನೊಂದಿಗೆ ಫಾಫ್ ಡುಪ್ಲೆಸಿಸ್ ಪಡೆ ಅಭಿಯಾನ ಅಂತ್ಯಗೊಳಿಸಿತ್ತು.

IPL 2023: ಐಪಿಎಲ್ ಸೀಸನ್​ 16 ಅನ್ನು ಕಪ್ ಗೆಲ್ಲುವ ನಿರೀಕ್ಷೆಯೊಂದಿಗೆ ಆರಂಭಿಸಿದ್ದ ಆರ್​ಸಿಬಿ ತಂಡವು ಲೀಗ್ ಹಂತದಲ್ಲೇ ಹೊರಬಿದ್ದಿದೆ. ಆಡಿದ 14 ಪಂದ್ಯಗಳಲ್ಲಿ 7 ಜಯ ಹಾಗೂ 7 ಸೋಲಿನೊಂದಿಗೆ ಫಾಫ್ ಡುಪ್ಲೆಸಿಸ್ ಪಡೆ ಅಭಿಯಾನ ಅಂತ್ಯಗೊಳಿಸಿತ್ತು.

1 / 6
ಅದರಲ್ಲೂ ಪ್ಲೇಆಫ್​ಗೇರಲು ಉತ್ತಮ ಅವಕಾಶವಿತ್ತಾದರೂ ಕೊನೆಯ ಪಂದ್ಯದಲ್ಲಿ ಸೋಲುವ ಮೂಲಕ ನಿರಾಸೆ ಮೂಡಿಸಿತ್ತು. ಇದರೊಂದಿಗೆ ಈ ಸಲ ಕಪ್ ಗೆಲ್ಲಲಿದೆ ಎಂಬ ಆರ್​ಸಿಬಿ ಅಭಿಮಾನಿಗಳ ಬಹುದೊಡ್ಡ ಕನಸು ಕೂಡ ಕಮರಿದೆ.

ಅದರಲ್ಲೂ ಪ್ಲೇಆಫ್​ಗೇರಲು ಉತ್ತಮ ಅವಕಾಶವಿತ್ತಾದರೂ ಕೊನೆಯ ಪಂದ್ಯದಲ್ಲಿ ಸೋಲುವ ಮೂಲಕ ನಿರಾಸೆ ಮೂಡಿಸಿತ್ತು. ಇದರೊಂದಿಗೆ ಈ ಸಲ ಕಪ್ ಗೆಲ್ಲಲಿದೆ ಎಂಬ ಆರ್​ಸಿಬಿ ಅಭಿಮಾನಿಗಳ ಬಹುದೊಡ್ಡ ಕನಸು ಕೂಡ ಕಮರಿದೆ.

2 / 6
ಈ ಸೋಲಿನ ಹತಾಶೆಯಲ್ಲಿರುವ ಆರ್​ಸಿಬಿ ಅಭಿಮಾನಿಗಳಿಗಾಗಿ ವಿರಾಟ್ ಕೊಹ್ಲಿ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ. ಅದು ಕೂಡ ಅಭಿಮಾನಿಗಳಿಗೆ ಧನ್ಯವಾದಗಳನ್ನು ಹೇಳುವ ಮೂಲಕ ಎಂಬುದು ವಿಶೇಷ.

ಈ ಸೋಲಿನ ಹತಾಶೆಯಲ್ಲಿರುವ ಆರ್​ಸಿಬಿ ಅಭಿಮಾನಿಗಳಿಗಾಗಿ ವಿರಾಟ್ ಕೊಹ್ಲಿ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ. ಅದು ಕೂಡ ಅಭಿಮಾನಿಗಳಿಗೆ ಧನ್ಯವಾದಗಳನ್ನು ಹೇಳುವ ಮೂಲಕ ಎಂಬುದು ವಿಶೇಷ.

3 / 6
ಅತ್ಯುತ್ತಮ ಕ್ಷಣಗಳಿಗೆ ಸಾಕ್ಷಿಯಾಗಿದ್ದ ಐಪಿಎಲ್ ಸೀಸನ್...ದುರಾದೃಷ್ಟವಶಾತ್, ನಾವು ಗುರಿ ತಲುಪಲು ಸಾಧ್ಯವಾಗಿಲ್ಲ. ನಿರಾಸೆಯಂತು ಆಗಿದೆ, ಆದರೆ ನಾವು ತಲೆ ಎತ್ತಿಕೊಂಡೇ ಓಡಾಡಬೇಕು. ನಮ್ಮ ನಿಷ್ಠಾವಂತ ಬೆಂಬಲಿಗರಿಗೆ, ಪ್ರತಿ ಹಂತದಲ್ಲೂ ನಮ್ಮನ್ನು ಬೆಂಬಲಿಸಿದ್ದಕ್ಕಾಗಿ ಕೃತಜ್ಞರಾಗಿರುತ್ತೇವೆ ಎಂದು ವಿರಾಟ್ ಕೊಹ್ಲಿ ಬರೆದುಕೊಂಡಿದ್ದಾರೆ.

ಅತ್ಯುತ್ತಮ ಕ್ಷಣಗಳಿಗೆ ಸಾಕ್ಷಿಯಾಗಿದ್ದ ಐಪಿಎಲ್ ಸೀಸನ್...ದುರಾದೃಷ್ಟವಶಾತ್, ನಾವು ಗುರಿ ತಲುಪಲು ಸಾಧ್ಯವಾಗಿಲ್ಲ. ನಿರಾಸೆಯಂತು ಆಗಿದೆ, ಆದರೆ ನಾವು ತಲೆ ಎತ್ತಿಕೊಂಡೇ ಓಡಾಡಬೇಕು. ನಮ್ಮ ನಿಷ್ಠಾವಂತ ಬೆಂಬಲಿಗರಿಗೆ, ಪ್ರತಿ ಹಂತದಲ್ಲೂ ನಮ್ಮನ್ನು ಬೆಂಬಲಿಸಿದ್ದಕ್ಕಾಗಿ ಕೃತಜ್ಞರಾಗಿರುತ್ತೇವೆ ಎಂದು ವಿರಾಟ್ ಕೊಹ್ಲಿ ಬರೆದುಕೊಂಡಿದ್ದಾರೆ.

4 / 6
ಇನ್ನು ಈ ಬಾರಿಯ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿಯ ಬ್ಯಾಟ್​ನಿಂದ 2 ಭರ್ಜರಿ ಶತಕಗಳು ಮೂಡಿಬಂದಿರುವುದು ವಿಶೇಷ. ಅಂದರೆ 2019 ರ ಬಳಿಕ ಕಿಂಗ್ ಕೊಹ್ಲಿ ಐಪಿಎಲ್​ನಲ್ಲಿ ಶತಕ ಬಾರಿಸಿರಲಿಲ್ಲ. ಆದರೆ ಈ ಸಲ ಎಸ್​ಆರ್​ಹೆಚ್ ಹಾಗೂ ಗುಜರಾತ್ ಟೈಟಾನ್ಸ್ ವಿರುದ್ಧ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿ ಕಿಂಗ್ ಕೊಹ್ಲಿ ದಾಖಲೆ ನಿರ್ಮಿಸಿದ್ದರು.

ಇನ್ನು ಈ ಬಾರಿಯ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿಯ ಬ್ಯಾಟ್​ನಿಂದ 2 ಭರ್ಜರಿ ಶತಕಗಳು ಮೂಡಿಬಂದಿರುವುದು ವಿಶೇಷ. ಅಂದರೆ 2019 ರ ಬಳಿಕ ಕಿಂಗ್ ಕೊಹ್ಲಿ ಐಪಿಎಲ್​ನಲ್ಲಿ ಶತಕ ಬಾರಿಸಿರಲಿಲ್ಲ. ಆದರೆ ಈ ಸಲ ಎಸ್​ಆರ್​ಹೆಚ್ ಹಾಗೂ ಗುಜರಾತ್ ಟೈಟಾನ್ಸ್ ವಿರುದ್ಧ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿ ಕಿಂಗ್ ಕೊಹ್ಲಿ ದಾಖಲೆ ನಿರ್ಮಿಸಿದ್ದರು.

5 / 6
ಹಾಗೆಯೇ 14 ಪಂದ್ಯಗಳಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ವಿರಾಟ್ ಕೊಹ್ಲಿ 2 ಭರ್ಜರಿ ಶತಕದೊಂದಿಗೆ ಒಟ್ಟು 639 ರನ್ ಕಲೆಹಾಕಿದ್ದರು. ಅಲ್ಲದೆ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಪ್ಲೇಆಫ್ಸ್ ಪ್ರವೇಶಿಸಲು ಸಾಧ್ಯವಾಗಲಿಲ್ಲ ಎಂಬುದೇ ಬೇಸರದ ಸಂಗತಿ.

ಹಾಗೆಯೇ 14 ಪಂದ್ಯಗಳಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ವಿರಾಟ್ ಕೊಹ್ಲಿ 2 ಭರ್ಜರಿ ಶತಕದೊಂದಿಗೆ ಒಟ್ಟು 639 ರನ್ ಕಲೆಹಾಕಿದ್ದರು. ಅಲ್ಲದೆ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಪ್ಲೇಆಫ್ಸ್ ಪ್ರವೇಶಿಸಲು ಸಾಧ್ಯವಾಗಲಿಲ್ಲ ಎಂಬುದೇ ಬೇಸರದ ಸಂಗತಿ.

6 / 6

Published On - 8:30 pm, Tue, 23 May 23

Follow us
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್