AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕನ್ನಡಿಗ

Rachin Ravindra Records: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್​ ವಿರುದ್ಧದ ಮೊದಲ ಪಂದ್ಯದಲ್ಲಿ ಕೇವಲ 96 ಎಸೆತಗಳನ್ನು ಎದುರಿಸಿದ ರಚಿನ್ 5 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 123 ರನ್ ಬಾರಿಸಿ ಮಿಂಚಿದ್ದಾರೆ.

TV9 Web
| Edited By: |

Updated on:Oct 05, 2023 | 10:12 PM

Share
ಅಹಮದಾಬಾದ್​ನಲ್ಲಿ ನಡೆದ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡದ ಯುವ ದಾಂಡಿಗ ರಚಿನ್ ರವೀಂದ್ರ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಚಿನ್ 82 ಎಸೆತಗಳಲ್ಲಿ ಶತಕ ಪೂರೈಸಿದರು.

ಅಹಮದಾಬಾದ್​ನಲ್ಲಿ ನಡೆದ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡದ ಯುವ ದಾಂಡಿಗ ರಚಿನ್ ರವೀಂದ್ರ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಚಿನ್ 82 ಎಸೆತಗಳಲ್ಲಿ ಶತಕ ಪೂರೈಸಿದರು.

1 / 7
ಇದರೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಶತಕ ಸಿಡಿಸಿದ ನ್ಯೂಝಿಲೆಂಡ್​ನ ಅತ್ಯಂತ ಕಿರಿಯ ಬ್ಯಾಟರ್ ಎಂಬ ದಾಖಲೆ 23 ವರ್ಷದ ರಚಿನ್ ರವೀಂದ್ರ ಪಾಲಾಯಿತು. ವಿಶೇಷ ಎಂದರೆ ರಚಿನ್ ಪೋಷಕರು ಮೂಲತಃ ಬೆಂಗಳೂರಿನವರು.

ಇದರೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಶತಕ ಸಿಡಿಸಿದ ನ್ಯೂಝಿಲೆಂಡ್​ನ ಅತ್ಯಂತ ಕಿರಿಯ ಬ್ಯಾಟರ್ ಎಂಬ ದಾಖಲೆ 23 ವರ್ಷದ ರಚಿನ್ ರವೀಂದ್ರ ಪಾಲಾಯಿತು. ವಿಶೇಷ ಎಂದರೆ ರಚಿನ್ ಪೋಷಕರು ಮೂಲತಃ ಬೆಂಗಳೂರಿನವರು.

2 / 7
ನ್ಯೂಝಿಲೆಂಡ್​ನಲ್ಲಿ ಸಾಫ್ಟ್‌ವೇರ್ ಸಿಸ್ಟಮ್ ಆರ್ಕಿಟೆಕ್ಟ್ ಆಗಿರುವ ಬೆಂಗಳೂರು ಮೂಲದ ರವೀಂದ್ರ ಕೃಷ್ಣಮೂರ್ತಿ ಹಾಗೂ​ ​ದೀಪಾ ಕೃಷ್ಣಮೂರ್ತಿ ದಂಪತಿ ಪುತ್ರ. 1990ರಲ್ಲಿ ನ್ಯೂಝಿಲೆಂಡ್​​ಗೆ ತೆರಳಿದ್ದ ರಚಿನ್ ಅವರ ತಂದೆ ಅಲ್ಲಿ ಹಟ್ ಹಾಕ್ಸ್ ಕ್ರಿಕೆಟ್ ಕ್ಲಬ್‌ ಅನ್ನು ಸ್ಥಾಪಿಸಿದ್ದರು.

ನ್ಯೂಝಿಲೆಂಡ್​ನಲ್ಲಿ ಸಾಫ್ಟ್‌ವೇರ್ ಸಿಸ್ಟಮ್ ಆರ್ಕಿಟೆಕ್ಟ್ ಆಗಿರುವ ಬೆಂಗಳೂರು ಮೂಲದ ರವೀಂದ್ರ ಕೃಷ್ಣಮೂರ್ತಿ ಹಾಗೂ​ ​ದೀಪಾ ಕೃಷ್ಣಮೂರ್ತಿ ದಂಪತಿ ಪುತ್ರ. 1990ರಲ್ಲಿ ನ್ಯೂಝಿಲೆಂಡ್​​ಗೆ ತೆರಳಿದ್ದ ರಚಿನ್ ಅವರ ತಂದೆ ಅಲ್ಲಿ ಹಟ್ ಹಾಕ್ಸ್ ಕ್ರಿಕೆಟ್ ಕ್ಲಬ್‌ ಅನ್ನು ಸ್ಥಾಪಿಸಿದ್ದರು.

3 / 7
ಅಲ್ಲಿಯೇ ಕ್ರಿಕೆಟ್ ಅನ್ನು ಕರಗತ ಮಾಡಿಕೊಂಡ ರಚಿನ್ ರವೀಂದ್ರ ಹಲವು ಬಾರಿ ಭಾರತದಲ್ಲಿ ಟೂರ್ನಿಗಳನ್ನು ಆಡಲು ಬಂದಿದ್ದಾರೆ. ಅಲ್ಲದೆ ಕೆಲ ಕ್ಲಬ್​ಗಳ ವಿರುದ್ಧ ಆಡಿದ ಅನುಭವಗಳನ್ನು ಸಹ ಹೊಂದಿದ್ದಾರೆ. ಹೀಗಾಗಿಯೇ ಇಲ್ಲಿನ ಪರಿಸ್ಥಿತಿಗಳಿಗೆ ಒಗ್ಗಿಕೊಳ್ಳಲು ಯುವ ಆಟಗಾರನಿಗೆ ಕಷ್ಟವಾಗಲಿಲ್ಲ ಎನ್ನಬಹುದು.

ಅಲ್ಲಿಯೇ ಕ್ರಿಕೆಟ್ ಅನ್ನು ಕರಗತ ಮಾಡಿಕೊಂಡ ರಚಿನ್ ರವೀಂದ್ರ ಹಲವು ಬಾರಿ ಭಾರತದಲ್ಲಿ ಟೂರ್ನಿಗಳನ್ನು ಆಡಲು ಬಂದಿದ್ದಾರೆ. ಅಲ್ಲದೆ ಕೆಲ ಕ್ಲಬ್​ಗಳ ವಿರುದ್ಧ ಆಡಿದ ಅನುಭವಗಳನ್ನು ಸಹ ಹೊಂದಿದ್ದಾರೆ. ಹೀಗಾಗಿಯೇ ಇಲ್ಲಿನ ಪರಿಸ್ಥಿತಿಗಳಿಗೆ ಒಗ್ಗಿಕೊಳ್ಳಲು ಯುವ ಆಟಗಾರನಿಗೆ ಕಷ್ಟವಾಗಲಿಲ್ಲ ಎನ್ನಬಹುದು.

4 / 7
ಅಷ್ಟೇ ಅಲ್ಲದೆ ರಚಿನ್ ಅವರ ತಂದೆ ಟೀಮ್ ಇಂಡಿಯಾದ ಮಾಜಿ ವೇಗಿ ಜಾವಗಲ್ ಶ್ರೀನಾಥ್ ಹಾಗೂ ಕರ್ನಾಟಕದ ಕ್ರಿಕೆಟಿಗ ಜೆ ಅರುಣ್ ಕುಮಾರ್ ಅವರ ಒಡನಾಡಿ​. ಇತ್ತ ತಂದೆಯ ಗೆಳೆಯರ ಕ್ರಿಕೆಟ್​ ಸಲಹೆಗಳೊಂದಿಗೆ ರಚಿನ್ ಅತ್ಯುತ್ತಮ ಆಲ್​ರೌಂಡರ್​ ಆಗಿ ರೂಪುಗೊಂಡಿದ್ದಾರೆ.

ಅಷ್ಟೇ ಅಲ್ಲದೆ ರಚಿನ್ ಅವರ ತಂದೆ ಟೀಮ್ ಇಂಡಿಯಾದ ಮಾಜಿ ವೇಗಿ ಜಾವಗಲ್ ಶ್ರೀನಾಥ್ ಹಾಗೂ ಕರ್ನಾಟಕದ ಕ್ರಿಕೆಟಿಗ ಜೆ ಅರುಣ್ ಕುಮಾರ್ ಅವರ ಒಡನಾಡಿ​. ಇತ್ತ ತಂದೆಯ ಗೆಳೆಯರ ಕ್ರಿಕೆಟ್​ ಸಲಹೆಗಳೊಂದಿಗೆ ರಚಿನ್ ಅತ್ಯುತ್ತಮ ಆಲ್​ರೌಂಡರ್​ ಆಗಿ ರೂಪುಗೊಂಡಿದ್ದಾರೆ.

5 / 7
ಅದರಂತೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್​ ವಿರುದ್ಧದ ಮೊದಲ ಪಂದ್ಯದಲ್ಲಿ ಕೇವಲ 96 ಎಸೆತಗಳನ್ನು ಎದುರಿಸಿದ ರಚಿನ್ 5 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 123 ರನ್ ಬಾರಿಸಿ ಮಿಂಚಿದ್ದಾರೆ.

ಅದರಂತೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್​ ವಿರುದ್ಧದ ಮೊದಲ ಪಂದ್ಯದಲ್ಲಿ ಕೇವಲ 96 ಎಸೆತಗಳನ್ನು ಎದುರಿಸಿದ ರಚಿನ್ 5 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 123 ರನ್ ಬಾರಿಸಿ ಮಿಂಚಿದ್ದಾರೆ.

6 / 7
ಇಲ್ಲಿ ಮತ್ತೊಂದು ವಿಶೇಷ ಎಂದರೆ ರಚಿನ್ ಹೆಸರಿನ ಹಿಂದಿರುವ ಸಿಕ್ರೇಟ್. ರಾಹುಲ್ ದ್ರಾವಿಡ್ ಹಾಗೂ ಸಚಿನ್ ತೆಂಡೂಲ್ಕರ್ ಅಭಿಮಾನಿಯಾಗಿರುವ ಕೃಷ್ಣಮೂರ್ತಿಯವರು ತಮ್ಮ ಮಗನಿಗೆ ಈ ರಾಹುಲ್ ದ್ರಾವಿಡ್ ಹೆಸರಿನ "ರ" (RA) ಹಾಗೂ ಸಚಿನ್ ಹೆಸರಿನ "ಚಿನ್" (CHIN) ಸೇರಿಸಿ ರಚಿನ್ ಎಂದು ಹೆಸರಿಟಿದ್ದಾರೆ. ಇದೀಗ ಅದೇ ಹುಡುಗ ಕ್ರಿಕೆಟ್ ಅಂಗಳದಲ್ಲಿ ಮಿಂಚುತ್ತಿರುವುದು ವಿಶೇಷ. (PC- AP/Getty Images)

ಇಲ್ಲಿ ಮತ್ತೊಂದು ವಿಶೇಷ ಎಂದರೆ ರಚಿನ್ ಹೆಸರಿನ ಹಿಂದಿರುವ ಸಿಕ್ರೇಟ್. ರಾಹುಲ್ ದ್ರಾವಿಡ್ ಹಾಗೂ ಸಚಿನ್ ತೆಂಡೂಲ್ಕರ್ ಅಭಿಮಾನಿಯಾಗಿರುವ ಕೃಷ್ಣಮೂರ್ತಿಯವರು ತಮ್ಮ ಮಗನಿಗೆ ಈ ರಾಹುಲ್ ದ್ರಾವಿಡ್ ಹೆಸರಿನ "ರ" (RA) ಹಾಗೂ ಸಚಿನ್ ಹೆಸರಿನ "ಚಿನ್" (CHIN) ಸೇರಿಸಿ ರಚಿನ್ ಎಂದು ಹೆಸರಿಟಿದ್ದಾರೆ. ಇದೀಗ ಅದೇ ಹುಡುಗ ಕ್ರಿಕೆಟ್ ಅಂಗಳದಲ್ಲಿ ಮಿಂಚುತ್ತಿರುವುದು ವಿಶೇಷ. (PC- AP/Getty Images)

7 / 7

Published On - 10:06 pm, Thu, 5 October 23

Web contact
Web contact

TV9 Kannada

Read More
Follow Us
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?