AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ವಿನ್ ದಿಢೀರ್ ನಿವೃತ್ತಿಗೆ ಯಾರು ಕಾರಣ? ಇಲ್ಲಿದೆ ಅಸಲಿ ವಿಷಯ

Ravichandran Ashwin retirement: ರವಿಚಂದ್ರನ್ ಅಶ್ವಿನ್ ಟೀಮ್ ಇಂಡಿಯಾ ಪರ 287 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 379 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು ಒಟ್ಟು 5833.3 ಓವರ್​​ಗಳನ್ನು ಎಸೆದಿದ್ದಾರೆ. ಇದರ ನಡುವೆ 947 ಮೇಡನ್ ಓವರ್ ಎಸೆದಿರುವ ಅವರು ಒಟ್ಟು 765 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಭಾರತದ ಪರ ಅತ್ಯಧಿಕ ವಿಕೆಟ್ ಪಡೆದ 2ನೇ ಬೌಲರ್ ಎನಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 18, 2024 | 12:53 PM

Share
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮಧ್ಯೆಯೇ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅದು ಕೂಡ ಗ್ಯಾಲರಿಯಲ್ಲಿ ಕೂತು ತಮ್ಮ ಕೆರಿಯರ್ ಕೊನೆಗೊಳಿಸುವ ಮೂಲಕ ಎಂಬುದೇ ಅಚ್ಚರಿ. ಅಂದರೆ ಐದು ಪಂದ್ಯಗಳ ಈ ಸರಣಿಗೆ ಆಯ್ಕೆಯಾದ ಅಶ್ವಿನ್ ಮೊದಲ ಮ್ಯಾಚ್​ನಲ್ಲಿ ಚಾನ್ಸ್​ ನೀಡಿರಲಿಲ್ಲ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮಧ್ಯೆಯೇ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅದು ಕೂಡ ಗ್ಯಾಲರಿಯಲ್ಲಿ ಕೂತು ತಮ್ಮ ಕೆರಿಯರ್ ಕೊನೆಗೊಳಿಸುವ ಮೂಲಕ ಎಂಬುದೇ ಅಚ್ಚರಿ. ಅಂದರೆ ಐದು ಪಂದ್ಯಗಳ ಈ ಸರಣಿಗೆ ಆಯ್ಕೆಯಾದ ಅಶ್ವಿನ್ ಮೊದಲ ಮ್ಯಾಚ್​ನಲ್ಲಿ ಚಾನ್ಸ್​ ನೀಡಿರಲಿಲ್ಲ.

1 / 6
ಇನ್ನು ಅಡಿಲೇಡ್​ನ ಓವಲ್​ ಮೈದಾನದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಅಶ್ವಿನ್ ಒಂದು ವಿಕೆಟ್ ಮಾತ್ರ ಕಬಳಿಸಿದ್ದರು. ಹೀಗಾಗಿ ಬ್ರಿಸ್ಬೇನ್ ಟೆಸ್ಟ್ ಪಂದ್ಯದಿಂದ ಹಿರಿಯ ಸ್ಪಿನ್ನರ್​ನನ್ನು ಕೈ ಬಿಡಲಾಗಿತ್ತು. ಈ ಪಂದ್ಯದ ವೇಳೆ ಬೆಂಚ್ ಕಾದಿದ್ದ ಅಶ್ವಿನ್ ಮ್ಯಾಚ್ ಮುಗಿಯುತ್ತಿದ್ದಂತೆ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡು ನಿವೃತ್ತಿ ಘೋಷಿಸಿದರು.

ಇನ್ನು ಅಡಿಲೇಡ್​ನ ಓವಲ್​ ಮೈದಾನದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಅಶ್ವಿನ್ ಒಂದು ವಿಕೆಟ್ ಮಾತ್ರ ಕಬಳಿಸಿದ್ದರು. ಹೀಗಾಗಿ ಬ್ರಿಸ್ಬೇನ್ ಟೆಸ್ಟ್ ಪಂದ್ಯದಿಂದ ಹಿರಿಯ ಸ್ಪಿನ್ನರ್​ನನ್ನು ಕೈ ಬಿಡಲಾಗಿತ್ತು. ಈ ಪಂದ್ಯದ ವೇಳೆ ಬೆಂಚ್ ಕಾದಿದ್ದ ಅಶ್ವಿನ್ ಮ್ಯಾಚ್ ಮುಗಿಯುತ್ತಿದ್ದಂತೆ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡು ನಿವೃತ್ತಿ ಘೋಷಿಸಿದರು.

2 / 6
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಉಳಿದಿದ್ದರೂ ಅಶ್ವಿನ್ ದಿಢೀರ್ ನಿವೃತ್ತಿ ಘೋಷಿಸಿರುವುದು ಇದೀಗ ಹಲವು ಅನುಮಾನಕ್ಕೆ ಕಾರಣವಾಗಿದೆ. ಅದರಲ್ಲೂ ಟೀಮ್ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲವಾ ಎಂಬ ಪ್ರಶ್ನೆಯೊಂದನ್ನು ಹುಟ್ಟು ಹಾಕಿದ್ದಾರೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಉಳಿದಿದ್ದರೂ ಅಶ್ವಿನ್ ದಿಢೀರ್ ನಿವೃತ್ತಿ ಘೋಷಿಸಿರುವುದು ಇದೀಗ ಹಲವು ಅನುಮಾನಕ್ಕೆ ಕಾರಣವಾಗಿದೆ. ಅದರಲ್ಲೂ ಟೀಮ್ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲವಾ ಎಂಬ ಪ್ರಶ್ನೆಯೊಂದನ್ನು ಹುಟ್ಟು ಹಾಕಿದ್ದಾರೆ.

3 / 6
ಏಕೆಂದರೆ ಈ ಸರಣಿಯ ಮೂಲಕ ಅಶ್ವಿನ್ ನಿವೃತ್ತರಾಗಲು ನಿರ್ಧರಿಸಿದ್ದರೆ, ಸರಣಿ ಆರಂಭಕ್ಕೂ ಮುನ್ನ ಅವರು ಅದನ್ನು ತಿಳಿಸುತ್ತಿದ್ದರು. ಆದರೆ ಸರಣಿಯ ನಡುವೆಯೇ ಅವರು ದಿಢೀರ್ ನಿವೃತ್ತಿ ನೀಡಿರುವುದಕ್ಕೆ ಕಾಣದ ಕೈಗಳ ಒತ್ತಡವೇ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ.

ಏಕೆಂದರೆ ಈ ಸರಣಿಯ ಮೂಲಕ ಅಶ್ವಿನ್ ನಿವೃತ್ತರಾಗಲು ನಿರ್ಧರಿಸಿದ್ದರೆ, ಸರಣಿ ಆರಂಭಕ್ಕೂ ಮುನ್ನ ಅವರು ಅದನ್ನು ತಿಳಿಸುತ್ತಿದ್ದರು. ಆದರೆ ಸರಣಿಯ ನಡುವೆಯೇ ಅವರು ದಿಢೀರ್ ನಿವೃತ್ತಿ ನೀಡಿರುವುದಕ್ಕೆ ಕಾಣದ ಕೈಗಳ ಒತ್ತಡವೇ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ.

4 / 6
ಅಂದರೆ ಇಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಬಳಿಕ ಟೀಮ್ ಇಂಡಿಯಾದಿಂದ ಇಬ್ಬರಿಗೆ ಗೇಟ್ ಪಾಸ್ ನೀಡುವುದಾಗಿ ಬಿಸಿಸಿಐ ತಿಳಿಸಿದೆ. ಅವರಲ್ಲಿ ಒಬ್ಬರು ಅಶ್ವಿನ್ ಎನ್ನಲಾಗುತ್ತಿದೆ. ಇದೇ ಕಾರಣದಿಂದಾಗಿ ರವಿಚಂದ್ರನ್ ಅಶ್ವಿನ್ ದಿಢೀರ್ ನಿವೃತ್ತಿ ಘೋಷಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಅಂದರೆ ಇಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಬಳಿಕ ಟೀಮ್ ಇಂಡಿಯಾದಿಂದ ಇಬ್ಬರಿಗೆ ಗೇಟ್ ಪಾಸ್ ನೀಡುವುದಾಗಿ ಬಿಸಿಸಿಐ ತಿಳಿಸಿದೆ. ಅವರಲ್ಲಿ ಒಬ್ಬರು ಅಶ್ವಿನ್ ಎನ್ನಲಾಗುತ್ತಿದೆ. ಇದೇ ಕಾರಣದಿಂದಾಗಿ ರವಿಚಂದ್ರನ್ ಅಶ್ವಿನ್ ದಿಢೀರ್ ನಿವೃತ್ತಿ ಘೋಷಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ.

5 / 6
ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರ ಸೂಚನೆ ಮೇರೆಗೆ ಬಿಸಿಸಿಐ ಹಿರಿಯ ಆಟಗಾರರನ್ನು ತಂಡದಿಂದ ತೆಗದು ಹಾಕುವಂತಹ ದೃಢ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂಬ ಮಾತುಗಳು ಈ ಸರಣಿ ಆರಂಭಕ್ಕೂ ಮುನ್ನ ಕೇಳಿಬಂದಿತ್ತು. ಇದೀಗ ಅಶ್ವಿನ್ ಅವರ ದಿಢೀರ್ ನಿವೃತ್ತಿಯು ಈ ಮಾತುಗಳನ್ನು ನಿಜವಾಗಿಸಿದೆ. ಹೀಗಾಗಿಯೇ ಸರಣಿ ಮಧ್ಯದಲ್ಲೇ ರವಿಚಂದ್ರನ್ ಅಶ್ವಿನ್ ತಮ್ಮ ಕೆರಿಯರ್ ಕೊನೆಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರ ಸೂಚನೆ ಮೇರೆಗೆ ಬಿಸಿಸಿಐ ಹಿರಿಯ ಆಟಗಾರರನ್ನು ತಂಡದಿಂದ ತೆಗದು ಹಾಕುವಂತಹ ದೃಢ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂಬ ಮಾತುಗಳು ಈ ಸರಣಿ ಆರಂಭಕ್ಕೂ ಮುನ್ನ ಕೇಳಿಬಂದಿತ್ತು. ಇದೀಗ ಅಶ್ವಿನ್ ಅವರ ದಿಢೀರ್ ನಿವೃತ್ತಿಯು ಈ ಮಾತುಗಳನ್ನು ನಿಜವಾಗಿಸಿದೆ. ಹೀಗಾಗಿಯೇ ಸರಣಿ ಮಧ್ಯದಲ್ಲೇ ರವಿಚಂದ್ರನ್ ಅಶ್ವಿನ್ ತಮ್ಮ ಕೆರಿಯರ್ ಕೊನೆಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ