AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rachin Ravindra: ನ್ಯೂಜಿಲೆಂಡ್ ತಂಡದಲ್ಲಿ ಕನ್ನಡಿಗ..!

Who is Rachin Ravindra: ಬೆಂಗಳೂರು ಮೂಲದ ರವೀಂದ್ರ ಕೃಷ್ಣಮೂರ್ತಿ ಹಾಗೂ​ ​ದೀಪಾ ಕೃಷ್ಣಮೂರ್ತಿ ಅವರ ಮಗ. ಸಾಫ್ಟ್‌ವೇರ್ ಸಿಸ್ಟಮ್ ಆರ್ಕಿಟೆಕ್ಟ್ ಆಗಿರುವ ರವೀಂದ್ರ ಕೃಷ್ಣಮೂರ್ತಿ ಅವರು 1990ರಲ್ಲಿ ನ್ಯೂಜಿಲ್ಯಾಂಡ್​ಗೆ ತೆರಳಿದ್ದರು.

TV9 Web
| Edited By: |

Updated on: Nov 18, 2021 | 2:54 PM

Share
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಟಿ20 ಪಂದ್ಯದ ವೇಳೆ ಎಲ್ಲರ ಗಮನ ಸೆಳೆದಿದ್ದು ರಚಿನ್ ರವೀಂದ್ರ ಹೆಸರಿನ ಆಟಗಾರ. ಸಾಮಾನ್ಯವಾಗಿ ನ್ಯೂಜಿಲೆಂಡ್ ತಂಡದಲ್ಲಿ ಭಾರತೀಯ ಮೂಲದ ಆಟಗಾರರು ಕಾಣಿಸಿಕೊಳ್ಳುತ್ತಾರೆ. ಆದರೆ ಈ ಬಾರಿ ಕಾಣಿಸಿಕೊಂಡ ರಚಿನ್ ನಮ್ಮೂರಿನ ಹುಡುಗ ಎಂಬುದು ವಿಶೇಷ.

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಟಿ20 ಪಂದ್ಯದ ವೇಳೆ ಎಲ್ಲರ ಗಮನ ಸೆಳೆದಿದ್ದು ರಚಿನ್ ರವೀಂದ್ರ ಹೆಸರಿನ ಆಟಗಾರ. ಸಾಮಾನ್ಯವಾಗಿ ನ್ಯೂಜಿಲೆಂಡ್ ತಂಡದಲ್ಲಿ ಭಾರತೀಯ ಮೂಲದ ಆಟಗಾರರು ಕಾಣಿಸಿಕೊಳ್ಳುತ್ತಾರೆ. ಆದರೆ ಈ ಬಾರಿ ಕಾಣಿಸಿಕೊಂಡ ರಚಿನ್ ನಮ್ಮೂರಿನ ಹುಡುಗ ಎಂಬುದು ವಿಶೇಷ.

1 / 6
ನ್ಯೂಜಿಲೆಂಡ್ ಪರ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಎಡಗೈ ಬ್ಯಾಟರ್ ರಚಿನ್ 7 ರನ್​ಗಳಿಸಿ ಮೊಹಮ್ಮದ್ ಸಿರಾಜ್​ ಎಸೆತದಲ್ಲಿ ಬೌಲ್ಡ್ ಆಗಿದ್ದರು. ಆ ಬಳಿಕ ಉತ್ತಮ ಫೀಲ್ಡಿಂಗ್ ಮೂಲಕ ಪಂದ್ಯದುದ್ದಕ್ಕೂ ಗಮನ ಸೆಳೆದಿದ್ದರು. ಇದರ ಬೆನ್ನಲ್ಲೇ ಯಾರು ಈ ರಚಿನ್ ಎಂಬ ಕುತೂಹಲ ಕೂಡ ಎಲ್ಲರಲ್ಲಿತ್ತು. ಈ ಕುತೂಹಲಕಾರಿ ಪ್ರಶ್ನೆಗೆ ಸಿಗುವ ಉತ್ತರ....

ನ್ಯೂಜಿಲೆಂಡ್ ಪರ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಎಡಗೈ ಬ್ಯಾಟರ್ ರಚಿನ್ 7 ರನ್​ಗಳಿಸಿ ಮೊಹಮ್ಮದ್ ಸಿರಾಜ್​ ಎಸೆತದಲ್ಲಿ ಬೌಲ್ಡ್ ಆಗಿದ್ದರು. ಆ ಬಳಿಕ ಉತ್ತಮ ಫೀಲ್ಡಿಂಗ್ ಮೂಲಕ ಪಂದ್ಯದುದ್ದಕ್ಕೂ ಗಮನ ಸೆಳೆದಿದ್ದರು. ಇದರ ಬೆನ್ನಲ್ಲೇ ಯಾರು ಈ ರಚಿನ್ ಎಂಬ ಕುತೂಹಲ ಕೂಡ ಎಲ್ಲರಲ್ಲಿತ್ತು. ಈ ಕುತೂಹಲಕಾರಿ ಪ್ರಶ್ನೆಗೆ ಸಿಗುವ ಉತ್ತರ....

2 / 6
ರಚಿನ್ ರವೀಂದ್ರ ಮೂಲತಃ ಬೆಂಗಳೂರಿನ ಹುಡುಗ.  ಬೆಂಗಳೂರು ಮೂಲದ ರವೀಂದ್ರ ಕೃಷ್ಣಮೂರ್ತಿ  ಹಾಗೂ​ ​ದೀಪಾ ಕೃಷ್ಣಮೂರ್ತಿ ಅವರ ಮಗ. ಸಾಫ್ಟ್‌ವೇರ್ ಸಿಸ್ಟಮ್ ಆರ್ಕಿಟೆಕ್ಟ್ ಆಗಿರುವ ರವೀಂದ್ರ ಕೃಷ್ಣಮೂರ್ತಿ ಅವರು 1990ರಲ್ಲಿ ನ್ಯೂಜಿಲ್ಯಾಂಡ್​ಗೆ ತೆರಳಿದ್ದರು. ಆ ಬಳಿಕ ಅಲ್ಲಿಯೇ ನೆಲೆಸಿದ್ದರು. ಅತ್ತ ಕ್ರಿಕೆಟ್​ ಪ್ರೇಮಿಯಾಗಿದ್ದ ರವಿ ಕೃಷ್ಣಮೂರ್ತಿ  ಹಟ್ ಹಾಕ್ಸ್ ಕ್ರಿಕೆಟ್ ಕ್ಲಬ್‌ನ ಸ್ಥಾಪಿಸಿದ್ದರು.

ರಚಿನ್ ರವೀಂದ್ರ ಮೂಲತಃ ಬೆಂಗಳೂರಿನ ಹುಡುಗ. ಬೆಂಗಳೂರು ಮೂಲದ ರವೀಂದ್ರ ಕೃಷ್ಣಮೂರ್ತಿ ಹಾಗೂ​ ​ದೀಪಾ ಕೃಷ್ಣಮೂರ್ತಿ ಅವರ ಮಗ. ಸಾಫ್ಟ್‌ವೇರ್ ಸಿಸ್ಟಮ್ ಆರ್ಕಿಟೆಕ್ಟ್ ಆಗಿರುವ ರವೀಂದ್ರ ಕೃಷ್ಣಮೂರ್ತಿ ಅವರು 1990ರಲ್ಲಿ ನ್ಯೂಜಿಲ್ಯಾಂಡ್​ಗೆ ತೆರಳಿದ್ದರು. ಆ ಬಳಿಕ ಅಲ್ಲಿಯೇ ನೆಲೆಸಿದ್ದರು. ಅತ್ತ ಕ್ರಿಕೆಟ್​ ಪ್ರೇಮಿಯಾಗಿದ್ದ ರವಿ ಕೃಷ್ಣಮೂರ್ತಿ ಹಟ್ ಹಾಕ್ಸ್ ಕ್ರಿಕೆಟ್ ಕ್ಲಬ್‌ನ ಸ್ಥಾಪಿಸಿದ್ದರು.

3 / 6
ಬಳಿಕ ಮಗ ಕೂಡ ತಂದೆಯ ಹಾದಿಯಲ್ಲೇ ಸಾಗಿದರು. ಅದರಂತೆ ಬಾಲ್ಯದಿಂದಲೇ ಭಾರತದಲ್ಲಿ ಹಾಗೂ ನ್ಯೂಜಿಲೆಂಡ್​ನಲ್ಲಿ ಕ್ರಿಕೆಟ್ ಟ್ರೈನಿಂಗ್ ಪಡೆದ ರಚಿನ್ ಕಿವೀಸ್​ ಕಿರಿಯರ ತಂಡದಲ್ಲಿ ಸ್ಥಾನ ಪಡೆದಿದ್ದರು.  2016 ರ ಅಂಡರ್ -19 ವಿಶ್ವಕಪ್ ಮತ್ತು 2018 ರ ಅಂಡರ್ -19 ಕ್ರಿಕೆಟ್ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ಅನ್ನು ಪ್ರತಿನಿಧಿಸಿದ್ದರು.

ಬಳಿಕ ಮಗ ಕೂಡ ತಂದೆಯ ಹಾದಿಯಲ್ಲೇ ಸಾಗಿದರು. ಅದರಂತೆ ಬಾಲ್ಯದಿಂದಲೇ ಭಾರತದಲ್ಲಿ ಹಾಗೂ ನ್ಯೂಜಿಲೆಂಡ್​ನಲ್ಲಿ ಕ್ರಿಕೆಟ್ ಟ್ರೈನಿಂಗ್ ಪಡೆದ ರಚಿನ್ ಕಿವೀಸ್​ ಕಿರಿಯರ ತಂಡದಲ್ಲಿ ಸ್ಥಾನ ಪಡೆದಿದ್ದರು. 2016 ರ ಅಂಡರ್ -19 ವಿಶ್ವಕಪ್ ಮತ್ತು 2018 ರ ಅಂಡರ್ -19 ಕ್ರಿಕೆಟ್ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ಅನ್ನು ಪ್ರತಿನಿಧಿಸಿದ್ದರು.

4 / 6
ಇನ್ನು ಕಳೆದ ಸೆಪ್ಟೆಂಬರ್​ನಲ್ಲಿ ಬಾಂಗ್ಲಾದೇಶದ ವಿರುದ್ದದ ಪಂದ್ಯದಲ್ಲಿ ರಚಿನ್​ಗೆ ಚೊಚ್ಚಲ ಬಾರಿ ನ್ಯೂಜಿಲೆಂಡ್ ಹಿರಿಯರ ತಂಡದಲ್ಲಿ ಅವಕಾಶ ಲಭಿಸಿತು. ಅದರಂತೆ ನ್ಯೂಜಿಲೆಂಡ್ ಪರ 6 ಟಿ20 ಪಂದ್ಯಗಳನ್ನಾಡಿದ್ದಾರೆ. ಆಲ್​ರೌಂಡರ್ ಆಗಿ ತಂಡದಲ್ಲಿ ಸ್ಥಾನ ಪಡೆದಿರುವ 21 ವರ್ಷದ ರಚಿನ್ ಇದುವರೆಗೆ 6 ವಿಕೆಟ್ ಕಲೆಹಾಕಿದ್ದಾರೆ. ಅಷ್ಟೇ ಅಲ್ಲದೆ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ 47 ರನ್ ಬಾರಿಸಿದ್ದಾರೆ.

ಇನ್ನು ಕಳೆದ ಸೆಪ್ಟೆಂಬರ್​ನಲ್ಲಿ ಬಾಂಗ್ಲಾದೇಶದ ವಿರುದ್ದದ ಪಂದ್ಯದಲ್ಲಿ ರಚಿನ್​ಗೆ ಚೊಚ್ಚಲ ಬಾರಿ ನ್ಯೂಜಿಲೆಂಡ್ ಹಿರಿಯರ ತಂಡದಲ್ಲಿ ಅವಕಾಶ ಲಭಿಸಿತು. ಅದರಂತೆ ನ್ಯೂಜಿಲೆಂಡ್ ಪರ 6 ಟಿ20 ಪಂದ್ಯಗಳನ್ನಾಡಿದ್ದಾರೆ. ಆಲ್​ರೌಂಡರ್ ಆಗಿ ತಂಡದಲ್ಲಿ ಸ್ಥಾನ ಪಡೆದಿರುವ 21 ವರ್ಷದ ರಚಿನ್ ಇದುವರೆಗೆ 6 ವಿಕೆಟ್ ಕಲೆಹಾಕಿದ್ದಾರೆ. ಅಷ್ಟೇ ಅಲ್ಲದೆ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ 47 ರನ್ ಬಾರಿಸಿದ್ದಾರೆ.

5 / 6
ಒಟ್ಟಿನಲ್ಲಿ ನ್ಯೂಜಿಲೆಂಡ್ ತಂಡದಲ್ಲಿ ಭಾರತೀಯ ಮೂಲದ ಆಟಗಾರರನ್ನು ನೋಡಿದ ಕನ್ನಡಿಗರಿಗೆ ಇದೀಗ ಬೆಂಗಳೂರು ಮೂಲದ ಕನ್ನಡಿಗನೇ ನ್ಯೂಜಿಲೆಂಡ್ ತಂಡದಲ್ಲಿ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯ ಎನ್ನಬಹುದು.

ಒಟ್ಟಿನಲ್ಲಿ ನ್ಯೂಜಿಲೆಂಡ್ ತಂಡದಲ್ಲಿ ಭಾರತೀಯ ಮೂಲದ ಆಟಗಾರರನ್ನು ನೋಡಿದ ಕನ್ನಡಿಗರಿಗೆ ಇದೀಗ ಬೆಂಗಳೂರು ಮೂಲದ ಕನ್ನಡಿಗನೇ ನ್ಯೂಜಿಲೆಂಡ್ ತಂಡದಲ್ಲಿ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯ ಎನ್ನಬಹುದು.

6 / 6
Web contact
Web contact

TV9 Kannada

Read More
Follow Us
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ