AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026 Car Winner: ಈ ಬಾರಿ ಟಾಟಾ ಕಾರ್ ಪ್ರಶಸ್ತಿ ಸಿಕ್ಕಿದ್ದು ಯಾರಿಗೆ ಗೊತ್ತಾ?

IPL 2026 Award List: ಈ ಬಾರಿಯ ಐಪಿಎಲ್​ನಲ್ಲಿ ಅನುಭವಿ ಆಟಗಾರರನ್ನೇ ಹಿಂದಿಕ್ಕಿ ಯುವ ಎಡಗೈ ದಾಂಡಿಗ ಸೂಪರ್ ಸ್ಟ್ರೈಕರ್ ಆಫ್ ದಿ ಸೀಸನ್ ಪ್ರಶಸ್ತಿ ಪಡೆದಿದ್ದಾರೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ಈ ಪ್ರಶಸ್ತಿ ಪಡೆದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on:Jun 03, 2026 | 10:07 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕೆ ತೆರೆಬಿದ್ದಿದೆ. ಅಹಮದಾಬಾದ್​ನಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್​ (GT) ತಂಡವನ್ನು ಬಗ್ಗು ಬಡಿದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಆರ್​ಸಿಬಿ ತಂಡ ಬಹುಮಾನ ಮೊತ್ತವಾಗಿ 20 ಕೋಟಿ ರೂ. ತನ್ನದಾಗಿಸಿಕೊಂಡಿದೆ. (PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕೆ ತೆರೆಬಿದ್ದಿದೆ. ಅಹಮದಾಬಾದ್​ನಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್​ (GT) ತಂಡವನ್ನು ಬಗ್ಗು ಬಡಿದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಆರ್​ಸಿಬಿ ತಂಡ ಬಹುಮಾನ ಮೊತ್ತವಾಗಿ 20 ಕೋಟಿ ರೂ. ತನ್ನದಾಗಿಸಿಕೊಂಡಿದೆ. (PC: IPL)

1 / 5
ಇನ್ನು ಟೂರ್ನಿಯುದ್ದಕ್ಕೂ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್​ ತಂಡದ ಯುವ ಆರಂಭಿಕ ಬ್ಯಾಟರ್ ವೈಭವ್ ಸೂರ್ಯವಂಶಿ ಈ ಬಾರಿ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ ಬೌಲಿಂಗ್​​ನಲ್ಲಿ 29 ವಿಕೆಟ್ ಪಡೆದ ಗುಜರಾತ್ ಟೈಟಾನ್ಸ್ ತಂಡದ ವೇಗಿ ಕಗಿಸೊ ರಬಾಡ ಪರ್ಪಲ್​ ಕ್ಯಾಪ್ ಪಡೆದಿದ್ದಾರೆ. (PC: IPL)

ಇನ್ನು ಟೂರ್ನಿಯುದ್ದಕ್ಕೂ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್​ ತಂಡದ ಯುವ ಆರಂಭಿಕ ಬ್ಯಾಟರ್ ವೈಭವ್ ಸೂರ್ಯವಂಶಿ ಈ ಬಾರಿ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ ಬೌಲಿಂಗ್​​ನಲ್ಲಿ 29 ವಿಕೆಟ್ ಪಡೆದ ಗುಜರಾತ್ ಟೈಟಾನ್ಸ್ ತಂಡದ ವೇಗಿ ಕಗಿಸೊ ರಬಾಡ ಪರ್ಪಲ್​ ಕ್ಯಾಪ್ ಪಡೆದಿದ್ದಾರೆ. (PC: IPL)

2 / 5
ಅದೇ ರೀತಿ ಅದ್ಭುತ ಸ್ಟ್ರೈಕ್ ರೇಟ್​ನೊಂದಿಗೆ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನಿಗೆ ನೀಡಲಾಗುವ ಟಾಟಾ ಸಫಾರಿ ಕಾರು ಈ ಬಾರಿ ಕೂಡ ರಾಜಸ್ಥಾನ್ ರಾಯಲ್ಸ್ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಪಾಲಾಗಿದೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ಸೂಪರ್ ಸ್ಟ್ರೈಕರ್ ಪ್ರಶಸ್ತಿ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ. (PC: IPL)

ಅದೇ ರೀತಿ ಅದ್ಭುತ ಸ್ಟ್ರೈಕ್ ರೇಟ್​ನೊಂದಿಗೆ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನಿಗೆ ನೀಡಲಾಗುವ ಟಾಟಾ ಸಫಾರಿ ಕಾರು ಈ ಬಾರಿ ಕೂಡ ರಾಜಸ್ಥಾನ್ ರಾಯಲ್ಸ್ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಪಾಲಾಗಿದೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ಸೂಪರ್ ಸ್ಟ್ರೈಕರ್ ಪ್ರಶಸ್ತಿ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ. (PC: IPL)

3 / 5
ಇದಕ್ಕೂ ಮುನ್ನ 2025 ರಲ್ಲಿ ವೈಭವ್ ಸೂರ್ಯವಂಶಿ ಸೂಪರ್ ಸ್ಟ್ರೈಕರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು. ಕಳೆದ ಸೀಸನ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ  7 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದ ವೈಭವ್ ಒಂದು ಶತಕದೊಂದಿಗೆ ಒಟ್ಟು 252 ರನ್ ಕಲೆಹಾಕಿದ್ದರು. ಅದು ಕೂಡ 206.55 ರ ಸ್ಟ್ರೈಕ್​ ರೇಟ್​ನಲ್ಲಿ ಎಂಬುದು ವಿಶೇಷ. ಈ ಮೂಲಕ ಐಪಿಎಲ್ 2025ರ ಟಾಟಾ ಕರ್ವ್ ತಮ್ಮದಾಗಿಸಿಕೊಂಡಿದ್ದರು. (PC: IPL)

ಇದಕ್ಕೂ ಮುನ್ನ 2025 ರಲ್ಲಿ ವೈಭವ್ ಸೂರ್ಯವಂಶಿ ಸೂಪರ್ ಸ್ಟ್ರೈಕರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು. ಕಳೆದ ಸೀಸನ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ 7 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದ ವೈಭವ್ ಒಂದು ಶತಕದೊಂದಿಗೆ ಒಟ್ಟು 252 ರನ್ ಕಲೆಹಾಕಿದ್ದರು. ಅದು ಕೂಡ 206.55 ರ ಸ್ಟ್ರೈಕ್​ ರೇಟ್​ನಲ್ಲಿ ಎಂಬುದು ವಿಶೇಷ. ಈ ಮೂಲಕ ಐಪಿಎಲ್ 2025ರ ಟಾಟಾ ಕರ್ವ್ ತಮ್ಮದಾಗಿಸಿಕೊಂಡಿದ್ದರು. (PC: IPL)

4 / 5
ಈ ಬಾರಿ ಅನುಭವಿ ಬೌಲರ್​ಗಳ ಬೆಂಡೆತ್ತಿದ ಯುವ ದಾಂಡಿಗ 16 ಇನಿಂಗ್ಸ್​ಗಳ ಮೂಲಕ ಕಲೆಹಾಕಿದ್ದು ಬರೋಬ್ಬರಿ 776 ರನ್​​ಗಳು. ಅದು ಕೂಡ 237.30ರ ಸ್ಟ್ರೈಕ್ ರೇಟ್​ನಲ್ಲಿ. ಈ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಅತ್ಯುತ್ತಮ ಸ್ಟ್ರೈಕ್​ ರೇಟ್​ನಲ್ಲಿ ಬ್ಯಾಟ್ ಬೀಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದರೊಂದಿಗೆ ಟಾಟಾ ಸಿಯೆರಾ ವೈಭವ್ ಸೂರ್ಯವಂಶಿ ಪಾಲಾಗಿದೆ. ವಿಶೇಷ ಎಂದರೆ ಈಗಷ್ಟೇ ಕೆರಿಯರ್ ಆರಂಭಿಸಿರುವ ವೈಭವ್ ಬ್ಯಾಕ್ ಟು ಬ್ಯಾಕ್ ಸೂಪರ್ ಸ್ಟ್ರೈಕರ್ ಪ್ರಶಸ್ತಿ ತಮ್ಮದಾಗಿಸಿಕೊಳ್ಳುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. (PC: IPL)

ಈ ಬಾರಿ ಅನುಭವಿ ಬೌಲರ್​ಗಳ ಬೆಂಡೆತ್ತಿದ ಯುವ ದಾಂಡಿಗ 16 ಇನಿಂಗ್ಸ್​ಗಳ ಮೂಲಕ ಕಲೆಹಾಕಿದ್ದು ಬರೋಬ್ಬರಿ 776 ರನ್​​ಗಳು. ಅದು ಕೂಡ 237.30ರ ಸ್ಟ್ರೈಕ್ ರೇಟ್​ನಲ್ಲಿ. ಈ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಅತ್ಯುತ್ತಮ ಸ್ಟ್ರೈಕ್​ ರೇಟ್​ನಲ್ಲಿ ಬ್ಯಾಟ್ ಬೀಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದರೊಂದಿಗೆ ಟಾಟಾ ಸಿಯೆರಾ ವೈಭವ್ ಸೂರ್ಯವಂಶಿ ಪಾಲಾಗಿದೆ. ವಿಶೇಷ ಎಂದರೆ ಈಗಷ್ಟೇ ಕೆರಿಯರ್ ಆರಂಭಿಸಿರುವ ವೈಭವ್ ಬ್ಯಾಕ್ ಟು ಬ್ಯಾಕ್ ಸೂಪರ್ ಸ್ಟ್ರೈಕರ್ ಪ್ರಶಸ್ತಿ ತಮ್ಮದಾಗಿಸಿಕೊಳ್ಳುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. (PC: IPL)

5 / 5

Published On - 7:31 am, Mon, 1 June 26

Follow Us
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ