AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli-Rohit Sharma: ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ ನಿವೃತ್ತಿ ಘೋಷಿಸಲು ಇದುವೇ ಕಾರಣ

Virat Kohli and Rohit Sharma: ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ 125 ಪಂದ್ಯಗಳನ್ನಾಡಿದರೆ, ರೋಹಿತ್ ಶರ್ಮಾ 159 ಮ್ಯಾಚ್​ಗಳನ್ನಾಡಿದ್ದಾರೆ. ಇದೀಗ ಭಾರತ ತಂಡದ ಹಿರಿಯ ಆಟಗಾರರಿಬ್ಬರು ಏಕಕಾಲಕ್ಕೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದಿದ್ದಾರೆ. ಹೀಗೆ ದಿಢೀರ್ ಆಗಿ ನಿವೃತ್ತಿ ಘೋಷಿಸಲು ಕಾರಣವೇನು ಎಂದು ನೋಡುವುದಾದರೆ....

ಝಾಹಿರ್ ಯೂಸುಫ್
|

Updated on: Jun 30, 2024 | 1:52 PM

Share
T20 World Cup 2024: ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ನಿವೃತ್ತಿ ಘೋಷಿಸಿದ್ದಾರೆ. ವಿಶ್ವಕಪ್ ಗೆದ್ದ ಖುಷಿಗೆ ಇಬ್ಬರು ದಿಗ್ಗಜರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ನೀವಂದುಕೊಂಡರೆ ನಿಮ್ಮ ಊಹೆ ತಪ್ಪು. ಏಕೆಂದರೆ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಬಿಸಿಸಿಐ ಇಬ್ಬರಿಗೂ ಖಡಕ್ ಸೂಚನೆ ನೀಡಿದ್ದರು.

T20 World Cup 2024: ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ನಿವೃತ್ತಿ ಘೋಷಿಸಿದ್ದಾರೆ. ವಿಶ್ವಕಪ್ ಗೆದ್ದ ಖುಷಿಗೆ ಇಬ್ಬರು ದಿಗ್ಗಜರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ನೀವಂದುಕೊಂಡರೆ ನಿಮ್ಮ ಊಹೆ ತಪ್ಪು. ಏಕೆಂದರೆ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಬಿಸಿಸಿಐ ಇಬ್ಬರಿಗೂ ಖಡಕ್ ಸೂಚನೆ ನೀಡಿದ್ದರು.

1 / 8
ಹೌದು, ಈ ಬಾರಿಯ ಟಿ20 ವಿಶ್ವಕಪ್​ಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡುವ ಉದ್ದೇಶ ಬಿಸಿಸಿಐಗೆ ಇರಲಿಲ್ಲ. ಹೀಗಾಗಿಯೇ ಕಳೆದ ಒಂದು ವರ್ಷದಿಂದ ಏಕದಿನ ವಿಶ್ವಕಪ್​ ಕಾರಣವನ್ನು ಮುಂದಿಟ್ಟು ಇಬ್ಬರು ಹಿರಿಯ ಆಟಗಾರರನ್ನು ಟಿ20 ತಂಡದಿಂದ ಹೊರಗಿಡಲಾಗಿತ್ತು.

ಹೌದು, ಈ ಬಾರಿಯ ಟಿ20 ವಿಶ್ವಕಪ್​ಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡುವ ಉದ್ದೇಶ ಬಿಸಿಸಿಐಗೆ ಇರಲಿಲ್ಲ. ಹೀಗಾಗಿಯೇ ಕಳೆದ ಒಂದು ವರ್ಷದಿಂದ ಏಕದಿನ ವಿಶ್ವಕಪ್​ ಕಾರಣವನ್ನು ಮುಂದಿಟ್ಟು ಇಬ್ಬರು ಹಿರಿಯ ಆಟಗಾರರನ್ನು ಟಿ20 ತಂಡದಿಂದ ಹೊರಗಿಡಲಾಗಿತ್ತು.

2 / 8
ಆದರೆ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ರೋಹಿತ್ ಶರ್ಮಾ ಅವರಿಗೆ ಕ್ಯಾಪ್ಟನ್ ಪಟ್ಟ ನೀಡಲು ಬಿಸಿಸಿಐ ಮುಂದಾಯಿತು. ಇದಕ್ಕೆ ಕಾರಣ ಭಾರತ ತಂಡವು ಏಕದಿನ ವಿಶ್ವಕಪ್​ನಲ್ಲಿ ಪ್ರಚಂಡ ಪ್ರದರ್ಶನ ನೀಡಿರುವುದು. ಇತ್ತ ರೋಹಿತ್ ಶರ್ಮಾಗೆ ಮತ್ತೆ ಟಿ20 ತಂಡದಲ್ಲಿ ಅವಕಾಶ ನೀಡಲು ಮುಂದಾಗುತ್ತಿದ್ದಂತೆ ವಿರಾಟ್ ಕೊಹ್ಲಿಯನ್ನು ಕೈ ಬಿಡುವ ಚರ್ಚೆಗಳು ಮುನ್ನಲೆಗೆ ಬಂದವು.

ಆದರೆ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ರೋಹಿತ್ ಶರ್ಮಾ ಅವರಿಗೆ ಕ್ಯಾಪ್ಟನ್ ಪಟ್ಟ ನೀಡಲು ಬಿಸಿಸಿಐ ಮುಂದಾಯಿತು. ಇದಕ್ಕೆ ಕಾರಣ ಭಾರತ ತಂಡವು ಏಕದಿನ ವಿಶ್ವಕಪ್​ನಲ್ಲಿ ಪ್ರಚಂಡ ಪ್ರದರ್ಶನ ನೀಡಿರುವುದು. ಇತ್ತ ರೋಹಿತ್ ಶರ್ಮಾಗೆ ಮತ್ತೆ ಟಿ20 ತಂಡದಲ್ಲಿ ಅವಕಾಶ ನೀಡಲು ಮುಂದಾಗುತ್ತಿದ್ದಂತೆ ವಿರಾಟ್ ಕೊಹ್ಲಿಯನ್ನು ಕೈ ಬಿಡುವ ಚರ್ಚೆಗಳು ಮುನ್ನಲೆಗೆ ಬಂದವು.

3 / 8
ಇದರಿಂದ ಇಕ್ಕಟಿಗೆ ಸಿಲುಕಿದ ಬಿಸಿಸಿಐ ವಿರಾಟ್ ಕೊಹ್ಲಿಯನ್ನು ಟಿ20 ವಿಶ್ವಕಪ್​ನಿಂದ ಹೊರಗಿಡುವ ಜವಾಬ್ದಾರಿಯನ್ನು ಆಯ್ಕೆ ಸಮಿತಿ ಹಾಗೂ ರೋಹಿತ್ ಶರ್ಮಾ ಹೆಗಲೇರಿಸಿದರು. ಆದರೆ ಕಿಂಗ್ ಕೊಹ್ಲಿಯನ್ನು ಕೈ ಬಿಟ್ಟು ವಿಶ್ವಕಪ್ ತಂಡ ರೂಪಿಸಲು ಹಿಟ್​ಮ್ಯಾನ್ ಸುತಾರಂ ಸಿದ್ಧರಿರಲಿಲ್ಲ. ಅಲ್ಲದೆ 15 ಸದಸ್ಯರ ಬಳಗದಲ್ಲಿ ವಿರಾಟ್ ಕೊಹ್ಲಿಯನ್ನು ಆಯ್ಕೆ ಮಾಡಬೇಕೆಂದು ರೋಹಿತ್ ಶರ್ಮಾ ಪಟ್ಟು ಹಿಡಿದಿದ್ದರು.

ಇದರಿಂದ ಇಕ್ಕಟಿಗೆ ಸಿಲುಕಿದ ಬಿಸಿಸಿಐ ವಿರಾಟ್ ಕೊಹ್ಲಿಯನ್ನು ಟಿ20 ವಿಶ್ವಕಪ್​ನಿಂದ ಹೊರಗಿಡುವ ಜವಾಬ್ದಾರಿಯನ್ನು ಆಯ್ಕೆ ಸಮಿತಿ ಹಾಗೂ ರೋಹಿತ್ ಶರ್ಮಾ ಹೆಗಲೇರಿಸಿದರು. ಆದರೆ ಕಿಂಗ್ ಕೊಹ್ಲಿಯನ್ನು ಕೈ ಬಿಟ್ಟು ವಿಶ್ವಕಪ್ ತಂಡ ರೂಪಿಸಲು ಹಿಟ್​ಮ್ಯಾನ್ ಸುತಾರಂ ಸಿದ್ಧರಿರಲಿಲ್ಲ. ಅಲ್ಲದೆ 15 ಸದಸ್ಯರ ಬಳಗದಲ್ಲಿ ವಿರಾಟ್ ಕೊಹ್ಲಿಯನ್ನು ಆಯ್ಕೆ ಮಾಡಬೇಕೆಂದು ರೋಹಿತ್ ಶರ್ಮಾ ಪಟ್ಟು ಹಿಡಿದಿದ್ದರು.

4 / 8
ನಾಯಕನ ಒತ್ತಾಯದ ಮೇರೆಗೆ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಗೆ ವಿರಾಟ್ ಕೊಹ್ಲಿ ಆಯ್ಕೆಯಾದರು. ಈ ಸರಣಿಯಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿ ಗಮನ ಸೆಳೆದ ಕೊಹ್ಲಿ, ಆ ಬಳಿಕ ಐಪಿಎಲ್​ನಲ್ಲಿ ಅಬ್ಬರಿಸಿದರು. ಹೀಗಾಗಿ ರೋಹಿತ್ ಶರ್ಮಾ ಜೊತೆ ವಿರಾಟ್ ಕೊಹ್ಲಿಯನ್ನು ಕೂಡ ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಲೇಬೇಕಾಯಿತು.

ನಾಯಕನ ಒತ್ತಾಯದ ಮೇರೆಗೆ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಗೆ ವಿರಾಟ್ ಕೊಹ್ಲಿ ಆಯ್ಕೆಯಾದರು. ಈ ಸರಣಿಯಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿ ಗಮನ ಸೆಳೆದ ಕೊಹ್ಲಿ, ಆ ಬಳಿಕ ಐಪಿಎಲ್​ನಲ್ಲಿ ಅಬ್ಬರಿಸಿದರು. ಹೀಗಾಗಿ ರೋಹಿತ್ ಶರ್ಮಾ ಜೊತೆ ವಿರಾಟ್ ಕೊಹ್ಲಿಯನ್ನು ಕೂಡ ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಲೇಬೇಕಾಯಿತು.

5 / 8
ಆದರೆ ಈ ಆಯ್ಕೆಗೂ ಮುನ್ನವೇ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಇದುವೇ ಕೊನೆಯ ಟಿ20 ವಿಶ್ವಕಪ್ ಎಂಬ ಸೂಚನೆ ನೀಡಿದ್ದರು. ಅಲ್ಲದೆ 2026ರ ಟಿ20 ವಿಶ್ವಕಪ್​ ಮುಂದಿಟ್ಟುಕೊಂಡು ಹೊಸ ತಂಡವನ್ನು ರೂಪಿಸಲಿದ್ದೇವೆ. ಹಿರಿಯ ಆಟಗಾರರನ್ನು ಟಿ20 ತಂಡದಿಂದ ಕೈ ಬಿಡಲಾಗುತ್ತದೆ ಎಂದು ಬಿಸಿಸಿಐ ಆಯ್ಕೆ ಸಮಿತಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ತಿಳಿಸಿದ್ದರು.

ಆದರೆ ಈ ಆಯ್ಕೆಗೂ ಮುನ್ನವೇ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಇದುವೇ ಕೊನೆಯ ಟಿ20 ವಿಶ್ವಕಪ್ ಎಂಬ ಸೂಚನೆ ನೀಡಿದ್ದರು. ಅಲ್ಲದೆ 2026ರ ಟಿ20 ವಿಶ್ವಕಪ್​ ಮುಂದಿಟ್ಟುಕೊಂಡು ಹೊಸ ತಂಡವನ್ನು ರೂಪಿಸಲಿದ್ದೇವೆ. ಹಿರಿಯ ಆಟಗಾರರನ್ನು ಟಿ20 ತಂಡದಿಂದ ಕೈ ಬಿಡಲಾಗುತ್ತದೆ ಎಂದು ಬಿಸಿಸಿಐ ಆಯ್ಕೆ ಸಮಿತಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ತಿಳಿಸಿದ್ದರು.

6 / 8
ಇದರ ಬೆನ್ನಲ್ಲೇ ಟೀಮ್ ಇಂಡಿಯಾಗೆ ನೂತನ ಕೋಚ್ ಆಗಿ ನೇಮಕವಾಗಲಿರುವ ಗೌತಮ್ ಗಂಭೀರ್ ಕೂಡ ತಮ್ಮ ಬೇಡಿಕೆಯಲ್ಲಿ ಟಿ20 ತಂಡದಿಂದ ಹಿರಿಯ ಆಟಗಾರರನ್ನು ಕೈ ಬಿಡಬೇಕೆಂದು ಬಿಸಿಸಿಐಗೆ ತಿಳಿಸಿದ್ದರು. ಅತ್ತ ಬಿಸಿಸಿಐ ಸೂಚನೆ, ಇತ್ತ ನೂತನ ಕೋಚ್ ಬೇಡಿಕೆಯನ್ನು ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ತಿಳಿಸಲಾಗಿದೆ ಎಂದು ತಿಳಿದು ಬಂದಿದೆ.

ಇದರ ಬೆನ್ನಲ್ಲೇ ಟೀಮ್ ಇಂಡಿಯಾಗೆ ನೂತನ ಕೋಚ್ ಆಗಿ ನೇಮಕವಾಗಲಿರುವ ಗೌತಮ್ ಗಂಭೀರ್ ಕೂಡ ತಮ್ಮ ಬೇಡಿಕೆಯಲ್ಲಿ ಟಿ20 ತಂಡದಿಂದ ಹಿರಿಯ ಆಟಗಾರರನ್ನು ಕೈ ಬಿಡಬೇಕೆಂದು ಬಿಸಿಸಿಐಗೆ ತಿಳಿಸಿದ್ದರು. ಅತ್ತ ಬಿಸಿಸಿಐ ಸೂಚನೆ, ಇತ್ತ ನೂತನ ಕೋಚ್ ಬೇಡಿಕೆಯನ್ನು ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ತಿಳಿಸಲಾಗಿದೆ ಎಂದು ತಿಳಿದು ಬಂದಿದೆ.

7 / 8
ಅಲ್ಲದೆ ಈ ಬಾರಿಯ ಟಿ20 ವಿಶ್ವಕಪ್​ ಮೂಲಕ ನಿವೃತ್ತಿ ಘೋಷಿಸುವಂತೆ ಇಬ್ಬರು ಆಟಗಾರರಿಗೆ ಸೂಚಿಸಲಾಗಿದೆ. ಅದರಂತೆ ಕೊನೆಯ ಬಾರಿ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿಶ್ವಕಪ್ ವಿಜಯದೊಂದಿಗೆ ವಿದಾಯ ಹೇಳಿದ್ದಾರೆ. ಅತ್ತ ಮೊದಲೇ ನಿರ್ಧರಿಸಿದ್ದರಿಂದ ಇಬ್ಬರು ಕೂಡ ಭಾರತದ ಗೆಲುವಿನ ಬೆನ್ನಲ್ಲೇ ನಿವೃತ್ತಿಯ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಅದು ಕೂಡ ವಿಶ್ವ ಚಾಂಪಿಯನ್ ಆಗುವ ಮೂಲಕ ಎಂಬುದು ವಿಶೇಷ.

ಅಲ್ಲದೆ ಈ ಬಾರಿಯ ಟಿ20 ವಿಶ್ವಕಪ್​ ಮೂಲಕ ನಿವೃತ್ತಿ ಘೋಷಿಸುವಂತೆ ಇಬ್ಬರು ಆಟಗಾರರಿಗೆ ಸೂಚಿಸಲಾಗಿದೆ. ಅದರಂತೆ ಕೊನೆಯ ಬಾರಿ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿಶ್ವಕಪ್ ವಿಜಯದೊಂದಿಗೆ ವಿದಾಯ ಹೇಳಿದ್ದಾರೆ. ಅತ್ತ ಮೊದಲೇ ನಿರ್ಧರಿಸಿದ್ದರಿಂದ ಇಬ್ಬರು ಕೂಡ ಭಾರತದ ಗೆಲುವಿನ ಬೆನ್ನಲ್ಲೇ ನಿವೃತ್ತಿಯ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಅದು ಕೂಡ ವಿಶ್ವ ಚಾಂಪಿಯನ್ ಆಗುವ ಮೂಲಕ ಎಂಬುದು ವಿಶೇಷ.

8 / 8
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?