AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಒಂದು ಎಸೆತವನ್ನು ಎದುರಿಸದೇ ಫೈನಲ್​ಗೆ ಪ್ರವೇಶಿಸಿದ ವಾಷಿಂಗ್ಟನ್ ಫ್ರೀಡಂ

Major League Cricket 2025: ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟಿ20 ಟೂರ್ನಿಯ ಫೈನಲ್​ಗೆ ಗ್ಲೆನ್ ಮ್ಯಾಕ್ಸ್​ವೆಲ್​ ನೇತೃತ್ವದ ವಾಷಿಂಗ್ಟನ್ ಫ್ರೀಡಂ ತಂಡ ಎಂಟ್ರಿ ಕೊಟ್ಟಿದೆ. ಈ ಟೂರ್ನಿಯ ಪ್ಲೇಆಫ್ ಪಂದ್ಯಗಳಿಗೆ ಮೀಸಲು ದಿನ ನಿಗದಿ ಮಾಡಲಾಗಿಲ್ಲ. ಇದು ವಾಷಿಂಗ್ಟನ್ ಫ್ರೀಡಂ ತಂಡದ ಪಾಲಿಗೆ ವರದಾನವಾಗಿ ಪರಿಣಮಿಸಿತು.

ಝಾಹಿರ್ ಯೂಸುಫ್
|

Updated on: Jul 09, 2025 | 9:03 AM

Share
ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್​ ಕ್ರಿಕೆಟ್ ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಡಲ್ಲಾಸ್​ನ ಗ್ರ್ಯಾಂಡ್ ಪ್ರೈರಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಈ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಂ ಹಾಗೂ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಅದರಂತೆ ಟಾಸ್ ಗೆದ್ದ ವಾಷಿಂಗ್ಟನ್ ಫ್ರೀಡಂ ತಂಡದ ನಾಯಕ ಗ್ಲೆನ್ ಮ್ಯಾಕ್ಸ್​ವೆಲ್ ಬೌಲಿಂಗ್ ಆಯ್ದುಕೊಂಡಿದ್ದರು.

ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್​ ಕ್ರಿಕೆಟ್ ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಡಲ್ಲಾಸ್​ನ ಗ್ರ್ಯಾಂಡ್ ಪ್ರೈರಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಈ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಂ ಹಾಗೂ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಅದರಂತೆ ಟಾಸ್ ಗೆದ್ದ ವಾಷಿಂಗ್ಟನ್ ಫ್ರೀಡಂ ತಂಡದ ನಾಯಕ ಗ್ಲೆನ್ ಮ್ಯಾಕ್ಸ್​ವೆಲ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 5
ಟಾಸ್ ಪ್ರಕ್ರಿಯೆಯ ಬೆನ್ನಲ್ಲೇ ಸುರಿದ ಭಾರೀ ಮಳೆಯಿಂದಾಗಿ ಗ್ರ್ಯಾಂಡ್ ಪ್ರೈರಿ ಮೈದಾನವು ಸಂಪೂರ್ಣ ಒದ್ದೆಯಾಗಿದೆ. ಹೀಗಾಗಿ ಮೊದಲ ಕ್ವಾಲಿಫೈಯರ್ ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ. ಅತ್ತ ಪಂದ್ಯ ರದ್ದಾಗಿದ್ದರಿಂದ ಲೀಗ್ ಹಂತದ ಮ್ಯಾಚ್​ಗಳ ಮುಕ್ತಾಯದ ವೇಳೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ವಾಷಿಂಗ್ಟನ್ ಫ್ರೀಡಂ ತಂಡವು ನೇರವಾಗಿ ಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ.

ಟಾಸ್ ಪ್ರಕ್ರಿಯೆಯ ಬೆನ್ನಲ್ಲೇ ಸುರಿದ ಭಾರೀ ಮಳೆಯಿಂದಾಗಿ ಗ್ರ್ಯಾಂಡ್ ಪ್ರೈರಿ ಮೈದಾನವು ಸಂಪೂರ್ಣ ಒದ್ದೆಯಾಗಿದೆ. ಹೀಗಾಗಿ ಮೊದಲ ಕ್ವಾಲಿಫೈಯರ್ ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ. ಅತ್ತ ಪಂದ್ಯ ರದ್ದಾಗಿದ್ದರಿಂದ ಲೀಗ್ ಹಂತದ ಮ್ಯಾಚ್​ಗಳ ಮುಕ್ತಾಯದ ವೇಳೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ವಾಷಿಂಗ್ಟನ್ ಫ್ರೀಡಂ ತಂಡವು ನೇರವಾಗಿ ಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ.

2 / 5
ಇನ್ನು ಫಾಫ್ ಡುಪ್ಲೆಸಿಸ್ ನೇತೃತ್ವದ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡವು ದ್ವಿತೀಯ ಕ್ವಾಲಿಫೈಯರ್ ಪಂದ್ಯವಾಡಬೇಕಿದೆ. ಈ ಪಂದ್ಯವು ಜುಲೈ 11 ರಂದು ನಡೆಯಲಿದೆ. ಈ ನಿರ್ಣಾಯಕ ಮ್ಯಾಚ್​ನಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್ ಹಾಗೂ ಸಿಯಾಟಲ್ ಓರ್ಕಾಸ್ ಅಥವಾ ಎಂಐ ನ್ಯೂಯಾರ್ಕ್​ ತಂಡವನ್ನು ಎದುರಿಸಲಿದೆ.

ಇನ್ನು ಫಾಫ್ ಡುಪ್ಲೆಸಿಸ್ ನೇತೃತ್ವದ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡವು ದ್ವಿತೀಯ ಕ್ವಾಲಿಫೈಯರ್ ಪಂದ್ಯವಾಡಬೇಕಿದೆ. ಈ ಪಂದ್ಯವು ಜುಲೈ 11 ರಂದು ನಡೆಯಲಿದೆ. ಈ ನಿರ್ಣಾಯಕ ಮ್ಯಾಚ್​ನಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್ ಹಾಗೂ ಸಿಯಾಟಲ್ ಓರ್ಕಾಸ್ ಅಥವಾ ಎಂಐ ನ್ಯೂಯಾರ್ಕ್​ ತಂಡವನ್ನು ಎದುರಿಸಲಿದೆ.

3 / 5
ಸಿಯಾಟಲ್ ಓರ್ಕಾಸ್ ಹಾಗೂ ಎಂಐ ನ್ಯೂಯಾರ್ಕ್​ ತಂಡಗಳು ನಾಳೆ (ಜುಲೈ 10) ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಡಲ್ಲಾಸ್​ನ ಗ್ರ್ಯಾಂಡ್ ಪ್ರೈರಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ದ್ವಿತೀಯ ಕ್ವಾಲಿಫೈಯರ್​ ಪಂದ್ಯಕ್ಕೆ ಅರ್ಹತೆ ಪಡೆಯಲಿದೆ. ಹಾಗೆಯೇ ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದೆ.

ಸಿಯಾಟಲ್ ಓರ್ಕಾಸ್ ಹಾಗೂ ಎಂಐ ನ್ಯೂಯಾರ್ಕ್​ ತಂಡಗಳು ನಾಳೆ (ಜುಲೈ 10) ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಡಲ್ಲಾಸ್​ನ ಗ್ರ್ಯಾಂಡ್ ಪ್ರೈರಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ದ್ವಿತೀಯ ಕ್ವಾಲಿಫೈಯರ್​ ಪಂದ್ಯಕ್ಕೆ ಅರ್ಹತೆ ಪಡೆಯಲಿದೆ. ಹಾಗೆಯೇ ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದೆ.

4 / 5
ಇನ್ನು ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯವು ಜುಲೈ 13 ರಂದು ಭಾನುವಾರ ನಡೆಯಲಿದ್ದು, ಈ ಪಂದ್ಯಕ್ಕೂ ಡಲ್ಲಾಸ್​ನ ಗ್ರ್ಯಾಂಡ್ ಪ್ರೈರಿ ಕ್ರೀಡಾಂಗಣ ಆತಿಥ್ಯವಹಿಸಲಿದೆ. ಈ ಅಂತಿಮ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಂ ವಿರುದ್ಧ ಕಣಕ್ಕಿಳಿಯುವ ತಂಡ ಯಾವುದೆಂಬುದು ಜುಲೈ 11 ರಂದು ನಿರ್ಧಾರವಾಗಲಿದೆ.

ಇನ್ನು ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯವು ಜುಲೈ 13 ರಂದು ಭಾನುವಾರ ನಡೆಯಲಿದ್ದು, ಈ ಪಂದ್ಯಕ್ಕೂ ಡಲ್ಲಾಸ್​ನ ಗ್ರ್ಯಾಂಡ್ ಪ್ರೈರಿ ಕ್ರೀಡಾಂಗಣ ಆತಿಥ್ಯವಹಿಸಲಿದೆ. ಈ ಅಂತಿಮ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಂ ವಿರುದ್ಧ ಕಣಕ್ಕಿಳಿಯುವ ತಂಡ ಯಾವುದೆಂಬುದು ಜುಲೈ 11 ರಂದು ನಿರ್ಧಾರವಾಗಲಿದೆ.

5 / 5
Follow Us
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ