AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಬಾಬರ್ ಆಝಂ, ರಿಝ್ವಾನ್​ರನ್ನು ಕೈ ಬಿಡಲು ಇದುವೇ ಅಸಲಿ ಕಾರಣ..!

Asia Cup 2025: ಏಷ್ಯಾಕಪ್ ಟಿ20 ಟೂರ್ನಿಯು ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಪಾಕಿಸ್ತಾನ್ ತಂಡವು ಸೆಪ್ಟೆಂಬರ್ 12 ರಂದು ಒಮಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಇದಾದ ಬಳಿಕ ಸೆಪ್ಟೆಂಬರ್ 14 ರಂದು ಸಾಂಪ್ರದಾಯಿಕ ಎದುರಾಳಿ ಭಾರತ ತಂಡವನ್ನು ಎದುರಿಸಲಿದೆ.

ಝಾಹಿರ್ ಯೂಸುಫ್
|

Updated on: Aug 18, 2025 | 9:05 AM

Share
ಏಷ್ಯಾಕಪ್ ಟಿ20 ಟೂರ್ನಿಗಾಗಿ ಪಾಕಿಸ್ತಾನ್ ತಂಡವನ್ನು ಪ್ರಕಟಿಸಲಾಗಿದೆ. 17 ಸದಸ್ಯರ ಈ ತಂಡದಲ್ಲಿ ಮಾಜಿ ನಾಯಕರುಗಳಾದ ಬಾಬರ್ ಆಝಂ ಹಾಗೂ ಮೊಹಮ್ಮದ್ ರಿಝ್ವಾನ್ ಸ್ಥಾನ ಪಡೆದಿಲ್ಲ ಎಂಬುದು ವಿಶೇಷ. ಅಂದರೆ ತಂಡದ ಸ್ಟಾರ್ ಆಟಗಾರರನ್ನೇ ಕೈ ಬಿಟ್ಟು ಯುವ ಪಡೆಯನ್ನು ಒಳಗೊಂಡ ಬಳಗವನ್ನು ಪಿಸಿಬಿ ಘೋಷಿಸಿದೆ.

ಏಷ್ಯಾಕಪ್ ಟಿ20 ಟೂರ್ನಿಗಾಗಿ ಪಾಕಿಸ್ತಾನ್ ತಂಡವನ್ನು ಪ್ರಕಟಿಸಲಾಗಿದೆ. 17 ಸದಸ್ಯರ ಈ ತಂಡದಲ್ಲಿ ಮಾಜಿ ನಾಯಕರುಗಳಾದ ಬಾಬರ್ ಆಝಂ ಹಾಗೂ ಮೊಹಮ್ಮದ್ ರಿಝ್ವಾನ್ ಸ್ಥಾನ ಪಡೆದಿಲ್ಲ ಎಂಬುದು ವಿಶೇಷ. ಅಂದರೆ ತಂಡದ ಸ್ಟಾರ್ ಆಟಗಾರರನ್ನೇ ಕೈ ಬಿಟ್ಟು ಯುವ ಪಡೆಯನ್ನು ಒಳಗೊಂಡ ಬಳಗವನ್ನು ಪಿಸಿಬಿ ಘೋಷಿಸಿದೆ.

1 / 6
ಇದರ ಬೆನ್ನಲ್ಲೇ ಬಾಬರ್ ಆಝಂ ಹಾಗೂ ಮೊಹಮ್ಮದ್ ರಿಝ್ವಾನ್ ಅವರನ್ನು ಕೈ ಬಿಡಲು ಕಾರಣವೇನು? ಎಂಬ ಚರ್ಚೆಗಳು ಶುರುವಾಗಿದೆ. ಈ ಚರ್ಚೆಗಳ ನಡುವೆ ಕೇಳಿ ಬಂದ ಮೊದಲ ಉತ್ತರ ಸ್ಟ್ರೈಕ್ ರೇಟ್. ಆದರೆ ಅದು ಅವರ ಟಿ20 ವೃತ್ತಿಜೀವನದ ಸ್ಟ್ರೈಕ್ ರೇಟ್​ ಅನ್ನು ಪರಿಗಣಿಸಿ ಅಲ್ಲ ಎಂಬುದು ವಿಶೇಷ. ಬದಲಾಗಿ ಟೂರ್ನಮೆಂಟ್​ಗಳಲ್ಲಿನ ಪ್ರದರ್ಶನದ ಆಧಾರದ ಮೇಲೆ ಇಬ್ಬರನ್ನು ಕೈ ಬಿಡಲಾಗಿದೆ.

ಇದರ ಬೆನ್ನಲ್ಲೇ ಬಾಬರ್ ಆಝಂ ಹಾಗೂ ಮೊಹಮ್ಮದ್ ರಿಝ್ವಾನ್ ಅವರನ್ನು ಕೈ ಬಿಡಲು ಕಾರಣವೇನು? ಎಂಬ ಚರ್ಚೆಗಳು ಶುರುವಾಗಿದೆ. ಈ ಚರ್ಚೆಗಳ ನಡುವೆ ಕೇಳಿ ಬಂದ ಮೊದಲ ಉತ್ತರ ಸ್ಟ್ರೈಕ್ ರೇಟ್. ಆದರೆ ಅದು ಅವರ ಟಿ20 ವೃತ್ತಿಜೀವನದ ಸ್ಟ್ರೈಕ್ ರೇಟ್​ ಅನ್ನು ಪರಿಗಣಿಸಿ ಅಲ್ಲ ಎಂಬುದು ವಿಶೇಷ. ಬದಲಾಗಿ ಟೂರ್ನಮೆಂಟ್​ಗಳಲ್ಲಿನ ಪ್ರದರ್ಶನದ ಆಧಾರದ ಮೇಲೆ ಇಬ್ಬರನ್ನು ಕೈ ಬಿಡಲಾಗಿದೆ.

2 / 6
ಬಾಬರ್ ಆಝಂ ಬಹು ತಂಡಗಳನ್ನು ಒಳಗೊಂಡ ಟೂರ್ನಿಗಳಲ್ಲಿ ಈವರೆಗೆ 22 ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಕಲೆಹಾಕಿರುವುದು ಕೇವಲ 612 ರನ್​ಗಳು. ಅಂದರೆ ಮಲ್ಟಿ ಟೀಮ್ಸ್ ಟೂರ್ನಿಗಳಲ್ಲಿ ಬಾಬರ್ ಅವರ ಅವರೇಜ್ ಕೇವಲ 30 ರನ್​ಗಳು ಮಾತ್ರ. ಇನ್ನು ಸ್ಟ್ರೈಕ್ ರೇಟ್ ಇರುವುದು 111.3 ಮಾತ್ರ ಎಂದರೆ ನಂಬಲೇಬೇಕು. ಅಂದರೆ ಪ್ರಮುಖ ಟೂರ್ನಿಗಳಲ್ಲಿ ಅತ್ಯಂತ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ ಎಂಬುದು ಸ್ಪಷ್ಟ.

ಬಾಬರ್ ಆಝಂ ಬಹು ತಂಡಗಳನ್ನು ಒಳಗೊಂಡ ಟೂರ್ನಿಗಳಲ್ಲಿ ಈವರೆಗೆ 22 ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಕಲೆಹಾಕಿರುವುದು ಕೇವಲ 612 ರನ್​ಗಳು. ಅಂದರೆ ಮಲ್ಟಿ ಟೀಮ್ಸ್ ಟೂರ್ನಿಗಳಲ್ಲಿ ಬಾಬರ್ ಅವರ ಅವರೇಜ್ ಕೇವಲ 30 ರನ್​ಗಳು ಮಾತ್ರ. ಇನ್ನು ಸ್ಟ್ರೈಕ್ ರೇಟ್ ಇರುವುದು 111.3 ಮಾತ್ರ ಎಂದರೆ ನಂಬಲೇಬೇಕು. ಅಂದರೆ ಪ್ರಮುಖ ಟೂರ್ನಿಗಳಲ್ಲಿ ಅತ್ಯಂತ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ ಎಂಬುದು ಸ್ಪಷ್ಟ.

3 / 6
ಇನ್ನು ಪಾಕಿಸ್ತಾನ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ ಅವರ ಕಥೆ ಕೂಡ ಭಿನ್ನವಾಗಿಲ್ಲ. ಬಹು ತಂಡಗಳನ್ನು ಒಳಗೊಂಡ ಟೂರ್ನಿಯಲ್ಲಿ ರಿಝ್ವಾನ್ ಕೂಡ 22 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 44ರ ಸರಾಸರಿಯಲ್ಲಿ ಒಟ್ಟು 792 ರನ್​ ಕಲೆಹಾಕಿದ್ದಾರೆ. ಅದು ಸಹ 114.6ರ ಸ್ಟ್ರೈಕ್ ರೇಟ್​ನಲ್ಲಿ ಎಂಬುದೇ ಅಚ್ಚರಿ.

ಇನ್ನು ಪಾಕಿಸ್ತಾನ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ ಅವರ ಕಥೆ ಕೂಡ ಭಿನ್ನವಾಗಿಲ್ಲ. ಬಹು ತಂಡಗಳನ್ನು ಒಳಗೊಂಡ ಟೂರ್ನಿಯಲ್ಲಿ ರಿಝ್ವಾನ್ ಕೂಡ 22 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 44ರ ಸರಾಸರಿಯಲ್ಲಿ ಒಟ್ಟು 792 ರನ್​ ಕಲೆಹಾಕಿದ್ದಾರೆ. ಅದು ಸಹ 114.6ರ ಸ್ಟ್ರೈಕ್ ರೇಟ್​ನಲ್ಲಿ ಎಂಬುದೇ ಅಚ್ಚರಿ.

4 / 6
ಅಂದರೆ ಇಲ್ಲಿ ಬಾಬರ್ ಆಝಂ ಹಾಗೂ ಮೊಹಮ್ಮದ್ ರಿಝ್ವಾನ್ ಬಹು ತಂಡಗಳ ಟೂರ್ನಮೆಂಟ್​ನಲ್ಲಿ 115 ಕ್ಕಿಂತ ಕಡಿಮೆ ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಹೀಗಾಗಿಯೇ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ ಬಾಬರ್ ಹಾಗೂ ರಿಝ್ವಾನ್ ಅವರನ್ನು ಟಿ20 ತಂಡಕ್ಕೆ ಆಯ್ಕೆ ಮಾಡಿಲ್ಲ. ಇತ್ತ ಏಷ್ಯಾಕಪ್​ಗೆ ಆಯ್ಕೆಯಾದ ಪಾಕಿಸ್ತಾನ್ ತಂಡ ಈ ಕೆಳಗಿನಂತಿದೆ...

ಅಂದರೆ ಇಲ್ಲಿ ಬಾಬರ್ ಆಝಂ ಹಾಗೂ ಮೊಹಮ್ಮದ್ ರಿಝ್ವಾನ್ ಬಹು ತಂಡಗಳ ಟೂರ್ನಮೆಂಟ್​ನಲ್ಲಿ 115 ಕ್ಕಿಂತ ಕಡಿಮೆ ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಹೀಗಾಗಿಯೇ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ ಬಾಬರ್ ಹಾಗೂ ರಿಝ್ವಾನ್ ಅವರನ್ನು ಟಿ20 ತಂಡಕ್ಕೆ ಆಯ್ಕೆ ಮಾಡಿಲ್ಲ. ಇತ್ತ ಏಷ್ಯಾಕಪ್​ಗೆ ಆಯ್ಕೆಯಾದ ಪಾಕಿಸ್ತಾನ್ ತಂಡ ಈ ಕೆಳಗಿನಂತಿದೆ...

5 / 6
ಏಷ್ಯಾಕಪ್​ಗೆ ಪಾಕಿಸ್ತಾನ್ ಟಿ20 ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಹಸನ್ ನವಾಝ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಸಾಹಿಬ್​ಝಾದ್ ಫರ್ಹಾನ್, ಶಾಹೀನ್ ಅಫ್ರಿದಿ, ಸಲ್ಮಾನ್ ಮಿರ್ಝಾ, ಸೈಮ್ ಅಯ್ಯೂಬ್ ಮತ್ತು ಸುಫಿಯಾನ್ ಮುಖಿಮ್.

ಏಷ್ಯಾಕಪ್​ಗೆ ಪಾಕಿಸ್ತಾನ್ ಟಿ20 ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಹಸನ್ ನವಾಝ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಸಾಹಿಬ್​ಝಾದ್ ಫರ್ಹಾನ್, ಶಾಹೀನ್ ಅಫ್ರಿದಿ, ಸಲ್ಮಾನ್ ಮಿರ್ಝಾ, ಸೈಮ್ ಅಯ್ಯೂಬ್ ಮತ್ತು ಸುಫಿಯಾನ್ ಮುಖಿಮ್.

6 / 6
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ