Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಬರೋಬ್ಬರಿ 1673 ದಿನಗಳು…ಮುಂದುವರೆದ ಕಿಂಗ್ ಕೊಹ್ಲಿಯ ಶತಕದ ಕಾಯುವಿಕೆ..!

Virat Kohli's Records: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಸೆಂಚುರಿ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ವಿದೇಶಿ ನೆಲದಲ್ಲಿನ ತಮ್ಮ ಶತಕದ ಬರ ನೀಗಿಸಿಕೊಳ್ಳಲಿದ್ದಾರಾ?

TV9 Web
| Updated By: ಝಾಹಿರ್ ಯೂಸುಫ್

Updated on: Jul 15, 2023 | 10:09 PM

ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 141 ರನ್​ಗಳ ಅಮೋಘ ಗೆಲುವು ಸಾಧಿಸಿದೆ. ಈ ಜಯದೊಂದಿಗೆ 2 ಪಂದ್ಯಗಳ ಸರಣಿಯಲ್ಲಿ ಭಾರತ ತಂಡವು 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಇಬ್ಬರು ಆರಂಭಿಕರು ಶತಕ ಬಾರಿಸಿದ್ದು ವಿಶೇಷ.

ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 141 ರನ್​ಗಳ ಅಮೋಘ ಗೆಲುವು ಸಾಧಿಸಿದೆ. ಈ ಜಯದೊಂದಿಗೆ 2 ಪಂದ್ಯಗಳ ಸರಣಿಯಲ್ಲಿ ಭಾರತ ತಂಡವು 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಇಬ್ಬರು ಆರಂಭಿಕರು ಶತಕ ಬಾರಿಸಿದ್ದು ವಿಶೇಷ.

1 / 7
ಚೊಚ್ಚಲ ಪಂದ್ಯವಾಡಿದ ಯಶಸ್ವಿ ಜೈಸ್ವಾಲ್ 171 ರನ್ ಬಾರಿಸಿದರೆ, ರೋಹಿತ್ ಶರ್ಮಾ 103 ರನ್​ಗಳಿಸಿದರು. ಇನ್ನು ಟೀಮ್ ಇಂಡಿಯಾ ಪರ ಮೂರನೇ ಅತೀ ದೊಡ್ಡ ಸ್ಕೋರ್​ಗಳಿಸಿದ್ದು ವಿರಾಟ್ ಕೊಹ್ಲಿ.

ಚೊಚ್ಚಲ ಪಂದ್ಯವಾಡಿದ ಯಶಸ್ವಿ ಜೈಸ್ವಾಲ್ 171 ರನ್ ಬಾರಿಸಿದರೆ, ರೋಹಿತ್ ಶರ್ಮಾ 103 ರನ್​ಗಳಿಸಿದರು. ಇನ್ನು ಟೀಮ್ ಇಂಡಿಯಾ ಪರ ಮೂರನೇ ಅತೀ ದೊಡ್ಡ ಸ್ಕೋರ್​ಗಳಿಸಿದ್ದು ವಿರಾಟ್ ಕೊಹ್ಲಿ.

2 / 7
182 ಎಸೆತಗಳನ್ನು ಎದುರಿಸಿದ್ದ ವಿರಾಟ್ ಕೊಹ್ಲಿ 5 ಫೋರ್​ನೊಂದಿಗೆ 76 ರನ್ ಬಾರಿಸಿದ್ದರು. ಇತ್ತ ಕೊಹ್ಲಿಯು 75 ರನ್​ ದಾಟುತ್ತಿದ್ದಂತೆ ಅಭಿಮಾನಿಗಳು ಶತಕದ ನಿರೀಕ್ಷೆಯಲ್ಲಿದ್ದರು. ಆದರೆ ರಹಕೀಮ್ ಕಾರ್ನ್​ವಾಲ್ ಎಸೆತದಲ್ಲಿ ಅಥನಾಝ್​ಗೆ ಕ್ಯಾಚ್ ನೀಡುವ ಮೂಲಕ ವಿರಾಟ್ ಕೊಹ್ಲಿ ವಿಕೆಟ್ ಒಪ್ಪಿಸಿದ್ದರು.

182 ಎಸೆತಗಳನ್ನು ಎದುರಿಸಿದ್ದ ವಿರಾಟ್ ಕೊಹ್ಲಿ 5 ಫೋರ್​ನೊಂದಿಗೆ 76 ರನ್ ಬಾರಿಸಿದ್ದರು. ಇತ್ತ ಕೊಹ್ಲಿಯು 75 ರನ್​ ದಾಟುತ್ತಿದ್ದಂತೆ ಅಭಿಮಾನಿಗಳು ಶತಕದ ನಿರೀಕ್ಷೆಯಲ್ಲಿದ್ದರು. ಆದರೆ ರಹಕೀಮ್ ಕಾರ್ನ್​ವಾಲ್ ಎಸೆತದಲ್ಲಿ ಅಥನಾಝ್​ಗೆ ಕ್ಯಾಚ್ ನೀಡುವ ಮೂಲಕ ವಿರಾಟ್ ಕೊಹ್ಲಿ ವಿಕೆಟ್ ಒಪ್ಪಿಸಿದ್ದರು.

3 / 7
ಇದರೊಂದಿಗೆ ಕೇವಲ 24 ರನ್​ಗಳಿಂದ ವಿರಾಟ್ ಕೊಹ್ಲಿ ಶತಕ ವಂಚಿತರಾದರು. ಅದರಲ್ಲೂ ವಿರಾಟ್ ಕೊಹ್ಲಿಯ ಬ್ಯಾಟ್​ನಿಂದ ವಿದೇಶದಲ್ಲಿ ಟೆಸ್ಟ್​ ಶತಕ ಮೂಡಿಬಂದು 5 ವರ್ಷಗಳಾಗುತ್ತಾ ಬರುತ್ತಿದೆ.

ಇದರೊಂದಿಗೆ ಕೇವಲ 24 ರನ್​ಗಳಿಂದ ವಿರಾಟ್ ಕೊಹ್ಲಿ ಶತಕ ವಂಚಿತರಾದರು. ಅದರಲ್ಲೂ ವಿರಾಟ್ ಕೊಹ್ಲಿಯ ಬ್ಯಾಟ್​ನಿಂದ ವಿದೇಶದಲ್ಲಿ ಟೆಸ್ಟ್​ ಶತಕ ಮೂಡಿಬಂದು 5 ವರ್ಷಗಳಾಗುತ್ತಾ ಬರುತ್ತಿದೆ.

4 / 7
ಅಂದರೆ ಕೊನೆಯ ಬಾರಿ ಕಿಂಗ್ ಕೊಹ್ಲಿ ವಿದೇಶದಲ್ಲಿ ಟೆಸ್ಟ್ ಶತಕ ಬಾರಿಸಿದ್ದು 2018 ರಲ್ಲಿ. ಆಸ್ಟ್ರೇಲಿಯಾ ವಿರುದ್ಧದ ಆ ಪಂದ್ಯದಲ್ಲಿ 257 ಎಸೆತಗಳನ್ನು ಎದುರಿಸಿದ್ದ ಕೊಹ್ಲಿ 123 ರನ್ ಬಾರಿಸಿ ಅಬ್ಬರಿಸಿದ್ದರು.

ಅಂದರೆ ಕೊನೆಯ ಬಾರಿ ಕಿಂಗ್ ಕೊಹ್ಲಿ ವಿದೇಶದಲ್ಲಿ ಟೆಸ್ಟ್ ಶತಕ ಬಾರಿಸಿದ್ದು 2018 ರಲ್ಲಿ. ಆಸ್ಟ್ರೇಲಿಯಾ ವಿರುದ್ಧದ ಆ ಪಂದ್ಯದಲ್ಲಿ 257 ಎಸೆತಗಳನ್ನು ಎದುರಿಸಿದ್ದ ಕೊಹ್ಲಿ 123 ರನ್ ಬಾರಿಸಿ ಅಬ್ಬರಿಸಿದ್ದರು.

5 / 7
ಇದಾದ ಬಳಿಕ ವಿದೇಶದಲ್ಲಿ ವಿರಾಟ್ ಕೊಹ್ಲಿಯ ಬ್ಯಾಟ್​ನಿಂದ ಟೆಸ್ಟ್ ಶತಕ ಮೂಡಿಬಂದಿಲ್ಲ. ಅಂದರೆ ಭಾರತದ ಹೊರಗೆ ಕಿಂಗ್ ಕೊಹ್ಲಿ ಟೆಸ್ಟ್ ಸೆಂಚುರಿ ಸಿಡಿಸಿ ಬರೋಬ್ಬರಿ 1673 ದಿನಗಳು ಕಳೆದಿವೆ. ಇದೀಗ ವಿರಾಟ್ ಕೊಹ್ಲಿಯ ಮುಂದಿರುವುದು ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯ.

ಇದಾದ ಬಳಿಕ ವಿದೇಶದಲ್ಲಿ ವಿರಾಟ್ ಕೊಹ್ಲಿಯ ಬ್ಯಾಟ್​ನಿಂದ ಟೆಸ್ಟ್ ಶತಕ ಮೂಡಿಬಂದಿಲ್ಲ. ಅಂದರೆ ಭಾರತದ ಹೊರಗೆ ಕಿಂಗ್ ಕೊಹ್ಲಿ ಟೆಸ್ಟ್ ಸೆಂಚುರಿ ಸಿಡಿಸಿ ಬರೋಬ್ಬರಿ 1673 ದಿನಗಳು ಕಳೆದಿವೆ. ಇದೀಗ ವಿರಾಟ್ ಕೊಹ್ಲಿಯ ಮುಂದಿರುವುದು ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯ.

6 / 7
ಜುಲೈ 20 ರಿಂದ ಶುರುವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಸೆಂಚುರಿ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ವಿದೇಶಿ ನೆಲದಲ್ಲಿನ ತಮ್ಮ ಶತಕದ ಬರ ನೀಗಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

ಜುಲೈ 20 ರಿಂದ ಶುರುವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಸೆಂಚುರಿ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ವಿದೇಶಿ ನೆಲದಲ್ಲಿನ ತಮ್ಮ ಶತಕದ ಬರ ನೀಗಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

7 / 7
Follow us
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ