AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕನ್ನಡಿಗ

Rachin Ravindra Records: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್​ ವಿರುದ್ಧದ ಮೊದಲ ಪಂದ್ಯದಲ್ಲಿ ಕೇವಲ 96 ಎಸೆತಗಳನ್ನು ಎದುರಿಸಿದ ರಚಿನ್ 5 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 123 ರನ್ ಬಾರಿಸಿ ಮಿಂಚಿದ್ದಾರೆ.

TV9 Web
| Edited By: |

Updated on:Oct 05, 2023 | 10:12 PM

Share
ಅಹಮದಾಬಾದ್​ನಲ್ಲಿ ನಡೆದ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡದ ಯುವ ದಾಂಡಿಗ ರಚಿನ್ ರವೀಂದ್ರ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಚಿನ್ 82 ಎಸೆತಗಳಲ್ಲಿ ಶತಕ ಪೂರೈಸಿದರು.

ಅಹಮದಾಬಾದ್​ನಲ್ಲಿ ನಡೆದ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡದ ಯುವ ದಾಂಡಿಗ ರಚಿನ್ ರವೀಂದ್ರ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಚಿನ್ 82 ಎಸೆತಗಳಲ್ಲಿ ಶತಕ ಪೂರೈಸಿದರು.

1 / 7
ಇದರೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಶತಕ ಸಿಡಿಸಿದ ನ್ಯೂಝಿಲೆಂಡ್​ನ ಅತ್ಯಂತ ಕಿರಿಯ ಬ್ಯಾಟರ್ ಎಂಬ ದಾಖಲೆ 23 ವರ್ಷದ ರಚಿನ್ ರವೀಂದ್ರ ಪಾಲಾಯಿತು. ವಿಶೇಷ ಎಂದರೆ ರಚಿನ್ ಪೋಷಕರು ಮೂಲತಃ ಬೆಂಗಳೂರಿನವರು.

ಇದರೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಶತಕ ಸಿಡಿಸಿದ ನ್ಯೂಝಿಲೆಂಡ್​ನ ಅತ್ಯಂತ ಕಿರಿಯ ಬ್ಯಾಟರ್ ಎಂಬ ದಾಖಲೆ 23 ವರ್ಷದ ರಚಿನ್ ರವೀಂದ್ರ ಪಾಲಾಯಿತು. ವಿಶೇಷ ಎಂದರೆ ರಚಿನ್ ಪೋಷಕರು ಮೂಲತಃ ಬೆಂಗಳೂರಿನವರು.

2 / 7
ನ್ಯೂಝಿಲೆಂಡ್​ನಲ್ಲಿ ಸಾಫ್ಟ್‌ವೇರ್ ಸಿಸ್ಟಮ್ ಆರ್ಕಿಟೆಕ್ಟ್ ಆಗಿರುವ ಬೆಂಗಳೂರು ಮೂಲದ ರವೀಂದ್ರ ಕೃಷ್ಣಮೂರ್ತಿ ಹಾಗೂ​ ​ದೀಪಾ ಕೃಷ್ಣಮೂರ್ತಿ ದಂಪತಿ ಪುತ್ರ. 1990ರಲ್ಲಿ ನ್ಯೂಝಿಲೆಂಡ್​​ಗೆ ತೆರಳಿದ್ದ ರಚಿನ್ ಅವರ ತಂದೆ ಅಲ್ಲಿ ಹಟ್ ಹಾಕ್ಸ್ ಕ್ರಿಕೆಟ್ ಕ್ಲಬ್‌ ಅನ್ನು ಸ್ಥಾಪಿಸಿದ್ದರು.

ನ್ಯೂಝಿಲೆಂಡ್​ನಲ್ಲಿ ಸಾಫ್ಟ್‌ವೇರ್ ಸಿಸ್ಟಮ್ ಆರ್ಕಿಟೆಕ್ಟ್ ಆಗಿರುವ ಬೆಂಗಳೂರು ಮೂಲದ ರವೀಂದ್ರ ಕೃಷ್ಣಮೂರ್ತಿ ಹಾಗೂ​ ​ದೀಪಾ ಕೃಷ್ಣಮೂರ್ತಿ ದಂಪತಿ ಪುತ್ರ. 1990ರಲ್ಲಿ ನ್ಯೂಝಿಲೆಂಡ್​​ಗೆ ತೆರಳಿದ್ದ ರಚಿನ್ ಅವರ ತಂದೆ ಅಲ್ಲಿ ಹಟ್ ಹಾಕ್ಸ್ ಕ್ರಿಕೆಟ್ ಕ್ಲಬ್‌ ಅನ್ನು ಸ್ಥಾಪಿಸಿದ್ದರು.

3 / 7
ಅಲ್ಲಿಯೇ ಕ್ರಿಕೆಟ್ ಅನ್ನು ಕರಗತ ಮಾಡಿಕೊಂಡ ರಚಿನ್ ರವೀಂದ್ರ ಹಲವು ಬಾರಿ ಭಾರತದಲ್ಲಿ ಟೂರ್ನಿಗಳನ್ನು ಆಡಲು ಬಂದಿದ್ದಾರೆ. ಅಲ್ಲದೆ ಕೆಲ ಕ್ಲಬ್​ಗಳ ವಿರುದ್ಧ ಆಡಿದ ಅನುಭವಗಳನ್ನು ಸಹ ಹೊಂದಿದ್ದಾರೆ. ಹೀಗಾಗಿಯೇ ಇಲ್ಲಿನ ಪರಿಸ್ಥಿತಿಗಳಿಗೆ ಒಗ್ಗಿಕೊಳ್ಳಲು ಯುವ ಆಟಗಾರನಿಗೆ ಕಷ್ಟವಾಗಲಿಲ್ಲ ಎನ್ನಬಹುದು.

ಅಲ್ಲಿಯೇ ಕ್ರಿಕೆಟ್ ಅನ್ನು ಕರಗತ ಮಾಡಿಕೊಂಡ ರಚಿನ್ ರವೀಂದ್ರ ಹಲವು ಬಾರಿ ಭಾರತದಲ್ಲಿ ಟೂರ್ನಿಗಳನ್ನು ಆಡಲು ಬಂದಿದ್ದಾರೆ. ಅಲ್ಲದೆ ಕೆಲ ಕ್ಲಬ್​ಗಳ ವಿರುದ್ಧ ಆಡಿದ ಅನುಭವಗಳನ್ನು ಸಹ ಹೊಂದಿದ್ದಾರೆ. ಹೀಗಾಗಿಯೇ ಇಲ್ಲಿನ ಪರಿಸ್ಥಿತಿಗಳಿಗೆ ಒಗ್ಗಿಕೊಳ್ಳಲು ಯುವ ಆಟಗಾರನಿಗೆ ಕಷ್ಟವಾಗಲಿಲ್ಲ ಎನ್ನಬಹುದು.

4 / 7
ಅಷ್ಟೇ ಅಲ್ಲದೆ ರಚಿನ್ ಅವರ ತಂದೆ ಟೀಮ್ ಇಂಡಿಯಾದ ಮಾಜಿ ವೇಗಿ ಜಾವಗಲ್ ಶ್ರೀನಾಥ್ ಹಾಗೂ ಕರ್ನಾಟಕದ ಕ್ರಿಕೆಟಿಗ ಜೆ ಅರುಣ್ ಕುಮಾರ್ ಅವರ ಒಡನಾಡಿ​. ಇತ್ತ ತಂದೆಯ ಗೆಳೆಯರ ಕ್ರಿಕೆಟ್​ ಸಲಹೆಗಳೊಂದಿಗೆ ರಚಿನ್ ಅತ್ಯುತ್ತಮ ಆಲ್​ರೌಂಡರ್​ ಆಗಿ ರೂಪುಗೊಂಡಿದ್ದಾರೆ.

ಅಷ್ಟೇ ಅಲ್ಲದೆ ರಚಿನ್ ಅವರ ತಂದೆ ಟೀಮ್ ಇಂಡಿಯಾದ ಮಾಜಿ ವೇಗಿ ಜಾವಗಲ್ ಶ್ರೀನಾಥ್ ಹಾಗೂ ಕರ್ನಾಟಕದ ಕ್ರಿಕೆಟಿಗ ಜೆ ಅರುಣ್ ಕುಮಾರ್ ಅವರ ಒಡನಾಡಿ​. ಇತ್ತ ತಂದೆಯ ಗೆಳೆಯರ ಕ್ರಿಕೆಟ್​ ಸಲಹೆಗಳೊಂದಿಗೆ ರಚಿನ್ ಅತ್ಯುತ್ತಮ ಆಲ್​ರೌಂಡರ್​ ಆಗಿ ರೂಪುಗೊಂಡಿದ್ದಾರೆ.

5 / 7
ಅದರಂತೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್​ ವಿರುದ್ಧದ ಮೊದಲ ಪಂದ್ಯದಲ್ಲಿ ಕೇವಲ 96 ಎಸೆತಗಳನ್ನು ಎದುರಿಸಿದ ರಚಿನ್ 5 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 123 ರನ್ ಬಾರಿಸಿ ಮಿಂಚಿದ್ದಾರೆ.

ಅದರಂತೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್​ ವಿರುದ್ಧದ ಮೊದಲ ಪಂದ್ಯದಲ್ಲಿ ಕೇವಲ 96 ಎಸೆತಗಳನ್ನು ಎದುರಿಸಿದ ರಚಿನ್ 5 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 123 ರನ್ ಬಾರಿಸಿ ಮಿಂಚಿದ್ದಾರೆ.

6 / 7
ಇಲ್ಲಿ ಮತ್ತೊಂದು ವಿಶೇಷ ಎಂದರೆ ರಚಿನ್ ಹೆಸರಿನ ಹಿಂದಿರುವ ಸಿಕ್ರೇಟ್. ರಾಹುಲ್ ದ್ರಾವಿಡ್ ಹಾಗೂ ಸಚಿನ್ ತೆಂಡೂಲ್ಕರ್ ಅಭಿಮಾನಿಯಾಗಿರುವ ಕೃಷ್ಣಮೂರ್ತಿಯವರು ತಮ್ಮ ಮಗನಿಗೆ ಈ ರಾಹುಲ್ ದ್ರಾವಿಡ್ ಹೆಸರಿನ "ರ" (RA) ಹಾಗೂ ಸಚಿನ್ ಹೆಸರಿನ "ಚಿನ್" (CHIN) ಸೇರಿಸಿ ರಚಿನ್ ಎಂದು ಹೆಸರಿಟಿದ್ದಾರೆ. ಇದೀಗ ಅದೇ ಹುಡುಗ ಕ್ರಿಕೆಟ್ ಅಂಗಳದಲ್ಲಿ ಮಿಂಚುತ್ತಿರುವುದು ವಿಶೇಷ. (PC- AP/Getty Images)

ಇಲ್ಲಿ ಮತ್ತೊಂದು ವಿಶೇಷ ಎಂದರೆ ರಚಿನ್ ಹೆಸರಿನ ಹಿಂದಿರುವ ಸಿಕ್ರೇಟ್. ರಾಹುಲ್ ದ್ರಾವಿಡ್ ಹಾಗೂ ಸಚಿನ್ ತೆಂಡೂಲ್ಕರ್ ಅಭಿಮಾನಿಯಾಗಿರುವ ಕೃಷ್ಣಮೂರ್ತಿಯವರು ತಮ್ಮ ಮಗನಿಗೆ ಈ ರಾಹುಲ್ ದ್ರಾವಿಡ್ ಹೆಸರಿನ "ರ" (RA) ಹಾಗೂ ಸಚಿನ್ ಹೆಸರಿನ "ಚಿನ್" (CHIN) ಸೇರಿಸಿ ರಚಿನ್ ಎಂದು ಹೆಸರಿಟಿದ್ದಾರೆ. ಇದೀಗ ಅದೇ ಹುಡುಗ ಕ್ರಿಕೆಟ್ ಅಂಗಳದಲ್ಲಿ ಮಿಂಚುತ್ತಿರುವುದು ವಿಶೇಷ. (PC- AP/Getty Images)

7 / 7

Published On - 10:06 pm, Thu, 5 October 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ