AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ವಿಶ್ವಕಪ್​ನಿಂದ ಪಾಕಿಸ್ತಾನ್ ಹಿಂದೆ ಸರಿದರೆ ಯಾವ ತಂಡಕ್ಕೆ ಅವಕಾಶ? ಇಲ್ಲಿದೆ ಮಾಹಿತಿ

ICC World Cup 2023: ಏಷ್ಯಾಕಪ್​ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಮುಂದಾಗಿದೆ. ಅಂದರೆ ಈ ಬಾರಿಯ ಏಷ್ಯಾಕಪ್ ಪಾಕಿಸ್ತಾನ್ ಹಾಗೂ ಶ್ರೀಲಂಕಾದಲ್ಲಿ ನಡೆಯಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jul 09, 2023 | 9:30 PM

ICC ODI World Cup 2023: ಏಕದಿನ ವಿಶ್ವಕಪ್​ಗೆ ಕೌಂಟ್ ಡೌನ್ ಶುರುವಾಗಿದೆ. ಭಾರತದಲ್ಲಿ ಅಕ್ಟೋಬರ್-ನವೆಂಬರ್​ನಲ್ಲಿ ನಡೆಯಲಿರುವ ಈ ಕ್ರಿಕೆಟ್ ಕದನಕ್ಕಾಗಿ ಈಗಾಗಲೇ ವೇಳಾಪಟ್ಟಿಯನ್ನು ಸಹ ಪ್ರಕಟಿಸಲಾಗಿದೆ. ಇದಾಗ್ಯೂ ಪಾಕಿಸ್ತಾನ್ ತಂಡ ಮಾತ್ರ ಇದುವರೆಗೆ ತನ್ನ ಭಾಗವಹಿಸುವಿಕೆಯನ್ನು ಖಚಿತಪಡಿಸಿಲ್ಲ.

ICC ODI World Cup 2023: ಏಕದಿನ ವಿಶ್ವಕಪ್​ಗೆ ಕೌಂಟ್ ಡೌನ್ ಶುರುವಾಗಿದೆ. ಭಾರತದಲ್ಲಿ ಅಕ್ಟೋಬರ್-ನವೆಂಬರ್​ನಲ್ಲಿ ನಡೆಯಲಿರುವ ಈ ಕ್ರಿಕೆಟ್ ಕದನಕ್ಕಾಗಿ ಈಗಾಗಲೇ ವೇಳಾಪಟ್ಟಿಯನ್ನು ಸಹ ಪ್ರಕಟಿಸಲಾಗಿದೆ. ಇದಾಗ್ಯೂ ಪಾಕಿಸ್ತಾನ್ ತಂಡ ಮಾತ್ರ ಇದುವರೆಗೆ ತನ್ನ ಭಾಗವಹಿಸುವಿಕೆಯನ್ನು ಖಚಿತಪಡಿಸಿಲ್ಲ.

1 / 11
ಈ ಬಗ್ಗೆ ಮಾತನಾಡಿರುವ ಪಾಕಿಸ್ತಾನ್ ಕ್ರೀಡಾ ಸಚಿವ ಎಹ್ಸಾನ್ ಮಜಾರಿ, ಭಾರತವು ಏಷ್ಯಾಕಪ್​ಗಾಗಿ ತಮ್ಮ ದೇಶಕ್ಕೆ ಬರದಿದ್ದರೆ, ಪಾಕಿಸ್ತಾನ್ ತಂಡವನ್ನು ಭಾರತದಲ್ಲಿ ಏಕದಿನ ವಿಶ್ವಕಪ್ ಆಡಲು ಕಳುಹಿಸುವುದಿಲ್ಲ ಎಂದಿದ್ದಾರೆ. ಇದರೊಂದಿಗೆ ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ಭಾಗಹಿಸುವುದಿಲ್ಲವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಈ ಬಗ್ಗೆ ಮಾತನಾಡಿರುವ ಪಾಕಿಸ್ತಾನ್ ಕ್ರೀಡಾ ಸಚಿವ ಎಹ್ಸಾನ್ ಮಜಾರಿ, ಭಾರತವು ಏಷ್ಯಾಕಪ್​ಗಾಗಿ ತಮ್ಮ ದೇಶಕ್ಕೆ ಬರದಿದ್ದರೆ, ಪಾಕಿಸ್ತಾನ್ ತಂಡವನ್ನು ಭಾರತದಲ್ಲಿ ಏಕದಿನ ವಿಶ್ವಕಪ್ ಆಡಲು ಕಳುಹಿಸುವುದಿಲ್ಲ ಎಂದಿದ್ದಾರೆ. ಇದರೊಂದಿಗೆ ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ಭಾಗಹಿಸುವುದಿಲ್ಲವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

2 / 11
ಒಂದು ವೇಳೆ ಪಾಕಿಸ್ತಾನ್ ತಂಡ ಏಕದಿನ ವಿಶ್ವಕಪ್​ನಿಂದ ಹೊರಗುಳಿದರೆ ಐಸಿಸಿಯ ಮುಂದಿನ ನಡೆಯೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಳ್ಳುವುದು ಸಹಜ. ಈ ಪ್ರಶ್ನೆಗೆ ಸದ್ಯದ ಉತ್ತರ ಮತ್ತೊಂದು ತಂಡಕ್ಕೆ ಅವಕಾಶ.

ಒಂದು ವೇಳೆ ಪಾಕಿಸ್ತಾನ್ ತಂಡ ಏಕದಿನ ವಿಶ್ವಕಪ್​ನಿಂದ ಹೊರಗುಳಿದರೆ ಐಸಿಸಿಯ ಮುಂದಿನ ನಡೆಯೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಳ್ಳುವುದು ಸಹಜ. ಈ ಪ್ರಶ್ನೆಗೆ ಸದ್ಯದ ಉತ್ತರ ಮತ್ತೊಂದು ತಂಡಕ್ಕೆ ಅವಕಾಶ.

3 / 11
ಅಂದರೆ ಈಗಾಗಲೇ ಅರ್ಹತೆ ಪಡೆದಿರುವ ತಂಡಗಳಲ್ಲಿ ಒಂದು ಟೀಮ್ ವಿಶ್ವಕಪ್​ನಿಂದ ಹೊರಗುಳಿದರೆ ಅರ್ಹತಾ ಸುತ್ತಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 3ನೇ ತಂಡವನ್ನು ಆಯ್ಕೆ ಮಾಡಲಾಗುತ್ತದೆ.

ಅಂದರೆ ಈಗಾಗಲೇ ಅರ್ಹತೆ ಪಡೆದಿರುವ ತಂಡಗಳಲ್ಲಿ ಒಂದು ಟೀಮ್ ವಿಶ್ವಕಪ್​ನಿಂದ ಹೊರಗುಳಿದರೆ ಅರ್ಹತಾ ಸುತ್ತಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 3ನೇ ತಂಡವನ್ನು ಆಯ್ಕೆ ಮಾಡಲಾಗುತ್ತದೆ.

4 / 11
ಈ ಬಾರಿಯ ಏಕದಿನ ವಿಶ್ವಕಪ್​ಗೆ 8 ತಂಡಗಳು ನೇರವಾಗಿ ಅರ್ಹತೆ ಪಡೆದರೆ, ಶ್ರೀಲಂಕಾ ಹಾಗೂ ನೆದರ್​ಲ್ಯಾಂಡ್ಸ್​ ತಂಡಗಳು ಅರ್ಹತಾ ಸುತ್ತಿನ ಮೂಲಕ ಪ್ರವೇಶ ಪಡೆದುಕೊಂಡಿದೆ. ಇಲ್ಲಿ ಸೂಪರ್ ಸಿಕ್ಸ್​ ಪಾಯಿಂಟ್ಸ್ ಟೇಬಲ್​ನಲ್ಲಿ ಶ್ರೀಲಂಕಾ ಅಗ್ರಸ್ಥಾನದಲ್ಲಿದ್ದರೆ, ನೆದರ್​ಲ್ಯಾಂಡ್ಸ್ ದ್ವಿತೀಯ ಸ್ಥಾನ ಅಲಂಕರಿಸಿದೆ.

ಈ ಬಾರಿಯ ಏಕದಿನ ವಿಶ್ವಕಪ್​ಗೆ 8 ತಂಡಗಳು ನೇರವಾಗಿ ಅರ್ಹತೆ ಪಡೆದರೆ, ಶ್ರೀಲಂಕಾ ಹಾಗೂ ನೆದರ್​ಲ್ಯಾಂಡ್ಸ್​ ತಂಡಗಳು ಅರ್ಹತಾ ಸುತ್ತಿನ ಮೂಲಕ ಪ್ರವೇಶ ಪಡೆದುಕೊಂಡಿದೆ. ಇಲ್ಲಿ ಸೂಪರ್ ಸಿಕ್ಸ್​ ಪಾಯಿಂಟ್ಸ್ ಟೇಬಲ್​ನಲ್ಲಿ ಶ್ರೀಲಂಕಾ ಅಗ್ರಸ್ಥಾನದಲ್ಲಿದ್ದರೆ, ನೆದರ್​ಲ್ಯಾಂಡ್ಸ್ ದ್ವಿತೀಯ ಸ್ಥಾನ ಅಲಂಕರಿಸಿದೆ.

5 / 11
ಇನ್ನು ಮೂರನೇ ಸ್ಥಾನದಲ್ಲಿರುವುದು ಸ್ಕಾಟ್​ಲ್ಯಾಂಡ್ ತಂಡ. ಹೀಗಾಗಿ ಪಾಕಿಸ್ತಾನ್ ತಂಡವು ಏಕದಿನ ವಿಶ್ವಕಪ್​ನಿಂದ ಹೊರಗುಳಿದರೆ ಸ್ಕಾಟ್​ಲ್ಯಾಂಡ್ ತಂಡಕ್ಕೆ ಅದೃಷ್ಟ ಖುಲಾಯಿಸಲಿದೆ. ಅದರಂತೆ ಪಾಕಿಸ್ತಾನ್ ತಂಡದ ಜಾಗದಲ್ಲಿ ಸ್ಕಾಟ್​ಲ್ಯಾಂಡ್ ಕಣಕ್ಕಿಳಿಯಬಹುದು.

ಇನ್ನು ಮೂರನೇ ಸ್ಥಾನದಲ್ಲಿರುವುದು ಸ್ಕಾಟ್​ಲ್ಯಾಂಡ್ ತಂಡ. ಹೀಗಾಗಿ ಪಾಕಿಸ್ತಾನ್ ತಂಡವು ಏಕದಿನ ವಿಶ್ವಕಪ್​ನಿಂದ ಹೊರಗುಳಿದರೆ ಸ್ಕಾಟ್​ಲ್ಯಾಂಡ್ ತಂಡಕ್ಕೆ ಅದೃಷ್ಟ ಖುಲಾಯಿಸಲಿದೆ. ಅದರಂತೆ ಪಾಕಿಸ್ತಾನ್ ತಂಡದ ಜಾಗದಲ್ಲಿ ಸ್ಕಾಟ್​ಲ್ಯಾಂಡ್ ಕಣಕ್ಕಿಳಿಯಬಹುದು.

6 / 11
ಸದ್ಯ ಏಕದಿನ ವಿಶ್ವಕಪ್​ನಲ್ಲಿ ಪಾಲ್ಗೊಳ್ಳುವಿಕೆಯ ಬಗ್ಗೆ ಯಾವುದೇ ಸ್ಪಷನೆ ನೀಡದೇ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಐಸಿಸಿ ಮುಂದೆ​ ನಾನಾ ಕಾರಣಗಳನ್ನು ಮುಂದಿಡುತ್ತಿದೆ. ಇದಕ್ಕೆ ಮುಖ್ಯ ಕಾರಣ ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಏಷ್ಯಾಕಪ್​ನಿಂದ ಟೀಮ್ ಇಂಡಿಯಾ ಹಿಂದೆ ಸರಿದಿರುವುದು.

ಸದ್ಯ ಏಕದಿನ ವಿಶ್ವಕಪ್​ನಲ್ಲಿ ಪಾಲ್ಗೊಳ್ಳುವಿಕೆಯ ಬಗ್ಗೆ ಯಾವುದೇ ಸ್ಪಷನೆ ನೀಡದೇ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಐಸಿಸಿ ಮುಂದೆ​ ನಾನಾ ಕಾರಣಗಳನ್ನು ಮುಂದಿಡುತ್ತಿದೆ. ಇದಕ್ಕೆ ಮುಖ್ಯ ಕಾರಣ ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಏಷ್ಯಾಕಪ್​ನಿಂದ ಟೀಮ್ ಇಂಡಿಯಾ ಹಿಂದೆ ಸರಿದಿರುವುದು.

7 / 11
ಅಂದರೆ ಈ ಬಾರಿಯ ಏಷ್ಯಾಕಪ್​ ಪಾಕಿಸ್ತಾನದಲ್ಲಿ ನಡೆಯಬೇಕಿತ್ತು. ಆದರೆ ಪಾಕ್​ನಲ್ಲಿ ಟೂರ್ನಿ ಆಯೋಜಿಸಿದರೆ ಭಾರತ ತಂಡ ಪಾಲ್ಗೊಳ್ಳುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿತ್ತು. ಅಲ್ಲದೆ ಏಷ್ಯಾಕಪ್​ನ್ನು ತಟಸ್ಥ ಸ್ಥಳದಲ್ಲಿ ಆಯೋಜನೆ ಮಾಡಿದ್ರೆ ಮಾತ್ರ ಟೀಮ್ ಇಂಡಿಯಾ ಭಾಗವಹಿಸಲಿದೆ ಎಂದು ತಿಳಿಸಿತ್ತು.

ಅಂದರೆ ಈ ಬಾರಿಯ ಏಷ್ಯಾಕಪ್​ ಪಾಕಿಸ್ತಾನದಲ್ಲಿ ನಡೆಯಬೇಕಿತ್ತು. ಆದರೆ ಪಾಕ್​ನಲ್ಲಿ ಟೂರ್ನಿ ಆಯೋಜಿಸಿದರೆ ಭಾರತ ತಂಡ ಪಾಲ್ಗೊಳ್ಳುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿತ್ತು. ಅಲ್ಲದೆ ಏಷ್ಯಾಕಪ್​ನ್ನು ತಟಸ್ಥ ಸ್ಥಳದಲ್ಲಿ ಆಯೋಜನೆ ಮಾಡಿದ್ರೆ ಮಾತ್ರ ಟೀಮ್ ಇಂಡಿಯಾ ಭಾಗವಹಿಸಲಿದೆ ಎಂದು ತಿಳಿಸಿತ್ತು.

8 / 11
ಅದರಂತೆ ಇದೀಗ ಏಷ್ಯಾಕಪ್​ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಮುಂದಾಗಿದೆ. ಅಂದರೆ ಈ ಬಾರಿಯ ಏಷ್ಯಾಕಪ್ ಪಾಕಿಸ್ತಾನ್ ಹಾಗೂ ಶ್ರೀಲಂಕಾದಲ್ಲಿ ನಡೆಯಲಿದೆ. ಇಲ್ಲಿ ಭಾರತದ ಎಲ್ಲಾ ಪಂದ್ಯಗಳಿಗೆ ಶ್ರೀಲಂಕಾ ಆತಿಥ್ಯವಹಿಸಲಿದೆ.

ಅದರಂತೆ ಇದೀಗ ಏಷ್ಯಾಕಪ್​ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಮುಂದಾಗಿದೆ. ಅಂದರೆ ಈ ಬಾರಿಯ ಏಷ್ಯಾಕಪ್ ಪಾಕಿಸ್ತಾನ್ ಹಾಗೂ ಶ್ರೀಲಂಕಾದಲ್ಲಿ ನಡೆಯಲಿದೆ. ಇಲ್ಲಿ ಭಾರತದ ಎಲ್ಲಾ ಪಂದ್ಯಗಳಿಗೆ ಶ್ರೀಲಂಕಾ ಆತಿಥ್ಯವಹಿಸಲಿದೆ.

9 / 11
ಇತ್ತ ಪಾಕಿಸ್ತಾನಕ್ಕೆ ಆಗಮಿಸಲು ನಿರಾಕರಿಸಿರುವ ಭಾರತದ ನಡೆಗೆ ಪ್ರತೀಕಾರವಾಗಿ ಇದೀಗ ಪಾಕ್ ಕ್ರಿಕೆಟ್ ಬೋರ್ಡ್ ಏಕದಿನ ವಿಶ್ವಕಪ್​ಗೆ ತಮ್ಮ ತಂಡವನ್ನು ಕಳುಹಿಸಲು ಹಿಂದೇಟು ಹಾಕುತ್ತಿದೆ.

ಇತ್ತ ಪಾಕಿಸ್ತಾನಕ್ಕೆ ಆಗಮಿಸಲು ನಿರಾಕರಿಸಿರುವ ಭಾರತದ ನಡೆಗೆ ಪ್ರತೀಕಾರವಾಗಿ ಇದೀಗ ಪಾಕ್ ಕ್ರಿಕೆಟ್ ಬೋರ್ಡ್ ಏಕದಿನ ವಿಶ್ವಕಪ್​ಗೆ ತಮ್ಮ ತಂಡವನ್ನು ಕಳುಹಿಸಲು ಹಿಂದೇಟು ಹಾಕುತ್ತಿದೆ.

10 / 11
ಅಲ್ಲದೆ ಭಾರತದಲ್ಲಿನ ಏಕದಿನ ವಿಶ್ವಕಪ್​ನಲ್ಲಿ ತನ್ನ ಭಾಗವಹಿಸುವಿಕೆಯನ್ನು ಖಚಿತಪಡಿಸಲು ಇದೀಗ ವಿಶೇಷ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯ ಸಲ್ಲಿಸುವ ವರದಿಯ ಬಳಿಕ ಪಾಕಿಸ್ತಾನ್ ಪ್ರಧಾನಿ ಶಹಬಾಜ್ ಷರೀಫ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ಅಲ್ಲದೆ ಭಾರತದಲ್ಲಿನ ಏಕದಿನ ವಿಶ್ವಕಪ್​ನಲ್ಲಿ ತನ್ನ ಭಾಗವಹಿಸುವಿಕೆಯನ್ನು ಖಚಿತಪಡಿಸಲು ಇದೀಗ ವಿಶೇಷ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯ ಸಲ್ಲಿಸುವ ವರದಿಯ ಬಳಿಕ ಪಾಕಿಸ್ತಾನ್ ಪ್ರಧಾನಿ ಶಹಬಾಜ್ ಷರೀಫ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

11 / 11
Follow us
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ