AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಯಾಕೆ ಕಪ್ ಗೆಲ್ಲುತ್ತಿಲ್ಲ? ಯುಜ್ವೇಂದ್ರ ಚಹಲ್ ಉತ್ತರ ಹೀಗಿದೆ

Yuzvendra Chahal: ಆರ್​ಸಿಬಿ ಪರ ನಾನು 8 ವರ್ಷಗಳ ಕಾಲ ಆಡಿದ್ದೆ. ಆ ತಂಡದಿಂದಲೇ ನಾನು ಟೀಮ್ ಇಂಡಿಯಾದಲ್ಲೂ ಅವಕಾಶ ಪಡೆದಿದ್ದೆ.

TV9 Web
| Edited By: |

Updated on:Jul 17, 2023 | 9:27 PM

Share
ಈ ಸಲ ಕಪ್ ನಮ್ದೆ...ಈ ಘೋಷವಾಕ್ಯ ಶುರುವಾಗಿ 16 ವರ್ಷಗಳೇ ಕಳೆದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಕಪ್ ಗೆಲ್ಲುವ ಕನಸು ಕನಸಾಗಿಯೇ ಉಳಿದಿವೆ. ಆದರೆ ಈ ಹದಿನಾರು ವರ್ಷಗಳಲ್ಲಿ ಆರ್​ಸಿಬಿ ತಂಡ ಮೂರು ಬಾರಿ ಫೈನಲ್​ಗೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು.

ಈ ಸಲ ಕಪ್ ನಮ್ದೆ...ಈ ಘೋಷವಾಕ್ಯ ಶುರುವಾಗಿ 16 ವರ್ಷಗಳೇ ಕಳೆದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಕಪ್ ಗೆಲ್ಲುವ ಕನಸು ಕನಸಾಗಿಯೇ ಉಳಿದಿವೆ. ಆದರೆ ಈ ಹದಿನಾರು ವರ್ಷಗಳಲ್ಲಿ ಆರ್​ಸಿಬಿ ತಂಡ ಮೂರು ಬಾರಿ ಫೈನಲ್​ಗೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು.

1 / 11
2009 ರಲ್ಲಿ ಮೊದಲ ಬಾರಿಗೆ ಫೈನಲ್​ ಆಡಿದ್ದ ಆರ್​ಸಿಬಿ ಡೆಕ್ಕನ್ ಚಾರ್ಜರ್ಸ್​ (ಈಗಿನ SRH​) ವಿರುದ್ಧ ಸೋಲನುಭವಿಸಿತ್ತು. ಆನಂತರ ಆರ್​ಸಿಬಿ ಫೈನಲ್ ಪ್ರವೇಶಿಸಿದ್ದು 2011 ರಲ್ಲಿ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತು ನಿರಾಸೆ ಅನುಭವಿಸಿತು.

2009 ರಲ್ಲಿ ಮೊದಲ ಬಾರಿಗೆ ಫೈನಲ್​ ಆಡಿದ್ದ ಆರ್​ಸಿಬಿ ಡೆಕ್ಕನ್ ಚಾರ್ಜರ್ಸ್​ (ಈಗಿನ SRH​) ವಿರುದ್ಧ ಸೋಲನುಭವಿಸಿತ್ತು. ಆನಂತರ ಆರ್​ಸಿಬಿ ಫೈನಲ್ ಪ್ರವೇಶಿಸಿದ್ದು 2011 ರಲ್ಲಿ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತು ನಿರಾಸೆ ಅನುಭವಿಸಿತು.

2 / 11
ಇದಾದ ಬಳಿಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ 2016 ರಲ್ಲಿ ಮೂರನೇ ಬಾರಿಗೆ ಫೈನಲ್ ಪ್ರವೇಶಿಸಿತ್ತು. ಆದರೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 8 ರನ್​ಗಳಿಂದ ಸೋತು ಕಿರೀಟ ಮುಡಿಗೇರಿಸಿಕೊಳ್ಳುವ ಅವಕಾಶವನ್ನು ಆರ್​ಸಿಬಿ ಕೈಚೆಲ್ಲಿಕೊಂಡಿತು.

ಇದಾದ ಬಳಿಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ 2016 ರಲ್ಲಿ ಮೂರನೇ ಬಾರಿಗೆ ಫೈನಲ್ ಪ್ರವೇಶಿಸಿತ್ತು. ಆದರೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 8 ರನ್​ಗಳಿಂದ ಸೋತು ಕಿರೀಟ ಮುಡಿಗೇರಿಸಿಕೊಳ್ಳುವ ಅವಕಾಶವನ್ನು ಆರ್​ಸಿಬಿ ಕೈಚೆಲ್ಲಿಕೊಂಡಿತು.

3 / 11
ಅಂದರೆ ಫೈನಲ್ ಆಡಿದ ಬಳಗದಲ್ಲಿ ಯುಜ್ವೇಂದ್ರ ಚಹಲ್ ಕೂಡ ಇದ್ದರು. ಇದೀಗ ಸಂದರ್ಶನವೊಂದರಲ್ಲಿ ಭಾಗವಹಿಸಿದ ಚಹಲ್ ಅವರಿಗೆ ಆರ್​ಸಿಬಿ ಯಾಕೆ ಪ್ರಶಸ್ತಿ ಗೆಲ್ಲುತ್ತಿಲ್ಲ ಎಂಬ ಪ್ರಶ್ನೆಯನ್ನು ಮುಂದಿಡಲಾಗಿದೆ.

ಅಂದರೆ ಫೈನಲ್ ಆಡಿದ ಬಳಗದಲ್ಲಿ ಯುಜ್ವೇಂದ್ರ ಚಹಲ್ ಕೂಡ ಇದ್ದರು. ಇದೀಗ ಸಂದರ್ಶನವೊಂದರಲ್ಲಿ ಭಾಗವಹಿಸಿದ ಚಹಲ್ ಅವರಿಗೆ ಆರ್​ಸಿಬಿ ಯಾಕೆ ಪ್ರಶಸ್ತಿ ಗೆಲ್ಲುತ್ತಿಲ್ಲ ಎಂಬ ಪ್ರಶ್ನೆಯನ್ನು ಮುಂದಿಡಲಾಗಿದೆ.

4 / 11
ಈ ಪ್ರಶ್ನೆಗೆ ಉತ್ತರಿಸಿದ ಚಹಲ್, ಕಳೆದ 8 ವರ್ಷಗಳಿಂದ ನಾನು ಕೂಡ ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಆದರೆ ಇದುವರೆಗೆ ಉತ್ತರ ಸಿಕ್ಕಿಲ್ಲ. 2016 ರಲ್ಲಿ ನಮ್ಮದು ಅತ್ಯುತ್ತಮ ತಂಡವಾಗಿತ್ತು. ಕ್ರಿಸ್ ಗೇಲ್, ಕೆಎಲ್ ರಾಹುಲ್​ನಂತಹ ಆಟಗಾರರು ತಂಡದಲ್ಲಿದ್ದರು.

ಈ ಪ್ರಶ್ನೆಗೆ ಉತ್ತರಿಸಿದ ಚಹಲ್, ಕಳೆದ 8 ವರ್ಷಗಳಿಂದ ನಾನು ಕೂಡ ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಆದರೆ ಇದುವರೆಗೆ ಉತ್ತರ ಸಿಕ್ಕಿಲ್ಲ. 2016 ರಲ್ಲಿ ನಮ್ಮದು ಅತ್ಯುತ್ತಮ ತಂಡವಾಗಿತ್ತು. ಕ್ರಿಸ್ ಗೇಲ್, ಕೆಎಲ್ ರಾಹುಲ್​ನಂತಹ ಆಟಗಾರರು ತಂಡದಲ್ಲಿದ್ದರು.

5 / 11
ಇದಾಗ್ಯೂ ನಾವು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲನುಭವಿಸಿದೆವು. ಅದೊಂದು ನೋವಿನ ಸಂಗತಿ ಎಂದು ಯುಜ್ವೇಂದ್ರ ಚಹಲ್ ಹೇಳಿದರು.

ಇದಾಗ್ಯೂ ನಾವು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲನುಭವಿಸಿದೆವು. ಅದೊಂದು ನೋವಿನ ಸಂಗತಿ ಎಂದು ಯುಜ್ವೇಂದ್ರ ಚಹಲ್ ಹೇಳಿದರು.

6 / 11
ಇದೇ ವೇಳೆ ಆರ್​ಸಿಬಿ ಫ್ರಾಂಚೈಸಿ ನನ್ನನ್ನು ತಂಡದಿಂದ ಕೈ ಬಿಟ್ಟಿರುವುದು ತುಂಬಾ ನೋವುಂಟು ಮಾಡಿದೆ ಎಂದ ಚಹಲ್, 8 ವರ್ಷಗಳ ಕಾಲ ಆಡಿದ ತಂಡದಿಂದ ನಾನು ಹೊರಬೀಳುತ್ತೇನೆ ಎಂದು ನಿರೀಕ್ಷಿಸಿರಲಿಲ್ಲ ಎಂದರು.

ಇದೇ ವೇಳೆ ಆರ್​ಸಿಬಿ ಫ್ರಾಂಚೈಸಿ ನನ್ನನ್ನು ತಂಡದಿಂದ ಕೈ ಬಿಟ್ಟಿರುವುದು ತುಂಬಾ ನೋವುಂಟು ಮಾಡಿದೆ ಎಂದ ಚಹಲ್, 8 ವರ್ಷಗಳ ಕಾಲ ಆಡಿದ ತಂಡದಿಂದ ನಾನು ಹೊರಬೀಳುತ್ತೇನೆ ಎಂದು ನಿರೀಕ್ಷಿಸಿರಲಿಲ್ಲ ಎಂದರು.

7 / 11
ಆರ್​ಸಿಬಿ ಪರ ನಾನು 8 ವರ್ಷಗಳ ಕಾಲ ಆಡಿದ್ದೆ. ಆ ತಂಡದಿಂದಲೇ ನಾನು ಟೀಮ್ ಇಂಡಿಯಾದಲ್ಲೂ ಅವಕಾಶ ಪಡೆದಿದ್ದೆ. ಏಕೆಂದರೆ ಆರ್​ಸಿಬಿ ನನಗೆ ಆಡುವ ಅವಕಾಶ ನೀಡಿತ್ತು. ವಿರಾಟ್ ಕೊಹ್ಲಿ ನನಗೆ ಸಂಪೂರ್ಣ ಬೆಂಬಲ ನೀಡಿದ್ದರು. ನನ್ನ ಪಾಲಿಗೆ ಆರ್​ಸಿಬಿ ಎಂಬುದು ಒಂದು ಫ್ಯಾಮಿಲಿಯಾಗಿತ್ತು.

ಆರ್​ಸಿಬಿ ಪರ ನಾನು 8 ವರ್ಷಗಳ ಕಾಲ ಆಡಿದ್ದೆ. ಆ ತಂಡದಿಂದಲೇ ನಾನು ಟೀಮ್ ಇಂಡಿಯಾದಲ್ಲೂ ಅವಕಾಶ ಪಡೆದಿದ್ದೆ. ಏಕೆಂದರೆ ಆರ್​ಸಿಬಿ ನನಗೆ ಆಡುವ ಅವಕಾಶ ನೀಡಿತ್ತು. ವಿರಾಟ್ ಕೊಹ್ಲಿ ನನಗೆ ಸಂಪೂರ್ಣ ಬೆಂಬಲ ನೀಡಿದ್ದರು. ನನ್ನ ಪಾಲಿಗೆ ಆರ್​ಸಿಬಿ ಎಂಬುದು ಒಂದು ಫ್ಯಾಮಿಲಿಯಾಗಿತ್ತು.

8 / 11
ಆದರೆ 2021 ರ ಬಳಿಕ ಆರ್​ಸಿಬಿ ಫ್ರಾಂಚೈಸಿ ನನ್ನನ್ನು ತಂಡದಿಂದ ಕೈ ಬಿಟ್ಟಿತ್ತು. ಅದೊಂದು ನೋವಿನ ಸಂಗತಿ. ಈ ಬಗ್ಗೆ ನನಗೆ ಫೋನ್ ಕರೆ ಮಾಡಿ ಯಾರೂ ಕೂಡ ತಿಳಿಸಿರಲಿಲ್ಲ. ನನ್ನೊಂದಿಗೆ ಆರ್​ಸಿಬಿ ಫ್ರಾಂಚೈಸಿ ಮಾತುಕತೆಯನ್ನು ಸಹ ನಡೆಸಿರಲಿಲ್ಲ. ಇದಾಗ್ಯೂ ಹರಾಜಿನಲ್ಲಿ ಮತ್ತೆ ಖರೀದಿಸುತ್ತೇನೆ ಎಂದಿದ್ದರು.

ಆದರೆ 2021 ರ ಬಳಿಕ ಆರ್​ಸಿಬಿ ಫ್ರಾಂಚೈಸಿ ನನ್ನನ್ನು ತಂಡದಿಂದ ಕೈ ಬಿಟ್ಟಿತ್ತು. ಅದೊಂದು ನೋವಿನ ಸಂಗತಿ. ಈ ಬಗ್ಗೆ ನನಗೆ ಫೋನ್ ಕರೆ ಮಾಡಿ ಯಾರೂ ಕೂಡ ತಿಳಿಸಿರಲಿಲ್ಲ. ನನ್ನೊಂದಿಗೆ ಆರ್​ಸಿಬಿ ಫ್ರಾಂಚೈಸಿ ಮಾತುಕತೆಯನ್ನು ಸಹ ನಡೆಸಿರಲಿಲ್ಲ. ಇದಾಗ್ಯೂ ಹರಾಜಿನಲ್ಲಿ ಮತ್ತೆ ಖರೀದಿಸುತ್ತೇನೆ ಎಂದಿದ್ದರು.

9 / 11
ಆದರೆ ಐಪಿಎಲ್ 2022 ರ ಹರಾಜಿನಲ್ಲಿ ಆರ್​ಸಿಬಿ ನನ್ನನ್ನು ಖರೀದಿಸಿರಲಿಲ್ಲ. ಈಗಲೂ ನನಗೆ ಚಿನ್ನಸ್ವಾಮಿ ಸ್ಟೇಡಿಯಂ ನೆಚ್ಚಿನ ಮೈದಾನ. ಆದರೆ ಈಗ ನಾನು ಆಡುತ್ತಿರುವುದು ರಾಜಸ್ಥಾನ್ ರಾಯಲ್ಸ್ ಪರ. ಅಂದು ಆರ್​ಸಿಬಿ ನನ್ನನ್ನು ಏಕಾಏಕಿ ಕೈಬಿಟ್ಟಿದ್ದು ನನಗೆ ತುಂಬಾ ನೋವುಂಟು ಮಾಡಿತು ಎಂದು ಯುಜ್ವೇಂದ್ರ ಚಹಲ್ ತಿಳಿಸಿದರು.

ಆದರೆ ಐಪಿಎಲ್ 2022 ರ ಹರಾಜಿನಲ್ಲಿ ಆರ್​ಸಿಬಿ ನನ್ನನ್ನು ಖರೀದಿಸಿರಲಿಲ್ಲ. ಈಗಲೂ ನನಗೆ ಚಿನ್ನಸ್ವಾಮಿ ಸ್ಟೇಡಿಯಂ ನೆಚ್ಚಿನ ಮೈದಾನ. ಆದರೆ ಈಗ ನಾನು ಆಡುತ್ತಿರುವುದು ರಾಜಸ್ಥಾನ್ ರಾಯಲ್ಸ್ ಪರ. ಅಂದು ಆರ್​ಸಿಬಿ ನನ್ನನ್ನು ಏಕಾಏಕಿ ಕೈಬಿಟ್ಟಿದ್ದು ನನಗೆ ತುಂಬಾ ನೋವುಂಟು ಮಾಡಿತು ಎಂದು ಯುಜ್ವೇಂದ್ರ ಚಹಲ್ ತಿಳಿಸಿದರು.

10 / 11
ಅಂದಹಾಗೆ ಐಪಿಎಲ್ ಇತಿಹಾಸದಲ್ಲಿ ಆರ್​ಸಿಬಿ ಫ್ರಾಂಚೈಸಿ ಮಾಡಿದ ಅತೀ ದೊಡ್ಡ ತಪ್ಪುಗಳಲ್ಲಿ ಇದು ಕೂಡ ಒಂದು ಎಂದರೆ ತಪ್ಪಾಗಲಾರದು. ಏಕೆಂದರೆ ಐಪಿಎಲ್​ನ ಅತ್ಯಂತ ಯಶಸ್ವಿ ಸ್ಪಿನ್ನರ್ ಆಗಿ ಗುರುತಿಸಿಕೊಂಡಿದ್ದ ಬೌಲರ್​ನನ್ನು ಆರ್​ಸಿಬಿ ಏಕಾಏಕಿ ಬಿಡುಗಡೆ ಮಾಡಿತು. ಇದೀಗ ಒಟ್ಟು 187 ವಿಕೆಟ್ ಕಬಳಿಸಿ ಐಪಿಎಲ್​ ಇತಿಹಾಸದಲ್ಲೇ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ದಾಖಲೆಯನ್ನು ಯುಜ್ವೇಂದ್ರ ಚಹಲ್ ನಿರ್ಮಿಸಿ RCB ಗೆ ತಿರುಗೇಟು ನೀಡಿದ್ದಾರೆ.

ಅಂದಹಾಗೆ ಐಪಿಎಲ್ ಇತಿಹಾಸದಲ್ಲಿ ಆರ್​ಸಿಬಿ ಫ್ರಾಂಚೈಸಿ ಮಾಡಿದ ಅತೀ ದೊಡ್ಡ ತಪ್ಪುಗಳಲ್ಲಿ ಇದು ಕೂಡ ಒಂದು ಎಂದರೆ ತಪ್ಪಾಗಲಾರದು. ಏಕೆಂದರೆ ಐಪಿಎಲ್​ನ ಅತ್ಯಂತ ಯಶಸ್ವಿ ಸ್ಪಿನ್ನರ್ ಆಗಿ ಗುರುತಿಸಿಕೊಂಡಿದ್ದ ಬೌಲರ್​ನನ್ನು ಆರ್​ಸಿಬಿ ಏಕಾಏಕಿ ಬಿಡುಗಡೆ ಮಾಡಿತು. ಇದೀಗ ಒಟ್ಟು 187 ವಿಕೆಟ್ ಕಬಳಿಸಿ ಐಪಿಎಲ್​ ಇತಿಹಾಸದಲ್ಲೇ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ದಾಖಲೆಯನ್ನು ಯುಜ್ವೇಂದ್ರ ಚಹಲ್ ನಿರ್ಮಿಸಿ RCB ಗೆ ತಿರುಗೇಟು ನೀಡಿದ್ದಾರೆ.

11 / 11

Published On - 9:24 pm, Mon, 17 July 23

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು