AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ತಂಡ ಕಣಕ್ಕಿಳಿಯದಿದ್ದರೂ ಸೂರ್ಯಕುಮಾರ್ ಮೈದಾನಕ್ಕಿಳಿಯಲೇಬೇಕು!

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಟೀಮ್ ಇಂಡಿಯಾ ಮೊದಲ ಸುತ್ತಿನಲ್ಲಿ ಯುಎಸ್​ಎ, ನಮೀಬಿಯಾ, ಪಾಕಿಸ್ತಾನ್ ಮತ್ತು ನೆದರ್​ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಆದರೆ ಭಾರತದ ವಿರುದ್ಧ ಪಂದ್ಯವಾಡುವುದಿಲ್ಲ ಎಂದು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ತಿಳಿಸಿದೆ.

ಝಾಹಿರ್ ಯೂಸುಫ್
|

Updated on: Feb 04, 2026 | 7:54 AM

Share
T20 World Cup 2026: ಟಿ20 ವಿಶ್ವಕಪ್ ಆರಂಭಕ್ಕೆ ಇನ್ನು ಉಳಿದಿರುವುದು ದಿನಗಳು ಮಾತ್ರ. ಫೆಬ್ರವರಿ 7 ರಿಂದ ಶುರುವಾಗಲಿರುವ ಈ ಟೂರ್ನಿಯ 27ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಬೇಕಿದೆ. ಆದರೆ ಫೆಬ್ರವರಿ 15 ರಂದು ನಡೆಯಬೇಕಿರುವ ಈ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಹೇಳಿಕೊಂಡಿದೆ.

T20 World Cup 2026: ಟಿ20 ವಿಶ್ವಕಪ್ ಆರಂಭಕ್ಕೆ ಇನ್ನು ಉಳಿದಿರುವುದು ದಿನಗಳು ಮಾತ್ರ. ಫೆಬ್ರವರಿ 7 ರಿಂದ ಶುರುವಾಗಲಿರುವ ಈ ಟೂರ್ನಿಯ 27ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಬೇಕಿದೆ. ಆದರೆ ಫೆಬ್ರವರಿ 15 ರಂದು ನಡೆಯಬೇಕಿರುವ ಈ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಹೇಳಿಕೊಂಡಿದೆ.

1 / 5
ಟಿ20 ವಿಶ್ವಕಪ್​​ನಿಂದ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟಿರುವುದನ್ನು ಖಂಡಿಸುವ ಸಲುವಾಗಿ, ಭಾರತದ ವಿರುದ್ಧ ಕಣಕ್ಕಿಳಿಯದಿರಲು ಪಾಕಿಸ್ತಾನ್ ನಿರ್ಧರಿಸಿದೆ. ಅತ್ತ ಪಾಕಿಸ್ತಾನ್ ತಂಡ ಕಣಕ್ಕಿಳಿಯದಿದ್ದರೂ, ಸೂರ್ಯಕುಮಾರ್ ಯಾದವ್ ಮೈದಾನಕ್ಕಿಳಿಯಲೇಬೇಕು. ಏಕೆಂದರೆ...

ಟಿ20 ವಿಶ್ವಕಪ್​​ನಿಂದ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟಿರುವುದನ್ನು ಖಂಡಿಸುವ ಸಲುವಾಗಿ, ಭಾರತದ ವಿರುದ್ಧ ಕಣಕ್ಕಿಳಿಯದಿರಲು ಪಾಕಿಸ್ತಾನ್ ನಿರ್ಧರಿಸಿದೆ. ಅತ್ತ ಪಾಕಿಸ್ತಾನ್ ತಂಡ ಕಣಕ್ಕಿಳಿಯದಿದ್ದರೂ, ಸೂರ್ಯಕುಮಾರ್ ಯಾದವ್ ಮೈದಾನಕ್ಕಿಳಿಯಲೇಬೇಕು. ಏಕೆಂದರೆ...

2 / 5
ಐಸಿಸಿ ನಿಯಮದ ಪ್ರಕಾರ, ಒಂದು ತಂಡವು ಟಾಸ್‌ಗೆ ನಿಗದಿತ ಸಮಯದಲ್ಲಿ ಸ್ಥಳದಲ್ಲಿ ಕಾಣಿಸಿಕೊಳ್ಳದಿದ್ದರೆ ಮಾತ್ರ ಆ ಪಂದ್ಯವನ್ನು ಅಧಿಕೃತವಾಗಿ ರದ್ದು ಮಾಡಲಾಗುತ್ತದೆ. ಅದನ್ನು ವಾಕ್ ಓವರ್ ಎಂದು ಪರಿಗಣಿಸಬೇಕಿದ್ದರೆ ಒಂದು ತಂಡದ ನಾಯಕ ಟಾಸ್​ಗೆ ಆಗಮಿಸಿರಬೇಕು. 

ಐಸಿಸಿ ನಿಯಮದ ಪ್ರಕಾರ, ಒಂದು ತಂಡವು ಟಾಸ್‌ಗೆ ನಿಗದಿತ ಸಮಯದಲ್ಲಿ ಸ್ಥಳದಲ್ಲಿ ಕಾಣಿಸಿಕೊಳ್ಳದಿದ್ದರೆ ಮಾತ್ರ ಆ ಪಂದ್ಯವನ್ನು ಅಧಿಕೃತವಾಗಿ ರದ್ದು ಮಾಡಲಾಗುತ್ತದೆ. ಅದನ್ನು ವಾಕ್ ಓವರ್ ಎಂದು ಪರಿಗಣಿಸಬೇಕಿದ್ದರೆ ಒಂದು ತಂಡದ ನಾಯಕ ಟಾಸ್​ಗೆ ಆಗಮಿಸಿರಬೇಕು. 

3 / 5
ಭಾರತವು ಪಂದ್ಯದ ದಿನದ ಎಲ್ಲಾ ಶಿಷ್ಟಾಚಾರಗಳನ್ನು ಅನುಸರಿಸಿದರೆ ಮತ್ತು ಪಾಕಿಸ್ತಾನ ಹಾಜರಾಗದಿದ್ದರೆ ಮಾತ್ರ ಪಂದ್ಯದ ರೆಫರಿ ಭಾರತಕ್ಕೆ ಔಪಚಾರಿಕವಾಗಿ ವಾಕ್‌ಓವರ್ ನೀಡುತ್ತಾರೆ. ಇದರಿಂದ ಟಾಸ್​ಗೆ ಆಗಮಿಸಿದ ತಂಡಕ್ಕೆ ಸಂಪೂರ್ಣ 2 ಅಂಕಗಳು ಸಿಗಲಿದೆ. ಹೀಗಾಗಿ ಪಾಕಿಸ್ತಾನ್ ಕಣಕ್ಕಿಳಿಯದಿದ್ದರೂ ಸೂರ್ಯಕುಮಾರ್ ಯಾದವ್ ಮೈದಾನಕ್ಕಿಳಿಯಲೇಬೇಕು.

ಭಾರತವು ಪಂದ್ಯದ ದಿನದ ಎಲ್ಲಾ ಶಿಷ್ಟಾಚಾರಗಳನ್ನು ಅನುಸರಿಸಿದರೆ ಮತ್ತು ಪಾಕಿಸ್ತಾನ ಹಾಜರಾಗದಿದ್ದರೆ ಮಾತ್ರ ಪಂದ್ಯದ ರೆಫರಿ ಭಾರತಕ್ಕೆ ಔಪಚಾರಿಕವಾಗಿ ವಾಕ್‌ಓವರ್ ನೀಡುತ್ತಾರೆ. ಇದರಿಂದ ಟಾಸ್​ಗೆ ಆಗಮಿಸಿದ ತಂಡಕ್ಕೆ ಸಂಪೂರ್ಣ 2 ಅಂಕಗಳು ಸಿಗಲಿದೆ. ಹೀಗಾಗಿ ಪಾಕಿಸ್ತಾನ್ ಕಣಕ್ಕಿಳಿಯದಿದ್ದರೂ ಸೂರ್ಯಕುಮಾರ್ ಯಾದವ್ ಮೈದಾನಕ್ಕಿಳಿಯಲೇಬೇಕು.

4 / 5
ಅದರಂತೆ ಫೆಬ್ರವರಿ 15 ರಂದು ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಳ್ಳುವುದು ಖಚಿತ. ಅತ್ತ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಟಾಸ್​ಗೆ ಆಗಮಿಸದೇ ಇದ್ದರೆ ವಾಕ್ ಓವರ್​ನೊಂದಿಗೆ ಟೀಮ್ ಇಂಡಿಯಾ 2 ಅಂಕಗಳನ್ನು ಪಡೆಯಲಿದೆ.

ಅದರಂತೆ ಫೆಬ್ರವರಿ 15 ರಂದು ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಳ್ಳುವುದು ಖಚಿತ. ಅತ್ತ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಟಾಸ್​ಗೆ ಆಗಮಿಸದೇ ಇದ್ದರೆ ವಾಕ್ ಓವರ್​ನೊಂದಿಗೆ ಟೀಮ್ ಇಂಡಿಯಾ 2 ಅಂಕಗಳನ್ನು ಪಡೆಯಲಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಅಂಬೇಡ್ಕರ್ ಪ್ರತಿಮೆ ಎದುರು ಅಂತರ್ಜಾತಿ ವಿವಾಹವಾದ ಯುವ ಜೋಡಿ!
ಅಂಬೇಡ್ಕರ್ ಪ್ರತಿಮೆ ಎದುರು ಅಂತರ್ಜಾತಿ ವಿವಾಹವಾದ ಯುವ ಜೋಡಿ!
ಹಾಸನ: ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್, ತಪ್ಪಿದ ಭಾರೀ ಅನಾಹುತ
ಹಾಸನ: ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್, ತಪ್ಪಿದ ಭಾರೀ ಅನಾಹುತ
ಇದನ್ನು ಮಾಡಿ, ನಿಮ್ಮ ಶನಿ ದೋಷ ಬೇಗ ನಿವಾರಣೆಯಾಗುತ್ತದೆ!
ಇದನ್ನು ಮಾಡಿ, ನಿಮ್ಮ ಶನಿ ದೋಷ ಬೇಗ ನಿವಾರಣೆಯಾಗುತ್ತದೆ!