AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಯಾರಾಗ್ತಾರೆ ಟೀಮ್ ಇಂಡಿಯಾ ನಾಯಕ?

India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿ ಮುಕ್ತಾಯದ ಬೆನ್ನಲ್ಲೇ ಏಕದಿನ ಸಿರೀಸ್ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯು ನವೆಂಬರ್ 30 ರಿಂದ ಆರಂಭವಾಗಲಿದೆ. ಆದರೆ ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Nov 19, 2025 | 9:53 AM

Share
ಭಾರತ ಮತ್ತು ಸೌತ್ ಆಫ್ರಿಕಾ (IND vs SA) ನಡುವಣ ಏಕದಿನ ಸರಣಿಯು ನವೆಂಬರ್ 30 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಗೆ ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್ ಅಲಭ್ಯರಾಗುವ ಸಾಧ್ಯತೆಯಿದೆ. ಕುತ್ತಿಗೆ ನೋವಿನಿಂದ ಬಳಲುತ್ತಿರುವ ಗಿಲ್​​ಗೆ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದು, ಹೀಗಾಗಿ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ ಎನ್ನಲಾಗುತ್ತಿದೆ. ಇತ್ತ ಶುಭ್​​ಮನ್ ಗಿಲ್ ಹೊರಗುಳಿದರೆ  ಭಾರತ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಉತ್ತರ ಟೀಮ್ ಇಂಡಿಯಾ ಮುಂದೆ ಹಲವು ಆಯ್ಕೆಗಳಿವೆ. ಇವರಲ್ಲಿ ಯಾರು ಮುನ್ನಡೆಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. 

ಭಾರತ ಮತ್ತು ಸೌತ್ ಆಫ್ರಿಕಾ (IND vs SA) ನಡುವಣ ಏಕದಿನ ಸರಣಿಯು ನವೆಂಬರ್ 30 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಗೆ ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್ ಅಲಭ್ಯರಾಗುವ ಸಾಧ್ಯತೆಯಿದೆ. ಕುತ್ತಿಗೆ ನೋವಿನಿಂದ ಬಳಲುತ್ತಿರುವ ಗಿಲ್​​ಗೆ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದು, ಹೀಗಾಗಿ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ ಎನ್ನಲಾಗುತ್ತಿದೆ. ಇತ್ತ ಶುಭ್​​ಮನ್ ಗಿಲ್ ಹೊರಗುಳಿದರೆ  ಭಾರತ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಉತ್ತರ ಟೀಮ್ ಇಂಡಿಯಾ ಮುಂದೆ ಹಲವು ಆಯ್ಕೆಗಳಿವೆ. ಇವರಲ್ಲಿ ಯಾರು ಮುನ್ನಡೆಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. 

1 / 7
ರೋಹಿತ್ ಶರ್ಮಾ: ಭಾರತ ಏಕದಿನ ತಂಡದ ಯಶಸ್ವಿ ನಾಯಕ ಎನಿಸಿಕೊಂಡಿರುವ ರೋಹಿತ್ ಶರ್ಮಾ 56 ಏಕದಿನ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದಾರೆ. ಈ ವೇಳೆ ಭಾರತ ತಂಡ 42 ಮ್ಯಾಚ್​​​ಗಳಲ್ಲಿ ಗೆಲುವು ದಾಖಲಿಸಿದೆ. ಹೀಗಾಗಿ ಸೌತ್ ಆಫ್ರಿಕಾ ಸರಣಿಯಲ್ಲಿ ಹಿಟ್​​ಮ್ಯಾನ್​​​ಗೆ ಕ್ಯಾಪ್ಟನ್ ಪಟ್ಟ ನೀಡಿದರೂ ಅಚ್ಚರಿಪಡಬೇಕಿಲ್ಲ.

ರೋಹಿತ್ ಶರ್ಮಾ: ಭಾರತ ಏಕದಿನ ತಂಡದ ಯಶಸ್ವಿ ನಾಯಕ ಎನಿಸಿಕೊಂಡಿರುವ ರೋಹಿತ್ ಶರ್ಮಾ 56 ಏಕದಿನ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದಾರೆ. ಈ ವೇಳೆ ಭಾರತ ತಂಡ 42 ಮ್ಯಾಚ್​​​ಗಳಲ್ಲಿ ಗೆಲುವು ದಾಖಲಿಸಿದೆ. ಹೀಗಾಗಿ ಸೌತ್ ಆಫ್ರಿಕಾ ಸರಣಿಯಲ್ಲಿ ಹಿಟ್​​ಮ್ಯಾನ್​​​ಗೆ ಕ್ಯಾಪ್ಟನ್ ಪಟ್ಟ ನೀಡಿದರೂ ಅಚ್ಚರಿಪಡಬೇಕಿಲ್ಲ.

2 / 7
ವಿರಾಟ್ ಕೊಹ್ಲಿ: ಟೀಮ್ ಇಂಡಿಯಾ ವಿರಾಟ್ ಕೊಹ್ಲಿ ಮುಂದಾಳತ್ವದಲ್ಲಿ 95 ಏಕದಿನ ಪಂದ್ಯಗಳನ್ನಾಡಿದೆ. ಈ ವೇಳೆ ಬರೋಬ್ಬರಿ 65 ಮ್ಯಾಚ್​​ಗಳಲ್ಲಿ ಭಾರತ ತಂಡ ಗೆಲುವು ದಾಖಲಿಸಿದೆ. ಹೀಗಾಗಿ ಗಿಲ್ ಸ್ಥಾನಕ್ಕೆ ಕೊಹ್ಲಿಯನ್ನು ತಾತ್ಕಾಲಿಕ ಕ್ಯಾಪ್ಟನ್ ಆಗಿ ಆಯ್ಕೆ ಮಾಡುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ವಿರಾಟ್ ಕೊಹ್ಲಿ: ಟೀಮ್ ಇಂಡಿಯಾ ವಿರಾಟ್ ಕೊಹ್ಲಿ ಮುಂದಾಳತ್ವದಲ್ಲಿ 95 ಏಕದಿನ ಪಂದ್ಯಗಳನ್ನಾಡಿದೆ. ಈ ವೇಳೆ ಬರೋಬ್ಬರಿ 65 ಮ್ಯಾಚ್​​ಗಳಲ್ಲಿ ಭಾರತ ತಂಡ ಗೆಲುವು ದಾಖಲಿಸಿದೆ. ಹೀಗಾಗಿ ಗಿಲ್ ಸ್ಥಾನಕ್ಕೆ ಕೊಹ್ಲಿಯನ್ನು ತಾತ್ಕಾಲಿಕ ಕ್ಯಾಪ್ಟನ್ ಆಗಿ ಆಯ್ಕೆ ಮಾಡುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

3 / 7
ಕೆಎಲ್ ರಾಹುಲ್: ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕೆಎಲ್ ರಾಹುಲ್ ನಾಯಕನಾಗಿ ಕಾಣಿಸಿಕೊಳ್ಳುವ ಸಾಧ್ಯತೆಯನ್ನು ಸಹ ತಳ್ಳಿ ಹಾಕುವಂತಿಲ್ಲ. ಏಕೆಂದರೆ ರಾಹುಲ್ ಈ ಹಿಂದೆ 12 ಏಕದಿನ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದಾರೆ. ಈ ವೇಳೆ ಭಾರತ ತಂಡ 8 ಮ್ಯಾಚ್​​​ಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ರಾಹುಲ್ ಅವರನ್ನು ನಾಯಕನನ್ನಾಗಿ ನೇಮಿಸುವ ಸಾಧ್ಯತೆ ಕೂಡ ಇದೆ.

ಕೆಎಲ್ ರಾಹುಲ್: ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕೆಎಲ್ ರಾಹುಲ್ ನಾಯಕನಾಗಿ ಕಾಣಿಸಿಕೊಳ್ಳುವ ಸಾಧ್ಯತೆಯನ್ನು ಸಹ ತಳ್ಳಿ ಹಾಕುವಂತಿಲ್ಲ. ಏಕೆಂದರೆ ರಾಹುಲ್ ಈ ಹಿಂದೆ 12 ಏಕದಿನ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದಾರೆ. ಈ ವೇಳೆ ಭಾರತ ತಂಡ 8 ಮ್ಯಾಚ್​​​ಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ರಾಹುಲ್ ಅವರನ್ನು ನಾಯಕನನ್ನಾಗಿ ನೇಮಿಸುವ ಸಾಧ್ಯತೆ ಕೂಡ ಇದೆ.

4 / 7
ರಿಷಭ್ ಪಂತ್: ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಶುಭ್​​ಮನ್ ಗಿಲ್ ಹೊರಗುಳಿದರೆ ರಿಷಭ್ ಪಂತ್​ ನಾಯಕನಾಗಿ ಕಾಣಿಸಿಕೊಳ್ಳಬಹುದು. ಏಕೆಂದರೆ ಪಂತ್ ಈಗಾಗಲೇ ಭಾರತ ಟಿ20 ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ. ಅಲ್ಲದೆ ಭಾರತ ಟೆಸ್ಟ್ ತಂಡದ ಉಪನಾಯಕನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ರಿಷಭ್ ಪಂತ್: ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಶುಭ್​​ಮನ್ ಗಿಲ್ ಹೊರಗುಳಿದರೆ ರಿಷಭ್ ಪಂತ್​ ನಾಯಕನಾಗಿ ಕಾಣಿಸಿಕೊಳ್ಳಬಹುದು. ಏಕೆಂದರೆ ಪಂತ್ ಈಗಾಗಲೇ ಭಾರತ ಟಿ20 ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ. ಅಲ್ಲದೆ ಭಾರತ ಟೆಸ್ಟ್ ತಂಡದ ಉಪನಾಯಕನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

5 / 7
ಹಾರ್ದಿಕ್ ಪಾಂಡ್ಯ: ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮೂರು ಏಕದಿನ ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಒಮ್ಮೆಯೂ ಟೀಮ್ ಇಂಡಿಯಾ ಸೋತಿರಲಿಲ್ಲ. ಇದೀಗ ಗಿಲ್ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಿದರೂ ಅಚ್ಚರಿಪಡಬೇಕಿಲ್ಲ.

ಹಾರ್ದಿಕ್ ಪಾಂಡ್ಯ: ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮೂರು ಏಕದಿನ ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಒಮ್ಮೆಯೂ ಟೀಮ್ ಇಂಡಿಯಾ ಸೋತಿರಲಿಲ್ಲ. ಇದೀಗ ಗಿಲ್ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಿದರೂ ಅಚ್ಚರಿಪಡಬೇಕಿಲ್ಲ.

6 / 7
ಶ್ರೇಯಸ್ ಅಯ್ಯರ್: ಭಾರತ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಆಸ್ಟ್ರೇಲಿಯಾ ವಿರುದ್ಧದ ಸರಣಿ ವೇಳೆ ಗಾಯಗೊಂಡಿದ್ದರು. ಒಂದು ವೇಳೆ ನವೆಂಬರ್ 30 ರೊಳಗೆ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಿ ತಂಡಕ್ಕೆ ಮರಳಿದರೆ, ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ.

ಶ್ರೇಯಸ್ ಅಯ್ಯರ್: ಭಾರತ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಆಸ್ಟ್ರೇಲಿಯಾ ವಿರುದ್ಧದ ಸರಣಿ ವೇಳೆ ಗಾಯಗೊಂಡಿದ್ದರು. ಒಂದು ವೇಳೆ ನವೆಂಬರ್ 30 ರೊಳಗೆ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಿ ತಂಡಕ್ಕೆ ಮರಳಿದರೆ, ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ.

7 / 7
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ