AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಮಿಫೈನಲ್​ನಲ್ಲಿ ಸೋತ ಪಾಕ್! ಏಷ್ಯಾಕಪ್ ಫೈನಲ್​ನಲ್ಲಿ ಭಾರತ- ಬಾಂಗ್ಲಾ ಮುಖಾಮುಖಿ

Women’s Emerging Asia Cup 2023: ಇಂದು ನಡೆಯಲಿರುವ ಫೈನಲ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ಮುಖಾಮುಖಿಯಾಗಲಿವೆ. ಈ ಪಂದ್ಯ ಬುಧವಾರ 11 ಗಂಟೆಗೆ ಆರಂಭವಾಗಲಿದೆ.

ಪೃಥ್ವಿಶಂಕರ
|

Updated on:Jun 21, 2023 | 8:18 AM

Share
ಮಹಿಳೆಯರ ಉದಯೋನ್ಮುಖ ಏಷ್ಯಾಕಪ್​ನಲ್ಲಿ ಇದುವರೆಗೆ ಮಳೆಯ ಆಟವೇ ಹೆಚ್ಚು ನಡೆದಿದೆ. ಗುಂಪು ಹಂತದ ಬಹುತೇಕ ಪಂದ್ಯಗಳು ಮಳೆಯಿಂದ ರದ್ದಾದವು. ಹೀಗಾಗಿ ಭಾರತ ಮಹಿಳಾ ಕ್ರಿಕೆಟ್ ತಂಡ ಕೇವಲ ಒಂದು ಪಂದ್ಯವನ್ನು ಆಡಿ ಸೆಮಿಫೈನಲ್ ಪ್ರವೇಶಿಸಿತ್ತು.

ಮಹಿಳೆಯರ ಉದಯೋನ್ಮುಖ ಏಷ್ಯಾಕಪ್​ನಲ್ಲಿ ಇದುವರೆಗೆ ಮಳೆಯ ಆಟವೇ ಹೆಚ್ಚು ನಡೆದಿದೆ. ಗುಂಪು ಹಂತದ ಬಹುತೇಕ ಪಂದ್ಯಗಳು ಮಳೆಯಿಂದ ರದ್ದಾದವು. ಹೀಗಾಗಿ ಭಾರತ ಮಹಿಳಾ ಕ್ರಿಕೆಟ್ ತಂಡ ಕೇವಲ ಒಂದು ಪಂದ್ಯವನ್ನು ಆಡಿ ಸೆಮಿಫೈನಲ್ ಪ್ರವೇಶಿಸಿತ್ತು.

1 / 7
ಸೋಮವಾರ ಎರಡು ಸೆಮಿಫೈನಲ್ ಪಂದ್ಯಗಳು ನಡೆಯಬೇಕಿತ್ತು. ಆದರೆ, ಮಳೆಯಿಂದಾಗಿ ಒಂದೇ ಒಂದು ಪಂದ್ಯ ನಡೆಯಲಿಲ್ಲ. ಮೀಸಲು ದಿನವಾದ ಮಂಗಳವಾರ ಮೊದಲ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಶ್ರೀಲಂಕಾ ಮುಖಾಮುಖಿಯಾಗಬೇಕಿತ್ತು. ಆ ಪಂದ್ಯವೂ ಮಳೆಯಿಂದ ರದ್ದಾಯಿತು. ಹೀಗಾಗಿ ಗುಂಪಿನಲ್ಲಿ ಅತ್ಯುತಮ ರನ್ ರೇಟ್ ಹೊಂದಿದ್ದ ಭಾರತ ಸೀದಾ ಫೈನಲ್‌ಗೆ ಎಂಟ್ರಿಕೊಟಿತು.

ಸೋಮವಾರ ಎರಡು ಸೆಮಿಫೈನಲ್ ಪಂದ್ಯಗಳು ನಡೆಯಬೇಕಿತ್ತು. ಆದರೆ, ಮಳೆಯಿಂದಾಗಿ ಒಂದೇ ಒಂದು ಪಂದ್ಯ ನಡೆಯಲಿಲ್ಲ. ಮೀಸಲು ದಿನವಾದ ಮಂಗಳವಾರ ಮೊದಲ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಶ್ರೀಲಂಕಾ ಮುಖಾಮುಖಿಯಾಗಬೇಕಿತ್ತು. ಆ ಪಂದ್ಯವೂ ಮಳೆಯಿಂದ ರದ್ದಾಯಿತು. ಹೀಗಾಗಿ ಗುಂಪಿನಲ್ಲಿ ಅತ್ಯುತಮ ರನ್ ರೇಟ್ ಹೊಂದಿದ್ದ ಭಾರತ ಸೀದಾ ಫೈನಲ್‌ಗೆ ಎಂಟ್ರಿಕೊಟಿತು.

2 / 7
ಎರಡನೇ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಮುಖಾಮುಖಿಯಾಗಿದ್ದವು. ಮಳೆ ಪೀಡಿತ ಈ ಪಂದ್ಯದಲ್ಲಿ ಪಾಕ್ ತಂಡವನ್ನು ಮಣಿಸಿದ ಬಾಂಗ್ಲಾದೇಶ ಇದೀಗ ಫೈನಲ್‌ನಲ್ಲಿ ಭಾರತವನ್ನು ಎದುರಿಸಲಿದೆ. ಬಾಂಗ್ಲಾ ಎದುರು 6 ರನ್​ಗಳಿಂದ ಸೋತ ಪಾಕ್ ಟೂರ್ನಿಯಿಂದ ಹೊರಬಿತ್ತು.

ಎರಡನೇ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಮುಖಾಮುಖಿಯಾಗಿದ್ದವು. ಮಳೆ ಪೀಡಿತ ಈ ಪಂದ್ಯದಲ್ಲಿ ಪಾಕ್ ತಂಡವನ್ನು ಮಣಿಸಿದ ಬಾಂಗ್ಲಾದೇಶ ಇದೀಗ ಫೈನಲ್‌ನಲ್ಲಿ ಭಾರತವನ್ನು ಎದುರಿಸಲಿದೆ. ಬಾಂಗ್ಲಾ ಎದುರು 6 ರನ್​ಗಳಿಂದ ಸೋತ ಪಾಕ್ ಟೂರ್ನಿಯಿಂದ ಹೊರಬಿತ್ತು.

3 / 7
ಮಳೆಯಿಂದಾಗಿ ಈ ಪಂದ್ಯವನ್ನು 9 ಓವರ್‌ಗಳಿಗೆ ಇಳಿಸಲಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ 9 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 59 ರನ್ ಕಲೆಹಾಕಿತು. ಅಗ್ರ ಕ್ರಮಾಂಕದ ಎಲ್ಲಾ ಬ್ಯಾಟರ್​ಗಳು ಸಿಂಗಲ್ ಡಿಜಿಟ್​ಗೆ ಸುಸ್ತಾದರು. ಅಂತಿಮವಾಗಿ 16 ಎಸೆತಗಳಲ್ಲಿ 21 ರನ್ ಬಾರಿಸಿದ ನಹಿದಾ ಅಖ್ತರ್ ಅವರ ಇನ್ನಿಂಗ್ಸ್ ನೆರವಿನಿಂದ ಬಾಂಗ್ಲಾದೇಶ ಪಾಕಿಸ್ತಾನಕ್ಕೆ 60 ರನ್ ಟಾರ್ಗೆಟ್ ನೀಡಿತು.

ಮಳೆಯಿಂದಾಗಿ ಈ ಪಂದ್ಯವನ್ನು 9 ಓವರ್‌ಗಳಿಗೆ ಇಳಿಸಲಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ 9 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 59 ರನ್ ಕಲೆಹಾಕಿತು. ಅಗ್ರ ಕ್ರಮಾಂಕದ ಎಲ್ಲಾ ಬ್ಯಾಟರ್​ಗಳು ಸಿಂಗಲ್ ಡಿಜಿಟ್​ಗೆ ಸುಸ್ತಾದರು. ಅಂತಿಮವಾಗಿ 16 ಎಸೆತಗಳಲ್ಲಿ 21 ರನ್ ಬಾರಿಸಿದ ನಹಿದಾ ಅಖ್ತರ್ ಅವರ ಇನ್ನಿಂಗ್ಸ್ ನೆರವಿನಿಂದ ಬಾಂಗ್ಲಾದೇಶ ಪಾಕಿಸ್ತಾನಕ್ಕೆ 60 ರನ್ ಟಾರ್ಗೆಟ್ ನೀಡಿತು.

4 / 7
ಪಾಕ್ ಪರ ನಾಯಕಿ ಫಾತಿಮಾ ಸನಾ 2 ಓವರ್​ಗಳಲ್ಲಿ 10 ರನ್ ನೀಡಿ 3 ವಿಕೆಟ್ ಪಡೆದರು. ಇದಲ್ಲದೇ ಅನುಷಾ ನಾಸಿರ್ 2 ಓವರ್​ಗಳಲ್ಲಿ ಕೇವಲ 6 ರನ್ ನೀಡಿ 2 ವಿಕೆಟ್ ಪಡೆದರು.

ಪಾಕ್ ಪರ ನಾಯಕಿ ಫಾತಿಮಾ ಸನಾ 2 ಓವರ್​ಗಳಲ್ಲಿ 10 ರನ್ ನೀಡಿ 3 ವಿಕೆಟ್ ಪಡೆದರು. ಇದಲ್ಲದೇ ಅನುಷಾ ನಾಸಿರ್ 2 ಓವರ್​ಗಳಲ್ಲಿ ಕೇವಲ 6 ರನ್ ನೀಡಿ 2 ವಿಕೆಟ್ ಪಡೆದರು.

5 / 7
60 ರನ್‌ಗಳ ಗುರಿ ಬೆನ್ನಟ್ಟಿದ ಪಾಕಿಸ್ತಾನ ಉತ್ತಮ ಆರಂಭ ಪಡೆಯಿತು. ಆದರೆ, ವೇಗವಾಗಿ ರನ್ ಕಲೆಹಾಕುವಲ್ಲಿ ಆಟಗಾರ್ತಿಯರು ಎಡವಿದರು. ಹೀಗಾಗಿ ಪಾಕಿಸ್ತಾನ ನಿಗದಿತ 9 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 53 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಬಾಂಗ್ಲಾದೇಶಕ್ಕೆ 6 ರನ್‌ಗಳ ರೋಚಕ ಜಯ ಲಭಿಸಿತು.

60 ರನ್‌ಗಳ ಗುರಿ ಬೆನ್ನಟ್ಟಿದ ಪಾಕಿಸ್ತಾನ ಉತ್ತಮ ಆರಂಭ ಪಡೆಯಿತು. ಆದರೆ, ವೇಗವಾಗಿ ರನ್ ಕಲೆಹಾಕುವಲ್ಲಿ ಆಟಗಾರ್ತಿಯರು ಎಡವಿದರು. ಹೀಗಾಗಿ ಪಾಕಿಸ್ತಾನ ನಿಗದಿತ 9 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 53 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಬಾಂಗ್ಲಾದೇಶಕ್ಕೆ 6 ರನ್‌ಗಳ ರೋಚಕ ಜಯ ಲಭಿಸಿತು.

6 / 7
ಇಂದು ನಡೆಯಲಿರುವ ಫೈನಲ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ಮುಖಾಮುಖಿಯಾಗಲಿವೆ. ಈ ಪಂದ್ಯ ಬುಧವಾರ 11 ಗಂಟೆಗೆ ಆರಂಭವಾಗಲಿದೆ.

ಇಂದು ನಡೆಯಲಿರುವ ಫೈನಲ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ಮುಖಾಮುಖಿಯಾಗಲಿವೆ. ಈ ಪಂದ್ಯ ಬುಧವಾರ 11 ಗಂಟೆಗೆ ಆರಂಭವಾಗಲಿದೆ.

7 / 7

Published On - 8:13 am, Wed, 21 June 23

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು