AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ನಾಯಕತ್ವದ ಮೇಲೆ ಕಣ್ಣು: ಮಿಸ್ಟರ್ ಫಿಕ್ಸ್ ಇಟ್ ಯಾರು?

Team India: ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮಾ. ಇನ್ನು ಉಪನಾಯಕ ಜಸ್​ಪ್ರೀತ್ ಬುಮ್ರಾ. ಟೆಸ್ಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ. ಈ ಮೂವರಲ್ಲಿ ಅತ್ಯಂತ ಹಿರಿಯ ಆಟಗಾರ ರೋಹಿತ್ ಶರ್ಮಾ. ಹೀಗಾಗಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಳಿಕ ಹಿಟ್​ಮ್ಯಾನ್ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಬಹುದು. ಆ ಬಳಿಕ ಭಾರತ ತಂಡ ನಾಯಕ ಯಾರಾಗಲಿದ್ದಾರೆ? ಎಂಬುದೇ ಪ್ರಶ್ನೆ.

ಝಾಹಿರ್ ಯೂಸುಫ್
|

Updated on: Jan 02, 2025 | 9:23 AM

Share
ಟೆಸ್ಟ್ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಯುಗಾಂತ್ಯವಾಗುವುದು ಬಹುತೇಕ ಖಚಿತವಾಗಿದೆ. ಈ ಯುಗಾಂತ್ಯದ ಬೆನ್ನಲ್ಲೇ ಭಾರತ ತಂಡದ ನಾಯಕತ್ವ ವಹಿಸಿಕೊಳ್ಳಲು ಪ್ರಮುಖ ಆಟಗಾರರೊಬ್ಬರು ತೆರೆ ಮರೆಯ ಪ್ರಯತ್ನಕ್ಕೆ ಕೈ ಹಾಕಿರುವುದು ಬಹಿರಂಗವಾಗಿದೆ. ಅದರಲ್ಲೂ ಬಾರ್ಡರ್-ಗವಾಸ್ಕರ್ ಸರಣಿ ನಡುವೆಯೇ ರೋಹಿತ್ ಶರ್ಮಾ ಅವರ ಸ್ಥಾನದ ಮೇಲೆ ಕಣ್ಣಿಟ್ಟಿರುವ ಎಂಬ ವಿಷಯ ಇದೀಗ ಜಗಜ್ಜಾಹೀರಾಗಿದೆ.

ಟೆಸ್ಟ್ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಯುಗಾಂತ್ಯವಾಗುವುದು ಬಹುತೇಕ ಖಚಿತವಾಗಿದೆ. ಈ ಯುಗಾಂತ್ಯದ ಬೆನ್ನಲ್ಲೇ ಭಾರತ ತಂಡದ ನಾಯಕತ್ವ ವಹಿಸಿಕೊಳ್ಳಲು ಪ್ರಮುಖ ಆಟಗಾರರೊಬ್ಬರು ತೆರೆ ಮರೆಯ ಪ್ರಯತ್ನಕ್ಕೆ ಕೈ ಹಾಕಿರುವುದು ಬಹಿರಂಗವಾಗಿದೆ. ಅದರಲ್ಲೂ ಬಾರ್ಡರ್-ಗವಾಸ್ಕರ್ ಸರಣಿ ನಡುವೆಯೇ ರೋಹಿತ್ ಶರ್ಮಾ ಅವರ ಸ್ಥಾನದ ಮೇಲೆ ಕಣ್ಣಿಟ್ಟಿರುವ ಎಂಬ ವಿಷಯ ಇದೀಗ ಜಗಜ್ಜಾಹೀರಾಗಿದೆ.

1 / 6
37 ವರ್ಷದ ರೋಹಿತ್ ಶರ್ಮಾ ಬಾರ್ಡರ್-ಗವಾಸ್ಕರ್ ಸರಣಿಯ ಬಳಿಕ ಟೆಸ್ಟ್ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡುವುದು ಬಹುತೇಕ ಕನ್ಫರ್ಮ್​. ಇದು ಖಚಿತವಾಗುತ್ತಿದ್ದಂತೆ ಅತ್ತ ಟೀಮ್ ಇಂಡಿಯಾದಲ್ಲಿರುವ ಹಿರಿಯ ಆಟಗಾರರೊಬ್ಬರು ತಂಡದ ಮುಂದಾಳತ್ವ ವಹಿಸಿಕೊಳ್ಳಲು ಸಿದ್ಧನಿರುವುದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.

37 ವರ್ಷದ ರೋಹಿತ್ ಶರ್ಮಾ ಬಾರ್ಡರ್-ಗವಾಸ್ಕರ್ ಸರಣಿಯ ಬಳಿಕ ಟೆಸ್ಟ್ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡುವುದು ಬಹುತೇಕ ಕನ್ಫರ್ಮ್​. ಇದು ಖಚಿತವಾಗುತ್ತಿದ್ದಂತೆ ಅತ್ತ ಟೀಮ್ ಇಂಡಿಯಾದಲ್ಲಿರುವ ಹಿರಿಯ ಆಟಗಾರರೊಬ್ಬರು ತಂಡದ ಮುಂದಾಳತ್ವ ವಹಿಸಿಕೊಳ್ಳಲು ಸಿದ್ಧನಿರುವುದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.

2 / 6
ತಮ್ಮನ್ನು 'ಮಿಸ್ಟರ್ ಫಿಕ್ಸ್-ಇಟ್' ಎಂದು ಬಿಂಬಿಸಿಕೊಳ್ಳುತ್ತಿರುವ ಹಿರಿಯ ಆಟಗಾರ, ಭಾರತ ತಂಡದಲ್ಲಿನ ಯುವ ಆಟಗಾರರು ಇನ್ನೂ ನಾಯಕತ್ವದ ಪಾತ್ರವನ್ನು ವಹಿಸಿಕೊಳ್ಳಲು ಸಿದ್ಧವಾಗಿಲ್ಲ ಎಂದು ಮನವರಿಕೆ ಮಾಡಿದ್ದಾರೆ. ಅಲ್ಲದೆ ಮಧ್ಯಂತರ ಆಯ್ಕೆಯಾಗಿ ನಾನು ಭಾರತ ತಂಡವನ್ನು ಮುನ್ನಡೆಸಲು ಸಿದ್ಧವಿದ್ದೇನೆ ತಿಳಿಸಿದ್ದಾರಂತೆ.

ತಮ್ಮನ್ನು 'ಮಿಸ್ಟರ್ ಫಿಕ್ಸ್-ಇಟ್' ಎಂದು ಬಿಂಬಿಸಿಕೊಳ್ಳುತ್ತಿರುವ ಹಿರಿಯ ಆಟಗಾರ, ಭಾರತ ತಂಡದಲ್ಲಿನ ಯುವ ಆಟಗಾರರು ಇನ್ನೂ ನಾಯಕತ್ವದ ಪಾತ್ರವನ್ನು ವಹಿಸಿಕೊಳ್ಳಲು ಸಿದ್ಧವಾಗಿಲ್ಲ ಎಂದು ಮನವರಿಕೆ ಮಾಡಿದ್ದಾರೆ. ಅಲ್ಲದೆ ಮಧ್ಯಂತರ ಆಯ್ಕೆಯಾಗಿ ನಾನು ಭಾರತ ತಂಡವನ್ನು ಮುನ್ನಡೆಸಲು ಸಿದ್ಧವಿದ್ದೇನೆ ತಿಳಿಸಿದ್ದಾರಂತೆ.

3 / 6
ಇದರ ಬೆನ್ನಲ್ಲೇ ಆ ಮಿಸ್ಟರ್ ಫಿಕ್ಸ್-ಇಟ್ ಯಾರೆಂಬ ಚರ್ಚೆಗಳು ಶುರುವಾಗಿದೆ. ಈ ಚರ್ಚೆಯ ನಡುವೆ ಕೇಳಿ ಬರುತ್ತಿರುವ ಹೆಸರುಗಳೆಂದರೆ ವಿರಾಟ್ ಕೊಹ್ಲಿ ಮತ್ತು ಜಸ್​ಪ್ರೀತ್ ಬುಮ್ರಾ. ಈ ಹಿಂದೆ ಅನಿರೀಕ್ಷಿತವಾಗಿ ಕ್ಯಾಪ್ಟನ್ ಸ್ಥಾನದಿಂದ ಕೆಳಗಿಳಿದಿದ್ದ ಕಿಂಗ್ ಕೊಹ್ಲಿ ಇದೀಗ ಮತ್ತೆ ಟೆಸ್ಟ್ ತಂಡದ ನಾಯಕತ್ವ ವಹಿಸಿಕೊಳ್ಳಲು ಆಸಕ್ತಿ ತೋರಿದ್ದಾರೆ ಎಂಬ ಮಾತುಗಳು ಕೇಳಿ ಬರಲಾರಂಭಿಸಿದೆ.

ಇದರ ಬೆನ್ನಲ್ಲೇ ಆ ಮಿಸ್ಟರ್ ಫಿಕ್ಸ್-ಇಟ್ ಯಾರೆಂಬ ಚರ್ಚೆಗಳು ಶುರುವಾಗಿದೆ. ಈ ಚರ್ಚೆಯ ನಡುವೆ ಕೇಳಿ ಬರುತ್ತಿರುವ ಹೆಸರುಗಳೆಂದರೆ ವಿರಾಟ್ ಕೊಹ್ಲಿ ಮತ್ತು ಜಸ್​ಪ್ರೀತ್ ಬುಮ್ರಾ. ಈ ಹಿಂದೆ ಅನಿರೀಕ್ಷಿತವಾಗಿ ಕ್ಯಾಪ್ಟನ್ ಸ್ಥಾನದಿಂದ ಕೆಳಗಿಳಿದಿದ್ದ ಕಿಂಗ್ ಕೊಹ್ಲಿ ಇದೀಗ ಮತ್ತೆ ಟೆಸ್ಟ್ ತಂಡದ ನಾಯಕತ್ವ ವಹಿಸಿಕೊಳ್ಳಲು ಆಸಕ್ತಿ ತೋರಿದ್ದಾರೆ ಎಂಬ ಮಾತುಗಳು ಕೇಳಿ ಬರಲಾರಂಭಿಸಿದೆ.

4 / 6
ಮತ್ತೊಂದೆಡೆ ಪರ್ತ್​ ಟೆಸ್ಟ್ ಪಂದ್ಯದಲ್ಲಿ ನಾಯಕರಾಗಿ ಜಸ್​ಪ್ರೀತ್ ಬುಮ್ರಾ ಯಶಸ್ವಿಯಾಗಿದ್ದರು. ಈ ಯಶಸ್ಸಿನ ಬೆನ್ನಲ್ಲೇ ಬುಮ್ರಾ ಅವರನ್ನು ಟೆಸ್ಟ್​ನಲ್ಲಿ ನಾಯಕರಾಗಿ ಮುಂದುವರೆಸಬೇಕೆಂಬ ಕೂಗುಗಳು ಕೇಳಿ ಬಂದಿದ್ದವು. ಇದೀಗ ರೋಹಿತ್ ಶರ್ಮಾ ಅವರಿಂದ ತೆರವಾಗುವ ಸ್ಥಾನದ ಮೇಲೆ ಬುಮ್ರಾ ಕೂಡ ಕಣ್ಣಿಟ್ಟಿದ್ದಾರೆ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿದೆ.

ಮತ್ತೊಂದೆಡೆ ಪರ್ತ್​ ಟೆಸ್ಟ್ ಪಂದ್ಯದಲ್ಲಿ ನಾಯಕರಾಗಿ ಜಸ್​ಪ್ರೀತ್ ಬುಮ್ರಾ ಯಶಸ್ವಿಯಾಗಿದ್ದರು. ಈ ಯಶಸ್ಸಿನ ಬೆನ್ನಲ್ಲೇ ಬುಮ್ರಾ ಅವರನ್ನು ಟೆಸ್ಟ್​ನಲ್ಲಿ ನಾಯಕರಾಗಿ ಮುಂದುವರೆಸಬೇಕೆಂಬ ಕೂಗುಗಳು ಕೇಳಿ ಬಂದಿದ್ದವು. ಇದೀಗ ರೋಹಿತ್ ಶರ್ಮಾ ಅವರಿಂದ ತೆರವಾಗುವ ಸ್ಥಾನದ ಮೇಲೆ ಬುಮ್ರಾ ಕೂಡ ಕಣ್ಣಿಟ್ಟಿದ್ದಾರೆ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿದೆ.

5 / 6
ಹೀಗಾಗಿಯೇ ಮೆಲ್ಬೋರ್ನ್ ಟೆಸ್ಟ್ ಪಂದ್ಯದ ಬಳಿಕ ಟೀಮ್ ಇಂಡಿಯಾ ನಾಯಕತ್ವದ ಮೇಲೆ ಕಣ್ಣಿಟ್ಟಿರುವ 'ಮಿಸ್ಟರ್ ಫಿಕ್ಸ್-ಇಟ್' ವಿರಾಟ್ ಕೊಹ್ಲಿ ಅಥವಾ ಜಸ್​ಪ್ರೀತ್ ಬುಮ್ರಾ ಎನ್ನಲಾಗುತ್ತಿದೆ. ಹಾಗಾಗಿ ರೋಹಿತ್ ಶರ್ಮಾ ಬಳಿಕ ಟೆಸ್ಟ್ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ಅಥವಾ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

ಹೀಗಾಗಿಯೇ ಮೆಲ್ಬೋರ್ನ್ ಟೆಸ್ಟ್ ಪಂದ್ಯದ ಬಳಿಕ ಟೀಮ್ ಇಂಡಿಯಾ ನಾಯಕತ್ವದ ಮೇಲೆ ಕಣ್ಣಿಟ್ಟಿರುವ 'ಮಿಸ್ಟರ್ ಫಿಕ್ಸ್-ಇಟ್' ವಿರಾಟ್ ಕೊಹ್ಲಿ ಅಥವಾ ಜಸ್​ಪ್ರೀತ್ ಬುಮ್ರಾ ಎನ್ನಲಾಗುತ್ತಿದೆ. ಹಾಗಾಗಿ ರೋಹಿತ್ ಶರ್ಮಾ ಬಳಿಕ ಟೆಸ್ಟ್ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ಅಥವಾ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

6 / 6
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ