AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಇಶಾನ್​ ಕಿಶನ್​, ಸೂರ್ಯಕುಮಾರ್​ ಯಾದವ್​ಗೆ ಚಾನ್ಸ್​ ಸಿಗದಿರಲು ಇದುವೇ ಕಾರಣ

India vs Sri Lanka 1st Odi: ಟಾಸ್ ಸೋತ ಬಳಿಕ ಮಾತನಾಡಿದ ರೋಹಿತ್ ಶರ್ಮಾ ಕಣಕ್ಕಿಳಿಯುವ ಬಳಗವನ್ನು ಘೋಷಿಸಿದರು. ಅಚ್ಚರಿ ಎಂಬಂತೆ ಈ 11 ಆಟಗಾರರ ಪಟ್ಟಿಯಲ್ಲಿ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಹೆಸರು ಇರಲಿಲ್ಲ.

TV9 Web
| Edited By: |

Updated on:Jan 10, 2023 | 1:58 PM

Share
ಗುವಾಹಟಿಯಲ್ಲಿ ಭಾರತ-ಶ್ರೀಲಂಕಾ ಮೊದಲ ಏಕದಿನ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡದ ನಾಯಕ ದುಸನ್ ಶಾನಕ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅತ್ತ ಟಾಸ್ ಸೋತ ಬಳಿಕ ಮಾತನಾಡಿದ ರೋಹಿತ್ ಶರ್ಮಾ ಕಣಕ್ಕಿಳಿಯುವ ಬಳಗವನ್ನು ಘೋಷಿಸಿದರು.

ಗುವಾಹಟಿಯಲ್ಲಿ ಭಾರತ-ಶ್ರೀಲಂಕಾ ಮೊದಲ ಏಕದಿನ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡದ ನಾಯಕ ದುಸನ್ ಶಾನಕ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅತ್ತ ಟಾಸ್ ಸೋತ ಬಳಿಕ ಮಾತನಾಡಿದ ರೋಹಿತ್ ಶರ್ಮಾ ಕಣಕ್ಕಿಳಿಯುವ ಬಳಗವನ್ನು ಘೋಷಿಸಿದರು.

1 / 8
ಅಚ್ಚರಿ ಎಂಬಂತೆ ಈ 11 ಆಟಗಾರರ ಪಟ್ಟಿಯಲ್ಲಿ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಹೆಸರು ಇರಲಿಲ್ಲ. ಇದರ ಬೆನ್ನಲ್ಲೇ ಅತ್ಯುತ್ತಮ ಫಾರ್ಮ್​ನಲ್ಲಿರುವ ಇಬ್ಬರು ಆಟಗಾರರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಹೊರಗಿಡಲು ಕಾರಣವೇನು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಅಚ್ಚರಿ ಎಂಬಂತೆ ಈ 11 ಆಟಗಾರರ ಪಟ್ಟಿಯಲ್ಲಿ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಹೆಸರು ಇರಲಿಲ್ಲ. ಇದರ ಬೆನ್ನಲ್ಲೇ ಅತ್ಯುತ್ತಮ ಫಾರ್ಮ್​ನಲ್ಲಿರುವ ಇಬ್ಬರು ಆಟಗಾರರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಹೊರಗಿಡಲು ಕಾರಣವೇನು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

2 / 8
ಇಲ್ಲಿ ಶುಭ್​ಮನ್​ ಗಿಲ್ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಕಾರಣ ಇಶಾನ್ ಕಿಶನ್ ಅವಕಾಶ ವಂಚಿತರಾಗಿದ್ದಾರೆ. ಅಂದರೆ ಕಿಶನ್​ಗಿಂತ ಗಿಲ್ ಏಕದಿನ ಕ್ರಿಕೆಟ್​ನಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಯುವ ಎಡಗೈ ದಾಂಡಿಗನ ಬದಲು ಗಿಲ್​ಗೆ ಅವಕಾಶ ನೀಡಲಾಗಿದೆ.

ಇಲ್ಲಿ ಶುಭ್​ಮನ್​ ಗಿಲ್ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಕಾರಣ ಇಶಾನ್ ಕಿಶನ್ ಅವಕಾಶ ವಂಚಿತರಾಗಿದ್ದಾರೆ. ಅಂದರೆ ಕಿಶನ್​ಗಿಂತ ಗಿಲ್ ಏಕದಿನ ಕ್ರಿಕೆಟ್​ನಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಯುವ ಎಡಗೈ ದಾಂಡಿಗನ ಬದಲು ಗಿಲ್​ಗೆ ಅವಕಾಶ ನೀಡಲಾಗಿದೆ.

3 / 8
2022 ರಲ್ಲಿ 12 ಏಕದಿನ ಪಂದ್ಯಗಳನ್ನು ಆಡಿರುವ ಶುಭ್​ಮನ್ ಗಿಲ್ ಒಟ್ಟು 638 ರನ್ ಗಳಿಸಿದ್ದಾರೆ. ಈ ವೇಳೆ 1 ಶತಕ ಮತ್ತು ನಾಲ್ಕು ಅರ್ಧ ಶತಕಗಳನ್ನು ಸಹ ಬಾರಿಸಿದ್ದಾರೆ.

2022 ರಲ್ಲಿ 12 ಏಕದಿನ ಪಂದ್ಯಗಳನ್ನು ಆಡಿರುವ ಶುಭ್​ಮನ್ ಗಿಲ್ ಒಟ್ಟು 638 ರನ್ ಗಳಿಸಿದ್ದಾರೆ. ಈ ವೇಳೆ 1 ಶತಕ ಮತ್ತು ನಾಲ್ಕು ಅರ್ಧ ಶತಕಗಳನ್ನು ಸಹ ಬಾರಿಸಿದ್ದಾರೆ.

4 / 8
ಮತ್ತೊಂದೆಡೆ ಕಳೆದ ವರ್ಷ 7 ಏಕದಿನ ಇನಿಂಗ್ಸ್ ಆಡಿರುವ ಇಶಾನ್ ಕಿಶನ್ ಕಲೆಹಾಕಿರುವುದು 417 ರನ್​ಗಳು. ಇದರಲ್ಲಿ ಇತ್ತೀಚೆಗೆ ಬಾಂಗ್ಲಾದೇಶ್ ವಿರುದ್ಧ ಸಿಡಿಸಿದ ವಿಶ್ವ ದಾಖಲೆಯ ದ್ವಿಶತಕ ಕೂಡ ಸೇರಿದೆ. ಹೀಗಾಗಿಯೇ ಇಶಾನ್ ಕಿಶನ್ ಅವರನ್ನು ಹಿಂದಿಕ್ಕಿ ಶುಭ್​​ಮನ್​ ಗಿಲ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಮತ್ತೊಂದೆಡೆ ಕಳೆದ ವರ್ಷ 7 ಏಕದಿನ ಇನಿಂಗ್ಸ್ ಆಡಿರುವ ಇಶಾನ್ ಕಿಶನ್ ಕಲೆಹಾಕಿರುವುದು 417 ರನ್​ಗಳು. ಇದರಲ್ಲಿ ಇತ್ತೀಚೆಗೆ ಬಾಂಗ್ಲಾದೇಶ್ ವಿರುದ್ಧ ಸಿಡಿಸಿದ ವಿಶ್ವ ದಾಖಲೆಯ ದ್ವಿಶತಕ ಕೂಡ ಸೇರಿದೆ. ಹೀಗಾಗಿಯೇ ಇಶಾನ್ ಕಿಶನ್ ಅವರನ್ನು ಹಿಂದಿಕ್ಕಿ ಶುಭ್​​ಮನ್​ ಗಿಲ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

5 / 8
ಇನ್ನು ಸೂರ್ಯಕುಮಾರ್ ಯಾದವ್ ಅವರನ್ನು ಹಿಂದಿಕ್ಕಿ ಶ್ರೇಯಸ್ ಅಯ್ಯರ್ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. 2022 ರಲ್ಲಿ 15 ಏಕದಿನ ಇನಿಂಗ್ಸ್ ಆಡಿರುವ ಅಯ್ಯರ್ 1 ಶತಕ ಹಾಗೂ 6 ಅರ್ಧಶತಕದೊಂದಿಗೆ 724 ರನ್​ ಬಾರಿಸಿದ್ದಾರೆ. ಅಷ್ಟೇ ಅಲ್ಲದೆ ಕಳೆದ ವರ್ಷ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇನ್ನು ಸೂರ್ಯಕುಮಾರ್ ಯಾದವ್ ಅವರನ್ನು ಹಿಂದಿಕ್ಕಿ ಶ್ರೇಯಸ್ ಅಯ್ಯರ್ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. 2022 ರಲ್ಲಿ 15 ಏಕದಿನ ಇನಿಂಗ್ಸ್ ಆಡಿರುವ ಅಯ್ಯರ್ 1 ಶತಕ ಹಾಗೂ 6 ಅರ್ಧಶತಕದೊಂದಿಗೆ 724 ರನ್​ ಬಾರಿಸಿದ್ದಾರೆ. ಅಷ್ಟೇ ಅಲ್ಲದೆ ಕಳೆದ ವರ್ಷ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

6 / 8
2022 ರಲ್ಲಿ 12 ಏಕದಿನ ಇನಿಂಗ್ಸ್ ಆಡಿರುವ ಸೂರ್ಯಕುಮಾರ್ ಯಾದವ್ ಕಲೆಹಾಕಿರುವುದು ಕೇವಲ 260 ರನ್​ಗಳು ಮಾತ್ರ. ಅಂದರೆ ಟಿ20 ಕ್ರಿಕೆಟ್​ನಲ್ಲಿ ಮಿಂಚುತ್ತಿರುವ ಸೂರ್ಯ ಏಕದಿನ ಕ್ರಿಕೆಟ್​ನಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಇದೇ ಕಾರಣದಿಂದಾಗಿ ಶ್ರೇಯಸ್ ಅಯ್ಯರ್​ಗೆ ಪ್ಲೇಯಿಂಗ್ ಇಲೆವೆನ್​​ನಲ್ಲಿ ಸ್ಥಾನ ಕಲ್ಪಿಸಲಾಗಿದೆ.

2022 ರಲ್ಲಿ 12 ಏಕದಿನ ಇನಿಂಗ್ಸ್ ಆಡಿರುವ ಸೂರ್ಯಕುಮಾರ್ ಯಾದವ್ ಕಲೆಹಾಕಿರುವುದು ಕೇವಲ 260 ರನ್​ಗಳು ಮಾತ್ರ. ಅಂದರೆ ಟಿ20 ಕ್ರಿಕೆಟ್​ನಲ್ಲಿ ಮಿಂಚುತ್ತಿರುವ ಸೂರ್ಯ ಏಕದಿನ ಕ್ರಿಕೆಟ್​ನಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಇದೇ ಕಾರಣದಿಂದಾಗಿ ಶ್ರೇಯಸ್ ಅಯ್ಯರ್​ಗೆ ಪ್ಲೇಯಿಂಗ್ ಇಲೆವೆನ್​​ನಲ್ಲಿ ಸ್ಥಾನ ಕಲ್ಪಿಸಲಾಗಿದೆ.

7 / 8
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭ್​ಮನ್​ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭ್​ಮನ್​ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್

8 / 8

Published On - 1:53 pm, Tue, 10 January 23

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು