AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

17 ಸಿಕ್ಸ್​ಗಳೊಂದಿಗೆ ದಾಖಲೆಯ ಶತಕ ಸಿಡಿಸಿದ ವಿಷ್ಣು ವಿನೋದ್

Vishnu Vinod: ವಿಷ್ಣು ವಿನೋದ್ ಐಪಿಎಲ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದರು. ಐಪಿಎಲ್ 2017 ರಲ್ಲಿ ಆರ್​ಸಿಬಿ ತಂಡದಲ್ಲಿದ್ದ ವಿಷ್ಣು, ಆ ಬಳಿಕ ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದಿದ್ದಾರೆ. ಇದೀಗ ಕೆಸಿಎಲ್​ ಟಿ20 ಲೀಗ್​ನಲ್ಲಿ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಅಬ್ಬರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 17, 2024 | 9:04 AM

Share
ತಿರುವನಂತಪುರದಲ್ಲಿ ನಡೆಯುತ್ತಿರುವ ಕೇರಳ ಕ್ರಿಕೆಟ್ ಲೀಗ್ ಟಿ20 ಟೂರ್ನಿಯಲ್ಲಿ ವಿಷ್ಣು ವಿನೋದ್ ದಾಖಲೆಯ ಶತಕ ಸಿಡಿಸಿದ್ದಾರೆ. ಅದು ಸಹ ಕೇವಲ 32 ಎಸೆತಗಳಲ್ಲಿ ಎಂಬುದು ವಿಶೇಷ. ಗ್ರೀನ್​ಫೀಲ್ಡ್ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ತ್ರಿಶೂರ್ ಟೈಟಾನ್ಸ್ ಹಾಗೂ ಅಲೆಪ್ಪಿ ರಿಪ್ಪಲ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ತಿರುವನಂತಪುರದಲ್ಲಿ ನಡೆಯುತ್ತಿರುವ ಕೇರಳ ಕ್ರಿಕೆಟ್ ಲೀಗ್ ಟಿ20 ಟೂರ್ನಿಯಲ್ಲಿ ವಿಷ್ಣು ವಿನೋದ್ ದಾಖಲೆಯ ಶತಕ ಸಿಡಿಸಿದ್ದಾರೆ. ಅದು ಸಹ ಕೇವಲ 32 ಎಸೆತಗಳಲ್ಲಿ ಎಂಬುದು ವಿಶೇಷ. ಗ್ರೀನ್​ಫೀಲ್ಡ್ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ತ್ರಿಶೂರ್ ಟೈಟಾನ್ಸ್ ಹಾಗೂ ಅಲೆಪ್ಪಿ ರಿಪ್ಪಲ್ಸ್ ತಂಡಗಳು ಮುಖಾಮುಖಿಯಾಗಿದ್ದವು.

1 / 6
ಈ ಪಂದ್ಯದಲ್ಲಿ ಟಾಸ್ ಜಯಿಸಿದ ತ್ರಿಶೂರ್ ಟೈಟಾನ್ಸ್ ತಂಡವು ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಲೆಪ್ಪಿ ರಿಪ್ಪಲ್ಸ್ ಪರ ನಾಯಕ ಮೊಹಮ್ಮದ್ ಅಝರುದ್ದೀನ್ 53 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 90 ರನ್​ ಸಿಡಿಸಿದರು. ಇನ್ನು ಕೃಷ್ಣ ಪ್ರಸಾದ್ 43 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಅಲೆಪ್ಪಿ ರಿಪ್ಪಲ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 181 ರನ್ ಕಲೆಹಾಕಿತು.

ಈ ಪಂದ್ಯದಲ್ಲಿ ಟಾಸ್ ಜಯಿಸಿದ ತ್ರಿಶೂರ್ ಟೈಟಾನ್ಸ್ ತಂಡವು ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಲೆಪ್ಪಿ ರಿಪ್ಪಲ್ಸ್ ಪರ ನಾಯಕ ಮೊಹಮ್ಮದ್ ಅಝರುದ್ದೀನ್ 53 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 90 ರನ್​ ಸಿಡಿಸಿದರು. ಇನ್ನು ಕೃಷ್ಣ ಪ್ರಸಾದ್ 43 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಅಲೆಪ್ಪಿ ರಿಪ್ಪಲ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 181 ರನ್ ಕಲೆಹಾಕಿತು.

2 / 6
182 ರನ್​ಗಳ ಕಠಿಣ ಗುರಿ ಬೆನ್ನತ್ತಿದ ತ್ರಿಶೂರ್ ಟೈಟಾನ್ಸ್ ತಂಡಕ್ಕೆ ಆರಂಭಿಕ ಆಟಗಾರ ವಿಷ್ಣು ವಿನೋದ್ ಸ್ಪೋಟಕ ಆರಂಭ ಒದಗಿಸಿದರು. ಮೊದಲ ಓವರ್​ನಿಂದಲೇ ಅಬ್ಬರಿಸಲಾರಂಭಿಸಿದ ವಿಷ್ಣು, ಅಲೆಪ್ಪಿ ಬೌಲರ್​ಗಳ ಬೆಂಡೆತ್ತುವ ಮೂಲಕ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಪರಿಣಾಮ ವಿಷ್ಣು ವಿನೋದ್ ಬ್ಯಾಟ್​ನಿಂದ ಕೇವಲ 32 ಎಸೆತಗಳಲ್ಲಿ ಶತಕ ಮೂಡಿಬಂತು.

182 ರನ್​ಗಳ ಕಠಿಣ ಗುರಿ ಬೆನ್ನತ್ತಿದ ತ್ರಿಶೂರ್ ಟೈಟಾನ್ಸ್ ತಂಡಕ್ಕೆ ಆರಂಭಿಕ ಆಟಗಾರ ವಿಷ್ಣು ವಿನೋದ್ ಸ್ಪೋಟಕ ಆರಂಭ ಒದಗಿಸಿದರು. ಮೊದಲ ಓವರ್​ನಿಂದಲೇ ಅಬ್ಬರಿಸಲಾರಂಭಿಸಿದ ವಿಷ್ಣು, ಅಲೆಪ್ಪಿ ಬೌಲರ್​ಗಳ ಬೆಂಡೆತ್ತುವ ಮೂಲಕ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಪರಿಣಾಮ ವಿಷ್ಣು ವಿನೋದ್ ಬ್ಯಾಟ್​ನಿಂದ ಕೇವಲ 32 ಎಸೆತಗಳಲ್ಲಿ ಶತಕ ಮೂಡಿಬಂತು.

3 / 6
ಈ ಶತಕದ ಬಳಿಕವು ಆರ್ಭಟ ಮುಂದುವರೆಸಿದ ವಿಷ್ಣು ವಿನೋದ್ 45 ಎಸೆತಗಳಲ್ಲಿ 17 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 139 ರನ್​ ಚಚ್ಚಿದರು. ಈ ಸ್ಪೋಟಕ ಸೆಂಚುರಿ ನೆರವಿನಿಂದ ತ್ರಿಶೂರ್ ಟೈಟಾನ್ಸ್ ತಂಡವು  12.4 ಓವರ್​ಗಳಲ್ಲಿ 187 ರನ್​ ಬಾರಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಈ ಶತಕದ ಬಳಿಕವು ಆರ್ಭಟ ಮುಂದುವರೆಸಿದ ವಿಷ್ಣು ವಿನೋದ್ 45 ಎಸೆತಗಳಲ್ಲಿ 17 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 139 ರನ್​ ಚಚ್ಚಿದರು. ಈ ಸ್ಪೋಟಕ ಸೆಂಚುರಿ ನೆರವಿನಿಂದ ತ್ರಿಶೂರ್ ಟೈಟಾನ್ಸ್ ತಂಡವು  12.4 ಓವರ್​ಗಳಲ್ಲಿ 187 ರನ್​ ಬಾರಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

4 / 6
ವಿಶೇಷ ಎಂದರೆ 32 ಎಸೆತಗಳಲ್ಲಿ ಸೆಂಚುರಿ ಸಿಡಿಸುವ ಮೂಲಕ ವಿಷ್ಣು ವಿನೋದ್ ಟಿ20 ಕ್ರಿಕೆಟ್​ನಲ್ಲಿ ಸ್ಪೋಟಕ ಶತಕ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ರಿಷಭ್ ಪಂತ್ ಹೆಸರಿನಲ್ಲಿತ್ತು. 2018 ರ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಪಂತ್ 32 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದರು. ಇದೀಗ ಈ ದಾಖಲೆಯನ್ನು ವಿಷ್ಣು ವಿನೋದ್ ಸರಿಗಟ್ಟಿದ್ದಾರೆ.

ವಿಶೇಷ ಎಂದರೆ 32 ಎಸೆತಗಳಲ್ಲಿ ಸೆಂಚುರಿ ಸಿಡಿಸುವ ಮೂಲಕ ವಿಷ್ಣು ವಿನೋದ್ ಟಿ20 ಕ್ರಿಕೆಟ್​ನಲ್ಲಿ ಸ್ಪೋಟಕ ಶತಕ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ರಿಷಭ್ ಪಂತ್ ಹೆಸರಿನಲ್ಲಿತ್ತು. 2018 ರ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಪಂತ್ 32 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದರು. ಇದೀಗ ಈ ದಾಖಲೆಯನ್ನು ವಿಷ್ಣು ವಿನೋದ್ ಸರಿಗಟ್ಟಿದ್ದಾರೆ.

5 / 6
ಅಂದಹಾಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಭಾರತದ ಪರ ಅತೀ ವೇಗದ ಶತಕ ಸಿಡಿಸಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. 2017 ರಲ್ಲಿ ಶ್ರೀಲಂಕಾ ವಿರುದ್ಧ ಹಿಟ್​ಮ್ಯಾನ್ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದರು. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಂತ ವೇಗದ ಶತಕ ಬಾರಿಸಿದ ದಾಖಲೆ ನಿರ್ಮಿಸಿದ್ದಾರೆ.

ಅಂದಹಾಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಭಾರತದ ಪರ ಅತೀ ವೇಗದ ಶತಕ ಸಿಡಿಸಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. 2017 ರಲ್ಲಿ ಶ್ರೀಲಂಕಾ ವಿರುದ್ಧ ಹಿಟ್​ಮ್ಯಾನ್ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದರು. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಂತ ವೇಗದ ಶತಕ ಬಾರಿಸಿದ ದಾಖಲೆ ನಿರ್ಮಿಸಿದ್ದಾರೆ.

6 / 6
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ