AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತೆ ಕಣಕ್ಕಿಳಿಯುವುದು ಯಾವಾಗ? ಇಲ್ಲಿದೆ ಉತ್ತರ

Virat Kohli and Rohit Sharma: ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಈಗಾಗಲೇ ಟೆಸ್ಟ್ ಹಾಗೂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದೀಗ ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಮುಂದುವರೆದಿರುವ ರೋ-ಕೊ ಜೋಡಿಯನ್ನು ಮತ್ತೆ ಮೈದಾನದಲ್ಲಿ ನೋಡಲು ಇನ್ನೊಂದು ತಿಂಗಳು ಕಾಯಲೇಬೇಕು.

ಝಾಹಿರ್ ಯೂಸುಫ್
|

Updated on: Oct 26, 2025 | 10:54 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಮುಗಿದಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲೆರಡು ಮ್ಯಾಚ್​ನಲ್ಲಿ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದರೆ, ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಇನ್ನು ಉಭಯ ತಂಡಗಳು ಟಿ20 ಸರಣಿ ಆಡಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಮುಗಿದಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲೆರಡು ಮ್ಯಾಚ್​ನಲ್ಲಿ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದರೆ, ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಇನ್ನು ಉಭಯ ತಂಡಗಳು ಟಿ20 ಸರಣಿ ಆಡಲಿದೆ.

1 / 5
ಇತ್ತ ಟೀಮ್ ಇಂಡಿಯಾ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಇಬ್ಬರು ಕಾಣಿಸಿಕೊಳ್ಳುವುದಿಲ್ಲ. ಹೀಗಾಗಿ ರೋ-ಕೊ ಜೋಡಿ ಟೀಮ್ ಇಂಡಿಯಾ ಪರ ಮತ್ತೆ ಕಣಕ್ಕಿಳಿಯುವುದು ಯಾವಾಗ ಎಂಬ ಪ್ರಶ್ನೆ ಮೂಡುವುದು ಸಹಜ.

ಇತ್ತ ಟೀಮ್ ಇಂಡಿಯಾ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಇಬ್ಬರು ಕಾಣಿಸಿಕೊಳ್ಳುವುದಿಲ್ಲ. ಹೀಗಾಗಿ ರೋ-ಕೊ ಜೋಡಿ ಟೀಮ್ ಇಂಡಿಯಾ ಪರ ಮತ್ತೆ ಕಣಕ್ಕಿಳಿಯುವುದು ಯಾವಾಗ ಎಂಬ ಪ್ರಶ್ನೆ ಮೂಡುವುದು ಸಹಜ.

2 / 5
ಈ ಪ್ರಶ್ನೆಗೆ ಉತ್ತರ... ನವೆಂಬರ್​ ತಿಂಗಳಾಂತ್ಯದಲ್ಲಿ. ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಸರಣಿಯು ನವೆಂಬರ್​ನಲ್ಲಿ ಶುರುವಾಗಲಿದೆ. ಈ ಸರಣಿಯಲ್ಲಿ ಮೂರು ಏಕದಿನ ಪಂದ್ಯಗಳನ್ನಾಡಲಾಗುತ್ತದೆ. ಅದರಂತೆ ನವೆಂಬರ್ 30 ರಂದು ನಡೆಯಲಿರುವ ಮೊದಲ ಪಂದ್ಯದ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮತ್ತೆ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿದ್ದಾರೆ.

ಈ ಪ್ರಶ್ನೆಗೆ ಉತ್ತರ... ನವೆಂಬರ್​ ತಿಂಗಳಾಂತ್ಯದಲ್ಲಿ. ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಸರಣಿಯು ನವೆಂಬರ್​ನಲ್ಲಿ ಶುರುವಾಗಲಿದೆ. ಈ ಸರಣಿಯಲ್ಲಿ ಮೂರು ಏಕದಿನ ಪಂದ್ಯಗಳನ್ನಾಡಲಾಗುತ್ತದೆ. ಅದರಂತೆ ನವೆಂಬರ್ 30 ರಂದು ನಡೆಯಲಿರುವ ಮೊದಲ ಪಂದ್ಯದ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮತ್ತೆ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿದ್ದಾರೆ.

3 / 5
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೊದಲ ಏಕದಿನ ಪಂದ್ಯವು ನವೆಂಬರ್ 30 ರಂದು ನಡೆದರೆ, ದ್ವಿತೀಯ ಮ್ಯಾಚ್ ಡಿಸೆಂಬರ್ 3 ರಂದು ಜರುಗಲಿದೆ. ಹಾಗೆಯೇ ಮೂರನೇ ಪಂದ್ಯವು ಡಿಸೆಂಬರ್ 6 ರಂದು ನಡೆಯಲಿದೆ. ಇದಾದ ಬಳಿಕ ಟೀಮ್ ಇಂಡಿಯಾ ಜನವರಿಯಲ್ಲಿ ನ್ಯೂಝಿಲೆಂಡ್ ವಿರುದ್ಧ ಸರಣಿ ಆಡಲಿದೆ.

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೊದಲ ಏಕದಿನ ಪಂದ್ಯವು ನವೆಂಬರ್ 30 ರಂದು ನಡೆದರೆ, ದ್ವಿತೀಯ ಮ್ಯಾಚ್ ಡಿಸೆಂಬರ್ 3 ರಂದು ಜರುಗಲಿದೆ. ಹಾಗೆಯೇ ಮೂರನೇ ಪಂದ್ಯವು ಡಿಸೆಂಬರ್ 6 ರಂದು ನಡೆಯಲಿದೆ. ಇದಾದ ಬಳಿಕ ಟೀಮ್ ಇಂಡಿಯಾ ಜನವರಿಯಲ್ಲಿ ನ್ಯೂಝಿಲೆಂಡ್ ವಿರುದ್ಧ ಸರಣಿ ಆಡಲಿದೆ.

4 / 5
ಅಂದರೆ ರೋ-ಕೊ ಜೋಡಿಯ ಆರ್ಭಟವನ್ನು ಮತ್ತೊಮ್ಮೆ ಕಣ್ತುಂಬಿಕೊಳ್ಳಲು ಮುಂದಿನ ತಿಂಗಳಾಂತ್ಯದವರೆಗೆ ಕಾಯಲೇಬೇಕು. ಅದು ಕೂಡ ಬಲಿಷ್ಠ ಸೌತ್ ಆಫ್ರಿಕಾ ವಿರುದ್ಧ. ಹೀಗಾಗಿ ಮುಂದಿನ ಮೂರು ಪಂದ್ಯಗಳಲ್ಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಡೆಯಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು.

ಅಂದರೆ ರೋ-ಕೊ ಜೋಡಿಯ ಆರ್ಭಟವನ್ನು ಮತ್ತೊಮ್ಮೆ ಕಣ್ತುಂಬಿಕೊಳ್ಳಲು ಮುಂದಿನ ತಿಂಗಳಾಂತ್ಯದವರೆಗೆ ಕಾಯಲೇಬೇಕು. ಅದು ಕೂಡ ಬಲಿಷ್ಠ ಸೌತ್ ಆಫ್ರಿಕಾ ವಿರುದ್ಧ. ಹೀಗಾಗಿ ಮುಂದಿನ ಮೂರು ಪಂದ್ಯಗಳಲ್ಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಡೆಯಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!