GT vs RCB ಪಂದ್ಯದಲ್ಲಿ ಕೃನಾಲ್ ಪಾಂಡ್ಯ ಬೌಲಿಂಗ್ ಮಾಡದಿರಲು ಇದುವೇ ಕಾರಣ!

Updated on: May 02, 2026 | 10:05 AM

IPL 2026 RCB vs GT: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 19.2 ಓವರ್​ಗಳಲ್ಲಿ 155 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 15.5 ಓವರ್​ಗಳಲ್ಲಿ 158 ರನ್​ಗಳಿಸಿ 4 ವಿಕೆಟ್​ಗಳ ಜಯ ಸಾಧಿಸಿದೆ.

1 / 5
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 42ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಿದ್ದವು. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ಸ್ಪಿನ್ನರ್ ಕೃನಾಲ್ ಪಾಂಡ್ಯ ಆಡುವ ಬಳಗದಲ್ಲಿದ್ದರೂ (Playing XI) ಅವರಿಗೆ ಒಂದು ಓವರ್ ಕೂಡ ಬೌಲಿಂಗ್ ನೀಡದಿರುವುದು ಅಚ್ಚರಿಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಕೃನಾಲ್ ಯಾಕೆ ಬೌಲಿಂಗ್ ಮಾಡಲಿಲ್ಲ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಈ ಪ್ರಶ್ನೆಗೆ ಇದೀಗ ಆರ್​ಸಿಬಿ ವೇಗಿ ಭುವನೇಶ್ವರ್ ಕುಮಾರ್ ಉತ್ತರ ನೀಡಿದ್ದಾರೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 42ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಿದ್ದವು. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ಸ್ಪಿನ್ನರ್ ಕೃನಾಲ್ ಪಾಂಡ್ಯ ಆಡುವ ಬಳಗದಲ್ಲಿದ್ದರೂ (Playing XI) ಅವರಿಗೆ ಒಂದು ಓವರ್ ಕೂಡ ಬೌಲಿಂಗ್ ನೀಡದಿರುವುದು ಅಚ್ಚರಿಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಕೃನಾಲ್ ಯಾಕೆ ಬೌಲಿಂಗ್ ಮಾಡಲಿಲ್ಲ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಈ ಪ್ರಶ್ನೆಗೆ ಇದೀಗ ಆರ್​ಸಿಬಿ ವೇಗಿ ಭುವನೇಶ್ವರ್ ಕುಮಾರ್ ಉತ್ತರ ನೀಡಿದ್ದಾರೆ.

2 / 5

ಈ ಬಗ್ಗೆ ಮಾತನಾಡಿದ ಭುವನೇಶ್ವರ್ ಕುಮಾರ್, ಇದು ಸಂಪೂರ್ಣವಾಗಿ ತಂಡದ ರಣತಂತ್ರವಾಗಿತ್ತು. ಆರಂಭದಲ್ಲಿ ವೇಗಿಗಳು ಯಶಸ್ಸು ಸಾಧಿಸಿದ್ದರಿಂದ ವೇಗಿಗಳನ್ನೇ ಬಳಸಿಕೊಳ್ಳಲು ನಿರ್ಧರಿಸಲಾಗಿತ್ತು. ಹೀಗಾಗಿ ಕೃನಾಲ್​ಗೆ ಓವರ್​ ನೀಡಲಿಲ್ಲ ಎಂದು ಭುವಿ ಹೇಳಿದ್ದಾರೆ.

3 / 5

ಈ ಪಂದ್ಯದ ಆರಂಭದಲ್ಲಿ ಚೆಂಡು ಚೆನ್ನಾಗಿ ಸೀಮ್ ಆಗುತ್ತಿತ್ತು. ಇದರಿಂದಾಗಿ ನಾಯಕ ಮೊದಲ ಒಂಬತ್ತು ಓವರ್‌ಗಳಲ್ಲಿ ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹೇಝಲ್‌ವುಡ್ ಅವರಂತಹ ವೇಗಿಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ನಿರ್ಧರಿಸಿದ್ದರು.

4 / 5

ಕಡಿಮೆ ಮೊತ್ತವನ್ನು ರಕ್ಷಿಸಿಕೊಳ್ಳಬೇಕಾದರೆ ವಿಕೆಟ್ ಪಡೆಯುವುದು ಮುಖ್ಯವಾಗಿತ್ತು. ಸ್ಪಿನ್ನರ್‌ಗಳಿಗಿಂತ ವೇಗಿಗಳು ಹೆಚ್ಚು ಪರಿಣಾಮಕಾರಿ ಎಂದು ತಂಡ ಭಾವಿಸಿತ್ತು. ಹೀಗಾಗಿ ಕೃನಾಲ್​ಗೆ ಓವರ್ ನೀಡಿರಲಿಲ್ಲ. ಇದರ ಹೊರತಾಗಿ ಅವರಿಗೆ ಯಾವುದೇ ಗಾಯದ ಸಮಸ್ಯೆ ಇಲ್ಲ ಮತ್ತು ಅವರು ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ಭುವನೇಶ್ವರ್ ಸ್ಪಷ್ಟಪಡಿಸಿದ್ದಾರೆ.

5 / 5

ಇದಾಗ್ಯೂ ಆರ್​ಸಿಬಿ ನಾಯಕ ಸ್ಪಿನ್ನರ್​ ಸುಯಶ್ ಶರ್ಮಾ ಅವರಿಗೆ ಚೆಂಡು ನೀಡಿದ್ದರು. ಇದಕ್ಕೆ ಮುಖ್ಯ ಕಾರಣ ಸುಯಶ್ ಮಿಸ್ಟ್ರಿ ಸ್ಪಿನ್ನರ್ ಆಗಿರುವುದು. ಅದೇ ಕೃನಾಲ್ ಪಾಂಡ್ಯ ರನ್​ ಗತಿಯನ್ನು ನಿಯಂತ್ರಿಸಬಲ್ಲ ಬೌಲರ್​. ಈ ಪಂದ್ಯದಲ್ಲಿ ರನ್ ಗತಿಯನ್ನು ನಿಯಂತ್ರಿಸುವುದಕ್ಕಿಂತ ಹೆಚ್ಚಾಗಿ ಆರ್​ಸಿಬಿ ತಂಡಕ್ಕೆ ವಿಕೆಟ್​ಗಳ ಅಗತ್ಯವಿತ್ತು. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಜೋಶ್ ಹೇಝಲ್​ವುಡ್​, ಭುವನೇಶ್ವರ್ ಕುಮಾರ್, ರೊಮಾರಿಯೊ ಶೆಫರ್ಡ್ ಹಾಗೂ ಸುಯಶ್ ಶರ್ಮಾ ಅವರನ್ನು ಮಾತ್ರ ಬಳಸಿಕೊಂಡಿದ್ದರು. ಇದಾಗ್ಯೂ ಈ ಪಂದ್ಯದಲ್ಲಿ ಆರ್​ಸಿಬಿ ತಂಡ 4 ವಿಕೆಟ್​ಗಳಿಂದ ಸೋಲನುಭವಿಸಿತು.

Loading...
Unable to load recommendations.
Follow Us