AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧವನ್- ಆಯೇಷಾ ನಡುವೆ ಪ್ರೇಮಾಂಕುರವಾಗಿದ್ದು ಹೇಗೆ? ಆಯೇಷಾರ ಹಿನ್ನೆಲೆ ಏನು?

Shikhar Dhawan And Ayesha Mukherjee's Love Story: ಪ್ರಸ್ತುತ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿರುವ ಈ ಇಬ್ಬರ ಪ್ರೇಮ್ ಕಹಾನಿ ಮಾತ್ರ ತುಂಬಾ ಕುತೂಹಲಕಾರಿಯಾಗಿದೆ. ವಾಸ್ತವವಾಗಿ ಈ ಇಬ್ಬರ ನಡುವೆ ಪ್ರೀತಿ ಮೂಡಲು ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಹಾಗೂ ಶಿಖರ್ ಧವನ್ ಸಹ ಆಟಗಾರ ಹರ್ಭಜನ್ ಸಿಂಗ್ ಕಾರಣ.

ಪೃಥ್ವಿಶಂಕರ
|

Updated on:Oct 05, 2023 | 11:02 AM

Share
ಕೌಟುಂಬಿಕ ಕಲಹದಿಂದಾಗಿ ವರ್ಷಗಳಿಂದ ದೂರ ದೂರ ಇದ್ದ ಟೀಂ ಇಂಡಿಯಾ ಕ್ರಿಕೆಟಿಗ ಶಿಖರ್ ಧವನ್ ಮತ್ತು ಪತ್ನಿ ಆಯೇಷಾ ಮುಖರ್ಜಿ  ಇಂದು ಅಧಿಕೃತವಾಗಿ ಬೇರೆ ಬೇರೆಯಾಗಿದ್ದಾರೆ. ದೆಹಲಿಯ ಪಟಿಯಾಲ ಹೌಸ್ ಕಾಂಪ್ಲೆಕ್ಸ್‌ನಲ್ಲಿರುವ ಕೌಟುಂಬಿಕ ನ್ಯಾಯಾಲಯ ವಿಚ್ಛೇದನ ಮಂಜೂರು ಮಾಡಿದೆ.

ಕೌಟುಂಬಿಕ ಕಲಹದಿಂದಾಗಿ ವರ್ಷಗಳಿಂದ ದೂರ ದೂರ ಇದ್ದ ಟೀಂ ಇಂಡಿಯಾ ಕ್ರಿಕೆಟಿಗ ಶಿಖರ್ ಧವನ್ ಮತ್ತು ಪತ್ನಿ ಆಯೇಷಾ ಮುಖರ್ಜಿ ಇಂದು ಅಧಿಕೃತವಾಗಿ ಬೇರೆ ಬೇರೆಯಾಗಿದ್ದಾರೆ. ದೆಹಲಿಯ ಪಟಿಯಾಲ ಹೌಸ್ ಕಾಂಪ್ಲೆಕ್ಸ್‌ನಲ್ಲಿರುವ ಕೌಟುಂಬಿಕ ನ್ಯಾಯಾಲಯ ವಿಚ್ಛೇದನ ಮಂಜೂರು ಮಾಡಿದೆ.

1 / 9
ವರ್ಷಗಟ್ಟಲೆ ತಂದೆ ಮತ್ತು ಮಗನನ್ನು ದೂರವಿರಿಸಿ ಕ್ರಿಕೆಟಿಗ ಶಿಖರ್ ಧವನ್ ಮಾನಸಿಕ ಯಾತನೆ ಅನುಭವಿಸುವಂತೆ ಪತ್ನಿ ಆಯೇಷಾ ಮುಖರ್ಜಿ ಮಾಡಿದ್ದಾರೆ ಎಂದು ನ್ಯಾಯಾಧೀಶ ಹರೀಶ್‌ ಕುಮಾರ್‌ ಅವರು ಪರಿಗಣಿಸಿ ವಿಚ್ಛೇದನಕ್ಕೆ ಅನುಮೋದನೆ ನೀಡಿದ್ದಾರೆ.

ವರ್ಷಗಟ್ಟಲೆ ತಂದೆ ಮತ್ತು ಮಗನನ್ನು ದೂರವಿರಿಸಿ ಕ್ರಿಕೆಟಿಗ ಶಿಖರ್ ಧವನ್ ಮಾನಸಿಕ ಯಾತನೆ ಅನುಭವಿಸುವಂತೆ ಪತ್ನಿ ಆಯೇಷಾ ಮುಖರ್ಜಿ ಮಾಡಿದ್ದಾರೆ ಎಂದು ನ್ಯಾಯಾಧೀಶ ಹರೀಶ್‌ ಕುಮಾರ್‌ ಅವರು ಪರಿಗಣಿಸಿ ವಿಚ್ಛೇದನಕ್ಕೆ ಅನುಮೋದನೆ ನೀಡಿದ್ದಾರೆ.

2 / 9
2012 ರಲ್ಲಿ ಶಿಖರ್ ಧವನ್ ಹಾಗೂ ಆಯೇಷಾ ಮುಖರ್ಜಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಆಯೇಷಾ ಅವರಿಗೆ ಇದು ಎರಡನೇ ಮದುವೆ ಆಗಿತ್ತು. ಈ ಇಬ್ಬರು ದಂಪತಿಗಳಿಗೆ ಓರ್ವ ಮಗನಿದ್ದು, ಮಗನ ಖಾಯಂ ಕಸ್ಟಡಿಯ ಕುರಿತು ಯಾವುದೇ ಆದೇಶವನ್ನು ನೀಡಲು ನ್ಯಾಯಾಲಯ ನಿರಾಕರಿಸಿದೆ.

2012 ರಲ್ಲಿ ಶಿಖರ್ ಧವನ್ ಹಾಗೂ ಆಯೇಷಾ ಮುಖರ್ಜಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಆಯೇಷಾ ಅವರಿಗೆ ಇದು ಎರಡನೇ ಮದುವೆ ಆಗಿತ್ತು. ಈ ಇಬ್ಬರು ದಂಪತಿಗಳಿಗೆ ಓರ್ವ ಮಗನಿದ್ದು, ಮಗನ ಖಾಯಂ ಕಸ್ಟಡಿಯ ಕುರಿತು ಯಾವುದೇ ಆದೇಶವನ್ನು ನೀಡಲು ನ್ಯಾಯಾಲಯ ನಿರಾಕರಿಸಿದೆ.

3 / 9
ಪ್ರಸ್ತುತ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿರುವ ಈ ಇಬ್ಬರ ಪ್ರೇಮ್ ಕಹಾನಿ ಮಾತ್ರ ತುಂಬಾ ಕುತೂಹಲಕಾರಿಯಾಗಿದೆ. ವಾಸ್ತವವಾಗಿ ಈ ಇಬ್ಬರ ನಡುವೆ ಪ್ರೀತಿ ಮೂಡಲು ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಹಾಗೂ ಶಿಖರ್ ಧವನ್ ಸಹ ಆಟಗಾರ ಹರ್ಭಜನ್ ಸಿಂಗ್ ಕಾರಣ.

ಪ್ರಸ್ತುತ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿರುವ ಈ ಇಬ್ಬರ ಪ್ರೇಮ್ ಕಹಾನಿ ಮಾತ್ರ ತುಂಬಾ ಕುತೂಹಲಕಾರಿಯಾಗಿದೆ. ವಾಸ್ತವವಾಗಿ ಈ ಇಬ್ಬರ ನಡುವೆ ಪ್ರೀತಿ ಮೂಡಲು ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಹಾಗೂ ಶಿಖರ್ ಧವನ್ ಸಹ ಆಟಗಾರ ಹರ್ಭಜನ್ ಸಿಂಗ್ ಕಾರಣ.

4 / 9
ಹರ್ಭಜನ್ ಸಿಂಗ್ ಅವರ ಫೇಸ್‌ಬುಕ್ ಫ್ರೆಂಡ್ ಲಿಸ್ಟ್‌ನಲ್ಲಿ ಆಯೇಷಾರನ್ನು ನೋಡಿದ ಶಿಖರ್ ಧವನ್, ಫೋಟೋವನ್ನು ನೋಡಿದ ತಕ್ಷಣ ಆಯೇಷಾರನ್ನು ಪ್ರೀತಿಸುತ್ತಿರುವುದಾಗಿ ಹೇಳಿಕೊಂಡಿದ್ದರು. ಇದಾದ ನಂತರ ಶಿಖರ್ ಆಯೇಷಾಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದರು.

ಹರ್ಭಜನ್ ಸಿಂಗ್ ಅವರ ಫೇಸ್‌ಬುಕ್ ಫ್ರೆಂಡ್ ಲಿಸ್ಟ್‌ನಲ್ಲಿ ಆಯೇಷಾರನ್ನು ನೋಡಿದ ಶಿಖರ್ ಧವನ್, ಫೋಟೋವನ್ನು ನೋಡಿದ ತಕ್ಷಣ ಆಯೇಷಾರನ್ನು ಪ್ರೀತಿಸುತ್ತಿರುವುದಾಗಿ ಹೇಳಿಕೊಂಡಿದ್ದರು. ಇದಾದ ನಂತರ ಶಿಖರ್ ಆಯೇಷಾಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದರು.

5 / 9
ಬಳಿಕ ಇಬ್ಬರಿಬ್ಬರ ನಡುವೆ ಮಾತುಕತೆ ಶುರುವಾಗಿದ್ದು, ಫೇಸ್ ಬುಕ್​ನಲ್ಲಿಯೇ ಇಬ್ಬರಿಗೂ ಪ್ರೀತಿ ಹುಟ್ಟಿಕೊಂಡಿದೆ. ಬಳಿಕ2009ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಇಬ್ಬರು ಇದಾದ ಬಳಿಕ ಧವನ್ 2012ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದರು.

ಬಳಿಕ ಇಬ್ಬರಿಬ್ಬರ ನಡುವೆ ಮಾತುಕತೆ ಶುರುವಾಗಿದ್ದು, ಫೇಸ್ ಬುಕ್​ನಲ್ಲಿಯೇ ಇಬ್ಬರಿಗೂ ಪ್ರೀತಿ ಹುಟ್ಟಿಕೊಂಡಿದೆ. ಬಳಿಕ2009ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಇಬ್ಬರು ಇದಾದ ಬಳಿಕ ಧವನ್ 2012ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದರು.

6 / 9
ಇದು ಶಿಖರ್ ಅವರ ಮೊದಲ ಮದುವೆಯಾಗಿದ್ದರೆ, ಆಯೇಷಾ ಅವರಿಗೆ ಎರಡನೇ ಮದುವೆಯಾಗಿತ್ತು. ಆಸ್ಟ್ರೇಲಿಯಾದ ಉದ್ಯಮಿಯೊಂದಿಗೆ ಆಯೇಷಾ ಮೊದಲ ಮದುವೆಯಾಗಿದ್ದರು. ಆದರೆ ಈ ಸಂಬಂಧ ಮುರಿದುಬಿದ್ದಿತ್ತು.

ಇದು ಶಿಖರ್ ಅವರ ಮೊದಲ ಮದುವೆಯಾಗಿದ್ದರೆ, ಆಯೇಷಾ ಅವರಿಗೆ ಎರಡನೇ ಮದುವೆಯಾಗಿತ್ತು. ಆಸ್ಟ್ರೇಲಿಯಾದ ಉದ್ಯಮಿಯೊಂದಿಗೆ ಆಯೇಷಾ ಮೊದಲ ಮದುವೆಯಾಗಿದ್ದರು. ಆದರೆ ಈ ಸಂಬಂಧ ಮುರಿದುಬಿದ್ದಿತ್ತು.

7 / 9
ಆಯೇಷಾ ಮತ್ತು ಅವರ ಮೊದಲ ಪತಿಗೆ ರಿಯಾ ಮತ್ತು ಆಲಿಯಾ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದು, ಶಿಖರ್ ಮತ್ತು ಆಯೇಷಾ ದಂಪತಿಗೆ ಜೋರಾವರ್ ಎಂಬ ಮಗನಿದ್ದಾನೆ.

ಆಯೇಷಾ ಮತ್ತು ಅವರ ಮೊದಲ ಪತಿಗೆ ರಿಯಾ ಮತ್ತು ಆಲಿಯಾ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದು, ಶಿಖರ್ ಮತ್ತು ಆಯೇಷಾ ದಂಪತಿಗೆ ಜೋರಾವರ್ ಎಂಬ ಮಗನಿದ್ದಾನೆ.

8 / 9
ಆಯೇಷಾ ಮುಖರ್ಜಿ ಮೂಲತಃ ಆಂಗ್ಲೋ-ಇಂಡಿಯನ್. ಇವರ ತಂದೆ ಭಾರತೀಯರಾದರೆ ತಾಯಿ ಬ್ರಿಟಿಷ್ ಮೂಲದವರಾಗಿದ್ದಾರೆ. ಆಯೇಷಾ ಮೆಲ್ಬೋರ್ನ್​ ಕಿಕ್ ಬಾಕ್ಸರ್ ಕೂಡ ಆಗಿದ್ದಾರೆ. ಅವರು ಯಶಸ್ವಿ ಕಿಕ್ ಬಾಕ್ಸರ್ ಆಗಿದ್ದು, ರಾಷ್ಟ್ರೀಯ-ಅಂತರರಾಷ್ಟ್ರೀಯ ಮಟ್ಟದಲ್ಲಿ ಆಡಿರುವ ಖ್ಯಾತಿ ಹೊಂದಿದ್ದಾರೆ.

ಆಯೇಷಾ ಮುಖರ್ಜಿ ಮೂಲತಃ ಆಂಗ್ಲೋ-ಇಂಡಿಯನ್. ಇವರ ತಂದೆ ಭಾರತೀಯರಾದರೆ ತಾಯಿ ಬ್ರಿಟಿಷ್ ಮೂಲದವರಾಗಿದ್ದಾರೆ. ಆಯೇಷಾ ಮೆಲ್ಬೋರ್ನ್​ ಕಿಕ್ ಬಾಕ್ಸರ್ ಕೂಡ ಆಗಿದ್ದಾರೆ. ಅವರು ಯಶಸ್ವಿ ಕಿಕ್ ಬಾಕ್ಸರ್ ಆಗಿದ್ದು, ರಾಷ್ಟ್ರೀಯ-ಅಂತರರಾಷ್ಟ್ರೀಯ ಮಟ್ಟದಲ್ಲಿ ಆಡಿರುವ ಖ್ಯಾತಿ ಹೊಂದಿದ್ದಾರೆ.

9 / 9

Published On - 10:57 am, Thu, 5 October 23

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ