Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲುಕ್ ಬದಲಿಸಿದ ವಿರಾಟ್: ಬದಲಾಗುತ್ತಾ ಕೊಹ್ಲಿಯ ಲಕ್

Virat Kohli: ಪರ್ತ್​ನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಆದರೆ ಅಡಿಲೇಡ್​ನಲ್ಲಿ ನಡೆದ ಪಿಂಕ್ ಬಾಲ್ ಟೆಸ್ಟ್​ನಲ್ಲಿ ಕೊಹ್ಲಿ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹಾಗೆಯೇ ಬ್ರಿಸ್ಬೇನ್​ ಟೆಸ್ಟ್​ನಲ್ಲೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸುವಲ್ಲಿ ವಿರಾಟ್ ಕೊಹ್ಲಿ ವಿಫಲರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Dec 21, 2024 | 12:56 PM

ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಬ್ರಿಸ್ಬೇನ್​ನ ಗಾಬಾದಲ್ಲಿ ನಡೆದ ಮೂರನೇ​​ ಟೆಸ್ಟ್ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ತಮ್ಮ ಲುಕ್ ಬದಲಿಸಿದ್ದು, ಇದೀಗ ಹೊಸ ಹೇರ್ ಸ್ಟೈಲ್​ನಲ್ಲಿ ಕಂಗೊಳಿಸಿದ್ದಾರೆ.

ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಬ್ರಿಸ್ಬೇನ್​ನ ಗಾಬಾದಲ್ಲಿ ನಡೆದ ಮೂರನೇ​​ ಟೆಸ್ಟ್ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ತಮ್ಮ ಲುಕ್ ಬದಲಿಸಿದ್ದು, ಇದೀಗ ಹೊಸ ಹೇರ್ ಸ್ಟೈಲ್​ನಲ್ಲಿ ಕಂಗೊಳಿಸಿದ್ದಾರೆ.

1 / 6
ಈ ಬಾರಿ ವಿರಾಟ್ ಕೊಹ್ಲಿಯ ಕೇಶ ವಿನ್ಯಾಸ ಬದಲಿಸಿರುವುದು ಆಸ್ಟ್ರೇಲಿಯಾದ ಖ್ಯಾತ ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಜೋರ್ಡಾನ್ ತಬಕ್‌ಮನ್. ಇದೀಗ ಕಿಂಗ್ ಕೊಹ್ಲಿ ತಲೆಗೆ ಹೊಸ ಟಚ್ ಕೊಟ್ಟಿರುವ ತಬಕ್‌ಮನ್ ಟೀಮ್ ಇಂಡಿಯಾ ಆಟಗಾರನ ನ್ಯೂ ಲುಕ್​ಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಬಾರಿ ವಿರಾಟ್ ಕೊಹ್ಲಿಯ ಕೇಶ ವಿನ್ಯಾಸ ಬದಲಿಸಿರುವುದು ಆಸ್ಟ್ರೇಲಿಯಾದ ಖ್ಯಾತ ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಜೋರ್ಡಾನ್ ತಬಕ್‌ಮನ್. ಇದೀಗ ಕಿಂಗ್ ಕೊಹ್ಲಿ ತಲೆಗೆ ಹೊಸ ಟಚ್ ಕೊಟ್ಟಿರುವ ತಬಕ್‌ಮನ್ ಟೀಮ್ ಇಂಡಿಯಾ ಆಟಗಾರನ ನ್ಯೂ ಲುಕ್​ಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 6
ಈ ಹಿಂದೆ ವಿರಾಟ್ ಕೊಹ್ಲಿ ಭಾರತದ ಖ್ಯಾತ ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಆಲಿಮ್ ಹಕೀಮ್ ಅವರ ಕೇಶ ವಿನ್ಯಾಸದೊಂದಿಗೆ ಕಾಣಿಸಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾದಲ್ಲಿರುವ ಕೊಹ್ಲಿ ಹೊಸ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದಾರೆ.

ಈ ಹಿಂದೆ ವಿರಾಟ್ ಕೊಹ್ಲಿ ಭಾರತದ ಖ್ಯಾತ ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಆಲಿಮ್ ಹಕೀಮ್ ಅವರ ಕೇಶ ವಿನ್ಯಾಸದೊಂದಿಗೆ ಕಾಣಿಸಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾದಲ್ಲಿರುವ ಕೊಹ್ಲಿ ಹೊಸ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದಾರೆ.

3 / 6
ಅದರಂತೆ ಡಿಸೆಂಬರ್ 26 ರಿಂದ ಶುರುವಾಗಲಿರುವ ಮೆಲ್ಬೋರ್ನ್​ ಟೆಸ್ಟ್​ನಲ್ಲಿ ವಿರಾಟ್ ಕೊಹ್ಲಿ ಹೊಸ ಲುಕ್​​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಲುಕ್​ನೊಂದಿಗೆ ಕಿಂಗ್ ಕೊಹ್ಲಿಯ ಲಕ್ ಬದಲಾಗಲಿದೆಯಾ ಎಂಬುದೇ ಪ್ರಶ್ನೆ.

ಅದರಂತೆ ಡಿಸೆಂಬರ್ 26 ರಿಂದ ಶುರುವಾಗಲಿರುವ ಮೆಲ್ಬೋರ್ನ್​ ಟೆಸ್ಟ್​ನಲ್ಲಿ ವಿರಾಟ್ ಕೊಹ್ಲಿ ಹೊಸ ಲುಕ್​​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಲುಕ್​ನೊಂದಿಗೆ ಕಿಂಗ್ ಕೊಹ್ಲಿಯ ಲಕ್ ಬದಲಾಗಲಿದೆಯಾ ಎಂಬುದೇ ಪ್ರಶ್ನೆ.

4 / 6
ಏಕೆಂದರೆ ಕಳೆದ ಐದು ಇನಿಂಗ್ಸ್​ಗಳಲ್ಲಿ ವಿರಾಟ್ ಕೊಹ್ಲಿ ಕಲೆಹಾಕಿರುವುದು ಕೇವಲ 126 ರನ್​ಗಳು. ಇದರಲ್ಲಿ ಒಂದು ಶತಕ ಸೇರಿದೆ. ಈ ಶತಕದ ಬಳಿಕ ಕೊಹ್ಲಿಯ ಬ್ಯಾಟ್​ನಿಂದ ಮೂಡಿಬಂದಿರುವ ಸ್ಕೋರ್​ ಕೇವಲ 21 ರನ್​ಗಳು ಮಾತ್ರ. ಹೀಗಾಗಿಯೇ ಮೆಲ್ಬೋರ್ನ್​ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಗೆಲ್ಲಬೇಕಿದ್ದರೆ ಅನುಭವಿ ದಾಂಡಿಗ ವಿರಾಟ್ ಕೊಹ್ಲಿ ಅಬ್ಬರಿಸಲೇಬೇಕು.

ಏಕೆಂದರೆ ಕಳೆದ ಐದು ಇನಿಂಗ್ಸ್​ಗಳಲ್ಲಿ ವಿರಾಟ್ ಕೊಹ್ಲಿ ಕಲೆಹಾಕಿರುವುದು ಕೇವಲ 126 ರನ್​ಗಳು. ಇದರಲ್ಲಿ ಒಂದು ಶತಕ ಸೇರಿದೆ. ಈ ಶತಕದ ಬಳಿಕ ಕೊಹ್ಲಿಯ ಬ್ಯಾಟ್​ನಿಂದ ಮೂಡಿಬಂದಿರುವ ಸ್ಕೋರ್​ ಕೇವಲ 21 ರನ್​ಗಳು ಮಾತ್ರ. ಹೀಗಾಗಿಯೇ ಮೆಲ್ಬೋರ್ನ್​ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಗೆಲ್ಲಬೇಕಿದ್ದರೆ ಅನುಭವಿ ದಾಂಡಿಗ ವಿರಾಟ್ ಕೊಹ್ಲಿ ಅಬ್ಬರಿಸಲೇಬೇಕು.

5 / 6
ಅದರಂತೆ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಇನಿಂಗ್ಸ್ ಆಡಲಿದ್ದಾರಾ? ಈ ಮೂಲಕ ಭಾರತ ತಂಡಕ್ಕೆ 2ನೇ ಗೆಲುವು ತಂದುಕೊಡಲಿದ್ದಾರಾ ಕಾದು ನೋಡಬೇಕಿದೆ.

ಅದರಂತೆ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಇನಿಂಗ್ಸ್ ಆಡಲಿದ್ದಾರಾ? ಈ ಮೂಲಕ ಭಾರತ ತಂಡಕ್ಕೆ 2ನೇ ಗೆಲುವು ತಂದುಕೊಡಲಿದ್ದಾರಾ ಕಾದು ನೋಡಬೇಕಿದೆ.

6 / 6

Published On - 12:54 pm, Sat, 21 December 24

Follow us
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು