AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಜಿ ಟೂರ್ನಿಯಲ್ಲಿ ಕಣಕ್ಕಿಳಿದು ಇತಿಹಾಸ ನಿರ್ಮಿಸಿದ ವಿರಾಟ್ ಕೊಹ್ಲಿ

Virat Kohli Record: ರಣಜಿ ಟೂರ್ನಿಯಲ್ಲಿ ಬರೋಬ್ಬರಿ 12 ವರ್ಷಗಳ ಬಳಿಕ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ಇತಿಹಾಸ ನಿರ್ಮಿಸಿದ್ದಾರೆ. 2012 ರಲ್ಲಿ ಕೊನೆಯ ಬಾರಿ ರಣಜಿ ಪಂದ್ಯವಾಡಿದ್ದ ಕೊಹ್ಲಿ ಈ ಬಾರಿ ಮತ್ತೆ ದೆಹಲಿ ತಂಡವನ್ನು ಪ್ರತಿನಿಧಿಸಿದ್ದಾರೆ. ಇದರೊಂದಿಗೆ ಪಾಕಿಸ್ತಾನ್ ತಂಡದ ಮಾಜಿ ನಾಯಕ ವಾಸಿಂ ಅಕ್ರಂ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದು ವಿರಾಟ್ ಕೊಹ್ಲಿ ಹೆಸರಿಗೆ ಸೇರ್ಪಡೆಯಾಗಿದೆ.

ಝಾಹಿರ್ ಯೂಸುಫ್
|

Updated on: Feb 04, 2025 | 7:54 AM

Share
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ರಣಜಿ ಟೂರ್ನಿಯಲ್ಲಿ ಕಣಕ್ಕಿಳಿದು ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಬರೋಬ್ಬರಿ 12 ವರ್ಷಗಳ ಬಳಿಕ ರಣಜಿ ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ಮೂಲಕ ಎಂಬುದು ವಿಶೇಷ. ಅಂದರೆ ಅಂತಾರಾಷ್ಟ್ರೀಯ ಕ್ರಿಕೆಟಿಗನಾಗಿ ದೀರ್ಘಾವಧಿಯ ಬಳಿಕ ದೇಶೀಯ ಟೂರ್ನಿ ಆಡಿದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ಹೆಸರು ಅಗ್ರಸ್ಥಾನಕ್ಕೇರಿದೆ.

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ರಣಜಿ ಟೂರ್ನಿಯಲ್ಲಿ ಕಣಕ್ಕಿಳಿದು ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಬರೋಬ್ಬರಿ 12 ವರ್ಷಗಳ ಬಳಿಕ ರಣಜಿ ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ಮೂಲಕ ಎಂಬುದು ವಿಶೇಷ. ಅಂದರೆ ಅಂತಾರಾಷ್ಟ್ರೀಯ ಕ್ರಿಕೆಟಿಗನಾಗಿ ದೀರ್ಘಾವಧಿಯ ಬಳಿಕ ದೇಶೀಯ ಟೂರ್ನಿ ಆಡಿದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ಹೆಸರು ಅಗ್ರಸ್ಥಾನಕ್ಕೇರಿದೆ.

1 / 5
ಇತ್ತೀಚೆಗೆ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ರಣಜಿ ಟೂರ್ನಿಯ ಗ್ರೂಪ್-ಡಿ ಪಂದ್ಯದಲ್ಲಿ ರೈಲ್ವೇಸ್ ವಿರುದ್ಧ ವಿರಾಟ್ ಕೊಹ್ಲಿ ದೆಹಲಿ ಪರ ಕಣಕ್ಕಿಳಿದಿದ್ದರು. ಈ ಮೂಲಕ 12 ವರ್ಷಗಳ ಬಳಿಕ ಕೊಹ್ಲಿ ಮತ್ತೆ ದೇಶೀಯ ಅಂಗಳದಲ್ಲಿ ಕಾಣಿಸಿಕೊಂಡಿದ್ದರು. ಹೀಗೆ ದೀರ್ಘಾವಧಿಯ ಬಳಿಕ ರಣಜಿ ಪಂದ್ಯವಾಡುವ ಮೂಲಕ ಕೊಹ್ಲಿ ಪಾಕ್​ ತಂಡದ ಮಾಜಿ ನಾಯಕನ ದಾಖಲೆ ಮುರಿದಿದ್ದಾರೆ.

ಇತ್ತೀಚೆಗೆ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ರಣಜಿ ಟೂರ್ನಿಯ ಗ್ರೂಪ್-ಡಿ ಪಂದ್ಯದಲ್ಲಿ ರೈಲ್ವೇಸ್ ವಿರುದ್ಧ ವಿರಾಟ್ ಕೊಹ್ಲಿ ದೆಹಲಿ ಪರ ಕಣಕ್ಕಿಳಿದಿದ್ದರು. ಈ ಮೂಲಕ 12 ವರ್ಷಗಳ ಬಳಿಕ ಕೊಹ್ಲಿ ಮತ್ತೆ ದೇಶೀಯ ಅಂಗಳದಲ್ಲಿ ಕಾಣಿಸಿಕೊಂಡಿದ್ದರು. ಹೀಗೆ ದೀರ್ಘಾವಧಿಯ ಬಳಿಕ ರಣಜಿ ಪಂದ್ಯವಾಡುವ ಮೂಲಕ ಕೊಹ್ಲಿ ಪಾಕ್​ ತಂಡದ ಮಾಜಿ ನಾಯಕನ ದಾಖಲೆ ಮುರಿದಿದ್ದಾರೆ.

2 / 5
ಅಂದರೆ ಕನಿಷ್ಠ 50 ಟೆಸ್ಟ್ ಪಂದ್ಯಗಳನ್ನಾಡಿರುವ ಆಟಗಾರನು ತನ್ನ ದೇಶದ ಪ್ರಮುಖ ಪ್ರಥಮ ದರ್ಜೆ ಟೂರ್ನಿಯಲ್ಲಿ ದೀರ್ಘಾವಧಿಯವರೆಗೆ ಭಾಗವಹಿಸದೇ ಇದ್ದಂತಹ ದಾಖಲೆ ಪಾಕಿಸ್ತಾನ್ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹೆಸರಿನಲ್ಲಿತ್ತು. ಅಕ್ರಮ್ 11 ವರ್ಷಗಳ ಕಾಲ ದೇಶೀಯ ಟೂರ್ನಿಯಿಂದ ಹೊರಗುಳಿದು, ಆ ಬಳಿಕ ಪ್ರಥಮ ದರ್ಜೆ ಪಂದ್ಯವಾಡಿದ್ದರು.

ಅಂದರೆ ಕನಿಷ್ಠ 50 ಟೆಸ್ಟ್ ಪಂದ್ಯಗಳನ್ನಾಡಿರುವ ಆಟಗಾರನು ತನ್ನ ದೇಶದ ಪ್ರಮುಖ ಪ್ರಥಮ ದರ್ಜೆ ಟೂರ್ನಿಯಲ್ಲಿ ದೀರ್ಘಾವಧಿಯವರೆಗೆ ಭಾಗವಹಿಸದೇ ಇದ್ದಂತಹ ದಾಖಲೆ ಪಾಕಿಸ್ತಾನ್ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹೆಸರಿನಲ್ಲಿತ್ತು. ಅಕ್ರಮ್ 11 ವರ್ಷಗಳ ಕಾಲ ದೇಶೀಯ ಟೂರ್ನಿಯಿಂದ ಹೊರಗುಳಿದು, ಆ ಬಳಿಕ ಪ್ರಥಮ ದರ್ಜೆ ಪಂದ್ಯವಾಡಿದ್ದರು.

3 / 5
ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಅಳಿಸಿ ಹಾಕಿದ್ದಾರೆ. ಕಿಂಗ್ ಕೊಹ್ಲಿ 12 ವರ್ಷ, 86 ದಿನಗಳ ಬಳಿಕ ರಣಜಿ ಟೂರ್ನಿ ಆಡಿ, ದೀರ್ಘಾವಧಿಯ ಬಳಿಕ ದೇಶೀಯ ಟೂರ್ನಿಯಲ್ಲಿ ಕಾಣಿಸಿಕೊಂಡ ಅಂತಾರಾಷ್ಟ್ರೀಯ ಸ್ಟಾರ್ ಆಟಗಾರ ಎನಿಸಿಕೊಂಡಿದ್ದಾರೆ. ಈ ಮೂಲಕ ರಣಜಿ ಕಂಬ್ಯಾಕ್​ನಲ್ಲೂ ಕಿಂಗ್ ಕೊಹ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಅಳಿಸಿ ಹಾಕಿದ್ದಾರೆ. ಕಿಂಗ್ ಕೊಹ್ಲಿ 12 ವರ್ಷ, 86 ದಿನಗಳ ಬಳಿಕ ರಣಜಿ ಟೂರ್ನಿ ಆಡಿ, ದೀರ್ಘಾವಧಿಯ ಬಳಿಕ ದೇಶೀಯ ಟೂರ್ನಿಯಲ್ಲಿ ಕಾಣಿಸಿಕೊಂಡ ಅಂತಾರಾಷ್ಟ್ರೀಯ ಸ್ಟಾರ್ ಆಟಗಾರ ಎನಿಸಿಕೊಂಡಿದ್ದಾರೆ. ಈ ಮೂಲಕ ರಣಜಿ ಕಂಬ್ಯಾಕ್​ನಲ್ಲೂ ಕಿಂಗ್ ಕೊಹ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

4 / 5
ಇನ್ನು 12 ವರ್ಷಗಳ ಬಳಿಕ ರಣಜಿ ಪಂದ್ಯವಾಡಿದ ವಿರಾಟ್ ಕೊಹ್ಲಿ ಮೊದಲ ಇನಿಂಗ್ಸ್​ನಲ್ಲಿ 6 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದಾಗ್ಯೂ ಈ ಪಂದ್ಯದಲ್ಲಿ ದೆಹಲಿ ತಂಡ ಜಯ ಸಾಧಿಸಿದೆ. ಈ ಮ್ಯಾಚ್​ನಲ್ಲಿ ಮೊದಲ ಇನಿಂಗ್ಸ್​ನಲ್ಲಿ ರೈಲ್ವೇಸ್ 241 ರನ್ ಬಾರಿಸಿದರೆ, ದೆಹಲಿ 374 ರನ್​ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ರೈಲ್ವೇಸ್ ತಂಡವು 114 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ದೆಹಲಿ ಪಡೆ ಇನಿಂಗ್ಸ್ ಹಾಗೂ 19 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಇನ್ನು 12 ವರ್ಷಗಳ ಬಳಿಕ ರಣಜಿ ಪಂದ್ಯವಾಡಿದ ವಿರಾಟ್ ಕೊಹ್ಲಿ ಮೊದಲ ಇನಿಂಗ್ಸ್​ನಲ್ಲಿ 6 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದಾಗ್ಯೂ ಈ ಪಂದ್ಯದಲ್ಲಿ ದೆಹಲಿ ತಂಡ ಜಯ ಸಾಧಿಸಿದೆ. ಈ ಮ್ಯಾಚ್​ನಲ್ಲಿ ಮೊದಲ ಇನಿಂಗ್ಸ್​ನಲ್ಲಿ ರೈಲ್ವೇಸ್ 241 ರನ್ ಬಾರಿಸಿದರೆ, ದೆಹಲಿ 374 ರನ್​ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ರೈಲ್ವೇಸ್ ತಂಡವು 114 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ದೆಹಲಿ ಪಡೆ ಇನಿಂಗ್ಸ್ ಹಾಗೂ 19 ರನ್​ಗಳ ಭರ್ಜರಿ ಜಯ ಸಾಧಿಸಿದೆ.

5 / 5
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್