AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs LSG: ಯಾರಿಗೆ ಸಿಗಲಿದೆ ಚಾನ್ಸ್​?

IPL 2026 RCB vs LSG: ಐಪಿಎಲ್​ನ 50ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಅದರಲ್ಲೂ ಮುಖ್ಯವಾಗಿ ಆರಂಭಿಕ ಜೋಡಿ ಬದಲಾಗುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: May 06, 2026 | 1:53 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 50ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ಅಲಭ್ಯರಾಗಲಿದ್ದಾರೆ. (PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 50ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ಅಲಭ್ಯರಾಗಲಿದ್ದಾರೆ. (PC: IPL)

1 / 6
ಫಿಲ್ ಸಾಲ್ಟ್ ಅವರ ಬೆರಳಿಗೆ ಗಾಯವಾಗಿದ್ದು, ಹೀಗಾಗಿ ಅವರು ಇಂಗ್ಲೆಂಡ್​ಗೆ ಮರಳಿದ್ದಾರೆ. ಅಲ್ಲದೆ ಇಲ್ಲಿಯೇ ಚಿಕಿತ್ಸೆ ಮುಂದುವರೆಸಲಿರುವ ಅವರು ಸಂಪೂರ್ಣ ಫಿಟ್ ಆದ ಬಳಿಕ ಭಾರತಕ್ಕೆ ಹಿಂತಿರುಗಲಿದ್ದಾರೆ. ಹೀಗಾಗಿ ಆರ್​ಸಿಬಿ ತಂಡದ ಮುಂದಿನ ಕೆಲ ಪಂದ್ಯಗಳಲ್ಲಿ ಸಾಲ್ಟ್ ಕಾಣಿಸಿಕೊಳ್ಳುವುದಿಲ್ಲ. (PC: IPL)

ಫಿಲ್ ಸಾಲ್ಟ್ ಅವರ ಬೆರಳಿಗೆ ಗಾಯವಾಗಿದ್ದು, ಹೀಗಾಗಿ ಅವರು ಇಂಗ್ಲೆಂಡ್​ಗೆ ಮರಳಿದ್ದಾರೆ. ಅಲ್ಲದೆ ಇಲ್ಲಿಯೇ ಚಿಕಿತ್ಸೆ ಮುಂದುವರೆಸಲಿರುವ ಅವರು ಸಂಪೂರ್ಣ ಫಿಟ್ ಆದ ಬಳಿಕ ಭಾರತಕ್ಕೆ ಹಿಂತಿರುಗಲಿದ್ದಾರೆ. ಹೀಗಾಗಿ ಆರ್​ಸಿಬಿ ತಂಡದ ಮುಂದಿನ ಕೆಲ ಪಂದ್ಯಗಳಲ್ಲಿ ಸಾಲ್ಟ್ ಕಾಣಿಸಿಕೊಳ್ಳುವುದಿಲ್ಲ. (PC: IPL)

2 / 6
ಇತ್ತ ಫಿಲ್ ಸಾಲ್ಟ್ ಅನುಪಸ್ಥಿತಿಯಲ್ಲಿ ಕಳೆದ ಕೆಲ ಪಂದ್ಯಗಳಲ್ಲಿ ಆರ್​ಸಿಬಿ ಪರ ಜೇಕಬ್ ಬೆಥೆಲ್ ಇನಿಂಗ್ಸ್ ಆರಂಭಿಸಿದ್ದರು. ಆದರೆ ಅವರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಆಡಿದ ಮೂರು ಇನಿಂಗ್ಸ್​ಗಳಲ್ಲಿ ಬೆಥೆಲ್ ಕಲೆಹಾಕಿರುವುದು ಕೇವಲ 39 ರನ್​ಗಳು ಮಾತ್ರ. ಅಲ್ಲದೆ ಪವರ್​ಪ್ಲೇನಲ್ಲೇ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದ್ದರು. ಹೀಗಾಗಿ ಎಲ್​ಎಸ್​ಜಿ ವಿರುದ್ಧದ ಪಂದ್ಯದಲ್ಲಿ ಅವರನ್ನು ಕಣಕ್ಕಿಳಿಸಲಿದ್ದಾರೆಯೇ ಎಂಬುದೇ ಪ್ರಶ್ನೆ. (PC: IPL)

ಇತ್ತ ಫಿಲ್ ಸಾಲ್ಟ್ ಅನುಪಸ್ಥಿತಿಯಲ್ಲಿ ಕಳೆದ ಕೆಲ ಪಂದ್ಯಗಳಲ್ಲಿ ಆರ್​ಸಿಬಿ ಪರ ಜೇಕಬ್ ಬೆಥೆಲ್ ಇನಿಂಗ್ಸ್ ಆರಂಭಿಸಿದ್ದರು. ಆದರೆ ಅವರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಆಡಿದ ಮೂರು ಇನಿಂಗ್ಸ್​ಗಳಲ್ಲಿ ಬೆಥೆಲ್ ಕಲೆಹಾಕಿರುವುದು ಕೇವಲ 39 ರನ್​ಗಳು ಮಾತ್ರ. ಅಲ್ಲದೆ ಪವರ್​ಪ್ಲೇನಲ್ಲೇ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದ್ದರು. ಹೀಗಾಗಿ ಎಲ್​ಎಸ್​ಜಿ ವಿರುದ್ಧದ ಪಂದ್ಯದಲ್ಲಿ ಅವರನ್ನು ಕಣಕ್ಕಿಳಿಸಲಿದ್ದಾರೆಯೇ ಎಂಬುದೇ ಪ್ರಶ್ನೆ. (PC: IPL)

3 / 6
ಏಕೆಂದರೆ ಆರ್​ಸಿಬಿ ತಂಡದಲ್ಲಿ ಪ್ರಾಪರ್ ಓಪನರ್ ಆಗಿ ಜೋರ್ಡನ್ ಕಾಕ್ಸ್​ ಇದ್ದಾರೆ. ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿರುವ ಕಾಕ್ಸ್​ ಈ ಹಿಂದೆ ದಿ ಹಂಡ್ರೆಡ್ ಲೀಗ್ ಹಾಗೂ ಇಂಟರ್​ನ್ಯಾಷನಲ್ ಟಿ20 ಲೀಗ್​ಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದರು.  (PC: IPL)

ಏಕೆಂದರೆ ಆರ್​ಸಿಬಿ ತಂಡದಲ್ಲಿ ಪ್ರಾಪರ್ ಓಪನರ್ ಆಗಿ ಜೋರ್ಡನ್ ಕಾಕ್ಸ್​ ಇದ್ದಾರೆ. ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿರುವ ಕಾಕ್ಸ್​ ಈ ಹಿಂದೆ ದಿ ಹಂಡ್ರೆಡ್ ಲೀಗ್ ಹಾಗೂ ಇಂಟರ್​ನ್ಯಾಷನಲ್ ಟಿ20 ಲೀಗ್​ಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದರು.  (PC: IPL)

4 / 6
ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ ಈವರೆಗೆ 165 ಇನಿಂಗ್ಸ್ ಆಡಿರುವ ಜೋರ್ಡನ್ ಕಾಕ್ಸ್ ಬರೋಬ್ಬರಿ 4045 ರನ್ ಕಲೆಹಾಕಿದ್ದಾರೆ. ಈ ವೇಳೆ ಒಂದು ಸ್ಫೋಟಕ ಶತಕ ಹಾಗೂ 21 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದರ ನಡುವೆ ಅವರು 341 ಫೋರ್ ಹಾಗೂ 161 ಸಿಕ್ಸ್​ಗಳನ್ನು ಸಹ ಸಿಡಿಸಿದ್ದಾರೆ. (PC: IPL)

ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ ಈವರೆಗೆ 165 ಇನಿಂಗ್ಸ್ ಆಡಿರುವ ಜೋರ್ಡನ್ ಕಾಕ್ಸ್ ಬರೋಬ್ಬರಿ 4045 ರನ್ ಕಲೆಹಾಕಿದ್ದಾರೆ. ಈ ವೇಳೆ ಒಂದು ಸ್ಫೋಟಕ ಶತಕ ಹಾಗೂ 21 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದರ ನಡುವೆ ಅವರು 341 ಫೋರ್ ಹಾಗೂ 161 ಸಿಕ್ಸ್​ಗಳನ್ನು ಸಹ ಸಿಡಿಸಿದ್ದಾರೆ. (PC: IPL)

5 / 6
ಹೀಗಾಗಿಯೇ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮ್ಯಾನೇಜ್ಮೆಂಟ್ ಜೋರ್ಡನ್ ಕಾಕ್ಸ್ ಅವರನ್ನು ಕಣಕ್ಕಿಳಿಸಲಿದ್ದಾರಾ ಎಂಬುದೇ ಕುತೂಹಲ. ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಕಾಕ್ಸ್​ ಒಂದೇ ಒಂದು ಪಂದ್ಯವಾಡಿಲ್ಲ. ಇತ್ತ ಸಿಕ್ಕ ಅವಕಾಶಗಳಲ್ಲಿ ಬೆಥೆಲ್ ವಿಫಲರಾಗಿದ್ದು, ಹೀಗಾಗಿ ಕಾಕ್ಸ್​ ಅವರನ್ನು ಕಣಕ್ಕಿಳಿಸಿ ಆರ್​ಸಿಬಿ ಪ್ರಯೋಗ ನಡೆಸುವ ಸಾಧ್ಯತೆಯಿದೆ. (PC: RCB)

ಹೀಗಾಗಿಯೇ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮ್ಯಾನೇಜ್ಮೆಂಟ್ ಜೋರ್ಡನ್ ಕಾಕ್ಸ್ ಅವರನ್ನು ಕಣಕ್ಕಿಳಿಸಲಿದ್ದಾರಾ ಎಂಬುದೇ ಕುತೂಹಲ. ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಕಾಕ್ಸ್​ ಒಂದೇ ಒಂದು ಪಂದ್ಯವಾಡಿಲ್ಲ. ಇತ್ತ ಸಿಕ್ಕ ಅವಕಾಶಗಳಲ್ಲಿ ಬೆಥೆಲ್ ವಿಫಲರಾಗಿದ್ದು, ಹೀಗಾಗಿ ಕಾಕ್ಸ್​ ಅವರನ್ನು ಕಣಕ್ಕಿಳಿಸಿ ಆರ್​ಸಿಬಿ ಪ್ರಯೋಗ ನಡೆಸುವ ಸಾಧ್ಯತೆಯಿದೆ. (PC: RCB)

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ