Rachin Ravindra: ನ್ಯೂಜಿಲೆಂಡ್ ತಂಡದಲ್ಲಿ ಕನ್ನಡಿಗ..!

Who is Rachin Ravindra: ಬೆಂಗಳೂರು ಮೂಲದ ರವೀಂದ್ರ ಕೃಷ್ಣಮೂರ್ತಿ ಹಾಗೂ​ ​ದೀಪಾ ಕೃಷ್ಣಮೂರ್ತಿ ಅವರ ಮಗ. ಸಾಫ್ಟ್‌ವೇರ್ ಸಿಸ್ಟಮ್ ಆರ್ಕಿಟೆಕ್ಟ್ ಆಗಿರುವ ರವೀಂದ್ರ ಕೃಷ್ಣಮೂರ್ತಿ ಅವರು 1990ರಲ್ಲಿ ನ್ಯೂಜಿಲ್ಯಾಂಡ್​ಗೆ ತೆರಳಿದ್ದರು.

| Updated By: ಝಾಹಿರ್ ಯೂಸುಫ್

Updated on: Nov 18, 2021 | 2:54 PM

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಟಿ20 ಪಂದ್ಯದ ವೇಳೆ ಎಲ್ಲರ ಗಮನ ಸೆಳೆದಿದ್ದು ರಚಿನ್ ರವೀಂದ್ರ ಹೆಸರಿನ ಆಟಗಾರ. ಸಾಮಾನ್ಯವಾಗಿ ನ್ಯೂಜಿಲೆಂಡ್ ತಂಡದಲ್ಲಿ ಭಾರತೀಯ ಮೂಲದ ಆಟಗಾರರು ಕಾಣಿಸಿಕೊಳ್ಳುತ್ತಾರೆ. ಆದರೆ ಈ ಬಾರಿ ಕಾಣಿಸಿಕೊಂಡ ರಚಿನ್ ನಮ್ಮೂರಿನ ಹುಡುಗ ಎಂಬುದು ವಿಶೇಷ.

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಟಿ20 ಪಂದ್ಯದ ವೇಳೆ ಎಲ್ಲರ ಗಮನ ಸೆಳೆದಿದ್ದು ರಚಿನ್ ರವೀಂದ್ರ ಹೆಸರಿನ ಆಟಗಾರ. ಸಾಮಾನ್ಯವಾಗಿ ನ್ಯೂಜಿಲೆಂಡ್ ತಂಡದಲ್ಲಿ ಭಾರತೀಯ ಮೂಲದ ಆಟಗಾರರು ಕಾಣಿಸಿಕೊಳ್ಳುತ್ತಾರೆ. ಆದರೆ ಈ ಬಾರಿ ಕಾಣಿಸಿಕೊಂಡ ರಚಿನ್ ನಮ್ಮೂರಿನ ಹುಡುಗ ಎಂಬುದು ವಿಶೇಷ.

1 / 6
ನ್ಯೂಜಿಲೆಂಡ್ ಪರ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಎಡಗೈ ಬ್ಯಾಟರ್ ರಚಿನ್ 7 ರನ್​ಗಳಿಸಿ ಮೊಹಮ್ಮದ್ ಸಿರಾಜ್​ ಎಸೆತದಲ್ಲಿ ಬೌಲ್ಡ್ ಆಗಿದ್ದರು. ಆ ಬಳಿಕ ಉತ್ತಮ ಫೀಲ್ಡಿಂಗ್ ಮೂಲಕ ಪಂದ್ಯದುದ್ದಕ್ಕೂ ಗಮನ ಸೆಳೆದಿದ್ದರು. ಇದರ ಬೆನ್ನಲ್ಲೇ ಯಾರು ಈ ರಚಿನ್ ಎಂಬ ಕುತೂಹಲ ಕೂಡ ಎಲ್ಲರಲ್ಲಿತ್ತು. ಈ ಕುತೂಹಲಕಾರಿ ಪ್ರಶ್ನೆಗೆ ಸಿಗುವ ಉತ್ತರ....

ನ್ಯೂಜಿಲೆಂಡ್ ಪರ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಎಡಗೈ ಬ್ಯಾಟರ್ ರಚಿನ್ 7 ರನ್​ಗಳಿಸಿ ಮೊಹಮ್ಮದ್ ಸಿರಾಜ್​ ಎಸೆತದಲ್ಲಿ ಬೌಲ್ಡ್ ಆಗಿದ್ದರು. ಆ ಬಳಿಕ ಉತ್ತಮ ಫೀಲ್ಡಿಂಗ್ ಮೂಲಕ ಪಂದ್ಯದುದ್ದಕ್ಕೂ ಗಮನ ಸೆಳೆದಿದ್ದರು. ಇದರ ಬೆನ್ನಲ್ಲೇ ಯಾರು ಈ ರಚಿನ್ ಎಂಬ ಕುತೂಹಲ ಕೂಡ ಎಲ್ಲರಲ್ಲಿತ್ತು. ಈ ಕುತೂಹಲಕಾರಿ ಪ್ರಶ್ನೆಗೆ ಸಿಗುವ ಉತ್ತರ....

2 / 6
ರಚಿನ್ ರವೀಂದ್ರ ಮೂಲತಃ ಬೆಂಗಳೂರಿನ ಹುಡುಗ.  ಬೆಂಗಳೂರು ಮೂಲದ ರವೀಂದ್ರ ಕೃಷ್ಣಮೂರ್ತಿ  ಹಾಗೂ​ ​ದೀಪಾ ಕೃಷ್ಣಮೂರ್ತಿ ಅವರ ಮಗ. ಸಾಫ್ಟ್‌ವೇರ್ ಸಿಸ್ಟಮ್ ಆರ್ಕಿಟೆಕ್ಟ್ ಆಗಿರುವ ರವೀಂದ್ರ ಕೃಷ್ಣಮೂರ್ತಿ ಅವರು 1990ರಲ್ಲಿ ನ್ಯೂಜಿಲ್ಯಾಂಡ್​ಗೆ ತೆರಳಿದ್ದರು. ಆ ಬಳಿಕ ಅಲ್ಲಿಯೇ ನೆಲೆಸಿದ್ದರು. ಅತ್ತ ಕ್ರಿಕೆಟ್​ ಪ್ರೇಮಿಯಾಗಿದ್ದ ರವಿ ಕೃಷ್ಣಮೂರ್ತಿ  ಹಟ್ ಹಾಕ್ಸ್ ಕ್ರಿಕೆಟ್ ಕ್ಲಬ್‌ನ ಸ್ಥಾಪಿಸಿದ್ದರು.

ರಚಿನ್ ರವೀಂದ್ರ ಮೂಲತಃ ಬೆಂಗಳೂರಿನ ಹುಡುಗ. ಬೆಂಗಳೂರು ಮೂಲದ ರವೀಂದ್ರ ಕೃಷ್ಣಮೂರ್ತಿ ಹಾಗೂ​ ​ದೀಪಾ ಕೃಷ್ಣಮೂರ್ತಿ ಅವರ ಮಗ. ಸಾಫ್ಟ್‌ವೇರ್ ಸಿಸ್ಟಮ್ ಆರ್ಕಿಟೆಕ್ಟ್ ಆಗಿರುವ ರವೀಂದ್ರ ಕೃಷ್ಣಮೂರ್ತಿ ಅವರು 1990ರಲ್ಲಿ ನ್ಯೂಜಿಲ್ಯಾಂಡ್​ಗೆ ತೆರಳಿದ್ದರು. ಆ ಬಳಿಕ ಅಲ್ಲಿಯೇ ನೆಲೆಸಿದ್ದರು. ಅತ್ತ ಕ್ರಿಕೆಟ್​ ಪ್ರೇಮಿಯಾಗಿದ್ದ ರವಿ ಕೃಷ್ಣಮೂರ್ತಿ ಹಟ್ ಹಾಕ್ಸ್ ಕ್ರಿಕೆಟ್ ಕ್ಲಬ್‌ನ ಸ್ಥಾಪಿಸಿದ್ದರು.

3 / 6
ಬಳಿಕ ಮಗ ಕೂಡ ತಂದೆಯ ಹಾದಿಯಲ್ಲೇ ಸಾಗಿದರು. ಅದರಂತೆ ಬಾಲ್ಯದಿಂದಲೇ ಭಾರತದಲ್ಲಿ ಹಾಗೂ ನ್ಯೂಜಿಲೆಂಡ್​ನಲ್ಲಿ ಕ್ರಿಕೆಟ್ ಟ್ರೈನಿಂಗ್ ಪಡೆದ ರಚಿನ್ ಕಿವೀಸ್​ ಕಿರಿಯರ ತಂಡದಲ್ಲಿ ಸ್ಥಾನ ಪಡೆದಿದ್ದರು.  2016 ರ ಅಂಡರ್ -19 ವಿಶ್ವಕಪ್ ಮತ್ತು 2018 ರ ಅಂಡರ್ -19 ಕ್ರಿಕೆಟ್ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ಅನ್ನು ಪ್ರತಿನಿಧಿಸಿದ್ದರು.

ಬಳಿಕ ಮಗ ಕೂಡ ತಂದೆಯ ಹಾದಿಯಲ್ಲೇ ಸಾಗಿದರು. ಅದರಂತೆ ಬಾಲ್ಯದಿಂದಲೇ ಭಾರತದಲ್ಲಿ ಹಾಗೂ ನ್ಯೂಜಿಲೆಂಡ್​ನಲ್ಲಿ ಕ್ರಿಕೆಟ್ ಟ್ರೈನಿಂಗ್ ಪಡೆದ ರಚಿನ್ ಕಿವೀಸ್​ ಕಿರಿಯರ ತಂಡದಲ್ಲಿ ಸ್ಥಾನ ಪಡೆದಿದ್ದರು. 2016 ರ ಅಂಡರ್ -19 ವಿಶ್ವಕಪ್ ಮತ್ತು 2018 ರ ಅಂಡರ್ -19 ಕ್ರಿಕೆಟ್ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ಅನ್ನು ಪ್ರತಿನಿಧಿಸಿದ್ದರು.

4 / 6
ಇನ್ನು ಕಳೆದ ಸೆಪ್ಟೆಂಬರ್​ನಲ್ಲಿ ಬಾಂಗ್ಲಾದೇಶದ ವಿರುದ್ದದ ಪಂದ್ಯದಲ್ಲಿ ರಚಿನ್​ಗೆ ಚೊಚ್ಚಲ ಬಾರಿ ನ್ಯೂಜಿಲೆಂಡ್ ಹಿರಿಯರ ತಂಡದಲ್ಲಿ ಅವಕಾಶ ಲಭಿಸಿತು. ಅದರಂತೆ ನ್ಯೂಜಿಲೆಂಡ್ ಪರ 6 ಟಿ20 ಪಂದ್ಯಗಳನ್ನಾಡಿದ್ದಾರೆ. ಆಲ್​ರೌಂಡರ್ ಆಗಿ ತಂಡದಲ್ಲಿ ಸ್ಥಾನ ಪಡೆದಿರುವ 21 ವರ್ಷದ ರಚಿನ್ ಇದುವರೆಗೆ 6 ವಿಕೆಟ್ ಕಲೆಹಾಕಿದ್ದಾರೆ. ಅಷ್ಟೇ ಅಲ್ಲದೆ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ 47 ರನ್ ಬಾರಿಸಿದ್ದಾರೆ.

ಇನ್ನು ಕಳೆದ ಸೆಪ್ಟೆಂಬರ್​ನಲ್ಲಿ ಬಾಂಗ್ಲಾದೇಶದ ವಿರುದ್ದದ ಪಂದ್ಯದಲ್ಲಿ ರಚಿನ್​ಗೆ ಚೊಚ್ಚಲ ಬಾರಿ ನ್ಯೂಜಿಲೆಂಡ್ ಹಿರಿಯರ ತಂಡದಲ್ಲಿ ಅವಕಾಶ ಲಭಿಸಿತು. ಅದರಂತೆ ನ್ಯೂಜಿಲೆಂಡ್ ಪರ 6 ಟಿ20 ಪಂದ್ಯಗಳನ್ನಾಡಿದ್ದಾರೆ. ಆಲ್​ರೌಂಡರ್ ಆಗಿ ತಂಡದಲ್ಲಿ ಸ್ಥಾನ ಪಡೆದಿರುವ 21 ವರ್ಷದ ರಚಿನ್ ಇದುವರೆಗೆ 6 ವಿಕೆಟ್ ಕಲೆಹಾಕಿದ್ದಾರೆ. ಅಷ್ಟೇ ಅಲ್ಲದೆ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ 47 ರನ್ ಬಾರಿಸಿದ್ದಾರೆ.

5 / 6
ಒಟ್ಟಿನಲ್ಲಿ ನ್ಯೂಜಿಲೆಂಡ್ ತಂಡದಲ್ಲಿ ಭಾರತೀಯ ಮೂಲದ ಆಟಗಾರರನ್ನು ನೋಡಿದ ಕನ್ನಡಿಗರಿಗೆ ಇದೀಗ ಬೆಂಗಳೂರು ಮೂಲದ ಕನ್ನಡಿಗನೇ ನ್ಯೂಜಿಲೆಂಡ್ ತಂಡದಲ್ಲಿ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯ ಎನ್ನಬಹುದು.

ಒಟ್ಟಿನಲ್ಲಿ ನ್ಯೂಜಿಲೆಂಡ್ ತಂಡದಲ್ಲಿ ಭಾರತೀಯ ಮೂಲದ ಆಟಗಾರರನ್ನು ನೋಡಿದ ಕನ್ನಡಿಗರಿಗೆ ಇದೀಗ ಬೆಂಗಳೂರು ಮೂಲದ ಕನ್ನಡಿಗನೇ ನ್ಯೂಜಿಲೆಂಡ್ ತಂಡದಲ್ಲಿ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯ ಎನ್ನಬಹುದು.

6 / 6
Follow us
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ