AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಟ್ರಾವಿಸ್ ಹೆಡ್ vs ಜಸ್​ಪ್ರೀತ್ ಬುಮ್ರಾ: ಸರಣಿ ಶ್ರೇಷ್ಠ ಪ್ರಶಸ್ತಿ ಸಿಕ್ಕಿದ್ದು ಯಾರಿಗೆ?

BGT 2024-25: ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ್ದು ಆಸ್ಟ್ರೇಲಿಯಾ ದಾಂಡಿಗ ಟ್ರಾವಿಸ್ ಹೆಡ್. ಇನ್ನು ಬೌಲಿಂಗ್​​ನಲ್ಲಿ ಪರಾಕ್ರಮ ಮೆರೆದ ಬೌಲರ್​ ಟೀಮ್ ಇಂಡಿಯಾದ ಜಸ್​ಪ್ರೀತ್ ಬುಮ್ರಾ. ಇಲ್ಲಿ ಟ್ರಾವಿಸ್ ಹೆಡ್ 448 ರನ್ ಕಲೆಹಾಕಿದರೆ, ಜಸ್​ಪ್ರೀತ್ ಬುಮ್ರಾ 32 ವಿಕೆಟ್ ಕಬಳಿಸಿದ್ದರು. ಹೀಗಾಗಿಯೇ ಬಾರ್ಡರ್-ಗವಾಸ್ಕರ್ ಸರಣಿಯ ಪ್ಲೇಯರ್ ಆಫ್ ಸಿರೀಸ್ ಪ್ರಶಸ್ತಿ ಯಾರಿಗೆ ನೀಡುವುದು ಎಂಬ ಗೊಂದಲ ಏರ್ಪಟ್ಟಿತ್ತು.

ಝಾಹಿರ್ ಯೂಸುಫ್
|

Updated on: Jan 05, 2025 | 12:00 PM

Share
17ನೇ ಆವೃತ್ತಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ತೆರೆಬಿದ್ದಿದೆ. ಈ ಬಾರಿಯ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ ಪರಾಕ್ರಮ ಮೆರೆಯುವ ಮೂಲಕ ಟ್ರೋಫಿ ಎತ್ತಿ ಹಿಡಿದಿದೆ. ಐದು ಪಂದ್ಯಗಳ ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು 3-1 ಅಂತರದಿಂದ ಬಗ್ಗು ಬಡಿದು ಆಸೀಸ್ ಪಡೆ 10 ವರ್ಷಗಳ ಬಳಿಕ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

17ನೇ ಆವೃತ್ತಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ತೆರೆಬಿದ್ದಿದೆ. ಈ ಬಾರಿಯ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ ಪರಾಕ್ರಮ ಮೆರೆಯುವ ಮೂಲಕ ಟ್ರೋಫಿ ಎತ್ತಿ ಹಿಡಿದಿದೆ. ಐದು ಪಂದ್ಯಗಳ ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು 3-1 ಅಂತರದಿಂದ ಬಗ್ಗು ಬಡಿದು ಆಸೀಸ್ ಪಡೆ 10 ವರ್ಷಗಳ ಬಳಿಕ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

1 / 5
ಇನ್ನು ಈ ಬಾರಿಯ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಆಟಗಾರರೆಂದರೆ ಟೀಮ್ ಇಂಡಿಯಾದ ಜಸ್​ಪ್ರೀತ್ ಬುಮ್ರಾ ಹಾಗೂ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್. 5 ಪಂದ್ಯಗಳಲ್ಲೂ ಕಣಕ್ಕಿಳಿದಿದ್ದ ಹೆಡ್ ಬ್ಯಾಟಿಂಗ್​ನಲ್ಲಿ ಅಬ್ಬರಿಸಿದರೆ, ಬುಮ್ರಾ ಬೌಲಿಂಗ್​​ನಲ್ಲಿ ಸರ್ವಶ್ರೇಷ್ಠ ಪ್ರದರ್ಶನ ನೀಡಿದ್ದರು. ಹೀಗಾಗಿಯೇ ಸರಣಿ ಶ್ರೇಷ್ಠ ಪ್ರಶಸ್ತಿ ನೀಡಲು ಸಂದಿಗ್ಧ ಪರಿಸ್ಥಿತಿ ಎದುರಾಗಿತ್ತು.

ಇನ್ನು ಈ ಬಾರಿಯ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಆಟಗಾರರೆಂದರೆ ಟೀಮ್ ಇಂಡಿಯಾದ ಜಸ್​ಪ್ರೀತ್ ಬುಮ್ರಾ ಹಾಗೂ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್. 5 ಪಂದ್ಯಗಳಲ್ಲೂ ಕಣಕ್ಕಿಳಿದಿದ್ದ ಹೆಡ್ ಬ್ಯಾಟಿಂಗ್​ನಲ್ಲಿ ಅಬ್ಬರಿಸಿದರೆ, ಬುಮ್ರಾ ಬೌಲಿಂಗ್​​ನಲ್ಲಿ ಸರ್ವಶ್ರೇಷ್ಠ ಪ್ರದರ್ಶನ ನೀಡಿದ್ದರು. ಹೀಗಾಗಿಯೇ ಸರಣಿ ಶ್ರೇಷ್ಠ ಪ್ರಶಸ್ತಿ ನೀಡಲು ಸಂದಿಗ್ಧ ಪರಿಸ್ಥಿತಿ ಎದುರಾಗಿತ್ತು.

2 / 5
5 ಪಂದ್ಯಗಳಲ್ಲಿ 9 ಇನಿಂಗ್ಸ್ ಆಡಿದ್ದ ಟ್ರಾವಿಸ್ ಹೆಡ್ 2 ಭರ್ಜರಿ ಶತಕ ಹಾಗೂ ಒಂದು ಅರ್ಧಶತಕದೊಂದಿಗೆ ಒಟ್ಟು 448 ರನ್​ ಕಲೆಹಾಕಿದ್ದಾರೆ. ವಿಶೇಷ ಎಂದರೆ 448 ರನ್​ ಕಲೆಹಾಕಲು ಟ್ರಾವಿಸ್ ಹೆಡ್ ತೆಗೆದುಕೊಂಡಿದ್ದು ಕೇವಲ 484 ಎಸೆತಗಳನ್ನು ಮಾತ್ರ. ಈ ವೇಳೆ 52 ಫೋರ್ ಹಾಗೂ 4 ಸಿಕ್ಸ್​ಗಳನ್ನು ಸಿಡಿಸಿದ್ದರು. ಈ ಮೂಲಕ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದರು.

5 ಪಂದ್ಯಗಳಲ್ಲಿ 9 ಇನಿಂಗ್ಸ್ ಆಡಿದ್ದ ಟ್ರಾವಿಸ್ ಹೆಡ್ 2 ಭರ್ಜರಿ ಶತಕ ಹಾಗೂ ಒಂದು ಅರ್ಧಶತಕದೊಂದಿಗೆ ಒಟ್ಟು 448 ರನ್​ ಕಲೆಹಾಕಿದ್ದಾರೆ. ವಿಶೇಷ ಎಂದರೆ 448 ರನ್​ ಕಲೆಹಾಕಲು ಟ್ರಾವಿಸ್ ಹೆಡ್ ತೆಗೆದುಕೊಂಡಿದ್ದು ಕೇವಲ 484 ಎಸೆತಗಳನ್ನು ಮಾತ್ರ. ಈ ವೇಳೆ 52 ಫೋರ್ ಹಾಗೂ 4 ಸಿಕ್ಸ್​ಗಳನ್ನು ಸಿಡಿಸಿದ್ದರು. ಈ ಮೂಲಕ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದರು.

3 / 5
ಮತ್ತೊಂದೆಡೆ ಜಸ್​ಪ್ರೀತ್ ಬುಮ್ರಾ 5 ಪಂದ್ಯಗಳಲ್ಲಿ ಕಣಕ್ಕಿಳಿದರೂ 9 ಇನಿಂಗ್ಸ್​ಗಳಲ್ಲಿ ಮಾತ್ರ ಬೌಲಿಂಗ್ ಮಾಡಿದ್ದರು. ಈ ವೇಳೆ 908 ಎಸೆತಗಳನ್ನು ಎಸೆದಿರುವ ಬುಮ್ರಾ ಕೇವಲ 418 ರನ್​ಗಳನ್ನು ಮಾತ್ರ ಬಿಟ್ಟುಕೊಟ್ಟಿದ್ದರು. ಅಲ್ಲದೆ 2.76 ಎಕನಾಮಿ ರೇಟ್​ನಲ್ಲಿ ಬರೋಬ್ಬರಿ 32 ವಿಕೆಟ್ ಉರುಳಿಸಿ ಮಿಂಚಿದ್ದರು.

ಮತ್ತೊಂದೆಡೆ ಜಸ್​ಪ್ರೀತ್ ಬುಮ್ರಾ 5 ಪಂದ್ಯಗಳಲ್ಲಿ ಕಣಕ್ಕಿಳಿದರೂ 9 ಇನಿಂಗ್ಸ್​ಗಳಲ್ಲಿ ಮಾತ್ರ ಬೌಲಿಂಗ್ ಮಾಡಿದ್ದರು. ಈ ವೇಳೆ 908 ಎಸೆತಗಳನ್ನು ಎಸೆದಿರುವ ಬುಮ್ರಾ ಕೇವಲ 418 ರನ್​ಗಳನ್ನು ಮಾತ್ರ ಬಿಟ್ಟುಕೊಟ್ಟಿದ್ದರು. ಅಲ್ಲದೆ 2.76 ಎಕನಾಮಿ ರೇಟ್​ನಲ್ಲಿ ಬರೋಬ್ಬರಿ 32 ವಿಕೆಟ್ ಉರುಳಿಸಿ ಮಿಂಚಿದ್ದರು.

4 / 5
ಇಲ್ಲಿ ಟ್ರಾವಿಸ್ ಹೆಡ್ ಬ್ಯಾಟಿಂಗ್ ಮೂಲಕ ಪರಾಕ್ರಮ ಮೆರೆದರೆ, ಜಸ್​ಪ್ರೀತ್ ಬುಮ್ರಾ ಬೌಲಿಂಗ್​ನಲ್ಲಿ ಸಂಚಲನ ಸೃಷ್ಟಿಸಿದ್ದರು. ಇದೇ ಕಾರಣದಿಂದಾಗಿ ಯಾರಿಗೆ ಸರಣಿ ಶ್ರೇಷ್ಠ ಪ್ರಶಸ್ತಿ ನೀಡಬೇಕೆಂಬ ಗೊಂದಲ ಏರ್ಪಟ್ಟಿತ್ತು. ಆದರೆ ಜಸ್​ಪ್ರೀತ್ ಬುಮ್ರಾ ಟೀಮ್ ಇಂಡಿಯಾ ಪರ ಏಕಾಂಗಿ ಹೋರಾಟ ನಡೆಸಿದ್ದರು. ಈ ಅತ್ಯದ್ಭುತ ಪ್ರದರ್ಶನವನ್ನು ಪರಿಗಣಿಸಿ ಜಸ್​ಪ್ರೀತ್ ಬುಮ್ರಾಗೆ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ನೀಡಲಾಗಿದೆ.

ಇಲ್ಲಿ ಟ್ರಾವಿಸ್ ಹೆಡ್ ಬ್ಯಾಟಿಂಗ್ ಮೂಲಕ ಪರಾಕ್ರಮ ಮೆರೆದರೆ, ಜಸ್​ಪ್ರೀತ್ ಬುಮ್ರಾ ಬೌಲಿಂಗ್​ನಲ್ಲಿ ಸಂಚಲನ ಸೃಷ್ಟಿಸಿದ್ದರು. ಇದೇ ಕಾರಣದಿಂದಾಗಿ ಯಾರಿಗೆ ಸರಣಿ ಶ್ರೇಷ್ಠ ಪ್ರಶಸ್ತಿ ನೀಡಬೇಕೆಂಬ ಗೊಂದಲ ಏರ್ಪಟ್ಟಿತ್ತು. ಆದರೆ ಜಸ್​ಪ್ರೀತ್ ಬುಮ್ರಾ ಟೀಮ್ ಇಂಡಿಯಾ ಪರ ಏಕಾಂಗಿ ಹೋರಾಟ ನಡೆಸಿದ್ದರು. ಈ ಅತ್ಯದ್ಭುತ ಪ್ರದರ್ಶನವನ್ನು ಪರಿಗಣಿಸಿ ಜಸ್​ಪ್ರೀತ್ ಬುಮ್ರಾಗೆ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ನೀಡಲಾಗಿದೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ