AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

17 ಸಿಕ್ಸ್​ಗಳೊಂದಿಗೆ ದಾಖಲೆಯ ಶತಕ ಸಿಡಿಸಿದ ವಿಷ್ಣು ವಿನೋದ್

Vishnu Vinod: ವಿಷ್ಣು ವಿನೋದ್ ಐಪಿಎಲ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದರು. ಐಪಿಎಲ್ 2017 ರಲ್ಲಿ ಆರ್​ಸಿಬಿ ತಂಡದಲ್ಲಿದ್ದ ವಿಷ್ಣು, ಆ ಬಳಿಕ ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದಿದ್ದಾರೆ. ಇದೀಗ ಕೆಸಿಎಲ್​ ಟಿ20 ಲೀಗ್​ನಲ್ಲಿ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಅಬ್ಬರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 17, 2024 | 9:04 AM

Share
ತಿರುವನಂತಪುರದಲ್ಲಿ ನಡೆಯುತ್ತಿರುವ ಕೇರಳ ಕ್ರಿಕೆಟ್ ಲೀಗ್ ಟಿ20 ಟೂರ್ನಿಯಲ್ಲಿ ವಿಷ್ಣು ವಿನೋದ್ ದಾಖಲೆಯ ಶತಕ ಸಿಡಿಸಿದ್ದಾರೆ. ಅದು ಸಹ ಕೇವಲ 32 ಎಸೆತಗಳಲ್ಲಿ ಎಂಬುದು ವಿಶೇಷ. ಗ್ರೀನ್​ಫೀಲ್ಡ್ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ತ್ರಿಶೂರ್ ಟೈಟಾನ್ಸ್ ಹಾಗೂ ಅಲೆಪ್ಪಿ ರಿಪ್ಪಲ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ತಿರುವನಂತಪುರದಲ್ಲಿ ನಡೆಯುತ್ತಿರುವ ಕೇರಳ ಕ್ರಿಕೆಟ್ ಲೀಗ್ ಟಿ20 ಟೂರ್ನಿಯಲ್ಲಿ ವಿಷ್ಣು ವಿನೋದ್ ದಾಖಲೆಯ ಶತಕ ಸಿಡಿಸಿದ್ದಾರೆ. ಅದು ಸಹ ಕೇವಲ 32 ಎಸೆತಗಳಲ್ಲಿ ಎಂಬುದು ವಿಶೇಷ. ಗ್ರೀನ್​ಫೀಲ್ಡ್ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ತ್ರಿಶೂರ್ ಟೈಟಾನ್ಸ್ ಹಾಗೂ ಅಲೆಪ್ಪಿ ರಿಪ್ಪಲ್ಸ್ ತಂಡಗಳು ಮುಖಾಮುಖಿಯಾಗಿದ್ದವು.

1 / 6
ಈ ಪಂದ್ಯದಲ್ಲಿ ಟಾಸ್ ಜಯಿಸಿದ ತ್ರಿಶೂರ್ ಟೈಟಾನ್ಸ್ ತಂಡವು ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಲೆಪ್ಪಿ ರಿಪ್ಪಲ್ಸ್ ಪರ ನಾಯಕ ಮೊಹಮ್ಮದ್ ಅಝರುದ್ದೀನ್ 53 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 90 ರನ್​ ಸಿಡಿಸಿದರು. ಇನ್ನು ಕೃಷ್ಣ ಪ್ರಸಾದ್ 43 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಅಲೆಪ್ಪಿ ರಿಪ್ಪಲ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 181 ರನ್ ಕಲೆಹಾಕಿತು.

ಈ ಪಂದ್ಯದಲ್ಲಿ ಟಾಸ್ ಜಯಿಸಿದ ತ್ರಿಶೂರ್ ಟೈಟಾನ್ಸ್ ತಂಡವು ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಲೆಪ್ಪಿ ರಿಪ್ಪಲ್ಸ್ ಪರ ನಾಯಕ ಮೊಹಮ್ಮದ್ ಅಝರುದ್ದೀನ್ 53 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 90 ರನ್​ ಸಿಡಿಸಿದರು. ಇನ್ನು ಕೃಷ್ಣ ಪ್ರಸಾದ್ 43 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಅಲೆಪ್ಪಿ ರಿಪ್ಪಲ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 181 ರನ್ ಕಲೆಹಾಕಿತು.

2 / 6
182 ರನ್​ಗಳ ಕಠಿಣ ಗುರಿ ಬೆನ್ನತ್ತಿದ ತ್ರಿಶೂರ್ ಟೈಟಾನ್ಸ್ ತಂಡಕ್ಕೆ ಆರಂಭಿಕ ಆಟಗಾರ ವಿಷ್ಣು ವಿನೋದ್ ಸ್ಪೋಟಕ ಆರಂಭ ಒದಗಿಸಿದರು. ಮೊದಲ ಓವರ್​ನಿಂದಲೇ ಅಬ್ಬರಿಸಲಾರಂಭಿಸಿದ ವಿಷ್ಣು, ಅಲೆಪ್ಪಿ ಬೌಲರ್​ಗಳ ಬೆಂಡೆತ್ತುವ ಮೂಲಕ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಪರಿಣಾಮ ವಿಷ್ಣು ವಿನೋದ್ ಬ್ಯಾಟ್​ನಿಂದ ಕೇವಲ 32 ಎಸೆತಗಳಲ್ಲಿ ಶತಕ ಮೂಡಿಬಂತು.

182 ರನ್​ಗಳ ಕಠಿಣ ಗುರಿ ಬೆನ್ನತ್ತಿದ ತ್ರಿಶೂರ್ ಟೈಟಾನ್ಸ್ ತಂಡಕ್ಕೆ ಆರಂಭಿಕ ಆಟಗಾರ ವಿಷ್ಣು ವಿನೋದ್ ಸ್ಪೋಟಕ ಆರಂಭ ಒದಗಿಸಿದರು. ಮೊದಲ ಓವರ್​ನಿಂದಲೇ ಅಬ್ಬರಿಸಲಾರಂಭಿಸಿದ ವಿಷ್ಣು, ಅಲೆಪ್ಪಿ ಬೌಲರ್​ಗಳ ಬೆಂಡೆತ್ತುವ ಮೂಲಕ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಪರಿಣಾಮ ವಿಷ್ಣು ವಿನೋದ್ ಬ್ಯಾಟ್​ನಿಂದ ಕೇವಲ 32 ಎಸೆತಗಳಲ್ಲಿ ಶತಕ ಮೂಡಿಬಂತು.

3 / 6
ಈ ಶತಕದ ಬಳಿಕವು ಆರ್ಭಟ ಮುಂದುವರೆಸಿದ ವಿಷ್ಣು ವಿನೋದ್ 45 ಎಸೆತಗಳಲ್ಲಿ 17 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 139 ರನ್​ ಚಚ್ಚಿದರು. ಈ ಸ್ಪೋಟಕ ಸೆಂಚುರಿ ನೆರವಿನಿಂದ ತ್ರಿಶೂರ್ ಟೈಟಾನ್ಸ್ ತಂಡವು  12.4 ಓವರ್​ಗಳಲ್ಲಿ 187 ರನ್​ ಬಾರಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಈ ಶತಕದ ಬಳಿಕವು ಆರ್ಭಟ ಮುಂದುವರೆಸಿದ ವಿಷ್ಣು ವಿನೋದ್ 45 ಎಸೆತಗಳಲ್ಲಿ 17 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 139 ರನ್​ ಚಚ್ಚಿದರು. ಈ ಸ್ಪೋಟಕ ಸೆಂಚುರಿ ನೆರವಿನಿಂದ ತ್ರಿಶೂರ್ ಟೈಟಾನ್ಸ್ ತಂಡವು  12.4 ಓವರ್​ಗಳಲ್ಲಿ 187 ರನ್​ ಬಾರಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

4 / 6
ವಿಶೇಷ ಎಂದರೆ 32 ಎಸೆತಗಳಲ್ಲಿ ಸೆಂಚುರಿ ಸಿಡಿಸುವ ಮೂಲಕ ವಿಷ್ಣು ವಿನೋದ್ ಟಿ20 ಕ್ರಿಕೆಟ್​ನಲ್ಲಿ ಸ್ಪೋಟಕ ಶತಕ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ರಿಷಭ್ ಪಂತ್ ಹೆಸರಿನಲ್ಲಿತ್ತು. 2018 ರ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಪಂತ್ 32 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದರು. ಇದೀಗ ಈ ದಾಖಲೆಯನ್ನು ವಿಷ್ಣು ವಿನೋದ್ ಸರಿಗಟ್ಟಿದ್ದಾರೆ.

ವಿಶೇಷ ಎಂದರೆ 32 ಎಸೆತಗಳಲ್ಲಿ ಸೆಂಚುರಿ ಸಿಡಿಸುವ ಮೂಲಕ ವಿಷ್ಣು ವಿನೋದ್ ಟಿ20 ಕ್ರಿಕೆಟ್​ನಲ್ಲಿ ಸ್ಪೋಟಕ ಶತಕ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ರಿಷಭ್ ಪಂತ್ ಹೆಸರಿನಲ್ಲಿತ್ತು. 2018 ರ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಪಂತ್ 32 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದರು. ಇದೀಗ ಈ ದಾಖಲೆಯನ್ನು ವಿಷ್ಣು ವಿನೋದ್ ಸರಿಗಟ್ಟಿದ್ದಾರೆ.

5 / 6
ಅಂದಹಾಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಭಾರತದ ಪರ ಅತೀ ವೇಗದ ಶತಕ ಸಿಡಿಸಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. 2017 ರಲ್ಲಿ ಶ್ರೀಲಂಕಾ ವಿರುದ್ಧ ಹಿಟ್​ಮ್ಯಾನ್ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದರು. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಂತ ವೇಗದ ಶತಕ ಬಾರಿಸಿದ ದಾಖಲೆ ನಿರ್ಮಿಸಿದ್ದಾರೆ.

ಅಂದಹಾಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಭಾರತದ ಪರ ಅತೀ ವೇಗದ ಶತಕ ಸಿಡಿಸಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. 2017 ರಲ್ಲಿ ಶ್ರೀಲಂಕಾ ವಿರುದ್ಧ ಹಿಟ್​ಮ್ಯಾನ್ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದರು. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಂತ ವೇಗದ ಶತಕ ಬಾರಿಸಿದ ದಾಖಲೆ ನಿರ್ಮಿಸಿದ್ದಾರೆ.

6 / 6
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು