AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ತಂಡಕ್ಕೆ ಯಶ್ ದಯಾಳ್ ಆಯ್ಕೆ ಯಾಕೆ? ಇಲ್ಲಿದೆ ಅಸಲಿ ಕಾರಣ

ಯಶ್ ದಯಾಳ್ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದಾರೆ. ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ 14 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಅವರು ಒಟ್ಟು 15 ವಿಕೆಟ್ ಕಬಳಿಸಿದ್ದರು. ಇದಾಗ್ಯೂ ಅವರನ್ನು ಈ ಬಾರಿ ಆರ್​ಸಿಬಿ ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿಲ್ಲ. ಹೀಗಾಗಿ ಈ ಬಾರಿಯ ಮೆಗಾ ಹರಾಜಿನಲ್ಲಿ ಯಶ್ ದಯಾಳ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Sep 09, 2024 | 8:53 AM

Share
 ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 16 ಸದಸ್ಯರ ಈ ತಂಡದಲ್ಲಿ ಹೊಸಮುಖವಾಗಿ ಯಶ್ ದಯಾಳ್ ಕಾಣಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ದಯಾಳ್​ ಅವರ ಆಯ್ಕೆಗೆ ಕಾರಣವೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಟೀಮ್ ಇಂಡಿಯಾ ಸಂಭವನೀಯ ಆಟಗಾರರ ಪಟ್ಟಿಯಲ್ಲಿ ಯಶ್ ದಯಾಳ್ ಹೆಸರು ಕಾಣಿಸಿಕೊಂಡೇ ಇರಲಿಲ್ಲ. ಆದರೀಗ ದಿಢೀರನೇ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದಾರೆ.

ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 16 ಸದಸ್ಯರ ಈ ತಂಡದಲ್ಲಿ ಹೊಸಮುಖವಾಗಿ ಯಶ್ ದಯಾಳ್ ಕಾಣಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ದಯಾಳ್​ ಅವರ ಆಯ್ಕೆಗೆ ಕಾರಣವೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಟೀಮ್ ಇಂಡಿಯಾ ಸಂಭವನೀಯ ಆಟಗಾರರ ಪಟ್ಟಿಯಲ್ಲಿ ಯಶ್ ದಯಾಳ್ ಹೆಸರು ಕಾಣಿಸಿಕೊಂಡೇ ಇರಲಿಲ್ಲ. ಆದರೀಗ ದಿಢೀರನೇ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದಾರೆ.

1 / 5
ಇದಕ್ಕೆ ಮುಖ್ಯ ಕಾರಣ ಎಡಗೈ ವೇಗಿ ಎಂಬುದು. ಏಕೆಂದರೆ ಭಾರತ ಟೆಸ್ಟ್ ತಂಡದಲ್ಲಿ ಯಾವುದೇ ಎಡಗೈ ವೇಗಿಯಿಲ್ಲ. ಹೀಗಾಗಿಯೇ ಖಲೀಲ್ ಅಹ್ಮದ್, ಅರ್ಷದೀಪ್ ಸಿಂಗ್ ಹಾಗೂ ಯಶ್ ದಯಾಳ್ ಅವರ ಮೇಲೆ ಬಿಸಿಸಿಐ ಆಯ್ಕೆ ಸಮಿತಿ ಕಣ್ಣಿಟ್ಟಿದ್ದರು. ಅದರಲ್ಲೂ ಬಾಂಗ್ಲಾದೇಶ್ ವಿರುದ್ಧದ ಸರಣಿಗೆ ಖಲೀಲ್ ಅಹ್ಮದ್ ಆಯ್ಕೆಯಾಗಲಿದ್ದಾರೆ ಎನ್ನಲಾಗಿತ್ತು.

ಇದಕ್ಕೆ ಮುಖ್ಯ ಕಾರಣ ಎಡಗೈ ವೇಗಿ ಎಂಬುದು. ಏಕೆಂದರೆ ಭಾರತ ಟೆಸ್ಟ್ ತಂಡದಲ್ಲಿ ಯಾವುದೇ ಎಡಗೈ ವೇಗಿಯಿಲ್ಲ. ಹೀಗಾಗಿಯೇ ಖಲೀಲ್ ಅಹ್ಮದ್, ಅರ್ಷದೀಪ್ ಸಿಂಗ್ ಹಾಗೂ ಯಶ್ ದಯಾಳ್ ಅವರ ಮೇಲೆ ಬಿಸಿಸಿಐ ಆಯ್ಕೆ ಸಮಿತಿ ಕಣ್ಣಿಟ್ಟಿದ್ದರು. ಅದರಲ್ಲೂ ಬಾಂಗ್ಲಾದೇಶ್ ವಿರುದ್ಧದ ಸರಣಿಗೆ ಖಲೀಲ್ ಅಹ್ಮದ್ ಆಯ್ಕೆಯಾಗಲಿದ್ದಾರೆ ಎನ್ನಲಾಗಿತ್ತು.

2 / 5
ಆದರೆ ದುಲೀಪ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಖಲೀಲ್ ಅಹ್ಮದ್ ನೀರಸ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಆಯ್ಕೆ ಸಮಿತಿ ಬದಲಿ ಎಡಗೈ ವೇಗಿಯ ಆಯ್ಕೆಗೆ ಮುಂದಾಗಿದ್ದಾರೆ. ಇತ್ತ ಭಾರತ ಬಿ ತಂಡದ ಪರ ಕಣಕ್ಕಿಳಿದಿದ್ದ ದಯಾಳ್ ಮೊದಲ ಪಂದ್ಯದಲ್ಲಿ ಒಟ್ಟು 4 ವಿಕೆಟ್ ಕಬಳಿಸಿದ್ದರು. ಇದು ಅತ್ಯುತ್ತಮವಲ್ಲದಿದ್ದರೂ ಫಸ್ಟ್ ಕ್ರಿಕೆಟ್​ನಲ್ಲಿನ ಪ್ರದರ್ಶನವನ್ನು ಪರಿಗಣಿಸಿ ದಯಾಳ್ ಅವರನ್ನು ಎಡಗೈ ವೇಗಿಯಾಗಿ ಆಯ್ಕೆ ಮಾಡಿದ್ದಾರೆ.

ಆದರೆ ದುಲೀಪ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಖಲೀಲ್ ಅಹ್ಮದ್ ನೀರಸ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಆಯ್ಕೆ ಸಮಿತಿ ಬದಲಿ ಎಡಗೈ ವೇಗಿಯ ಆಯ್ಕೆಗೆ ಮುಂದಾಗಿದ್ದಾರೆ. ಇತ್ತ ಭಾರತ ಬಿ ತಂಡದ ಪರ ಕಣಕ್ಕಿಳಿದಿದ್ದ ದಯಾಳ್ ಮೊದಲ ಪಂದ್ಯದಲ್ಲಿ ಒಟ್ಟು 4 ವಿಕೆಟ್ ಕಬಳಿಸಿದ್ದರು. ಇದು ಅತ್ಯುತ್ತಮವಲ್ಲದಿದ್ದರೂ ಫಸ್ಟ್ ಕ್ರಿಕೆಟ್​ನಲ್ಲಿನ ಪ್ರದರ್ಶನವನ್ನು ಪರಿಗಣಿಸಿ ದಯಾಳ್ ಅವರನ್ನು ಎಡಗೈ ವೇಗಿಯಾಗಿ ಆಯ್ಕೆ ಮಾಡಿದ್ದಾರೆ.

3 / 5
ಯಶ್ ದಯಾಳ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಈವರೆಗೆ 24 ಪಂದ್ಯಗಳಲ್ಲಿ 44 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 4415 ಎಸೆತಗಳನ್ನು ಎಸೆದಿರುವ ಅವರು 2196 ರನ್ ನೀಡಿ 76 ವಿಕೆಟ್ ಕಬಳಿಸಿದ್ದಾರೆ. ಈ ಪ್ರದರ್ಶನವನ್ನು ಪರಿಗಣಿಸಿ ಇದೀಗ ಎಡಗೈ ವೇಗಿಯಾಗಿ 26 ವರ್ಷದ ಯಶ್ ದಯಾಳ್ ಅವರಿಗೆ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಲಾಗಿದೆ. ಅದರಂತೆ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿ ಮೂಲಕ ದಯಾಳ್ ಟೀಮ್ ಇಂಡಿಯಾ ಪರ ಹೊಸ ಇನಿಂಗ್ಸ್ ಆರಂಭಿಸುವ ವಿಶ್ವಾಸದಲ್ಲಿದ್ದಾರೆ.

ಯಶ್ ದಯಾಳ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಈವರೆಗೆ 24 ಪಂದ್ಯಗಳಲ್ಲಿ 44 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 4415 ಎಸೆತಗಳನ್ನು ಎಸೆದಿರುವ ಅವರು 2196 ರನ್ ನೀಡಿ 76 ವಿಕೆಟ್ ಕಬಳಿಸಿದ್ದಾರೆ. ಈ ಪ್ರದರ್ಶನವನ್ನು ಪರಿಗಣಿಸಿ ಇದೀಗ ಎಡಗೈ ವೇಗಿಯಾಗಿ 26 ವರ್ಷದ ಯಶ್ ದಯಾಳ್ ಅವರಿಗೆ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಲಾಗಿದೆ. ಅದರಂತೆ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿ ಮೂಲಕ ದಯಾಳ್ ಟೀಮ್ ಇಂಡಿಯಾ ಪರ ಹೊಸ ಇನಿಂಗ್ಸ್ ಆರಂಭಿಸುವ ವಿಶ್ವಾಸದಲ್ಲಿದ್ದಾರೆ.

4 / 5
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ , ಆಕಾಶ್ ದೀಪ್ ಮತ್ತು ಯಶ್ ದಯಾಳ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ , ಆಕಾಶ್ ದೀಪ್ ಮತ್ತು ಯಶ್ ದಯಾಳ್.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ