2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?

2007 T20 World Cup: ಟೀಮ್ ಇಂಡಿಯಾಗೆ ಟಿ20 ವಿಶ್ವಕಪ್ ತಂದುಕೊಟ್ಟ ಬಹುತೇಕ ಆಟಗಾರರು ಇದೀಗ ನಿವೃತ್ತಿಯಾಗಿದ್ದಾರೆ. ಇದಾಗ್ಯೂ ಕೆಲವರು ಈಗಲೂ ಕ್ರಿಕೆಟ್​ ಅಂಗಳದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬುದು ವಿಶೇಷ.

| Updated By: ಝಾಹಿರ್ ಯೂಸುಫ್

Updated on:Sep 24, 2022 | 12:15 PM

2007, ಸೆಪ್ಟೆಂಬರ್ 24...ಟೀಮ್ ಇಂಡಿಯಾ ಕ್ರಿಕೆಟ್​ ಪ್ರೇಮಿಗಳ ಪಾಲಿನ ಅವಿಸ್ಮರಣೀಯ ದಿನ. ಏಕೆಂದರೆ 1983 ರಲ್ಲಿ ಏಕದಿನ ವಿಶ್ವಕಪ್ ಗೆದ್ದಿದ್ದ ಭಾರತ ತಂಡವು ಮತ್ತೊಮ್ಮೆ ವಿಶ್ವ ಚಾಂಪಿಯನ್​ ಆಗಿ ಹೊರಹೊಮ್ಮಿದ ದಿನವದು.

2007, ಸೆಪ್ಟೆಂಬರ್ 24...ಟೀಮ್ ಇಂಡಿಯಾ ಕ್ರಿಕೆಟ್​ ಪ್ರೇಮಿಗಳ ಪಾಲಿನ ಅವಿಸ್ಮರಣೀಯ ದಿನ. ಏಕೆಂದರೆ 1983 ರಲ್ಲಿ ಏಕದಿನ ವಿಶ್ವಕಪ್ ಗೆದ್ದಿದ್ದ ಭಾರತ ತಂಡವು ಮತ್ತೊಮ್ಮೆ ವಿಶ್ವ ಚಾಂಪಿಯನ್​ ಆಗಿ ಹೊರಹೊಮ್ಮಿದ ದಿನವದು.

1 / 19
ಅಂದು ಧೋನಿ ನಾಯಕತ್ವದಲ್ಲಿ ಯುವ ಪಡೆ ಟಿ20 ವಿಶ್ವಕಪ್​​ ಫೈನಲ್​ನಲ್ಲಿ ಪಾಕಿಸ್ತಾನ ತಂಡವನ್ನು ಬಗ್ಗುಬಡಿದು ಚೊಚ್ಚಲ ಟಿ20 ವಿಶ್ವಕಪ್​ನ್ನು ತನ್ನದಾಗಿಸಿಕೊಂಡಿತು.

ಅಂದು ಧೋನಿ ನಾಯಕತ್ವದಲ್ಲಿ ಯುವ ಪಡೆ ಟಿ20 ವಿಶ್ವಕಪ್​​ ಫೈನಲ್​ನಲ್ಲಿ ಪಾಕಿಸ್ತಾನ ತಂಡವನ್ನು ಬಗ್ಗುಬಡಿದು ಚೊಚ್ಚಲ ಟಿ20 ವಿಶ್ವಕಪ್​ನ್ನು ತನ್ನದಾಗಿಸಿಕೊಂಡಿತು.

2 / 19
ರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಅಂದಿನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ 5 ರನ್​ಗಳಿಂದ ಪಾಕಿಸ್ತಾನವನ್ನು ಮಣಿಸಿ ಹೊಸ ಇತಿಹಾಸಕ್ಕೆ ನಾಂದಿಯಾಡಿತು. ಈ ನಿರ್ಣಾಯಕ ಪಂದ್ಯದಲ್ಲಿ ಮಿಂಚಿದ್ದು ಗೌತಮ್ ಗಂಭೀರ್ ಮತ್ತು ಇರ್ಫಾನ್ ಪಠಾಣ್.

ರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಅಂದಿನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ 5 ರನ್​ಗಳಿಂದ ಪಾಕಿಸ್ತಾನವನ್ನು ಮಣಿಸಿ ಹೊಸ ಇತಿಹಾಸಕ್ಕೆ ನಾಂದಿಯಾಡಿತು. ಈ ನಿರ್ಣಾಯಕ ಪಂದ್ಯದಲ್ಲಿ ಮಿಂಚಿದ್ದು ಗೌತಮ್ ಗಂಭೀರ್ ಮತ್ತು ಇರ್ಫಾನ್ ಪಠಾಣ್.

3 / 19
ಅಂದು ಟೀಮ್ ಇಂಡಿಯಾಗೆ ಟಿ20 ವಿಶ್ವಕಪ್ ತಂದುಕೊಟ್ಟ ಬಹುತೇಕ ಆಟಗಾರರು ಇದೀಗ ನಿವೃತ್ತಿಯಾಗಿದ್ದಾರೆ. ಇದಾಗ್ಯೂ ಕೆಲವರು ಈಗಲೂ ಕ್ರಿಕೆಟ್​ ಅಂಗಳದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬುದು ವಿಶೇಷ. ಹಾಗಿದ್ರೆ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಆಡಿದ ಟೀಮ್ ಇಂಡಿಯಾ ಪ್ಲೇಯಿಂಗ್​ ಇಲೆವೆನ್​ ಆಟಗಾರರು ಈಗ ಎಲ್ಲಿದ್ದಾರೆ, ಏನ್ಮಾಡ್ತಿದ್ದಾರೆ ಎಂದು ನೋಡುವುದಾದರೆ...

ಅಂದು ಟೀಮ್ ಇಂಡಿಯಾಗೆ ಟಿ20 ವಿಶ್ವಕಪ್ ತಂದುಕೊಟ್ಟ ಬಹುತೇಕ ಆಟಗಾರರು ಇದೀಗ ನಿವೃತ್ತಿಯಾಗಿದ್ದಾರೆ. ಇದಾಗ್ಯೂ ಕೆಲವರು ಈಗಲೂ ಕ್ರಿಕೆಟ್​ ಅಂಗಳದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬುದು ವಿಶೇಷ. ಹಾಗಿದ್ರೆ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಆಡಿದ ಟೀಮ್ ಇಂಡಿಯಾ ಪ್ಲೇಯಿಂಗ್​ ಇಲೆವೆನ್​ ಆಟಗಾರರು ಈಗ ಎಲ್ಲಿದ್ದಾರೆ, ಏನ್ಮಾಡ್ತಿದ್ದಾರೆ ಎಂದು ನೋಡುವುದಾದರೆ...

4 / 19
1) ಗೌತಮ್ ಗಂಭೀರ್ : ಪಾಕ್​ ವಿರುದ್ಧದ ಫೈನಲ್‌ನಲ್ಲಿ ಗಂಭೀರ್ 75 ರನ್‌ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದ್ದರು. ಇದೀಗ ಕ್ರಿಕೆಟ್​ಗೆ ವಿದಾಯ ಹೇಳಿರುವ ಗೌತಿ ಪೂರ್ವ ದೆಹಲಿಯ ಸಂಸದರಾಗಿ ರಾಜಕೀಯಕ್ಕೆ ಇಳಿದಿದ್ದಾರೆ. ಅಲ್ಲದೆ ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಮೆಂಟರ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಕಾಮೆಂಟೇಟರ್ ಹಾಗೂ ಲೆಜೆಂಡ್ಸ್​ ಲೀಗ್​ ಕ್ರಿಕೆಟ್​ನಲ್ಲೂ ತೊಡಗಿಸಿಕೊಳ್ಳುತ್ತಿದ್ದಾರೆ.

1) ಗೌತಮ್ ಗಂಭೀರ್ : ಪಾಕ್​ ವಿರುದ್ಧದ ಫೈನಲ್‌ನಲ್ಲಿ ಗಂಭೀರ್ 75 ರನ್‌ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದ್ದರು. ಇದೀಗ ಕ್ರಿಕೆಟ್​ಗೆ ವಿದಾಯ ಹೇಳಿರುವ ಗೌತಿ ಪೂರ್ವ ದೆಹಲಿಯ ಸಂಸದರಾಗಿ ರಾಜಕೀಯಕ್ಕೆ ಇಳಿದಿದ್ದಾರೆ. ಅಲ್ಲದೆ ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಮೆಂಟರ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಕಾಮೆಂಟೇಟರ್ ಹಾಗೂ ಲೆಜೆಂಡ್ಸ್​ ಲೀಗ್​ ಕ್ರಿಕೆಟ್​ನಲ್ಲೂ ತೊಡಗಿಸಿಕೊಳ್ಳುತ್ತಿದ್ದಾರೆ.

5 / 19
2) ಯೂಸುಫ್ ಪಠಾಣ್: ಟಿ20 ವಿಶ್ವಕಪ್​ ಫೈನಲ್‌ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಎಂಟ್ರಿ ಕೊಟ್ಟಿದ್ದ ಯೂಸುಫ್ ಪಠಾಣ್ ಅಂದು 15 ರನ್ ಗಳಿಸಿದ್ದರು. ಸದ್ಯ ಟೀಮ್​ ಇಂಡಿಯಾದಿಂದ ಹೊರಗುಳಿದಿರುವ ಯೂಸುಫ್ ಲೆಜೆಂಡ್ಸ್ ಲೀಗ್ ಆಡುತ್ತಿದ್ದಾರೆ.

2) ಯೂಸುಫ್ ಪಠಾಣ್: ಟಿ20 ವಿಶ್ವಕಪ್​ ಫೈನಲ್‌ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಎಂಟ್ರಿ ಕೊಟ್ಟಿದ್ದ ಯೂಸುಫ್ ಪಠಾಣ್ ಅಂದು 15 ರನ್ ಗಳಿಸಿದ್ದರು. ಸದ್ಯ ಟೀಮ್​ ಇಂಡಿಯಾದಿಂದ ಹೊರಗುಳಿದಿರುವ ಯೂಸುಫ್ ಲೆಜೆಂಡ್ಸ್ ಲೀಗ್ ಆಡುತ್ತಿದ್ದಾರೆ.

6 / 19
3) ರಾಬಿನ್ ಉತ್ತಪ್ಪ: ಟಿ20 ವಿಶ್ವಕಪ್ ತಂಡದಲ್ಲಿದ್ದ ಕನ್ನಡಿಗ ರಾಬಿನ್ ಉತ್ತಪ್ಪ ಫೈನಲ್​ನಲ್ಲಿ 8 ರನ್ ಗಳಿಸಿದ್ದರು. ಇತ್ತೀಚೆಗೆ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿರುವ ಉತ್ತಪ್ಪ, ಮುಂಬರುವ ದಿನಗಳಲ್ಲಿ ಲೆಜೆಂಡ್ಸ್ ಲೀಗ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

3) ರಾಬಿನ್ ಉತ್ತಪ್ಪ: ಟಿ20 ವಿಶ್ವಕಪ್ ತಂಡದಲ್ಲಿದ್ದ ಕನ್ನಡಿಗ ರಾಬಿನ್ ಉತ್ತಪ್ಪ ಫೈನಲ್​ನಲ್ಲಿ 8 ರನ್ ಗಳಿಸಿದ್ದರು. ಇತ್ತೀಚೆಗೆ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿರುವ ಉತ್ತಪ್ಪ, ಮುಂಬರುವ ದಿನಗಳಲ್ಲಿ ಲೆಜೆಂಡ್ಸ್ ಲೀಗ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

7 / 19
4) ಯುವರಾಜ್ ಸಿಂಗ್: ಟಿ20 ವಿಶ್ವಕಪ್​ನ ಹೀರೋ ಎನಿಸಿಕೊಂಡಿದ್ದ ಯುವರಾಜ್ ಸಿಂಗ್ ಕೂಡ ಇದೀಗ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. ಅಲ್ಲದೆ ಇದೀಗ ಯುವಿ, ತಮ್ಮದೇ ಕ್ರಿಕೆಟ್ ಅಕಾಡೆಮಿ ಹಾಗೂ ಬಿಸಿನೆಸ್​ನ್ನು ನೋಡಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಲೆಜೆಂಡ್ಸ್ ಲೀಗ್ ಟೂರ್ನಿಗಳಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

4) ಯುವರಾಜ್ ಸಿಂಗ್: ಟಿ20 ವಿಶ್ವಕಪ್​ನ ಹೀರೋ ಎನಿಸಿಕೊಂಡಿದ್ದ ಯುವರಾಜ್ ಸಿಂಗ್ ಕೂಡ ಇದೀಗ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. ಅಲ್ಲದೆ ಇದೀಗ ಯುವಿ, ತಮ್ಮದೇ ಕ್ರಿಕೆಟ್ ಅಕಾಡೆಮಿ ಹಾಗೂ ಬಿಸಿನೆಸ್​ನ್ನು ನೋಡಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಲೆಜೆಂಡ್ಸ್ ಲೀಗ್ ಟೂರ್ನಿಗಳಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

8 / 19
5) ಮಹೇಂದ್ರ ಸಿಂಗ್ ಧೋನಿ: ಅಂದಿನ ಟೀಮ್ ಇಂಡಿಯಾ ನಾಯಕ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ನೀಡಿದ್ದಾರೆ. ಇದಾಗ್ಯೂ ಧೋನಿ ಐಪಿಎಲ್​ನಲ್ಲಿ ಸಿಎಸ್​ಕೆ ಪರ ಆಡುತ್ತಿರುವುದು ವಿಶೇಷ.

5) ಮಹೇಂದ್ರ ಸಿಂಗ್ ಧೋನಿ: ಅಂದಿನ ಟೀಮ್ ಇಂಡಿಯಾ ನಾಯಕ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ನೀಡಿದ್ದಾರೆ. ಇದಾಗ್ಯೂ ಧೋನಿ ಐಪಿಎಲ್​ನಲ್ಲಿ ಸಿಎಸ್​ಕೆ ಪರ ಆಡುತ್ತಿರುವುದು ವಿಶೇಷ.

9 / 19
6) ರೋಹಿತ್ ಶರ್ಮಾ: ಪ್ರಸ್ತುತ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಚೊಚ್ಚಲ ಟಿ20 ವಿಶ್ವಕಪ್ ಫೈನಲ್ ಆಡಿದ್ದರು. ಅಂದು 16 ಎಸೆತಗಳಲ್ಲಿ ಅಜೇಯ 30 ರನ್ ಬಾರಿಸಿ ಮಿಂಚಿದ್ದರು. ಇದೀಗ ರೋಹಿತ್ ಶರ್ಮಾ ಟೀಮ್ ಇಂಡಿಯಾದ ನಾಯಕನಾಗಿ ಮೂರು ಮಾದರಿ ಕ್ರಿಕೆಟ್​ನಲ್ಲೂ ಭಾರತ ತಂಡದ ಅವಿಭಾಜ್ಯ ಅಂಗವಾಗಿದ್ದಾರೆ.

6) ರೋಹಿತ್ ಶರ್ಮಾ: ಪ್ರಸ್ತುತ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಚೊಚ್ಚಲ ಟಿ20 ವಿಶ್ವಕಪ್ ಫೈನಲ್ ಆಡಿದ್ದರು. ಅಂದು 16 ಎಸೆತಗಳಲ್ಲಿ ಅಜೇಯ 30 ರನ್ ಬಾರಿಸಿ ಮಿಂಚಿದ್ದರು. ಇದೀಗ ರೋಹಿತ್ ಶರ್ಮಾ ಟೀಮ್ ಇಂಡಿಯಾದ ನಾಯಕನಾಗಿ ಮೂರು ಮಾದರಿ ಕ್ರಿಕೆಟ್​ನಲ್ಲೂ ಭಾರತ ತಂಡದ ಅವಿಭಾಜ್ಯ ಅಂಗವಾಗಿದ್ದಾರೆ.

10 / 19
7) ಇರ್ಫಾನ್ ಪಠಾಣ್: ಮಾಂತ್ರಿಕ ಸ್ವಿಂಗ್​ ಬೌಲಿಂಗ್​ ಮೂಲಕ ಫೈನಲ್‌ನಲ್ಲಿ ಮೋಡಿ ಮಾಡಿದ್ದ ಇರ್ಫಾನ್ ಪಠಾಣ್ 3 ಪ್ರಮುಖ ವಿಕೆಟ್ ಉರುಳಿಸಿದ್ದರು. ಸದ್ಯ ಕ್ರಿಕೆಟ್​ನಿಂದ ನಿವೃತ್ತಿಯಾಗಿರುವ ಪಠಾಣ್, ವೀಕ್ಷಕರ ವಿವರಣೆಗಾರನಾಗಿ ಹಾಗೂ ಲೆಜೆಂಡ್ ಲೀಗ್​ನಲ್ಲಿ ​ಕಾಣಿಸಿಕೊಳ್ಳುತ್ತಿದ್ದಾರೆ.

7) ಇರ್ಫಾನ್ ಪಠಾಣ್: ಮಾಂತ್ರಿಕ ಸ್ವಿಂಗ್​ ಬೌಲಿಂಗ್​ ಮೂಲಕ ಫೈನಲ್‌ನಲ್ಲಿ ಮೋಡಿ ಮಾಡಿದ್ದ ಇರ್ಫಾನ್ ಪಠಾಣ್ 3 ಪ್ರಮುಖ ವಿಕೆಟ್ ಉರುಳಿಸಿದ್ದರು. ಸದ್ಯ ಕ್ರಿಕೆಟ್​ನಿಂದ ನಿವೃತ್ತಿಯಾಗಿರುವ ಪಠಾಣ್, ವೀಕ್ಷಕರ ವಿವರಣೆಗಾರನಾಗಿ ಹಾಗೂ ಲೆಜೆಂಡ್ ಲೀಗ್​ನಲ್ಲಿ ​ಕಾಣಿಸಿಕೊಳ್ಳುತ್ತಿದ್ದಾರೆ.

11 / 19
8) ಆರ್.ಪಿ.ಸಿಂಗ್: ಎಡಗೈ ವೇಗಿ ಆರ್​ಪಿ ಸಿಂಗ್​ ಫೈನಲ್‌ ಪಂದ್ಯದಲ್ಲಿ ಮೂರು ವಿಕೆಟ್ ಕಬಳಿಸಿದ್ದರು. ಇದೀಗ ಕ್ರಿಕೆಟ್​ನಿಂದ ನಿವೃತ್ತಿಯಾಗಿರುವ ಆರ್​ಪಿ ಸಿಂಗ್ ಭಾರತೀಯ ಕ್ರಿಕೆಟ್ ಮಂಡಳಿಯ ಆಯ್ಕೆ ಸಮಿತಿ ಸದಸ್ಯರಾಗಿದ್ದಾರೆ.

8) ಆರ್.ಪಿ.ಸಿಂಗ್: ಎಡಗೈ ವೇಗಿ ಆರ್​ಪಿ ಸಿಂಗ್​ ಫೈನಲ್‌ ಪಂದ್ಯದಲ್ಲಿ ಮೂರು ವಿಕೆಟ್ ಕಬಳಿಸಿದ್ದರು. ಇದೀಗ ಕ್ರಿಕೆಟ್​ನಿಂದ ನಿವೃತ್ತಿಯಾಗಿರುವ ಆರ್​ಪಿ ಸಿಂಗ್ ಭಾರತೀಯ ಕ್ರಿಕೆಟ್ ಮಂಡಳಿಯ ಆಯ್ಕೆ ಸಮಿತಿ ಸದಸ್ಯರಾಗಿದ್ದಾರೆ.

12 / 19
9) ಹರ್ಭಜನ್ ಸಿಂಗ್: ಪಾಕ್ ವಿರುದ್ಧದ ಫೈನಲ್‌ನಲ್ಲಿ ಹರ್ಭಜನ್ ಸಿಂಗ್‌ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿರಲಿಲ್ಲ. ಇದೀಗ ಅಂತರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದಿರುವ ಭಜ್ಜಿ ಕ್ರಿಕೆಟ್​ ಚರ್ಚಾ ಪ್ಯಾನೆಲ್​ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

9) ಹರ್ಭಜನ್ ಸಿಂಗ್: ಪಾಕ್ ವಿರುದ್ಧದ ಫೈನಲ್‌ನಲ್ಲಿ ಹರ್ಭಜನ್ ಸಿಂಗ್‌ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿರಲಿಲ್ಲ. ಇದೀಗ ಅಂತರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದಿರುವ ಭಜ್ಜಿ ಕ್ರಿಕೆಟ್​ ಚರ್ಚಾ ಪ್ಯಾನೆಲ್​ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

13 / 19
10) ಜೋಗಿಂದರ್ ಶರ್ಮಾ: ಫೈನಲ್ ಓವರ್ ಎಸೆದಿದ್ದ ಜೋಗಿದಂರ್ ಶರ್ಮಾ ಕೊನೆಯ ವಿಕೆಟ್ ಸೇರಿದಂತೆ ನಿರ್ಣಾಯಕ ಪಂದ್ಯದಲ್ಲಿ 2 ವಿಕೆಟ್ ಪಡೆದಿದ್ದರು. ಇದೀಗ ಟಿ20 ವಿಶ್ವಕಪ್ ಹೀರೋ ಹರಿಯಾಣ ಪೊಲೀಸ್ ಇಲಾಖೆಯಲ್ಲಿ ಡಿ.ಎಸ್.ಪಿ. ಆಗಿ ಕಾರ್ಯ ನಿರ್ವಹಿಸುತ್ತಿರುವುದು ವಿಶೇಷ.

10) ಜೋಗಿಂದರ್ ಶರ್ಮಾ: ಫೈನಲ್ ಓವರ್ ಎಸೆದಿದ್ದ ಜೋಗಿದಂರ್ ಶರ್ಮಾ ಕೊನೆಯ ವಿಕೆಟ್ ಸೇರಿದಂತೆ ನಿರ್ಣಾಯಕ ಪಂದ್ಯದಲ್ಲಿ 2 ವಿಕೆಟ್ ಪಡೆದಿದ್ದರು. ಇದೀಗ ಟಿ20 ವಿಶ್ವಕಪ್ ಹೀರೋ ಹರಿಯಾಣ ಪೊಲೀಸ್ ಇಲಾಖೆಯಲ್ಲಿ ಡಿ.ಎಸ್.ಪಿ. ಆಗಿ ಕಾರ್ಯ ನಿರ್ವಹಿಸುತ್ತಿರುವುದು ವಿಶೇಷ.

14 / 19
11) ಶ್ರೀಶಾಂತ್: ಫೈನಲ್‌ನಲ್ಲಿ ಪಾಕ್ ಬ್ಯಾಟ್ಸ್​ಮನ್​ ಮಿಸ್ಬಾ ಉಲ್ ಹಕ್​ ಅವರ ಕ್ಯಾಚ್ ಹಿಡಿದಿದ್ದ ಶ್ರೀಶಾಂತ್ ಸದ್ಯ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಅಲ್ಲದೆ ಲೆಜೆಂಡ್ಸ್ ಲೀಗ್ ಮೂಲಕ ಮತ್ತೆ ಮೈದಾನಕ್ಕಿಳಿದಿದ್ದಾರೆ.

11) ಶ್ರೀಶಾಂತ್: ಫೈನಲ್‌ನಲ್ಲಿ ಪಾಕ್ ಬ್ಯಾಟ್ಸ್​ಮನ್​ ಮಿಸ್ಬಾ ಉಲ್ ಹಕ್​ ಅವರ ಕ್ಯಾಚ್ ಹಿಡಿದಿದ್ದ ಶ್ರೀಶಾಂತ್ ಸದ್ಯ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಅಲ್ಲದೆ ಲೆಜೆಂಡ್ಸ್ ಲೀಗ್ ಮೂಲಕ ಮತ್ತೆ ಮೈದಾನಕ್ಕಿಳಿದಿದ್ದಾರೆ.

15 / 19
12) ವೀರೇಂದ್ರ ಸೆಹ್ವಾಗ್: 2007ರ ಟಿ20 ವಿಶ್ವಕಪ್​ ಫೈನಲ್​ನಲ್ಲಿ ಗಾಯದ ಕಾರಣ ಸೆಹ್ವಾಗ್ ಆಡಿರಲಿಲ್ಲ. ಇದೀಗ ನಿವೃತ್ತಿ ನೀಡಿರುವ ಸೆಹ್ವಾಗ್ ಲೆಜೆಂಡ್ಸ್ ಲೀಗ್ ಆಡ್ತಿದ್ದಾರೆ.

12) ವೀರೇಂದ್ರ ಸೆಹ್ವಾಗ್: 2007ರ ಟಿ20 ವಿಶ್ವಕಪ್​ ಫೈನಲ್​ನಲ್ಲಿ ಗಾಯದ ಕಾರಣ ಸೆಹ್ವಾಗ್ ಆಡಿರಲಿಲ್ಲ. ಇದೀಗ ನಿವೃತ್ತಿ ನೀಡಿರುವ ಸೆಹ್ವಾಗ್ ಲೆಜೆಂಡ್ಸ್ ಲೀಗ್ ಆಡ್ತಿದ್ದಾರೆ.

16 / 19
13) ದಿನೇಶ್ ಕಾರ್ತಿಕ್: ಅಂದು ಟೀಮ್ ಇಂಡಿಯಾದ ಹೆಚ್ಚುವರಿ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದ ದಿನೇಶ್ ಕಾರ್ತಿಕ್​ ಕೂಡ ಫೈನಲ್ ಪಂದ್ಯದಲ್ಲಿ ಅವಕಾಶ ಪಡೆದಿರಲಿಲ್ಲ. ಇದಾಗ್ಯೂ ಡಿಕೆ ಈಗಲೂ ಭಾರತ ತಂಡದ ಭಾಗವಾಗಿರುವುದು ವಿಶೇಷ.

13) ದಿನೇಶ್ ಕಾರ್ತಿಕ್: ಅಂದು ಟೀಮ್ ಇಂಡಿಯಾದ ಹೆಚ್ಚುವರಿ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದ ದಿನೇಶ್ ಕಾರ್ತಿಕ್​ ಕೂಡ ಫೈನಲ್ ಪಂದ್ಯದಲ್ಲಿ ಅವಕಾಶ ಪಡೆದಿರಲಿಲ್ಲ. ಇದಾಗ್ಯೂ ಡಿಕೆ ಈಗಲೂ ಭಾರತ ತಂಡದ ಭಾಗವಾಗಿರುವುದು ವಿಶೇಷ.

17 / 19
14) ಪಿಯುಷ್ ಚಾವ್ಲಾ: ಟೀಮ್ ಇಂಡಿಯಾದಲ್ಲಿ ಸ್ಪಿನ್ನರ್ ಆಗಿ ಕಾಣಿಸಿಕೊಂಡ ಚಾವ್ಲಾ ಕೂಡ ಫೈನಲ್​ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಪಿಯುಷ್ ಚಾವ್ಲಾ ಐಪಿಎಲ್​ನಲ್ಲಿ ಮುಂದುವರೆದಿದ್ದಾರೆ.

14) ಪಿಯುಷ್ ಚಾವ್ಲಾ: ಟೀಮ್ ಇಂಡಿಯಾದಲ್ಲಿ ಸ್ಪಿನ್ನರ್ ಆಗಿ ಕಾಣಿಸಿಕೊಂಡ ಚಾವ್ಲಾ ಕೂಡ ಫೈನಲ್​ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಪಿಯುಷ್ ಚಾವ್ಲಾ ಐಪಿಎಲ್​ನಲ್ಲಿ ಮುಂದುವರೆದಿದ್ದಾರೆ.

18 / 19
15) ಅಜಿತ್ ಅಗರ್ಕರ್: 15 ಸದಸ್ಯರ ತಂಡದಲ್ಲಿ ವೇಗಿಯಾಗಿ ಸ್ಥಾನ ಪಡೆದಿದ್ದ ಅಜಿತ್ ಅಗರ್ಕರ್​ಗೂ ಕೂಡ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುವ ಅವಕಾಶ ಸಿಕ್ಕಿರಲಿಲ್ಲ. ಇದೀಗ ನಿವೃತ್ತಿ ಘೋಷಿಸಿರುವ ಅಗರ್ಕರ್ ಕಾಮೆಂಟೇಟರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

15) ಅಜಿತ್ ಅಗರ್ಕರ್: 15 ಸದಸ್ಯರ ತಂಡದಲ್ಲಿ ವೇಗಿಯಾಗಿ ಸ್ಥಾನ ಪಡೆದಿದ್ದ ಅಜಿತ್ ಅಗರ್ಕರ್​ಗೂ ಕೂಡ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುವ ಅವಕಾಶ ಸಿಕ್ಕಿರಲಿಲ್ಲ. ಇದೀಗ ನಿವೃತ್ತಿ ಘೋಷಿಸಿರುವ ಅಗರ್ಕರ್ ಕಾಮೆಂಟೇಟರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

19 / 19

Published On - 12:15 pm, Sat, 24 September 22

Follow us
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?