AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಆಯ್ಕೆ ಮಾಡಿ ನಿತೀಶ್ ಕುಮಾರ್ ರೆಡ್ಡಿಯನ್ನು ಕೈ ಬಿಟ್ಟಿದ್ದೇಕೆ?

Nitish Kumar Reddy: ನಿತೀಶ್ ಕುಮಾರ್ ರೆಡ್ಡಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ವೇಳೆ ಗಾಯಗೊಂಡಿದ್ದರು. ಈ ಗಾಯದಿಂದ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಇದಾಗ್ಯೂ ಅವರನ್ನು ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್​​ಗೆ ಪರಿಗಣಿಸಲಾಗಿಲ್ಲ. ಅತ್ತ ಬೆಂಚ್ ಕಾಯುವ ಬದಲು ಭಾರತ ಎ ಪರ ಏಕದಿನ ಸರಣಿಯಲ್ಲಿ ಕಣಕ್ಕಿಳಿದು ಫಿಟ್​​​ನೆಸ್ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ.

ಝಾಹಿರ್ ಯೂಸುಫ್
|

Updated on: Nov 13, 2025 | 7:58 AM

Share
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿಯು ಶುಕ್ರವಾರದಿಂದ (ನ.14) ಶುರುವಾಗಲಿದೆ. ಈ ಸರಣಿಗೆ
ಆಯ್ಕೆಯಾಗಿದ್ದ ಟೀಮ್ ಇಂಡಿಯಾದ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿಯನ್ನು ಮೊದಲ ಪಂದ್ಯಕ್ಕೂ ಮುನ್ನ ತಂಡದಿಂದ ಕೈ ಬಿಡಲಾಗಿದೆ.

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿಯು ಶುಕ್ರವಾರದಿಂದ (ನ.14) ಶುರುವಾಗಲಿದೆ. ಈ ಸರಣಿಗೆ ಆಯ್ಕೆಯಾಗಿದ್ದ ಟೀಮ್ ಇಂಡಿಯಾದ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿಯನ್ನು ಮೊದಲ ಪಂದ್ಯಕ್ಕೂ ಮುನ್ನ ತಂಡದಿಂದ ಕೈ ಬಿಡಲಾಗಿದೆ.

1 / 6
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಮ್ಯಾಚ್​ಗೂ ಮುನ್ನ ನಿತೀಶ್ ಕುಮಾರ್ ರೆಡ್ಡಿ ಅವರನ್ನು ತಂಡದಿಂದ ಕೈ ಬಿಟ್ಟಿದ್ದೇಕೆ? ಎಂಬ ಪ್ರಶ್ನೆ ಮೂಡುವುದು ಸಹಜ. ಇದಕ್ಕೆ ಮುಖ್ಯ ಕಾರಣ ಪ್ಲೇಯಿಂಗ್ ಇಲೆವೆನ್​​ನಿಂದ ಹೊರಗಿಟ್ಟಿರುವುದು.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಮ್ಯಾಚ್​ಗೂ ಮುನ್ನ ನಿತೀಶ್ ಕುಮಾರ್ ರೆಡ್ಡಿ ಅವರನ್ನು ತಂಡದಿಂದ ಕೈ ಬಿಟ್ಟಿದ್ದೇಕೆ? ಎಂಬ ಪ್ರಶ್ನೆ ಮೂಡುವುದು ಸಹಜ. ಇದಕ್ಕೆ ಮುಖ್ಯ ಕಾರಣ ಪ್ಲೇಯಿಂಗ್ ಇಲೆವೆನ್​​ನಿಂದ ಹೊರಗಿಟ್ಟಿರುವುದು.

2 / 6
ಮೊದಲ ಟೆಸ್ಟ್ ಪಂದ್ಯದ ಪ್ಲೇಯಿಂಗ್ ಇಲೆವೆನ್​​ನಲ್ಲಿ ಧ್ರುವ್ ಜುರೆಲ್​ ಸ್ಥಾನ ಪಡೆಯಲಿದ್ದಾರೆ. ಸೌತ್ ಆಫ್ರಿಕಾ 'ಎ' ವಿರುದ್ಧದ ಪಂದ್ಯಗಳಲ್ಲಿ ಜುರೆಲ್ ಎರಡು ಅಜೇಯ ಶತಕಗಳನ್ನು ಬಾರಿಸಿದ್ದರು. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ​ದಲ್ಲಿ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ.

ಮೊದಲ ಟೆಸ್ಟ್ ಪಂದ್ಯದ ಪ್ಲೇಯಿಂಗ್ ಇಲೆವೆನ್​​ನಲ್ಲಿ ಧ್ರುವ್ ಜುರೆಲ್​ ಸ್ಥಾನ ಪಡೆಯಲಿದ್ದಾರೆ. ಸೌತ್ ಆಫ್ರಿಕಾ 'ಎ' ವಿರುದ್ಧದ ಪಂದ್ಯಗಳಲ್ಲಿ ಜುರೆಲ್ ಎರಡು ಅಜೇಯ ಶತಕಗಳನ್ನು ಬಾರಿಸಿದ್ದರು. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ​ದಲ್ಲಿ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ.

3 / 6
ಅಷ್ಟೇ ಅಲ್ಲದೆ ಈಡನ್ ಗಾರ್ಡನ್ಸ್ ಮೈದಾನವು ಸ್ಪಿನ್ ಸ್ನೇಹಿ ಪಿಚ್ ಹೊಂದಿರಲಿದೆ ಎಂಬ ಮಾಹಿತಿ ಕೂಡ ಹೊರಬಿದ್ದಿದೆ. ಅದರಂತೆ ಆಲ್​​ರೌಂಡರ್ ಗಳಾಗಿ ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್ ಹಾಗೂ ಅಕ್ಷರ್ ಪಟೇಲ್ ಕಣಕ್ಕಿಳಿಯುವ ಸಾಧ್ಯತೆಯಿದೆ.

ಅಷ್ಟೇ ಅಲ್ಲದೆ ಈಡನ್ ಗಾರ್ಡನ್ಸ್ ಮೈದಾನವು ಸ್ಪಿನ್ ಸ್ನೇಹಿ ಪಿಚ್ ಹೊಂದಿರಲಿದೆ ಎಂಬ ಮಾಹಿತಿ ಕೂಡ ಹೊರಬಿದ್ದಿದೆ. ಅದರಂತೆ ಆಲ್​​ರೌಂಡರ್ ಗಳಾಗಿ ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್ ಹಾಗೂ ಅಕ್ಷರ್ ಪಟೇಲ್ ಕಣಕ್ಕಿಳಿಯುವ ಸಾಧ್ಯತೆಯಿದೆ.

4 / 6
ಇತ್ತ ಮೂವರು ಸ್ಪಿನ್ ಆಲ್​​ರೌಂಡರ್​​ಗಳನ್ನು ಕಣಕ್ಕಿಳಿಸಿದರೆ ನಿತೀಶ್ ಕುಮಾರ್ ರೆಡ್ಡಿ ಬೆಂಚ್ ಕಾಯಬೇಕಾಗುತ್ತದೆ. ಹೀಗಾಗಿ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದ್ದು, ಭಾರತ ಎ ಮತ್ತು ಸೌತ್ ಆಫ್ರಿಕಾ ಎ ನಡುವಣ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವಂತೆ ಸೂಚಿಸಲಾಗಿದೆ. ಈ ಮೂಲಕ ಫಿಟ್​​​ನೆಸ್ ಕಾಯ್ದುಕೊಳ್ಳುವಂತೆ ತಿಳಿಸಲಾಗಿದೆ.

ಇತ್ತ ಮೂವರು ಸ್ಪಿನ್ ಆಲ್​​ರೌಂಡರ್​​ಗಳನ್ನು ಕಣಕ್ಕಿಳಿಸಿದರೆ ನಿತೀಶ್ ಕುಮಾರ್ ರೆಡ್ಡಿ ಬೆಂಚ್ ಕಾಯಬೇಕಾಗುತ್ತದೆ. ಹೀಗಾಗಿ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದ್ದು, ಭಾರತ ಎ ಮತ್ತು ಸೌತ್ ಆಫ್ರಿಕಾ ಎ ನಡುವಣ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವಂತೆ ಸೂಚಿಸಲಾಗಿದೆ. ಈ ಮೂಲಕ ಫಿಟ್​​​ನೆಸ್ ಕಾಯ್ದುಕೊಳ್ಳುವಂತೆ ತಿಳಿಸಲಾಗಿದೆ.

5 / 6
ಭಾರತ ಟೆಸ್ಟ್​ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್​ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಆಕಾಶ್ ದೀಪ್.

ಭಾರತ ಟೆಸ್ಟ್​ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್​ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಆಕಾಶ್ ದೀಪ್.

6 / 6
Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು