AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಚೊಚ್ಚಲ ಶತಕ ಬಾರಿಸಿ ತಂಡವನ್ನು ಸೋಲಿನಿಂದ ಪಾರು ಮಾಡಿದ ಸುಂದರ್

Washington Sundar's Maiden Test Century: ಮ್ಯಾಂಚೆಸ್ಟರ್‌ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯವನ್ನು ಭಾರತ ತಂಡ ಡ್ರಾ ಮಾಡುವಲ್ಲಿ ಯಶಸ್ವಿಯಾಗಿದೆ. ವಾಷಿಂಗ್ಟನ್ ಸುಂದರ್ ಅವರ ಅದ್ಭುತ ಅಜೇಯ ಶತಕ ಮತ್ತು ಜಡೇಜಾರೊಂದಿಗಿನ ಅಜೇಯ ಜೊತೆಯಾಟ ಇದಕ್ಕೆ ಪ್ರಮುಖ ಕಾರಣ. ಇದು ಸುಂದರ್‌ರ ಅವರ ವೃತ್ತಿಜೀವನದ ಚೊಚ್ಚಲ ಶತಕವಾಗಿದೆ.

ಪೃಥ್ವಿಶಂಕರ
|

Updated on: Jul 27, 2025 | 11:00 PM

Share
ಮ್ಯಾಂಚೆಸ್ಟರ್ ಟೆಸ್ಟ್‌ ಪಂದ್ಯವನ್ನು ಡ್ರಾದಲ್ಲಿ ಕೊನೆಗೊಳಿಸುವಲ್ಲಿ ಟೀಂ ಇಂಡಿಯಾ ಕೊನೆಗೂ ಯಶಸ್ವಿಯಾಗಿದೆ. ತಂಡವನ್ನು ಸೋಲಿನಿಂದ ಪಾರು ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ ಯುವ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಬೌಲಿಂಗ್​​ನಲ್ಲಿ ಮಾತ್ರವಲ್ಲದೆ ಬ್ಯಾಟಿಂಗ್​​ನಲ್ಲೂ ಸ್ಮರಣಿಯ ಶತಕ ಸಿಡಿಸಿ ತಂಡವನ್ನು ಸೋಲಿನ ದವಡೆಯಿಂದ ಹೊರ ತಂದರು.

ಮ್ಯಾಂಚೆಸ್ಟರ್ ಟೆಸ್ಟ್‌ ಪಂದ್ಯವನ್ನು ಡ್ರಾದಲ್ಲಿ ಕೊನೆಗೊಳಿಸುವಲ್ಲಿ ಟೀಂ ಇಂಡಿಯಾ ಕೊನೆಗೂ ಯಶಸ್ವಿಯಾಗಿದೆ. ತಂಡವನ್ನು ಸೋಲಿನಿಂದ ಪಾರು ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ ಯುವ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಬೌಲಿಂಗ್​​ನಲ್ಲಿ ಮಾತ್ರವಲ್ಲದೆ ಬ್ಯಾಟಿಂಗ್​​ನಲ್ಲೂ ಸ್ಮರಣಿಯ ಶತಕ ಸಿಡಿಸಿ ತಂಡವನ್ನು ಸೋಲಿನ ದವಡೆಯಿಂದ ಹೊರ ತಂದರು.

1 / 6
ರವೀಂದ್ರ ಜಡೇಜಾ ಅವರೊಂದಿಗೆ 200 ಕ್ಕೂ ಹೆಚ್ಚು ರನ್​ಗಳ ಅಜೇಯ ಜೊತೆಯಾಟ ಕಟ್ಟಿದ ಸುಂದರ್, ತಮ್ಮ ಟೆಸ್ಟ್ ವೃತ್ತಿಜೀವನದ ಮೊದಲ ಶತಕ ಬಾರಿಸುವಲ್ಲಿಯೂ ಯಶಸ್ವಿಯಾದರು. ಈ ಶತಕವು ಅವರ ವೃತ್ತಿಜೀವನದಲ್ಲಿ ಒಂದು ಪ್ರಮುಖ ಮೈಲಿಗಲ್ಲು ಮಾತ್ರವಲ್ಲದೆ , ಭಾರತೀಯ ತಂಡಕ್ಕೆ ಒಂದು ಮಹತ್ವದ ತಿರುವು ಎಂದು ಸಾಬೀತಾಯಿತು.

ರವೀಂದ್ರ ಜಡೇಜಾ ಅವರೊಂದಿಗೆ 200 ಕ್ಕೂ ಹೆಚ್ಚು ರನ್​ಗಳ ಅಜೇಯ ಜೊತೆಯಾಟ ಕಟ್ಟಿದ ಸುಂದರ್, ತಮ್ಮ ಟೆಸ್ಟ್ ವೃತ್ತಿಜೀವನದ ಮೊದಲ ಶತಕ ಬಾರಿಸುವಲ್ಲಿಯೂ ಯಶಸ್ವಿಯಾದರು. ಈ ಶತಕವು ಅವರ ವೃತ್ತಿಜೀವನದಲ್ಲಿ ಒಂದು ಪ್ರಮುಖ ಮೈಲಿಗಲ್ಲು ಮಾತ್ರವಲ್ಲದೆ , ಭಾರತೀಯ ತಂಡಕ್ಕೆ ಒಂದು ಮಹತ್ವದ ತಿರುವು ಎಂದು ಸಾಬೀತಾಯಿತು.

2 / 6
ಎರಡನೇ ಇನ್ನಿಂಗ್ಸ್‌ನಲ್ಲಿ ಗಾಯಗೊಂಡಿದ್ದ ರಿಷಭ್ ಪಂತ್ ಬದಲಿಗೆ ಬ್ಯಾಟಿಂಗ್​ನಲ್ಲಿ ಬಡ್ತಿ ಪಡೆದು ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ವಾಷಿಂಗ್ಟನ್ ಸುಂದರ್, ಈ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಂಡು ಸ್ಮರಣೀಯ ಇನ್ನಿಂಗ್ಸ್ ಆಡಿದರು. ವಾಷಿಂಗ್ಟನ್ ಸುಂದರ್ ಬ್ಯಾಟಿಂಗ್‌ಗೆ ಬಂದಾಗ, ಟೀಂ ಇಂಡಿಯಾ 188 ರನ್‌ಗಳಿಗೆ 3 ವಿಕೆಟ್‌ಗಳನ್ನು ಕಳೆದುಕೊಂಡಿತ್ತು.

ಎರಡನೇ ಇನ್ನಿಂಗ್ಸ್‌ನಲ್ಲಿ ಗಾಯಗೊಂಡಿದ್ದ ರಿಷಭ್ ಪಂತ್ ಬದಲಿಗೆ ಬ್ಯಾಟಿಂಗ್​ನಲ್ಲಿ ಬಡ್ತಿ ಪಡೆದು ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ವಾಷಿಂಗ್ಟನ್ ಸುಂದರ್, ಈ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಂಡು ಸ್ಮರಣೀಯ ಇನ್ನಿಂಗ್ಸ್ ಆಡಿದರು. ವಾಷಿಂಗ್ಟನ್ ಸುಂದರ್ ಬ್ಯಾಟಿಂಗ್‌ಗೆ ಬಂದಾಗ, ಟೀಂ ಇಂಡಿಯಾ 188 ರನ್‌ಗಳಿಗೆ 3 ವಿಕೆಟ್‌ಗಳನ್ನು ಕಳೆದುಕೊಂಡಿತ್ತು.

3 / 6
ಇದರ ನಂತರ ನಾಯಕ ಶುಭ್​ಮನ್ ಗಿಲ್ ಅವರೊಂದಿಗೆ ಇನ್ನಿಂಗ್ಸ್ ಕಟ್ಟಿದ ಸುಂದರ್, 34 ರನ್​ಗಳ ಜೊತೆಯಾಟ ಕಟ್ಟಿದರು. ಆದರೆ ಈ ವೇಳೆ ಗಿಲ್ ವಿಕೆಟ್ ಪತನದೊಂದಿಗೆ ಈ ಜೊತೆಯಾಟ ಮುರಿದು ಬಿತ್ತು. ಆ  ನಂತರ ಸುಂದರ್, ರವೀಂದ್ರ ಜಡೇಜಾ ಅವರೊಂದಿಗೆ ಸ್ಮರಣೀಯ ಪಾಲುದಾರಿಕೆಯನ್ನು ಹಂಚಿಕೊಂಡರು.

ಇದರ ನಂತರ ನಾಯಕ ಶುಭ್​ಮನ್ ಗಿಲ್ ಅವರೊಂದಿಗೆ ಇನ್ನಿಂಗ್ಸ್ ಕಟ್ಟಿದ ಸುಂದರ್, 34 ರನ್​ಗಳ ಜೊತೆಯಾಟ ಕಟ್ಟಿದರು. ಆದರೆ ಈ ವೇಳೆ ಗಿಲ್ ವಿಕೆಟ್ ಪತನದೊಂದಿಗೆ ಈ ಜೊತೆಯಾಟ ಮುರಿದು ಬಿತ್ತು. ಆ ನಂತರ ಸುಂದರ್, ರವೀಂದ್ರ ಜಡೇಜಾ ಅವರೊಂದಿಗೆ ಸ್ಮರಣೀಯ ಪಾಲುದಾರಿಕೆಯನ್ನು ಹಂಚಿಕೊಂಡರು.

4 / 6
ಈ ಇನ್ನಿಂಗ್ಸ್‌ನಲ್ಲಿ ವಾಷಿಂಗ್ಟನ್ ಸುಂದರ್ 206 ಎಸೆತಗಳನ್ನು ಎದುರಿಸಿ ಅಜೇಯ 101 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಮತ್ತು 1 ಸಿಕ್ಸರ್ ಸೇರಿದ್ದವು. 2021 ರಲ್ಲಿ ಟೆಸ್ಟ್ ವೃತ್ತಿಜೀವನ ಪ್ರಾರಂಭಿಸಿದ ವಾಷಿಂಗ್ಟನ್ ಸುಂದರ್ ತಮ್ಮ ಮೊದಲ ಅಂತರರಾಷ್ಟ್ರೀಯ ಶತಕಕ್ಕಾಗಿ 4 ವರ್ಷ ಕಾಯಬೇಕಾಯಿತು.

ಈ ಇನ್ನಿಂಗ್ಸ್‌ನಲ್ಲಿ ವಾಷಿಂಗ್ಟನ್ ಸುಂದರ್ 206 ಎಸೆತಗಳನ್ನು ಎದುರಿಸಿ ಅಜೇಯ 101 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಮತ್ತು 1 ಸಿಕ್ಸರ್ ಸೇರಿದ್ದವು. 2021 ರಲ್ಲಿ ಟೆಸ್ಟ್ ವೃತ್ತಿಜೀವನ ಪ್ರಾರಂಭಿಸಿದ ವಾಷಿಂಗ್ಟನ್ ಸುಂದರ್ ತಮ್ಮ ಮೊದಲ ಅಂತರರಾಷ್ಟ್ರೀಯ ಶತಕಕ್ಕಾಗಿ 4 ವರ್ಷ ಕಾಯಬೇಕಾಯಿತು.

5 / 6
ಈ ಇನ್ನಿಂಗ್ಸ್‌ನಲ್ಲಿ ವಾಷಿಂಗ್ಟನ್ ಸುಂದರ್ ಹಾಗೂ ರವೀಂದ್ರ ಜಡೇಜಾ 334 ಎಸೆತಗಳನ್ನು ಆಡಿ ಅಜೇಯ 203 ರನ್‌ಗಳನ್ನು ಸೇರಿಸಿದರು. ವಿಶೇಷವೆಂದರೆ ಇಬ್ಬರೂ ಆಟಗಾರರು 2 ಸೆಷನ್‌ಗಳಿಗಿಂತ ಹೆಚ್ಚು ಕಾಲ ಬ್ಯಾಟಿಂಗ್ ಮಾಡಿದರು. ಅದೇ ಸಮಯದಲ್ಲಿ, ವಾಷಿಂಗ್ಟನ್ ಸುಂದರ್ ಸೆನಾ ದೇಶದಲ್ಲಿ ತಮ್ಮ ಮೊದಲ ಟೆಸ್ಟ್ ಶತಕವನ್ನು ಗಳಿಸಿದ 26 ನೇ ಭಾರತೀಯರಾದರು . ಇದಲ್ಲದೆ, ಅವರು ಭಾರತದ ಪರ ಟೆಸ್ಟ್‌ನಲ್ಲಿ ಶತಕ ಗಳಿಸಿದ 70 ನೇ ಆಟಗಾರ ಎನಿಸಿಕೊಂಡರು.

ಈ ಇನ್ನಿಂಗ್ಸ್‌ನಲ್ಲಿ ವಾಷಿಂಗ್ಟನ್ ಸುಂದರ್ ಹಾಗೂ ರವೀಂದ್ರ ಜಡೇಜಾ 334 ಎಸೆತಗಳನ್ನು ಆಡಿ ಅಜೇಯ 203 ರನ್‌ಗಳನ್ನು ಸೇರಿಸಿದರು. ವಿಶೇಷವೆಂದರೆ ಇಬ್ಬರೂ ಆಟಗಾರರು 2 ಸೆಷನ್‌ಗಳಿಗಿಂತ ಹೆಚ್ಚು ಕಾಲ ಬ್ಯಾಟಿಂಗ್ ಮಾಡಿದರು. ಅದೇ ಸಮಯದಲ್ಲಿ, ವಾಷಿಂಗ್ಟನ್ ಸುಂದರ್ ಸೆನಾ ದೇಶದಲ್ಲಿ ತಮ್ಮ ಮೊದಲ ಟೆಸ್ಟ್ ಶತಕವನ್ನು ಗಳಿಸಿದ 26 ನೇ ಭಾರತೀಯರಾದರು . ಇದಲ್ಲದೆ, ಅವರು ಭಾರತದ ಪರ ಟೆಸ್ಟ್‌ನಲ್ಲಿ ಶತಕ ಗಳಿಸಿದ 70 ನೇ ಆಟಗಾರ ಎನಿಸಿಕೊಂಡರು.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ