AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜತ್ ಪಾಟಿದಾರ್ ಹೊರಗುಳಿಯಲು ‘ಐಸಿಸಿ ಹೊಸ ನಿಯಮ’ ಕಾರಣ!

IPL 2026 RCB vs PBKS: ಪಂಜಾಬ್ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 222 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 199 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ ತಂಡ 23 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: May 18, 2026 | 9:43 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಹಾಗೂ  ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ (Rajat Patidar) ಕಾಣಿಸಿಕೊಂಡಿರಲಿಲ್ಲ. ಇದಕ್ಕೆ ಕಾರಣವೇನು? ಎಂದು ನೋಡುವುದಾದರೆ... ಸಿಗುವ ಉತ್ತರ ಐಸಿಸಿ ನಿಯಮ. (PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಹಾಗೂ  ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ (Rajat Patidar) ಕಾಣಿಸಿಕೊಂಡಿರಲಿಲ್ಲ. ಇದಕ್ಕೆ ಕಾರಣವೇನು? ಎಂದು ನೋಡುವುದಾದರೆ... ಸಿಗುವ ಉತ್ತರ ಐಸಿಸಿ ನಿಯಮ. (PC: IPL)

1 / 6
ಹೌದು, ರಜತ್ ಪಾಟಿದಾರ್ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿಯಲು ಮುಖ್ಯ ಕಾರಣ ಐಸಿಸಿ ನಿಯಮ. ಈ ಪಂದ್ಯಕ್ಕೂ ಮುನ್ನ ಅಂದರೆ, ಮೇ 13 ರಂದು ಕೋಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧ ನಡೆದ ಪಂದ್ಯದಲ್ಲಿ, ಕೆಕೆಆರ್ ವೇಗಿ ಕಾರ್ತಿಕ್ ತ್ಯಾಗಿ ಎಸೆದ ತೀಕ್ಷ್ಣವಾದ ಬೌನ್ಸರ್ ಬಾಲ್ ರಜತ್ ಪಾಟೀದಾರ್ ಅವರ ಹೆಲ್ಮೆಟ್‌ಗೆ ನೇರವಾಗಿ ಬಡಿದಿತ್ತು. (PC: IPL)

ಹೌದು, ರಜತ್ ಪಾಟಿದಾರ್ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿಯಲು ಮುಖ್ಯ ಕಾರಣ ಐಸಿಸಿ ನಿಯಮ. ಈ ಪಂದ್ಯಕ್ಕೂ ಮುನ್ನ ಅಂದರೆ, ಮೇ 13 ರಂದು ಕೋಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧ ನಡೆದ ಪಂದ್ಯದಲ್ಲಿ, ಕೆಕೆಆರ್ ವೇಗಿ ಕಾರ್ತಿಕ್ ತ್ಯಾಗಿ ಎಸೆದ ತೀಕ್ಷ್ಣವಾದ ಬೌನ್ಸರ್ ಬಾಲ್ ರಜತ್ ಪಾಟೀದಾರ್ ಅವರ ಹೆಲ್ಮೆಟ್‌ಗೆ ನೇರವಾಗಿ ಬಡಿದಿತ್ತು. (PC: IPL)

2 / 6
ಪಂದ್ಯದ ವೇಳೆ ಆರಂಭಿಕ ವೈದ್ಯಕೀಯ ತಪಾಸಣೆಯಲ್ಲಿ ಅವರು ತೇರ್ಗಡೆಯಾಗಿ ಬ್ಯಾಟಿಂಗ್ ಮುಂದುವರಿಸಿದ್ದರು. ಆದರೆ, ಪಂದ್ಯ ಮುಗಿದ ನಂತರ ಅವರಲ್ಲಿ ಮೆದುಳಿನ ಆಘಾತದ (Concussion) ಲಕ್ಷಣಗಳು ಕಾಣಿಸಿಕೊಂಡವು. ಹೀಗಾಗಿ ಆರ್​ಸಿಬಿ ಟೀಮ್ ಮ್ಯಾನೇಜ್ಮೆಂಟ್ ಪಾಟಿದಾರ್ ಅವರನ್ನು ಪಂಜಾಬ್ ಕಿಂಗ್ಸ್ ತಂಡದ ಪಂದ್ಯದಿಂದ ಹೊರಗಿಟ್ಟಿದ್ದಾರೆ. (PC: IPL)

ಪಂದ್ಯದ ವೇಳೆ ಆರಂಭಿಕ ವೈದ್ಯಕೀಯ ತಪಾಸಣೆಯಲ್ಲಿ ಅವರು ತೇರ್ಗಡೆಯಾಗಿ ಬ್ಯಾಟಿಂಗ್ ಮುಂದುವರಿಸಿದ್ದರು. ಆದರೆ, ಪಂದ್ಯ ಮುಗಿದ ನಂತರ ಅವರಲ್ಲಿ ಮೆದುಳಿನ ಆಘಾತದ (Concussion) ಲಕ್ಷಣಗಳು ಕಾಣಿಸಿಕೊಂಡವು. ಹೀಗಾಗಿ ಆರ್​ಸಿಬಿ ಟೀಮ್ ಮ್ಯಾನೇಜ್ಮೆಂಟ್ ಪಾಟಿದಾರ್ ಅವರನ್ನು ಪಂಜಾಬ್ ಕಿಂಗ್ಸ್ ತಂಡದ ಪಂದ್ಯದಿಂದ ಹೊರಗಿಟ್ಟಿದ್ದಾರೆ. (PC: IPL)

3 / 6
ಏಕೆಂದರೆ, ಐಸಿಸಿಯ ವೈದ್ಯಕೀಯ ನಿಯಮಗಳ ಪ್ರಕಾರ, ಯಾವುದೇ ಆಟಗಾರನಿಗೆ ಮೆದುಳಿನ ಆಘಾತ (Concussion) ದೃಢಪಟ್ಟರೆ ಅಥವಾ ಅದರ ಲಕ್ಷಣಗಳು ಕಂಡುಬಂದರೆ ಅವರನ್ನು ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಸುವಂತಿಲ್ಲ. ಬದಲಾಗಿ ವಿಶ್ರಾಂತಿ ನೀಡುವುದು ಕಡ್ಡಾಯ. ಒಂದು ವೇಳೆ ಗಂಭೀರ ಲಕ್ಷಣಗಳು ಕಂಡು ಬಂದರೆ ಕಡ್ಡಾಯವಾಗಿ ಕನಿಷ್ಠ 7 ದಿನಗಳ ಕಾಲ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿಯಬೇಕು.  (PC: IPL)

ಏಕೆಂದರೆ, ಐಸಿಸಿಯ ವೈದ್ಯಕೀಯ ನಿಯಮಗಳ ಪ್ರಕಾರ, ಯಾವುದೇ ಆಟಗಾರನಿಗೆ ಮೆದುಳಿನ ಆಘಾತ (Concussion) ದೃಢಪಟ್ಟರೆ ಅಥವಾ ಅದರ ಲಕ್ಷಣಗಳು ಕಂಡುಬಂದರೆ ಅವರನ್ನು ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಸುವಂತಿಲ್ಲ. ಬದಲಾಗಿ ವಿಶ್ರಾಂತಿ ನೀಡುವುದು ಕಡ್ಡಾಯ. ಒಂದು ವೇಳೆ ಗಂಭೀರ ಲಕ್ಷಣಗಳು ಕಂಡು ಬಂದರೆ ಕಡ್ಡಾಯವಾಗಿ ಕನಿಷ್ಠ 7 ದಿನಗಳ ಕಾಲ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿಯಬೇಕು.  (PC: IPL)

4 / 6
ಆದರೆ ರಜತ್ ಪಾಟಿದಾರ್ ಅವರ ಗಾಯ ಗಂಭೀರವಲ್ಲ. ಇದಾಗ್ಯೂ ಐಸಿಸಿ ನಿಯಮವನ್ನು ಪಾಲಿಸುವ ಸಲುವಾಗಿ ರಜತ್ ಪಾಟಿದಾರ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಅಲ್ಲದೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಪಾಟಿದಾರ್ ಕಾಣಿಸಿಕೊಳ್ಳಲಿದ್ದಾರೆ ಎಂದು ಜಿತೇಶ್ ಶರ್ಮಾ ಹೇಳಿದ್ದಾರೆ. (PC: IPL)

ಆದರೆ ರಜತ್ ಪಾಟಿದಾರ್ ಅವರ ಗಾಯ ಗಂಭೀರವಲ್ಲ. ಇದಾಗ್ಯೂ ಐಸಿಸಿ ನಿಯಮವನ್ನು ಪಾಲಿಸುವ ಸಲುವಾಗಿ ರಜತ್ ಪಾಟಿದಾರ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಅಲ್ಲದೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಪಾಟಿದಾರ್ ಕಾಣಿಸಿಕೊಳ್ಳಲಿದ್ದಾರೆ ಎಂದು ಜಿತೇಶ್ ಶರ್ಮಾ ಹೇಳಿದ್ದಾರೆ. (PC: IPL)

5 / 6
ಹೀಗಾಗಿ ಮೇ 22 ರಂದು ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ಮೂಲಕ ರಜತ್ ಪಾಟಿದಾರ್ ಕಂಬ್ಯಾಕ್ ಮಾಡಲಿದ್ದಾರೆ. ಈ ಪಂದ್ಯದೊಂದಿಗೆ ಆರ್​ಸಿಬಿ ತಂಡದ ಲೀಗ್ ಹಂತದ ಮ್ಯಾಚ್​ಗಳು ಮುಗಿಯಲಿದ್ದು, ಇದಾದ ಬಳಿಕ ಚಾಲೆಂಜರ್ಸ್​ ಪಡೆ ಪ್ಲೇಆಫ್​ನಲ್ಲಿ ಕಣಕ್ಕಿಳಿಯಲಿದೆ. (PC: IPL)

ಹೀಗಾಗಿ ಮೇ 22 ರಂದು ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ಮೂಲಕ ರಜತ್ ಪಾಟಿದಾರ್ ಕಂಬ್ಯಾಕ್ ಮಾಡಲಿದ್ದಾರೆ. ಈ ಪಂದ್ಯದೊಂದಿಗೆ ಆರ್​ಸಿಬಿ ತಂಡದ ಲೀಗ್ ಹಂತದ ಮ್ಯಾಚ್​ಗಳು ಮುಗಿಯಲಿದ್ದು, ಇದಾದ ಬಳಿಕ ಚಾಲೆಂಜರ್ಸ್​ ಪಡೆ ಪ್ಲೇಆಫ್​ನಲ್ಲಿ ಕಣಕ್ಕಿಳಿಯಲಿದೆ. (PC: IPL)

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us