AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ವಿನ್ ದಿಢೀರ್ ನಿವೃತ್ತಿಗೆ ಯಾರು ಕಾರಣ? ಇಲ್ಲಿದೆ ಅಸಲಿ ವಿಷಯ

Ravichandran Ashwin retirement: ರವಿಚಂದ್ರನ್ ಅಶ್ವಿನ್ ಟೀಮ್ ಇಂಡಿಯಾ ಪರ 287 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 379 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು ಒಟ್ಟು 5833.3 ಓವರ್​​ಗಳನ್ನು ಎಸೆದಿದ್ದಾರೆ. ಇದರ ನಡುವೆ 947 ಮೇಡನ್ ಓವರ್ ಎಸೆದಿರುವ ಅವರು ಒಟ್ಟು 765 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಭಾರತದ ಪರ ಅತ್ಯಧಿಕ ವಿಕೆಟ್ ಪಡೆದ 2ನೇ ಬೌಲರ್ ಎನಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 18, 2024 | 12:53 PM

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮಧ್ಯೆಯೇ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅದು ಕೂಡ ಗ್ಯಾಲರಿಯಲ್ಲಿ ಕೂತು ತಮ್ಮ ಕೆರಿಯರ್ ಕೊನೆಗೊಳಿಸುವ ಮೂಲಕ ಎಂಬುದೇ ಅಚ್ಚರಿ. ಅಂದರೆ ಐದು ಪಂದ್ಯಗಳ ಈ ಸರಣಿಗೆ ಆಯ್ಕೆಯಾದ ಅಶ್ವಿನ್ ಮೊದಲ ಮ್ಯಾಚ್​ನಲ್ಲಿ ಚಾನ್ಸ್​ ನೀಡಿರಲಿಲ್ಲ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮಧ್ಯೆಯೇ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅದು ಕೂಡ ಗ್ಯಾಲರಿಯಲ್ಲಿ ಕೂತು ತಮ್ಮ ಕೆರಿಯರ್ ಕೊನೆಗೊಳಿಸುವ ಮೂಲಕ ಎಂಬುದೇ ಅಚ್ಚರಿ. ಅಂದರೆ ಐದು ಪಂದ್ಯಗಳ ಈ ಸರಣಿಗೆ ಆಯ್ಕೆಯಾದ ಅಶ್ವಿನ್ ಮೊದಲ ಮ್ಯಾಚ್​ನಲ್ಲಿ ಚಾನ್ಸ್​ ನೀಡಿರಲಿಲ್ಲ.

1 / 6
ಇನ್ನು ಅಡಿಲೇಡ್​ನ ಓವಲ್​ ಮೈದಾನದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಅಶ್ವಿನ್ ಒಂದು ವಿಕೆಟ್ ಮಾತ್ರ ಕಬಳಿಸಿದ್ದರು. ಹೀಗಾಗಿ ಬ್ರಿಸ್ಬೇನ್ ಟೆಸ್ಟ್ ಪಂದ್ಯದಿಂದ ಹಿರಿಯ ಸ್ಪಿನ್ನರ್​ನನ್ನು ಕೈ ಬಿಡಲಾಗಿತ್ತು. ಈ ಪಂದ್ಯದ ವೇಳೆ ಬೆಂಚ್ ಕಾದಿದ್ದ ಅಶ್ವಿನ್ ಮ್ಯಾಚ್ ಮುಗಿಯುತ್ತಿದ್ದಂತೆ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡು ನಿವೃತ್ತಿ ಘೋಷಿಸಿದರು.

ಇನ್ನು ಅಡಿಲೇಡ್​ನ ಓವಲ್​ ಮೈದಾನದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಅಶ್ವಿನ್ ಒಂದು ವಿಕೆಟ್ ಮಾತ್ರ ಕಬಳಿಸಿದ್ದರು. ಹೀಗಾಗಿ ಬ್ರಿಸ್ಬೇನ್ ಟೆಸ್ಟ್ ಪಂದ್ಯದಿಂದ ಹಿರಿಯ ಸ್ಪಿನ್ನರ್​ನನ್ನು ಕೈ ಬಿಡಲಾಗಿತ್ತು. ಈ ಪಂದ್ಯದ ವೇಳೆ ಬೆಂಚ್ ಕಾದಿದ್ದ ಅಶ್ವಿನ್ ಮ್ಯಾಚ್ ಮುಗಿಯುತ್ತಿದ್ದಂತೆ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡು ನಿವೃತ್ತಿ ಘೋಷಿಸಿದರು.

2 / 6
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಉಳಿದಿದ್ದರೂ ಅಶ್ವಿನ್ ದಿಢೀರ್ ನಿವೃತ್ತಿ ಘೋಷಿಸಿರುವುದು ಇದೀಗ ಹಲವು ಅನುಮಾನಕ್ಕೆ ಕಾರಣವಾಗಿದೆ. ಅದರಲ್ಲೂ ಟೀಮ್ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲವಾ ಎಂಬ ಪ್ರಶ್ನೆಯೊಂದನ್ನು ಹುಟ್ಟು ಹಾಕಿದ್ದಾರೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಉಳಿದಿದ್ದರೂ ಅಶ್ವಿನ್ ದಿಢೀರ್ ನಿವೃತ್ತಿ ಘೋಷಿಸಿರುವುದು ಇದೀಗ ಹಲವು ಅನುಮಾನಕ್ಕೆ ಕಾರಣವಾಗಿದೆ. ಅದರಲ್ಲೂ ಟೀಮ್ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲವಾ ಎಂಬ ಪ್ರಶ್ನೆಯೊಂದನ್ನು ಹುಟ್ಟು ಹಾಕಿದ್ದಾರೆ.

3 / 6
ಏಕೆಂದರೆ ಈ ಸರಣಿಯ ಮೂಲಕ ಅಶ್ವಿನ್ ನಿವೃತ್ತರಾಗಲು ನಿರ್ಧರಿಸಿದ್ದರೆ, ಸರಣಿ ಆರಂಭಕ್ಕೂ ಮುನ್ನ ಅವರು ಅದನ್ನು ತಿಳಿಸುತ್ತಿದ್ದರು. ಆದರೆ ಸರಣಿಯ ನಡುವೆಯೇ ಅವರು ದಿಢೀರ್ ನಿವೃತ್ತಿ ನೀಡಿರುವುದಕ್ಕೆ ಕಾಣದ ಕೈಗಳ ಒತ್ತಡವೇ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ.

ಏಕೆಂದರೆ ಈ ಸರಣಿಯ ಮೂಲಕ ಅಶ್ವಿನ್ ನಿವೃತ್ತರಾಗಲು ನಿರ್ಧರಿಸಿದ್ದರೆ, ಸರಣಿ ಆರಂಭಕ್ಕೂ ಮುನ್ನ ಅವರು ಅದನ್ನು ತಿಳಿಸುತ್ತಿದ್ದರು. ಆದರೆ ಸರಣಿಯ ನಡುವೆಯೇ ಅವರು ದಿಢೀರ್ ನಿವೃತ್ತಿ ನೀಡಿರುವುದಕ್ಕೆ ಕಾಣದ ಕೈಗಳ ಒತ್ತಡವೇ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ.

4 / 6
ಅಂದರೆ ಇಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಬಳಿಕ ಟೀಮ್ ಇಂಡಿಯಾದಿಂದ ಇಬ್ಬರಿಗೆ ಗೇಟ್ ಪಾಸ್ ನೀಡುವುದಾಗಿ ಬಿಸಿಸಿಐ ತಿಳಿಸಿದೆ. ಅವರಲ್ಲಿ ಒಬ್ಬರು ಅಶ್ವಿನ್ ಎನ್ನಲಾಗುತ್ತಿದೆ. ಇದೇ ಕಾರಣದಿಂದಾಗಿ ರವಿಚಂದ್ರನ್ ಅಶ್ವಿನ್ ದಿಢೀರ್ ನಿವೃತ್ತಿ ಘೋಷಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಅಂದರೆ ಇಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಬಳಿಕ ಟೀಮ್ ಇಂಡಿಯಾದಿಂದ ಇಬ್ಬರಿಗೆ ಗೇಟ್ ಪಾಸ್ ನೀಡುವುದಾಗಿ ಬಿಸಿಸಿಐ ತಿಳಿಸಿದೆ. ಅವರಲ್ಲಿ ಒಬ್ಬರು ಅಶ್ವಿನ್ ಎನ್ನಲಾಗುತ್ತಿದೆ. ಇದೇ ಕಾರಣದಿಂದಾಗಿ ರವಿಚಂದ್ರನ್ ಅಶ್ವಿನ್ ದಿಢೀರ್ ನಿವೃತ್ತಿ ಘೋಷಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ.

5 / 6
ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರ ಸೂಚನೆ ಮೇರೆಗೆ ಬಿಸಿಸಿಐ ಹಿರಿಯ ಆಟಗಾರರನ್ನು ತಂಡದಿಂದ ತೆಗದು ಹಾಕುವಂತಹ ದೃಢ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂಬ ಮಾತುಗಳು ಈ ಸರಣಿ ಆರಂಭಕ್ಕೂ ಮುನ್ನ ಕೇಳಿಬಂದಿತ್ತು. ಇದೀಗ ಅಶ್ವಿನ್ ಅವರ ದಿಢೀರ್ ನಿವೃತ್ತಿಯು ಈ ಮಾತುಗಳನ್ನು ನಿಜವಾಗಿಸಿದೆ. ಹೀಗಾಗಿಯೇ ಸರಣಿ ಮಧ್ಯದಲ್ಲೇ ರವಿಚಂದ್ರನ್ ಅಶ್ವಿನ್ ತಮ್ಮ ಕೆರಿಯರ್ ಕೊನೆಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರ ಸೂಚನೆ ಮೇರೆಗೆ ಬಿಸಿಸಿಐ ಹಿರಿಯ ಆಟಗಾರರನ್ನು ತಂಡದಿಂದ ತೆಗದು ಹಾಕುವಂತಹ ದೃಢ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂಬ ಮಾತುಗಳು ಈ ಸರಣಿ ಆರಂಭಕ್ಕೂ ಮುನ್ನ ಕೇಳಿಬಂದಿತ್ತು. ಇದೀಗ ಅಶ್ವಿನ್ ಅವರ ದಿಢೀರ್ ನಿವೃತ್ತಿಯು ಈ ಮಾತುಗಳನ್ನು ನಿಜವಾಗಿಸಿದೆ. ಹೀಗಾಗಿಯೇ ಸರಣಿ ಮಧ್ಯದಲ್ಲೇ ರವಿಚಂದ್ರನ್ ಅಶ್ವಿನ್ ತಮ್ಮ ಕೆರಿಯರ್ ಕೊನೆಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

6 / 6
Follow us
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್