AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾದ ಮುಂದಿನ ನಾಯಕ ಯಾರು?

Team India: ಭಾರತ ಟಿ20 ತಂಡದ ಮುಂದಿನ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆ ಇದೀಗ ಕುತೂಹಲದ ಕೇಂದ್ರವಾಗಿ ಮಾರ್ಪಟ್ಟಿದೆ. ಏಕೆಂದರೆ ಇತ್ತೀಚೆಗೆ ಮಾತನಾಡಿದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಭಾರತ ತಂಡದ ನಾಯಕನ ಆಯ್ಕೆಯನ್ನು ಆಯ್ಕೆದಾರರು ನಿರ್ಧರಿಸುತ್ತಾರೆ. ಅವರೊಂದಿಗೆ ಚರ್ಚಿಸಿದ ನಂತರ ನಾವು ಅದನ್ನು ಘೋಷಿಸುತ್ತೇವೆ ಎಂದು ತಿಳಿಸಿದ್ದಾರೆ. ಇಲ್ಲಿ ಯಾರೊಬ್ಬರ ಹೆಸರನ್ನು ಸೂಚಿಸದಿರುವ ಕಾರಣ ನಾಯಕತ್ವಕ್ಕಾಗಿ ಪೈಪೋಟಿ ಇರುವುದು ಖಚಿತವಾಗಿದೆ.

ಝಾಹಿರ್ ಯೂಸುಫ್
|

Updated on: Jul 03, 2024 | 1:08 PM

Share
ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಈ ವಿದಾಯದ ಬೆನ್ನಲ್ಲೇ ಭಾರತ ಟಿ20 ತಂಡದ ಮುಂದಿನ ನಾಯಕ ಯಾರೆಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರವಾಗಿ ಸದ್ಯ ನಾಲ್ವರ ಹೆಸರುಗಳು ಕೇಳಿ ಬರುತ್ತಿದೆ. ಅವರೆಂದರೆ....

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಈ ವಿದಾಯದ ಬೆನ್ನಲ್ಲೇ ಭಾರತ ಟಿ20 ತಂಡದ ಮುಂದಿನ ನಾಯಕ ಯಾರೆಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರವಾಗಿ ಸದ್ಯ ನಾಲ್ವರ ಹೆಸರುಗಳು ಕೇಳಿ ಬರುತ್ತಿದೆ. ಅವರೆಂದರೆ....

1 / 5
ಹಾರ್ದಿಕ್ ಪಾಂಡ್ಯ: ಟೀಮ್ ಇಂಡಿಯಾದ ಉಪನಾಯಕ ಹಾರ್ದಿಕ್ ಪಂಡ್ಯ ಹೆಸರು ಈ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ. ಭಾರತ ತಂಡವನ್ನು 16 ಪಂದ್ಯಗಳಲ್ಲಿ ಮುನ್ನಡೆಸಿರುವ ಪಾಂಡ್ಯ 10 ಗೆಲುವು ತಂದುಕೊಟ್ಟಿದ್ದಾರೆ. ಅಲ್ಲದೆ ಪ್ರಸ್ತುತ ಟಿ20 ತಂಡದ ಉಪನಾಯಕರಾಗಿರುವ ಕಾರಣ ಅವರಿಗೆ ನಾಯಕತ್ವ ನೀಡುವ ಸಾಧ್ಯತೆ ಹೆಚ್ಚಿದೆ.

ಹಾರ್ದಿಕ್ ಪಾಂಡ್ಯ: ಟೀಮ್ ಇಂಡಿಯಾದ ಉಪನಾಯಕ ಹಾರ್ದಿಕ್ ಪಂಡ್ಯ ಹೆಸರು ಈ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ. ಭಾರತ ತಂಡವನ್ನು 16 ಪಂದ್ಯಗಳಲ್ಲಿ ಮುನ್ನಡೆಸಿರುವ ಪಾಂಡ್ಯ 10 ಗೆಲುವು ತಂದುಕೊಟ್ಟಿದ್ದಾರೆ. ಅಲ್ಲದೆ ಪ್ರಸ್ತುತ ಟಿ20 ತಂಡದ ಉಪನಾಯಕರಾಗಿರುವ ಕಾರಣ ಅವರಿಗೆ ನಾಯಕತ್ವ ನೀಡುವ ಸಾಧ್ಯತೆ ಹೆಚ್ಚಿದೆ.

2 / 5
ಜಸ್​ಪ್ರೀತ್ ಬುಮ್ರಾ: ಭಾರತ ತಂಡಕ್ಕೆ ಕೇವಲ ಬ್ಯಾಟರ್​ಗಳನ್ನು ಮಾತ್ರ ನಾಯಕರನ್ನಾಗಿ ಮಾಡಲಾಗುತ್ತಿದೆ ಎಂಬ ಅಪವಾದ ಈ ಹಿಂದಿನಿಂದಲೂ ಕೇಳಿ ಬರುತ್ತಿದೆ. ಇದೇ ಕಾರಣದಿಂದಾಗಿ ಈ ಹಿಂದೆ ಟೆಸ್ಟ್ ತಂಡದ ಉಪನಾಯಕರನ್ನಾಗಿ ಜಸ್​ಪ್ರೀತ್ ಬುಮ್ರಾ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಟಿ20 ತಂಡಕ್ಕೂ ಬುಮ್ರಾ ಹೆಸರು ಕೇಳಿ ಬರುತ್ತಿದೆ. ಈ ಹಿಂದೆ 2 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿರುವ ಬುಮ್ರಾ ಎರಡೂ ಪಂದ್ಯಗಳಲ್ಲೂ ಗೆಲುವಿನ ರುಚಿ ನೋಡಿದ್ದರು. ಹೀಗಾಗಿ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಬುಮ್ರಾ ಆಯ್ಕೆಯಾದರೂ ಅಚ್ಚರಿಪಡಬೇಕಿಲ್ಲ.

ಜಸ್​ಪ್ರೀತ್ ಬುಮ್ರಾ: ಭಾರತ ತಂಡಕ್ಕೆ ಕೇವಲ ಬ್ಯಾಟರ್​ಗಳನ್ನು ಮಾತ್ರ ನಾಯಕರನ್ನಾಗಿ ಮಾಡಲಾಗುತ್ತಿದೆ ಎಂಬ ಅಪವಾದ ಈ ಹಿಂದಿನಿಂದಲೂ ಕೇಳಿ ಬರುತ್ತಿದೆ. ಇದೇ ಕಾರಣದಿಂದಾಗಿ ಈ ಹಿಂದೆ ಟೆಸ್ಟ್ ತಂಡದ ಉಪನಾಯಕರನ್ನಾಗಿ ಜಸ್​ಪ್ರೀತ್ ಬುಮ್ರಾ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಟಿ20 ತಂಡಕ್ಕೂ ಬುಮ್ರಾ ಹೆಸರು ಕೇಳಿ ಬರುತ್ತಿದೆ. ಈ ಹಿಂದೆ 2 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿರುವ ಬುಮ್ರಾ ಎರಡೂ ಪಂದ್ಯಗಳಲ್ಲೂ ಗೆಲುವಿನ ರುಚಿ ನೋಡಿದ್ದರು. ಹೀಗಾಗಿ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಬುಮ್ರಾ ಆಯ್ಕೆಯಾದರೂ ಅಚ್ಚರಿಪಡಬೇಕಿಲ್ಲ.

3 / 5
ರಿಷಭ್ ಪಂತ್: ಮಹೇಂದ್ರ ಸಿಂಗ್ ಧೋನಿಯ ಉತ್ತರಾಧಿಕಾರಿಯಾಗಿ ಬಿಂಬಿತವಾಗಿರುವ ರಿಷಭ್ ಪಂತ್ ಕೂಡ ಈ ಹಿಂದೆ 5 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದಾರೆ. ಈ ವೇಳೆ ಟೀಮ್ ಇಂಡಿಯಾ 2 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, 2 ಮ್ಯಾಚ್​ಗಳಲ್ಲಿ ಸೋಲನುಭವಿಸಿತ್ತು. ಇನ್ನು ಒಂದು ಪಂದ್ಯ ಕಾರಣಾಂತರಗಳಿಂದ ರದ್ದಾಗಿತ್ತು. ಇದೀಗ ಧೋನಿ ಬಳಿಕ ಮತ್ತೆ ವಿಕೆಟ್ ಕೀಪರ್​ಗೆ ಕ್ಯಾಪ್ಟನ್ ನೀಡಲು ಮುಂದಾದರೆ ಪಂತ್​ಗೆ ನಾಯಕತ್ವ ಒಲಿಯಲಿದೆ.

ರಿಷಭ್ ಪಂತ್: ಮಹೇಂದ್ರ ಸಿಂಗ್ ಧೋನಿಯ ಉತ್ತರಾಧಿಕಾರಿಯಾಗಿ ಬಿಂಬಿತವಾಗಿರುವ ರಿಷಭ್ ಪಂತ್ ಕೂಡ ಈ ಹಿಂದೆ 5 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದಾರೆ. ಈ ವೇಳೆ ಟೀಮ್ ಇಂಡಿಯಾ 2 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, 2 ಮ್ಯಾಚ್​ಗಳಲ್ಲಿ ಸೋಲನುಭವಿಸಿತ್ತು. ಇನ್ನು ಒಂದು ಪಂದ್ಯ ಕಾರಣಾಂತರಗಳಿಂದ ರದ್ದಾಗಿತ್ತು. ಇದೀಗ ಧೋನಿ ಬಳಿಕ ಮತ್ತೆ ವಿಕೆಟ್ ಕೀಪರ್​ಗೆ ಕ್ಯಾಪ್ಟನ್ ನೀಡಲು ಮುಂದಾದರೆ ಪಂತ್​ಗೆ ನಾಯಕತ್ವ ಒಲಿಯಲಿದೆ.

4 / 5
ಸೂರ್ಯಕುಮಾರ್ ಯಾದವ್: ಟಿ20 ಸ್ಪೆಷಲಿಸ್ಟ್ ಸೂರ್ಯಕುಮಾರ್ ಯಾದವ್ ಭಾರತ ತಂಡವನ್ನು 7 ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಟೀಮ್ ಇಂಡಿಯಾ 5 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇತ್ತ ಟಿ20 ಕ್ರಿಕೆಟ್​ನಲ್ಲಿ ಸ್ಥಿರ ಪ್ರದರ್ಶನದೊಂದಿಗೆ ಮಿಂಚುತ್ತಿರುವ ಸೂರ್ಯಕುಮಾರ್ ಯಾದವ್ ಕೂಡ ಭಾರತ ತಂಡದ ನಾಯಕತ್ವದ ಆಕಾಂಕ್ಷಿಯಾಗಿದ್ದಾರೆ. ಹೀಗಾಗಿ ಸೂರ್ಯನಿಗೆ ಟೀಮ್ ಇಂಡಿಯಾ ಟಿ20 ತಂಡದ ಕ್ಯಾಪ್ಟನ್ಸಿ ಒಲಿದರೂ ಅಚ್ಚರಿಪಡಬೇಕಿಲ್ಲ.

ಸೂರ್ಯಕುಮಾರ್ ಯಾದವ್: ಟಿ20 ಸ್ಪೆಷಲಿಸ್ಟ್ ಸೂರ್ಯಕುಮಾರ್ ಯಾದವ್ ಭಾರತ ತಂಡವನ್ನು 7 ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಟೀಮ್ ಇಂಡಿಯಾ 5 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇತ್ತ ಟಿ20 ಕ್ರಿಕೆಟ್​ನಲ್ಲಿ ಸ್ಥಿರ ಪ್ರದರ್ಶನದೊಂದಿಗೆ ಮಿಂಚುತ್ತಿರುವ ಸೂರ್ಯಕುಮಾರ್ ಯಾದವ್ ಕೂಡ ಭಾರತ ತಂಡದ ನಾಯಕತ್ವದ ಆಕಾಂಕ್ಷಿಯಾಗಿದ್ದಾರೆ. ಹೀಗಾಗಿ ಸೂರ್ಯನಿಗೆ ಟೀಮ್ ಇಂಡಿಯಾ ಟಿ20 ತಂಡದ ಕ್ಯಾಪ್ಟನ್ಸಿ ಒಲಿದರೂ ಅಚ್ಚರಿಪಡಬೇಕಿಲ್ಲ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!