AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Washington Sunder: ಜಿಂಬಾಬ್ವೆ ವಿರುದ್ಧದ ಸರಣಿಯಿಂದ ಸ್ಟಾರ್ ಪ್ಲೇಯರ್ ಔಟ್: ಭಾರತಕ್ಕೆ ದೊಡ್ಡ ಆಘಾತ

India vs Zimbabwe: ಟೀಮ್ ಇಂಡಿಯಾ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಇಂಜುರಿಯಿಂದಾಗಿ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ.

TV9 Web
| Updated By: Vinay Bhat

Updated on: Aug 16, 2022 | 7:22 AM

ಭಾರತ ಕ್ರಿಕೆಟ್ ತಂಡ ಜಿಂಬಾಬ್ವೆ ನಾಡಿಗೆ ತೆರಳಿದ್ದು ಕೆಎಲ್ ರಾಹುಲ್ ನೇತೃತ್ವದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ಆಡಲಿದೆ. ಈಗಾಗಲೇ ಹರಾರೆಯಲ್ಲಿ ಕೋಚ್ ವಿವಿಎಸ್ ಲಕ್ಷ್ಮಣ್ ಮಾರ್ಗದರ್ಶದಡಿಯಲ್ಲಿ ಆಟಗಾರರು ಪ್ರ್ಯಾಕ್ಟೀಸ್ ಮಾಡುತ್ತಿದ್ದಾರೆ. ಹೀಗಿರುವಾಗ ಟೀಮ್ ಇಂಡಿಯಾಕ್ಕೆ ದೊಡ್ಡ ಆಘಾತ ಉಂಟಾಗಿದೆ.

ಭಾರತ ಕ್ರಿಕೆಟ್ ತಂಡ ಜಿಂಬಾಬ್ವೆ ನಾಡಿಗೆ ತೆರಳಿದ್ದು ಕೆಎಲ್ ರಾಹುಲ್ ನೇತೃತ್ವದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ಆಡಲಿದೆ. ಈಗಾಗಲೇ ಹರಾರೆಯಲ್ಲಿ ಕೋಚ್ ವಿವಿಎಸ್ ಲಕ್ಷ್ಮಣ್ ಮಾರ್ಗದರ್ಶದಡಿಯಲ್ಲಿ ಆಟಗಾರರು ಪ್ರ್ಯಾಕ್ಟೀಸ್ ಮಾಡುತ್ತಿದ್ದಾರೆ. ಹೀಗಿರುವಾಗ ಟೀಮ್ ಇಂಡಿಯಾಕ್ಕೆ ದೊಡ್ಡ ಆಘಾತ ಉಂಟಾಗಿದೆ.

1 / 8
ಟೀಮ್ ಇಂಡಿಯಾ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಇಂಜುರಿಯಿಂದಾಗಿ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ.

ಟೀಮ್ ಇಂಡಿಯಾ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಇಂಜುರಿಯಿಂದಾಗಿ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ.

2 / 8
ಸುಂದರ್ ಇಂಗ್ಲೆಂಡ್ ​ನಲ್ಲಿ ರಾಯಲ್ ಲಂಡನ್ ಒನ್ ಡೇ ಚಾಂಪಿಯನ್​ ಷಿಪ್ ಮ್ಯಾಚ್ ​ನಲ್ಲಿ ಲ್ಯಾಂಚೆಶೈರ್ ತಂಡದ ಪರ ಕಳೆದ ವಾರ ಆಡುತ್ತಿದ್ದಾಗ ವೋರ್ಸೆಸ್ಟರ್‌ಶೈರ್ ವಿರುದ್ಧದ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿದ್ದರು. ಫೀಲ್ಡಿಂಗ್ ಮಾಡಲಾಗದೆ ಪಂದ್ಯದ ನಡುವೆಯೇ ಮೈದಾನ ತೊರೆದಿದ್ದರು.

ಸುಂದರ್ ಇಂಗ್ಲೆಂಡ್ ​ನಲ್ಲಿ ರಾಯಲ್ ಲಂಡನ್ ಒನ್ ಡೇ ಚಾಂಪಿಯನ್​ ಷಿಪ್ ಮ್ಯಾಚ್ ​ನಲ್ಲಿ ಲ್ಯಾಂಚೆಶೈರ್ ತಂಡದ ಪರ ಕಳೆದ ವಾರ ಆಡುತ್ತಿದ್ದಾಗ ವೋರ್ಸೆಸ್ಟರ್‌ಶೈರ್ ವಿರುದ್ಧದ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿದ್ದರು. ಫೀಲ್ಡಿಂಗ್ ಮಾಡಲಾಗದೆ ಪಂದ್ಯದ ನಡುವೆಯೇ ಮೈದಾನ ತೊರೆದಿದ್ದರು.

3 / 8
ಸುಂದರ್ ಅನೇಕ ತಿಂಗಳುಗಳ ಬಳಿಕ ಟೀಮ್ ಇಂಡಿಯಾಕ್ಕೆ ಆಯ್ಕೆಯಾಗುವ ಮೂಲಕ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಸ್ಥಾನ ಪಡೆದುಕೊಂಡಿದ್ದರು. ಆದರೆ, ಇದೀಗ ಗಾಯದ ಪ್ರಮಾಣ ದೊಡ್ಡದಾಗಿದ್ದು ಜಿಂಬಾಬ್ವೆ ಸರಣಿಯಿಂದ ಹೊರಬಿದ್ದಿದ್ದಾರೆ ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿದೆ. ಒಂದು ವಾರಗಳ ಕಾಲ ವಿಶ್ರಾಂತಿಯ ಅಗತ್ಯವಿದೆ ಎಂದು ಹೇಳಲಾಗಿದೆ.

ಸುಂದರ್ ಅನೇಕ ತಿಂಗಳುಗಳ ಬಳಿಕ ಟೀಮ್ ಇಂಡಿಯಾಕ್ಕೆ ಆಯ್ಕೆಯಾಗುವ ಮೂಲಕ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಸ್ಥಾನ ಪಡೆದುಕೊಂಡಿದ್ದರು. ಆದರೆ, ಇದೀಗ ಗಾಯದ ಪ್ರಮಾಣ ದೊಡ್ಡದಾಗಿದ್ದು ಜಿಂಬಾಬ್ವೆ ಸರಣಿಯಿಂದ ಹೊರಬಿದ್ದಿದ್ದಾರೆ ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿದೆ. ಒಂದು ವಾರಗಳ ಕಾಲ ವಿಶ್ರಾಂತಿಯ ಅಗತ್ಯವಿದೆ ಎಂದು ಹೇಳಲಾಗಿದೆ.

4 / 8
ಇನ್ನು ಭಾರತ ತಂಡವು 6 ವರ್ಷಗಳ ಬಳಿಕ ಜಿಂಬಾಬ್ವೆ ನಾಡಿಗೆ ತೆರಳುತ್ತಿದೆ. ಈ ಹಿಂದೆ ಎಂಎಸ್ ಧೋನಿ ನೇತೃತ್ವದ ತಂಡವು 2016 ರಲ್ಲಿ ಮೂರು ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಜಿಂಬಾಬ್ವೆಯಲ್ಲಿ ಆಡಿತ್ತು. ಈ ಎರಡೂ ಸರಣಿಯಲ್ಲಿ ಅಂದು ಭಾರತ ತಂಡ ಗೆಲುವು ದಾಖಲಿಸಿತ್ತು. ಇದೀಗ 6 ವರ್ಷಗಳ ಬಳಿಕ ಭಾರತ ತಂಡವು ಜಿಂಬಾಬ್ವೆ ಪ್ರವಾಸ ಕೈಗೊಳ್ಳುತ್ತಿದೆ.

ಇನ್ನು ಭಾರತ ತಂಡವು 6 ವರ್ಷಗಳ ಬಳಿಕ ಜಿಂಬಾಬ್ವೆ ನಾಡಿಗೆ ತೆರಳುತ್ತಿದೆ. ಈ ಹಿಂದೆ ಎಂಎಸ್ ಧೋನಿ ನೇತೃತ್ವದ ತಂಡವು 2016 ರಲ್ಲಿ ಮೂರು ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಜಿಂಬಾಬ್ವೆಯಲ್ಲಿ ಆಡಿತ್ತು. ಈ ಎರಡೂ ಸರಣಿಯಲ್ಲಿ ಅಂದು ಭಾರತ ತಂಡ ಗೆಲುವು ದಾಖಲಿಸಿತ್ತು. ಇದೀಗ 6 ವರ್ಷಗಳ ಬಳಿಕ ಭಾರತ ತಂಡವು ಜಿಂಬಾಬ್ವೆ ಪ್ರವಾಸ ಕೈಗೊಳ್ಳುತ್ತಿದೆ.

5 / 8
ಸುದೀರ್ಘ ಗಾಯದ ನಂತರ ದೀಪಕ್ ಚಹಾರ್ ಮತ್ತೆ ರಾಷ್ಟ್ರೀಯ ತಂಡಕ್ಕೆ ಮರಳಿದ್ದಾರೆ. ಐಪಿಎಲ್ ​ನಲ್ಲಿ ಸನ್ ​ರೈಸರ್ಸ್ ಹೈದರಾಬಾದ್ ತಂಡದ ಪರ ಮಿಂಚು ಹರಿಸಿದ್ದ ರಾಹುಲ್ ತ್ರಿಪಾಠಿಗೆ ಅವಕಾಶ ನೀಡಲಾಗಿದೆ.

ಸುದೀರ್ಘ ಗಾಯದ ನಂತರ ದೀಪಕ್ ಚಹಾರ್ ಮತ್ತೆ ರಾಷ್ಟ್ರೀಯ ತಂಡಕ್ಕೆ ಮರಳಿದ್ದಾರೆ. ಐಪಿಎಲ್ ​ನಲ್ಲಿ ಸನ್ ​ರೈಸರ್ಸ್ ಹೈದರಾಬಾದ್ ತಂಡದ ಪರ ಮಿಂಚು ಹರಿಸಿದ್ದ ರಾಹುಲ್ ತ್ರಿಪಾಠಿಗೆ ಅವಕಾಶ ನೀಡಲಾಗಿದೆ.

6 / 8
ಐಸಿಸಿ ಸೂಪರ್ ಲೀಗ್​ ಭಾಗವಾಗಿ ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿವೆ. ಉಭಯ ತಂಡಗಳ ನಡುವೆ ಹರಾರೆ ಮೈದಾನದಲ್ಲಿ ಆಗಸ್ಟ್​ 18, 20 ಹಾಗೂ 22ರಂದು ಪಂದ್ಯಗಳು ನಡೆಯಲಿವೆ. ಐಸಿಸಿ ಪುರುಷರ ಕ್ರಿಕೆಟ್​ ವಿಶ್ವಕಪ್​ ಸೂಪರ್ ಲೀಗ್​ ನ ಭಾಗವಾಗಿ ಈ ಸರಣಿ ನಡೆಯಲಿದ್ದು, ವಿಶ್ವಕಪ್​​​ ಗೆ ನೇರ ಅರ್ಹತೆ ಪಡೆದುಕೊಳ್ಳಲು ಜಿಂಬಾಬ್ವೆಗೆ ಈ ಸರಣಿ ಮಹತ್ವ ಪಡೆದುಕೊಂಡಿದೆ. ಐಸಿಸಿ ಲೀಗ್​​​ ಶ್ರೇಯಾಂಕದಲ್ಲಿ ಜಿಂಬಾಬ್ವೆ ಪ್ರಸ್ತುತ 12ನೇ ಸ್ಥಾನದಲ್ಲಿದೆ.

ಐಸಿಸಿ ಸೂಪರ್ ಲೀಗ್​ ಭಾಗವಾಗಿ ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿವೆ. ಉಭಯ ತಂಡಗಳ ನಡುವೆ ಹರಾರೆ ಮೈದಾನದಲ್ಲಿ ಆಗಸ್ಟ್​ 18, 20 ಹಾಗೂ 22ರಂದು ಪಂದ್ಯಗಳು ನಡೆಯಲಿವೆ. ಐಸಿಸಿ ಪುರುಷರ ಕ್ರಿಕೆಟ್​ ವಿಶ್ವಕಪ್​ ಸೂಪರ್ ಲೀಗ್​ ನ ಭಾಗವಾಗಿ ಈ ಸರಣಿ ನಡೆಯಲಿದ್ದು, ವಿಶ್ವಕಪ್​​​ ಗೆ ನೇರ ಅರ್ಹತೆ ಪಡೆದುಕೊಳ್ಳಲು ಜಿಂಬಾಬ್ವೆಗೆ ಈ ಸರಣಿ ಮಹತ್ವ ಪಡೆದುಕೊಂಡಿದೆ. ಐಸಿಸಿ ಲೀಗ್​​​ ಶ್ರೇಯಾಂಕದಲ್ಲಿ ಜಿಂಬಾಬ್ವೆ ಪ್ರಸ್ತುತ 12ನೇ ಸ್ಥಾನದಲ್ಲಿದೆ.

7 / 8
ಭಾರತ ತಂಡ: ಕೆಎಲ್ ರಾಹುಲ್ (ನಾಯಕ) ಶಿಖರ್ ಧವನ್ (ಉಪ ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್ , ದೀಪಕ್ ಚಹಾರ್.

ಭಾರತ ತಂಡ: ಕೆಎಲ್ ರಾಹುಲ್ (ನಾಯಕ) ಶಿಖರ್ ಧವನ್ (ಉಪ ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್ , ದೀಪಕ್ ಚಹಾರ್.

8 / 8
Follow us
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!