AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ಸರಣಿ ಬಳಿಕ ಟಿ20 ಸರಣಿಯಿಂದಲೂ ವಾಷಿಂಗ್ಟನ್ ಸುಂದರ್ ಔಟ್

Washington Sundar Injured: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ 1-1 ರಿಂದ ಸಮಬಲ ಸಾಧಿಸಿದೆ, ಮೂರನೇ ಪಂದ್ಯ ನಿರ್ಣಾಯಕವಾಗಿದೆ. ಈ ನಡುವೆ, ಸ್ಟಾರ್ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಬೆನ್ನು ನೋವಿನಿಂದ ಟಿ20 ಸರಣಿಯಿಂದ ಹೊರಗುಳಿದಿರುವುದು ಟೀಂ ಇಂಡಿಯಾಗೆ ದೊಡ್ಡ ಆಘಾತವಾಗಿದೆ. ಮುಂಬರುವ ಟಿ20 ವಿಶ್ವಕಪ್ ಸಿದ್ಧತೆಗಳ ದೃಷ್ಟಿಯಿಂದ ಇದು ಪ್ರಮುಖ ಹಿನ್ನಡೆಯಾಗಿದೆ, ಸುಂದರ್ ಅನುಪಸ್ಥಿತಿ ತಂಡದ ಸಮತೋಲನದ ಮೇಲೆ ಪರಿಣಾಮ ಬೀರಬಹುದು.

ಪೃಥ್ವಿಶಂಕರ
|

Updated on: Jan 15, 2026 | 4:28 PM

Share
ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಆಡುತ್ತಿರುವ ಟೀಂ ಇಂಡಿಯಾ ಸರಣಿಯ ಎರಡನೇ ಪಂದ್ಯದಲ್ಲಿ ಏಕಪಕ್ಷೀಯ ಸೋಲು ಅನುಭವಿಸಿತು. ಹೀಗಾಗಿ ಸರಣಿ ಪ್ರಸ್ತುತ 1-1 ರಿಂದ ಸಮಬಲಗೊಂಡಿದೆ. ಇದೀಗ ಸರಣಿ ಭಾರತದ ಪಾಲಾಗಬೇಕಾದರೆ, ಮೂರನೇ ಪಂದ್ಯವನ್ನು ಗೆಲ್ಲಲೇಬೇಕಾಗಿದೆ. ಇದೆಲ್ಲದರ ನಡುವೆ ತಂಡಕ್ಕೆ ದೊಡ್ಡ ಆಘಾತವೊಂದು ಎದುರಾಗಿದ್ದು, ಸ್ಟಾರ್ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಟಿ20 ಸರಣಿಗೂ ಅಲಭ್ಯ ಎನ್ನಲಾಗುತ್ತಿದೆ.

ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಆಡುತ್ತಿರುವ ಟೀಂ ಇಂಡಿಯಾ ಸರಣಿಯ ಎರಡನೇ ಪಂದ್ಯದಲ್ಲಿ ಏಕಪಕ್ಷೀಯ ಸೋಲು ಅನುಭವಿಸಿತು. ಹೀಗಾಗಿ ಸರಣಿ ಪ್ರಸ್ತುತ 1-1 ರಿಂದ ಸಮಬಲಗೊಂಡಿದೆ. ಇದೀಗ ಸರಣಿ ಭಾರತದ ಪಾಲಾಗಬೇಕಾದರೆ, ಮೂರನೇ ಪಂದ್ಯವನ್ನು ಗೆಲ್ಲಲೇಬೇಕಾಗಿದೆ. ಇದೆಲ್ಲದರ ನಡುವೆ ತಂಡಕ್ಕೆ ದೊಡ್ಡ ಆಘಾತವೊಂದು ಎದುರಾಗಿದ್ದು, ಸ್ಟಾರ್ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಟಿ20 ಸರಣಿಗೂ ಅಲಭ್ಯ ಎನ್ನಲಾಗುತ್ತಿದೆ.

1 / 5
ವಾಸ್ತವವಾಗಿ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿ ಮುಗಿದ ಬಳಿಕ ಇದೇ ತಂಡದ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಯ ಬಳಿಕ ಟಿ20 ವಿಶ್ವಕಪ್ ಆರಂಭವಾಗಲಿದೆ. ಹೀಗಾಗಿ ಟಿ20 ವಿಶ್ವಕಪ್​ಗೆ ತಯಾರಿಯ ದೃಷ್ಟಿಯಿಂದ ಕಿವೀಸ್ ವಿರುದ್ಧದ ಟಿ20 ಸರಣಿ ಟೀಂ ಇಂಡಿಯಾಗೆ ಬಹಳ ಮುಖ್ಯವಾಗಿದೆ. ಹೀಗಿರುವಾಗ ಸುಂದರ್ ಈ ಸರಣಿಗೆ ಅಲಭ್ಯರಾಗುತ್ತಿರುವುದು ತಂಡಕ್ಕೆ ಕೊಂಚ ಹಿನ್ನಡೆಯಾಗಿದೆ.

ವಾಸ್ತವವಾಗಿ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿ ಮುಗಿದ ಬಳಿಕ ಇದೇ ತಂಡದ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಯ ಬಳಿಕ ಟಿ20 ವಿಶ್ವಕಪ್ ಆರಂಭವಾಗಲಿದೆ. ಹೀಗಾಗಿ ಟಿ20 ವಿಶ್ವಕಪ್​ಗೆ ತಯಾರಿಯ ದೃಷ್ಟಿಯಿಂದ ಕಿವೀಸ್ ವಿರುದ್ಧದ ಟಿ20 ಸರಣಿ ಟೀಂ ಇಂಡಿಯಾಗೆ ಬಹಳ ಮುಖ್ಯವಾಗಿದೆ. ಹೀಗಿರುವಾಗ ಸುಂದರ್ ಈ ಸರಣಿಗೆ ಅಲಭ್ಯರಾಗುತ್ತಿರುವುದು ತಂಡಕ್ಕೆ ಕೊಂಚ ಹಿನ್ನಡೆಯಾಗಿದೆ.

2 / 5
ವಡೋದರಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದ ವೇಳೆ ವಾಷಿಂಗ್ಟನ್ ಸುಂದರ್ ಬೆನ್ನು ನೋವಿಗೆ ತುತ್ತಾಗಿದ್ದರು. ಇದರಿಂದಾಗಿ ಅವರು ಅರ್ಧಕ್ಕೆ ಆಟ ನಿಲ್ಲಿಸಿ ಮೈದಾನವನ್ನು ತೊರೆದಿದ್ದರು. ಆ ಬಳಿಕ ಸುಂದರ್​ಗೆ ವೈದ್ಯಕೀಯ ಪರೀಕ್ಷೆ ಮಾಡಲಾಗಿದ್ದು, ಅವರಿಗೆ ಕೆಲವು ವಾರಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ. ವರದಿಗಳ ಪ್ರಕಾರ, ವೈದ್ಯಕೀಯ ತಂಡವು ಸುಂದರ್‌ಗೆ ಎರಡು ವಾರಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದೆ. ಹೀಗಾಗಿ ಅವರು ಮುಂದಿನ ವಾರ ಚೇತರಿಸಿಕೊಳ್ಳಲು ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್‌ಗೆ ತೆರಳಲಿದ್ದಾರೆ.

ವಡೋದರಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದ ವೇಳೆ ವಾಷಿಂಗ್ಟನ್ ಸುಂದರ್ ಬೆನ್ನು ನೋವಿಗೆ ತುತ್ತಾಗಿದ್ದರು. ಇದರಿಂದಾಗಿ ಅವರು ಅರ್ಧಕ್ಕೆ ಆಟ ನಿಲ್ಲಿಸಿ ಮೈದಾನವನ್ನು ತೊರೆದಿದ್ದರು. ಆ ಬಳಿಕ ಸುಂದರ್​ಗೆ ವೈದ್ಯಕೀಯ ಪರೀಕ್ಷೆ ಮಾಡಲಾಗಿದ್ದು, ಅವರಿಗೆ ಕೆಲವು ವಾರಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ. ವರದಿಗಳ ಪ್ರಕಾರ, ವೈದ್ಯಕೀಯ ತಂಡವು ಸುಂದರ್‌ಗೆ ಎರಡು ವಾರಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದೆ. ಹೀಗಾಗಿ ಅವರು ಮುಂದಿನ ವಾರ ಚೇತರಿಸಿಕೊಳ್ಳಲು ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್‌ಗೆ ತೆರಳಲಿದ್ದಾರೆ.

3 / 5
ವಾಷಿಂಗ್ಟನ್ ಸುಂದರ್ ಅವರನ್ನು ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಿರುವ ಕಾರಣ, ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಅವರನ್ನು ಅಪಾಯಕ್ಕೆ ಸಿಲುಕಿಸಲು ತಂಡದ ಆಡಳಿತ ಮಂಡಳಿ ಬಯಸಲಿಲ್ಲ ಎಂದು ವರದಿಯಾಗಿದೆ. ಆರಂಭದಲ್ಲಿ, ಅವರು ಸರಣಿಯ ನಂತರದ ಪಂದ್ಯಗಳಲ್ಲಿ ಆಡಬಹುದು ಎಂದು ಆಶಿಸಲಾಗಿತ್ತು, ಆದರೆ ಈಗ ಅವರು ಈ ಸರಣಿಯಲ್ಲಿ ಭಾಗವಹಿಸುವುದಿಲ್ಲ. ಆದಾಗ್ಯೂ, ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು, ಅವರು ನಂತರದ ಹಂತಗಳಲ್ಲಿ ತಂಡವನ್ನು ಸೇರುವ ಸಾಧ್ಯತೆಯಿದೆ.

ವಾಷಿಂಗ್ಟನ್ ಸುಂದರ್ ಅವರನ್ನು ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಿರುವ ಕಾರಣ, ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಅವರನ್ನು ಅಪಾಯಕ್ಕೆ ಸಿಲುಕಿಸಲು ತಂಡದ ಆಡಳಿತ ಮಂಡಳಿ ಬಯಸಲಿಲ್ಲ ಎಂದು ವರದಿಯಾಗಿದೆ. ಆರಂಭದಲ್ಲಿ, ಅವರು ಸರಣಿಯ ನಂತರದ ಪಂದ್ಯಗಳಲ್ಲಿ ಆಡಬಹುದು ಎಂದು ಆಶಿಸಲಾಗಿತ್ತು, ಆದರೆ ಈಗ ಅವರು ಈ ಸರಣಿಯಲ್ಲಿ ಭಾಗವಹಿಸುವುದಿಲ್ಲ. ಆದಾಗ್ಯೂ, ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು, ಅವರು ನಂತರದ ಹಂತಗಳಲ್ಲಿ ತಂಡವನ್ನು ಸೇರುವ ಸಾಧ್ಯತೆಯಿದೆ.

4 / 5
ಮೊದಲ ಏಕದಿನ ಪಂದ್ಯದಲ್ಲಿ ವಾಷಿಂಗ್ಟನ್ ಐದು ಓವರ್ ಬೌಲಿಂಗ್ ಮಾಡಿ ಗಾಯದಿಂದ ಮೈದಾನ ತೊರೆದರು. ಆದಾಗ್ಯೂ, ಮಧ್ಯಮ ಕ್ರಮಾಂಕದ ವೈಫಲ್ಯದ ನಂತರ ಅವರು ಬ್ಯಾಟಿಂಗ್‌ಗೆ ಮರಳಿದರು. ಭಾರತದ ಚೇಸಿಂಗ್‌ನಲ್ಲಿ ಅವರು 7 ಎಸೆತಗಳಲ್ಲಿ 7 ರನ್ ಗಳಿಸಿ, ರಾಹುಲ್ ಅವರೊಂದಿಗೆ ಕ್ರೀಸ್​ನಲ್ಲಿ ನೆಲೆ ನಿಂತು ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಮೊದಲ ಏಕದಿನ ಪಂದ್ಯದಲ್ಲಿ ವಾಷಿಂಗ್ಟನ್ ಐದು ಓವರ್ ಬೌಲಿಂಗ್ ಮಾಡಿ ಗಾಯದಿಂದ ಮೈದಾನ ತೊರೆದರು. ಆದಾಗ್ಯೂ, ಮಧ್ಯಮ ಕ್ರಮಾಂಕದ ವೈಫಲ್ಯದ ನಂತರ ಅವರು ಬ್ಯಾಟಿಂಗ್‌ಗೆ ಮರಳಿದರು. ಭಾರತದ ಚೇಸಿಂಗ್‌ನಲ್ಲಿ ಅವರು 7 ಎಸೆತಗಳಲ್ಲಿ 7 ರನ್ ಗಳಿಸಿ, ರಾಹುಲ್ ಅವರೊಂದಿಗೆ ಕ್ರೀಸ್​ನಲ್ಲಿ ನೆಲೆ ನಿಂತು ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

5 / 5
Follow Us
ಬಲಗೈಯಿಂದಲೇ ಆಶೀರ್ವಾದ ಮಾಡುವುದು ಯಾಕೆ ಗೊತ್ತಾ?
ಬಲಗೈಯಿಂದಲೇ ಆಶೀರ್ವಾದ ಮಾಡುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ
ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ