AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash Dhull: ಅಂಡರ್ 19 ವಿಶ್ವಕಪ್​ಗೆ ನಾಯಕನಾಗಿ ಆಯ್ಕೆಯಾದ ಯಶ್ ಧುಲ್ ಯಾರು ಗೊತ್ತೇ? ಕೇಳಿದ್ರೆ ಶಾಕ್ ಆಗ್ತೀರಾ

India's Squad for ICC U19 World Cup 2022: ಐಸಿಸಿ ಅಂಡರ್-19 ವಿಶ್ವಕಪ್​ಗೆ ಭಾರತ ತಂಡ ಪ್ರಕಟವಾಗುತ್ತಿದ್ದಂತೆ ನಾಯಕನಾಗಿ ಆಯ್ಕೆಯಾದ ಯಶ್ ಧುಲ್ ಯಾರು ಎಂದು ಅನೇಕರು ಗೂಗಲ್ ಮಾಡುತ್ತಿದ್ದಾರೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ. ಅಂದಹಾಗೆ ವೆಸ್ಟ್ ಇಂಡೀಸ್ನಲ್ಲಿ ಜನವರಿ 14ರಿಂದ ಫೆಬ್ರುವರಿ 5ರವರೆಗೆ 19 ವರ್ಷದೊಳಗಿನವರ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ.

TV9 Web
| Edited By: |

Updated on: Dec 20, 2021 | 11:05 AM

Share
ಕೆರಿಬಿಯನ್ನರ ನಾಡಿನಲ್ಲಿ ಜನವರಿ 14 ರಿಂದ ಆರಂಭವಾಗಲಿರುವ ಕಿರಿಯರ ಐಸಿಸಿ ಅಂಡರ್-19 ವಿಶ್ವಕಪ್​ಗೆ ಭಾರತ ತಂಡ ಪ್ರಕಟವಾಗಿದೆ. ಬಿಸಿಸಿಐ ಆಯ್ಕೆ ಸಮಿತಿ 17 ಸದಸ್ಯರ ಭಾರತ ತಂಡವನ್ನು ಹೆಸರಿಸಿದ್ದು ಯಶ್ ಧುಲ್ ಅವರನ್ನು ನಾಯಕನಾಗಿ ಆಯ್ಕೆ ಮಾಡಿದೆ. ಉಪ ನಾಯಕನಾಗಿ ಆಂಧ್ರದ ಎಸ್​ಕೆ ರಶೀದ್ ಹೆಸರು ಘೋಷಿಸಲಾಗಿದೆ.

ಕೆರಿಬಿಯನ್ನರ ನಾಡಿನಲ್ಲಿ ಜನವರಿ 14 ರಿಂದ ಆರಂಭವಾಗಲಿರುವ ಕಿರಿಯರ ಐಸಿಸಿ ಅಂಡರ್-19 ವಿಶ್ವಕಪ್​ಗೆ ಭಾರತ ತಂಡ ಪ್ರಕಟವಾಗಿದೆ. ಬಿಸಿಸಿಐ ಆಯ್ಕೆ ಸಮಿತಿ 17 ಸದಸ್ಯರ ಭಾರತ ತಂಡವನ್ನು ಹೆಸರಿಸಿದ್ದು ಯಶ್ ಧುಲ್ ಅವರನ್ನು ನಾಯಕನಾಗಿ ಆಯ್ಕೆ ಮಾಡಿದೆ. ಉಪ ನಾಯಕನಾಗಿ ಆಂಧ್ರದ ಎಸ್​ಕೆ ರಶೀದ್ ಹೆಸರು ಘೋಷಿಸಲಾಗಿದೆ.

1 / 7
ಅಂಡರ್-19 ವಿಶ್ವಕಪ್​ಗೆ ಭಾರತ ತಂಡ ಪ್ರಕಟವಾಗುತ್ತಿದ್ದಂತೆ ನಾಯಕ ಯಶ್ ಧುಲ್ ಯಾರು ಎಂದು ಅನೇಕರು ಗೂಗಲ್ ಮಾಡುತ್ತಿದ್ದಾರೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ.

ಅಂಡರ್-19 ವಿಶ್ವಕಪ್​ಗೆ ಭಾರತ ತಂಡ ಪ್ರಕಟವಾಗುತ್ತಿದ್ದಂತೆ ನಾಯಕ ಯಶ್ ಧುಲ್ ಯಾರು ಎಂದು ಅನೇಕರು ಗೂಗಲ್ ಮಾಡುತ್ತಿದ್ದಾರೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ.

2 / 7
ಬಲಗೈ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿರುವ ದೆಹಲಿಯ ಯಶ್ ಧುಲ್, ಈ ವರ್ಷದ ಆರಂಭದಲ್ಲಿ ವಿನೂ ಮಂಕಡ್ ಟ್ರೋಫಿಯಲ್ಲಿ ಹೆಚ್ಚು ರನ್ ಗಳಿಸಿದ ಆಟಗಾರ ಆಗಿದ್ದಾರೆ. ತಂಡವು ಆಡಿದ ಐದು ಪಂದ್ಯಗಳಲ್ಲಿ ದೆಹಲಿ ತಂಡಕ್ಕಾಗಿ ಅವರು 75.50 ಸರಾಸರಿಯಲ್ಲಿ ಬರೋಬ್ಬರಿ 302 ರನ್​ಗಳನ್ನು ಗಳಿಸಿದ್ದರು.

ಬಲಗೈ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿರುವ ದೆಹಲಿಯ ಯಶ್ ಧುಲ್, ಈ ವರ್ಷದ ಆರಂಭದಲ್ಲಿ ವಿನೂ ಮಂಕಡ್ ಟ್ರೋಫಿಯಲ್ಲಿ ಹೆಚ್ಚು ರನ್ ಗಳಿಸಿದ ಆಟಗಾರ ಆಗಿದ್ದಾರೆ. ತಂಡವು ಆಡಿದ ಐದು ಪಂದ್ಯಗಳಲ್ಲಿ ದೆಹಲಿ ತಂಡಕ್ಕಾಗಿ ಅವರು 75.50 ಸರಾಸರಿಯಲ್ಲಿ ಬರೋಬ್ಬರಿ 302 ರನ್​ಗಳನ್ನು ಗಳಿಸಿದ್ದರು.

3 / 7
ಇವರಿಗೆ ಅಂಡರ್ 16, ಅಂಡರ್ 19 ಮತ್ತು ಭಾರತ ಎ ತಂಡದ ಅಂಡರ್ 19ನಲ್ಲಿ ಆಡಿದ ಸಾಕಷ್ಟು ಅನುಭವವಿದೆ. 11ನೇ ವರ್ಷಕ್ಕೇ ಇವರು ಕ್ರಿಕೆಟ್ ಲೋಕಕ್ಕೆ ಕಾಲಿಟ್ಟಿದ್ದರು. ಇವರ ತಂದೆ ಆರ್ಮಿಯಲ್ಲಿದ್ದವರು. ಈಗ ಬರುತ್ತಿರುವ ಪೆನ್ಶನ್ ಹಣದಲ್ಲಿ ಮನೆಯನ್ನು ನಡೆಸುತ್ತಿದ್ದಾರಂತೆ. ನಾನು ಯಾವ ಆಟಗಾರನ ಆಟದ ಶೈಲಿಯನ್ನೂ ಕಾಪಿ ಮಾಡುವುದಿಲ್ಲ, ಆದರೆ ಪ್ರತಿಯೊಬ್ಬ ಆಟಗಾರ ಕೂಡ ನನ್ನ ಹೀರೋ ಎಂಬುದು ಯಶ್ ಮಾತು.

ಇವರಿಗೆ ಅಂಡರ್ 16, ಅಂಡರ್ 19 ಮತ್ತು ಭಾರತ ಎ ತಂಡದ ಅಂಡರ್ 19ನಲ್ಲಿ ಆಡಿದ ಸಾಕಷ್ಟು ಅನುಭವವಿದೆ. 11ನೇ ವರ್ಷಕ್ಕೇ ಇವರು ಕ್ರಿಕೆಟ್ ಲೋಕಕ್ಕೆ ಕಾಲಿಟ್ಟಿದ್ದರು. ಇವರ ತಂದೆ ಆರ್ಮಿಯಲ್ಲಿದ್ದವರು. ಈಗ ಬರುತ್ತಿರುವ ಪೆನ್ಶನ್ ಹಣದಲ್ಲಿ ಮನೆಯನ್ನು ನಡೆಸುತ್ತಿದ್ದಾರಂತೆ. ನಾನು ಯಾವ ಆಟಗಾರನ ಆಟದ ಶೈಲಿಯನ್ನೂ ಕಾಪಿ ಮಾಡುವುದಿಲ್ಲ, ಆದರೆ ಪ್ರತಿಯೊಬ್ಬ ಆಟಗಾರ ಕೂಡ ನನ್ನ ಹೀರೋ ಎಂಬುದು ಯಶ್ ಮಾತು.

4 / 7
ವೆಸ್ಟ್ ಇಂಡೀಸ್​ನಲ್ಲಿ ಜನವರಿ 14ರಿಂದ ಫೆಬ್ರುವರಿ 5ರವರೆಗೆ 19 ವರ್ಷದೊಳಗಿನವರ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ. ನಾಲ್ಕು ಬಾರಿ ವಿಶ್ವಕಪ್ ವಿಜೇತ ಭಾರತವು 'ಬಿ' ಗುಂಪಿನಲ್ಲಿ ದಕ್ಷಿಣ ಆಫ್ರಿಕಾ, ಐರ್ಲೆಂಡ್ ಮತ್ತು ಉಗಾಂಡ ತಂಡಗಳೊಂದಿಗೆ ಸ್ಥಾನ ಪಡೆದಿದೆ. ಭಾರತ ಪರ ಕರ್ನಾಟಕದ ಅನೀಶ್ವರ್ ಗೌತಮ್ ಕೂಡ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ.

ವೆಸ್ಟ್ ಇಂಡೀಸ್​ನಲ್ಲಿ ಜನವರಿ 14ರಿಂದ ಫೆಬ್ರುವರಿ 5ರವರೆಗೆ 19 ವರ್ಷದೊಳಗಿನವರ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ. ನಾಲ್ಕು ಬಾರಿ ವಿಶ್ವಕಪ್ ವಿಜೇತ ಭಾರತವು 'ಬಿ' ಗುಂಪಿನಲ್ಲಿ ದಕ್ಷಿಣ ಆಫ್ರಿಕಾ, ಐರ್ಲೆಂಡ್ ಮತ್ತು ಉಗಾಂಡ ತಂಡಗಳೊಂದಿಗೆ ಸ್ಥಾನ ಪಡೆದಿದೆ. ಭಾರತ ಪರ ಕರ್ನಾಟಕದ ಅನೀಶ್ವರ್ ಗೌತಮ್ ಕೂಡ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ.

5 / 7
ಜೂನಿಯರ್ ವರ್ಲ್ಡ್ ಕಪ್​ನಲ್ಲಿ ಭಾರತವೇ ಹೆಚ್ಚು ಪಾರಮ್ಯ ಮೆರೆದಿರುವುದು. ನಾಲ್ಕು ಬಾರಿ ಟ್ರೋಫಿ ಎತ್ತಿಹಿಡಿದಿದೆ. 2000, 2008, 2012 ಮತ್ತು 2018ರ ಕಿರಿಯರ ವಿಶ್ವಕಪ್​ಗಳನ್ನ ಭಾರತದ ಹುಡುಗರು ಎತ್ತಿಹಿಡಿದಿದ್ದಾರೆ. 2016ರಲ್ಲಿ ರನ್ನರ್ ಅಪ್ ಆಗಿದ್ದಾರೆ. ಕಿರಿಯರ ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ಯಶಸ್ಸು ಕಂಡ ಶ್ರೇಯಸ್ಸು ಟೀಮ್ ಇಂಡಿಯಾದ್ದು.

ಜೂನಿಯರ್ ವರ್ಲ್ಡ್ ಕಪ್​ನಲ್ಲಿ ಭಾರತವೇ ಹೆಚ್ಚು ಪಾರಮ್ಯ ಮೆರೆದಿರುವುದು. ನಾಲ್ಕು ಬಾರಿ ಟ್ರೋಫಿ ಎತ್ತಿಹಿಡಿದಿದೆ. 2000, 2008, 2012 ಮತ್ತು 2018ರ ಕಿರಿಯರ ವಿಶ್ವಕಪ್​ಗಳನ್ನ ಭಾರತದ ಹುಡುಗರು ಎತ್ತಿಹಿಡಿದಿದ್ದಾರೆ. 2016ರಲ್ಲಿ ರನ್ನರ್ ಅಪ್ ಆಗಿದ್ದಾರೆ. ಕಿರಿಯರ ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ಯಶಸ್ಸು ಕಂಡ ಶ್ರೇಯಸ್ಸು ಟೀಮ್ ಇಂಡಿಯಾದ್ದು.

6 / 7
ಭಾರತ ತಂಡ: ಯಶ್ ಧುಲ್ (ನಾಯಕ), ಎಸ್ಕೆ ರಶೀದ್ (ಉಪನಾಯಕ), ಹರ್ನೂರ್ ಸಿಂಗ್, ನಿಶಾಂತ್ ಸಿಧು, ಸಿದ್ದಾರ್ಥ್ ಯಾದವ್, ಅನೀಶ್ವರ್ ಗೌತಮ್, ದಿನೇಶ್ ಬಾಬಾ (ವಿಕೀ), ಅರಾಧ್ಯ ಯಾದವ್ (ವಿಕೀ), ರಾಜ್ ಅನಾಗ್ ಬಾವಾ, ಮಾನವ್ ಪಾರಖ್, ಕೌಶಾಕ್ ತಂಬೆ, ಆರ್ಎಸ್ ಹಂಗಾರ್ಕೆರ್, ವಸು ವಾಟ್ಸ್, ವಿಕಿ ಒಟ್ಸಾವಲ್, ರವಿ ಕುಮಾರ್, ಗಾರ್ವ್ ಸಂಗ್ವಾನ್. ಮೀಸಲು ಆಟಗಾರರು: ರಿಶಿತ್ ರೆಡ್ಡಿ, ಉದಯ್ ಶಹರಣ್, ಅಂಶ್ ಗೊಸಾಯ್, ಅಮ್ರಿತ್ ರಾಜ್ ಉಪಾದ್ಯಾಯ್, ಪಿಎಂ ಸಿಂಗ್ ರಾಥೋಡ್.

ಭಾರತ ತಂಡ: ಯಶ್ ಧುಲ್ (ನಾಯಕ), ಎಸ್ಕೆ ರಶೀದ್ (ಉಪನಾಯಕ), ಹರ್ನೂರ್ ಸಿಂಗ್, ನಿಶಾಂತ್ ಸಿಧು, ಸಿದ್ದಾರ್ಥ್ ಯಾದವ್, ಅನೀಶ್ವರ್ ಗೌತಮ್, ದಿನೇಶ್ ಬಾಬಾ (ವಿಕೀ), ಅರಾಧ್ಯ ಯಾದವ್ (ವಿಕೀ), ರಾಜ್ ಅನಾಗ್ ಬಾವಾ, ಮಾನವ್ ಪಾರಖ್, ಕೌಶಾಕ್ ತಂಬೆ, ಆರ್ಎಸ್ ಹಂಗಾರ್ಕೆರ್, ವಸು ವಾಟ್ಸ್, ವಿಕಿ ಒಟ್ಸಾವಲ್, ರವಿ ಕುಮಾರ್, ಗಾರ್ವ್ ಸಂಗ್ವಾನ್. ಮೀಸಲು ಆಟಗಾರರು: ರಿಶಿತ್ ರೆಡ್ಡಿ, ಉದಯ್ ಶಹರಣ್, ಅಂಶ್ ಗೊಸಾಯ್, ಅಮ್ರಿತ್ ರಾಜ್ ಉಪಾದ್ಯಾಯ್, ಪಿಎಂ ಸಿಂಗ್ ರಾಥೋಡ್.

7 / 7
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ