AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಜಿ ಟೂರ್ನಿಯಲ್ಲಿ ಕಣಕ್ಕಿಳಿದು ಇತಿಹಾಸ ನಿರ್ಮಿಸಿದ ವಿರಾಟ್ ಕೊಹ್ಲಿ

Virat Kohli Record: ರಣಜಿ ಟೂರ್ನಿಯಲ್ಲಿ ಬರೋಬ್ಬರಿ 12 ವರ್ಷಗಳ ಬಳಿಕ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ಇತಿಹಾಸ ನಿರ್ಮಿಸಿದ್ದಾರೆ. 2012 ರಲ್ಲಿ ಕೊನೆಯ ಬಾರಿ ರಣಜಿ ಪಂದ್ಯವಾಡಿದ್ದ ಕೊಹ್ಲಿ ಈ ಬಾರಿ ಮತ್ತೆ ದೆಹಲಿ ತಂಡವನ್ನು ಪ್ರತಿನಿಧಿಸಿದ್ದಾರೆ. ಇದರೊಂದಿಗೆ ಪಾಕಿಸ್ತಾನ್ ತಂಡದ ಮಾಜಿ ನಾಯಕ ವಾಸಿಂ ಅಕ್ರಂ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದು ವಿರಾಟ್ ಕೊಹ್ಲಿ ಹೆಸರಿಗೆ ಸೇರ್ಪಡೆಯಾಗಿದೆ.

ಝಾಹಿರ್ ಯೂಸುಫ್
|

Updated on: Feb 04, 2025 | 7:54 AM

Share
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ರಣಜಿ ಟೂರ್ನಿಯಲ್ಲಿ ಕಣಕ್ಕಿಳಿದು ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಬರೋಬ್ಬರಿ 12 ವರ್ಷಗಳ ಬಳಿಕ ರಣಜಿ ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ಮೂಲಕ ಎಂಬುದು ವಿಶೇಷ. ಅಂದರೆ ಅಂತಾರಾಷ್ಟ್ರೀಯ ಕ್ರಿಕೆಟಿಗನಾಗಿ ದೀರ್ಘಾವಧಿಯ ಬಳಿಕ ದೇಶೀಯ ಟೂರ್ನಿ ಆಡಿದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ಹೆಸರು ಅಗ್ರಸ್ಥಾನಕ್ಕೇರಿದೆ.

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ರಣಜಿ ಟೂರ್ನಿಯಲ್ಲಿ ಕಣಕ್ಕಿಳಿದು ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಬರೋಬ್ಬರಿ 12 ವರ್ಷಗಳ ಬಳಿಕ ರಣಜಿ ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ಮೂಲಕ ಎಂಬುದು ವಿಶೇಷ. ಅಂದರೆ ಅಂತಾರಾಷ್ಟ್ರೀಯ ಕ್ರಿಕೆಟಿಗನಾಗಿ ದೀರ್ಘಾವಧಿಯ ಬಳಿಕ ದೇಶೀಯ ಟೂರ್ನಿ ಆಡಿದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ಹೆಸರು ಅಗ್ರಸ್ಥಾನಕ್ಕೇರಿದೆ.

1 / 5
ಇತ್ತೀಚೆಗೆ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ರಣಜಿ ಟೂರ್ನಿಯ ಗ್ರೂಪ್-ಡಿ ಪಂದ್ಯದಲ್ಲಿ ರೈಲ್ವೇಸ್ ವಿರುದ್ಧ ವಿರಾಟ್ ಕೊಹ್ಲಿ ದೆಹಲಿ ಪರ ಕಣಕ್ಕಿಳಿದಿದ್ದರು. ಈ ಮೂಲಕ 12 ವರ್ಷಗಳ ಬಳಿಕ ಕೊಹ್ಲಿ ಮತ್ತೆ ದೇಶೀಯ ಅಂಗಳದಲ್ಲಿ ಕಾಣಿಸಿಕೊಂಡಿದ್ದರು. ಹೀಗೆ ದೀರ್ಘಾವಧಿಯ ಬಳಿಕ ರಣಜಿ ಪಂದ್ಯವಾಡುವ ಮೂಲಕ ಕೊಹ್ಲಿ ಪಾಕ್​ ತಂಡದ ಮಾಜಿ ನಾಯಕನ ದಾಖಲೆ ಮುರಿದಿದ್ದಾರೆ.

ಇತ್ತೀಚೆಗೆ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ರಣಜಿ ಟೂರ್ನಿಯ ಗ್ರೂಪ್-ಡಿ ಪಂದ್ಯದಲ್ಲಿ ರೈಲ್ವೇಸ್ ವಿರುದ್ಧ ವಿರಾಟ್ ಕೊಹ್ಲಿ ದೆಹಲಿ ಪರ ಕಣಕ್ಕಿಳಿದಿದ್ದರು. ಈ ಮೂಲಕ 12 ವರ್ಷಗಳ ಬಳಿಕ ಕೊಹ್ಲಿ ಮತ್ತೆ ದೇಶೀಯ ಅಂಗಳದಲ್ಲಿ ಕಾಣಿಸಿಕೊಂಡಿದ್ದರು. ಹೀಗೆ ದೀರ್ಘಾವಧಿಯ ಬಳಿಕ ರಣಜಿ ಪಂದ್ಯವಾಡುವ ಮೂಲಕ ಕೊಹ್ಲಿ ಪಾಕ್​ ತಂಡದ ಮಾಜಿ ನಾಯಕನ ದಾಖಲೆ ಮುರಿದಿದ್ದಾರೆ.

2 / 5
ಅಂದರೆ ಕನಿಷ್ಠ 50 ಟೆಸ್ಟ್ ಪಂದ್ಯಗಳನ್ನಾಡಿರುವ ಆಟಗಾರನು ತನ್ನ ದೇಶದ ಪ್ರಮುಖ ಪ್ರಥಮ ದರ್ಜೆ ಟೂರ್ನಿಯಲ್ಲಿ ದೀರ್ಘಾವಧಿಯವರೆಗೆ ಭಾಗವಹಿಸದೇ ಇದ್ದಂತಹ ದಾಖಲೆ ಪಾಕಿಸ್ತಾನ್ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹೆಸರಿನಲ್ಲಿತ್ತು. ಅಕ್ರಮ್ 11 ವರ್ಷಗಳ ಕಾಲ ದೇಶೀಯ ಟೂರ್ನಿಯಿಂದ ಹೊರಗುಳಿದು, ಆ ಬಳಿಕ ಪ್ರಥಮ ದರ್ಜೆ ಪಂದ್ಯವಾಡಿದ್ದರು.

ಅಂದರೆ ಕನಿಷ್ಠ 50 ಟೆಸ್ಟ್ ಪಂದ್ಯಗಳನ್ನಾಡಿರುವ ಆಟಗಾರನು ತನ್ನ ದೇಶದ ಪ್ರಮುಖ ಪ್ರಥಮ ದರ್ಜೆ ಟೂರ್ನಿಯಲ್ಲಿ ದೀರ್ಘಾವಧಿಯವರೆಗೆ ಭಾಗವಹಿಸದೇ ಇದ್ದಂತಹ ದಾಖಲೆ ಪಾಕಿಸ್ತಾನ್ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹೆಸರಿನಲ್ಲಿತ್ತು. ಅಕ್ರಮ್ 11 ವರ್ಷಗಳ ಕಾಲ ದೇಶೀಯ ಟೂರ್ನಿಯಿಂದ ಹೊರಗುಳಿದು, ಆ ಬಳಿಕ ಪ್ರಥಮ ದರ್ಜೆ ಪಂದ್ಯವಾಡಿದ್ದರು.

3 / 5
ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಅಳಿಸಿ ಹಾಕಿದ್ದಾರೆ. ಕಿಂಗ್ ಕೊಹ್ಲಿ 12 ವರ್ಷ, 86 ದಿನಗಳ ಬಳಿಕ ರಣಜಿ ಟೂರ್ನಿ ಆಡಿ, ದೀರ್ಘಾವಧಿಯ ಬಳಿಕ ದೇಶೀಯ ಟೂರ್ನಿಯಲ್ಲಿ ಕಾಣಿಸಿಕೊಂಡ ಅಂತಾರಾಷ್ಟ್ರೀಯ ಸ್ಟಾರ್ ಆಟಗಾರ ಎನಿಸಿಕೊಂಡಿದ್ದಾರೆ. ಈ ಮೂಲಕ ರಣಜಿ ಕಂಬ್ಯಾಕ್​ನಲ್ಲೂ ಕಿಂಗ್ ಕೊಹ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಅಳಿಸಿ ಹಾಕಿದ್ದಾರೆ. ಕಿಂಗ್ ಕೊಹ್ಲಿ 12 ವರ್ಷ, 86 ದಿನಗಳ ಬಳಿಕ ರಣಜಿ ಟೂರ್ನಿ ಆಡಿ, ದೀರ್ಘಾವಧಿಯ ಬಳಿಕ ದೇಶೀಯ ಟೂರ್ನಿಯಲ್ಲಿ ಕಾಣಿಸಿಕೊಂಡ ಅಂತಾರಾಷ್ಟ್ರೀಯ ಸ್ಟಾರ್ ಆಟಗಾರ ಎನಿಸಿಕೊಂಡಿದ್ದಾರೆ. ಈ ಮೂಲಕ ರಣಜಿ ಕಂಬ್ಯಾಕ್​ನಲ್ಲೂ ಕಿಂಗ್ ಕೊಹ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

4 / 5
ಇನ್ನು 12 ವರ್ಷಗಳ ಬಳಿಕ ರಣಜಿ ಪಂದ್ಯವಾಡಿದ ವಿರಾಟ್ ಕೊಹ್ಲಿ ಮೊದಲ ಇನಿಂಗ್ಸ್​ನಲ್ಲಿ 6 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದಾಗ್ಯೂ ಈ ಪಂದ್ಯದಲ್ಲಿ ದೆಹಲಿ ತಂಡ ಜಯ ಸಾಧಿಸಿದೆ. ಈ ಮ್ಯಾಚ್​ನಲ್ಲಿ ಮೊದಲ ಇನಿಂಗ್ಸ್​ನಲ್ಲಿ ರೈಲ್ವೇಸ್ 241 ರನ್ ಬಾರಿಸಿದರೆ, ದೆಹಲಿ 374 ರನ್​ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ರೈಲ್ವೇಸ್ ತಂಡವು 114 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ದೆಹಲಿ ಪಡೆ ಇನಿಂಗ್ಸ್ ಹಾಗೂ 19 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಇನ್ನು 12 ವರ್ಷಗಳ ಬಳಿಕ ರಣಜಿ ಪಂದ್ಯವಾಡಿದ ವಿರಾಟ್ ಕೊಹ್ಲಿ ಮೊದಲ ಇನಿಂಗ್ಸ್​ನಲ್ಲಿ 6 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದಾಗ್ಯೂ ಈ ಪಂದ್ಯದಲ್ಲಿ ದೆಹಲಿ ತಂಡ ಜಯ ಸಾಧಿಸಿದೆ. ಈ ಮ್ಯಾಚ್​ನಲ್ಲಿ ಮೊದಲ ಇನಿಂಗ್ಸ್​ನಲ್ಲಿ ರೈಲ್ವೇಸ್ 241 ರನ್ ಬಾರಿಸಿದರೆ, ದೆಹಲಿ 374 ರನ್​ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ರೈಲ್ವೇಸ್ ತಂಡವು 114 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ದೆಹಲಿ ಪಡೆ ಇನಿಂಗ್ಸ್ ಹಾಗೂ 19 ರನ್​ಗಳ ಭರ್ಜರಿ ಜಯ ಸಾಧಿಸಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ