AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟಿ20 ವಿಶ್ವಕಪ್​ನಿಂದ ವೆಸ್ಟ್ ಇಂಡೀಸ್ ಸ್ಟಾರ್ ಆಟಗಾರ ಔಟ್

T20 World Cup 2024: ವೆಸ್ಟ್ ಇಂಡೀಸ್ ಮತ್ತು ಯುಎಸ್​ಎ ಜಂಟಿಯಾಗಿ ಆಯೋಜಿಸಲಿರುವ ಈ ಬಾರಿಯ ಟಿ20 ವಿಶ್ವಕಪ್ ಜೂನ್ 2 ರಿಂದ ಶುರುವಾಗಲಿದೆ. ಹಾಗೆಯೇ ಫೈನಲ್ ಪಂದ್ಯವು ಜೂನ್ 29 ರಂದು ನಡೆಯಲಿದೆ. ಮೊದಲ ಹಂತದಲ್ಲಿ ಪ್ರತಿ ತಂಡಗಳು 4 ಲೀಗ್ ಪಂದ್ಯಗಳನ್ನಾಡಲಿದೆ. ಇದಾದ ಬಳಿಕ ಸೂಪರ್-8 ಪಂದ್ಯಗಳು ಜರುಗಲಿದ್ದು, ಈ ಪಂದ್ಯಗಳಲ್ಲಿ ಗೆಲುವು ದಾಖಲಿಸುವ ತಂಡಗಳು ಸೆಮಿಫೈನಲ್​ಗೇರಲಿದೆ.

ಝಾಹಿರ್ ಯೂಸುಫ್
|

Updated on:May 28, 2024 | 2:53 PM

Share
T20 World Cup 2024: ಟಿ20 ವಿಶ್ವಕಪ್​ಗಾಗಿ ವೆಸ್ಟ್ ಇಂಡೀಸ್ ಬಲಿಷ್ಠ ಬಳಗವನ್ನು ಘೋಷಿಸಿದೆ. ಈ ಹಿಂದೆ ಪ್ರಕಟಿಸಲಾದ 15 ಸದಸ್ಯರ ತಂಡದಿಂ ಓರ್ವ ಆಟಗಾರನನ್ನು ಕೈ ಬಿಡಲಾಗಿದ್ದು, ಅವರ ಬದಲಿಗೆ ವೇಗಿ ಒಬೆಡ್ ಮೆಕಾಯ್​ಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.

T20 World Cup 2024: ಟಿ20 ವಿಶ್ವಕಪ್​ಗಾಗಿ ವೆಸ್ಟ್ ಇಂಡೀಸ್ ಬಲಿಷ್ಠ ಬಳಗವನ್ನು ಘೋಷಿಸಿದೆ. ಈ ಹಿಂದೆ ಪ್ರಕಟಿಸಲಾದ 15 ಸದಸ್ಯರ ತಂಡದಿಂ ಓರ್ವ ಆಟಗಾರನನ್ನು ಕೈ ಬಿಡಲಾಗಿದ್ದು, ಅವರ ಬದಲಿಗೆ ವೇಗಿ ಒಬೆಡ್ ಮೆಕಾಯ್​ಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.

1 / 5
ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ಟಿ20 ವಿಶ್ವಕಪ್ ತಂಡದಲ್ಲಿ ಜೇಸನ್ ಹೋಲ್ಡರ್ ಸ್ಥಾನ ಪಡೆದಿದ್ದರು. ಇದರ ನಡುವೆ ಇಂಗ್ಲೆಂಡ್​ನಲ್ಲಿ ನಡೆದ ಕೌಂಟಿ ಚಾಂಪಿಯನ್‌ಶಿಪ್‌ ಪಂದ್ಯದ ವೇಳೆ ಹೋಲ್ಡರ್ ಗಾಯಗೊಂಡಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಲು ವಿಫಲರಾಗಿರುವ ಹೋಲ್ಡರ್ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದಾರೆ.

ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ಟಿ20 ವಿಶ್ವಕಪ್ ತಂಡದಲ್ಲಿ ಜೇಸನ್ ಹೋಲ್ಡರ್ ಸ್ಥಾನ ಪಡೆದಿದ್ದರು. ಇದರ ನಡುವೆ ಇಂಗ್ಲೆಂಡ್​ನಲ್ಲಿ ನಡೆದ ಕೌಂಟಿ ಚಾಂಪಿಯನ್‌ಶಿಪ್‌ ಪಂದ್ಯದ ವೇಳೆ ಹೋಲ್ಡರ್ ಗಾಯಗೊಂಡಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಲು ವಿಫಲರಾಗಿರುವ ಹೋಲ್ಡರ್ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದಾರೆ.

2 / 5
ಇದರ ಬೆನ್ನಲ್ಲೇ 27 ವರ್ಷದ ಒಬೆಡ್ ಮೆಕಾಯ್ ಅವರನ್ನು ತಂಡಕ್ಕೆ ಕರೆಸಿಕೊಳ್ಳಲಾಗಿದೆ. ವೆಸ್ಟ್ ಇಂಡೀಸ್ ಪರ 34 ಟಿ20 ಪಂದ್ಯಗಳನ್ನಾಡಿರುವ ಮೆಕಾಯ್ ಈವರೆಗೆ 46 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ ಐಪಿಎಲ್​ನಲ್ಲಿ 8 ಪಂದ್ಯಗಳನ್ನಾಡಿದ್ದು, ಈ ವೇಳೆ 11 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದರು.

ಇದರ ಬೆನ್ನಲ್ಲೇ 27 ವರ್ಷದ ಒಬೆಡ್ ಮೆಕಾಯ್ ಅವರನ್ನು ತಂಡಕ್ಕೆ ಕರೆಸಿಕೊಳ್ಳಲಾಗಿದೆ. ವೆಸ್ಟ್ ಇಂಡೀಸ್ ಪರ 34 ಟಿ20 ಪಂದ್ಯಗಳನ್ನಾಡಿರುವ ಮೆಕಾಯ್ ಈವರೆಗೆ 46 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ ಐಪಿಎಲ್​ನಲ್ಲಿ 8 ಪಂದ್ಯಗಳನ್ನಾಡಿದ್ದು, ಈ ವೇಳೆ 11 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದರು.

3 / 5
ಹೀಗಾಗಿಯೇ ಮೆಕಾಯ್ ಅವರಿಗೆ ವೆಸ್ಟ್ ಇಂಡೀಸ್ ಬಳಗದಲ್ಲಿ ಅವಕಾಶ ನೀಡಲಾಗಿದೆ. ಇನ್ನು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ವಿಂಡೀಸ್ ಪಡೆ ರೋವ್​ಮನ್ ಪೊವೆಲ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ. ಹಾಗೆಯೇ ಈ ತಂಡದಲ್ಲಿ ನಿಕೋಲಸ್ ಪೂರನ್, ಆ್ಯಂಡ್ರೆ ರಸೆಲ್​ನಂತಹ ಬಲಿಷ್ಠ ದಾಂಡಿಗರ ದಂಡೇ ಇದ್ದು, ಹೀಗಾಗಿ ವೆಸ್ಟ್ ಇಂಡೀಸ್ ತಂಡದಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು.

ಹೀಗಾಗಿಯೇ ಮೆಕಾಯ್ ಅವರಿಗೆ ವೆಸ್ಟ್ ಇಂಡೀಸ್ ಬಳಗದಲ್ಲಿ ಅವಕಾಶ ನೀಡಲಾಗಿದೆ. ಇನ್ನು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ವಿಂಡೀಸ್ ಪಡೆ ರೋವ್​ಮನ್ ಪೊವೆಲ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ. ಹಾಗೆಯೇ ಈ ತಂಡದಲ್ಲಿ ನಿಕೋಲಸ್ ಪೂರನ್, ಆ್ಯಂಡ್ರೆ ರಸೆಲ್​ನಂತಹ ಬಲಿಷ್ಠ ದಾಂಡಿಗರ ದಂಡೇ ಇದ್ದು, ಹೀಗಾಗಿ ವೆಸ್ಟ್ ಇಂಡೀಸ್ ತಂಡದಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು.

4 / 5
ವೆಸ್ಟ್ ಇಂಡೀಸ್ ಟಿ20 ತಂಡ: ರೋವ್‌ಮನ್ ಪೊವೆಲ್, ಅಲ್ಝಾರಿ ಜೋಸೆಫ್, ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಶಾಯ್ ಹೋಪ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಬ್ರಾಂಡನ್ ಕಿಂಗ್, ಒಬೆಡ್ ಮೆಕಾಯ್, ಗುಡಕೇಶ್ ಮೋಟಿ, ಆ್ಯಂಡ್ರೆ ರಸೆಲ್, ನಿಕೋಲಸ್ ಪೂರನ್, ಶೆರ್ಫೇನ್ ರುದರ್​ಫೋರ್ಡ್, ರೊಮಾರಿಯೊ ಶೆಫರ್ಡ್.

ವೆಸ್ಟ್ ಇಂಡೀಸ್ ಟಿ20 ತಂಡ: ರೋವ್‌ಮನ್ ಪೊವೆಲ್, ಅಲ್ಝಾರಿ ಜೋಸೆಫ್, ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಶಾಯ್ ಹೋಪ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಬ್ರಾಂಡನ್ ಕಿಂಗ್, ಒಬೆಡ್ ಮೆಕಾಯ್, ಗುಡಕೇಶ್ ಮೋಟಿ, ಆ್ಯಂಡ್ರೆ ರಸೆಲ್, ನಿಕೋಲಸ್ ಪೂರನ್, ಶೆರ್ಫೇನ್ ರುದರ್​ಫೋರ್ಡ್, ರೊಮಾರಿಯೊ ಶೆಫರ್ಡ್.

5 / 5

Published On - 2:53 pm, Tue, 28 May 24

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ